AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಂಪಿಯನ್ಸ್​ ಟ್ರೋಫಿಯಿಂದ ಭಾರತ ಹಿಂದೆ ಸರಿದರೆ, ಯಾವ ತಂಡಕ್ಕೆ ಚಾನ್ಸ್?

Champions Trophy 2025: ಚಾಂಪಿಯನ್ಸ್ ಟ್ರೋಫಿ 2025 ರಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿದೆ. ಅದರಂತೆ ಭಾರತ, ಪಾಕಿಸ್ತಾನ್, ಸೌತ್ ಆಫ್ರಿಕಾ, ನ್ಯೂಝಿಲೆಂಡ್, ಅಫ್ಘಾನಿಸ್ತಾನ್, ಇಂಗ್ಲೆಂಡ್, ಬಾಂಗ್ಲಾದೇಶ್ ಮತ್ತು ಆಸ್ಟ್ರೇಲಿಯಾ ತಂಡಗಳು ಸೆಣಸಲಿದೆ. ಇನ್ನು 2025ರ ಚಾಂಪಿಯನ್ಸ್​ ಟ್ರೋಫಿ ಆಯೋಜನೆಯ ಹಕ್ಕು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಕೈಯಲ್ಲಿದ್ದು, ಅದರಂತೆ ಟೂರ್ನಿಯು ಪಾಕ್​ನಲ್ಲಿ ನಡೆಯಲಿದೆ.

ಝಾಹಿರ್ ಯೂಸುಫ್
|

Updated on: Nov 10, 2024 | 1:32 PM

Share
2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯು ಪಾಕಿಸ್ತಾನದಲ್ಲಿ ನಡೆಯಲಿದೆ. ಆದರೆ ಪಾಕ್​ನಲ್ಲಿ ಟೂರ್ನಿ ಆಡಲು ಭಾರತ ತಂಡ ಹಿಂದೇಟು ಹಾಕಿದೆ. ಅಲ್ಲದೆ ಹೈಬ್ರಿಡ್ ಮಾದರಿಯಲ್ಲಿ ಪಂದ್ಯಾವಳಿಯನ್ನು ಆಯೋಜಿಸಿದರೆ ಮಾತ್ರ ಭಾರತ ತಂಡ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾಗವಹಿಸುವ ಸಾಧ್ಯತೆಯಿದೆ.

2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯು ಪಾಕಿಸ್ತಾನದಲ್ಲಿ ನಡೆಯಲಿದೆ. ಆದರೆ ಪಾಕ್​ನಲ್ಲಿ ಟೂರ್ನಿ ಆಡಲು ಭಾರತ ತಂಡ ಹಿಂದೇಟು ಹಾಕಿದೆ. ಅಲ್ಲದೆ ಹೈಬ್ರಿಡ್ ಮಾದರಿಯಲ್ಲಿ ಪಂದ್ಯಾವಳಿಯನ್ನು ಆಯೋಜಿಸಿದರೆ ಮಾತ್ರ ಭಾರತ ತಂಡ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾಗವಹಿಸುವ ಸಾಧ್ಯತೆಯಿದೆ.

1 / 5
ಇಲ್ಲಿ ಹೈಬ್ರಿಡ್ ಮಾದರಿ ಎಂದರೆ, ಟೂರ್ನಿಯು ಪಾಕಿಸ್ತಾನದಲ್ಲೇ ನಡೆದರೂ ಭಾರತದ ಪಂದ್ಯಗಳನ್ನು ತಟಸ್ಥ ಸ್ಥಳದಲ್ಲಿ ಆಯೋಜಿಸುವುದು. ಅದರಂತೆ ಭಾರತದ ಪಂದ್ಯಗಳನ್ನು ಯುಎಇ ಅಥವಾ ಶ್ರೀಲಂಕಾದಲ್ಲಿ ಆಯೋಜಿಸುವಂತೆ ಐಸಿಸಿಗೆ ಬಿಸಿಸಿಐ ಮನವಿ ಮಾಡಬಹುದು.

ಇಲ್ಲಿ ಹೈಬ್ರಿಡ್ ಮಾದರಿ ಎಂದರೆ, ಟೂರ್ನಿಯು ಪಾಕಿಸ್ತಾನದಲ್ಲೇ ನಡೆದರೂ ಭಾರತದ ಪಂದ್ಯಗಳನ್ನು ತಟಸ್ಥ ಸ್ಥಳದಲ್ಲಿ ಆಯೋಜಿಸುವುದು. ಅದರಂತೆ ಭಾರತದ ಪಂದ್ಯಗಳನ್ನು ಯುಎಇ ಅಥವಾ ಶ್ರೀಲಂಕಾದಲ್ಲಿ ಆಯೋಜಿಸುವಂತೆ ಐಸಿಸಿಗೆ ಬಿಸಿಸಿಐ ಮನವಿ ಮಾಡಬಹುದು.

2 / 5
ಅತ್ತ ಹೈಬ್ರಿಡ್ ಮಾದರಿಯಲ್ಲಿ ಟೂರ್ನಿ ಆಯೋಜಿಸಲು ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ನಿರಾಕರಿಸಿದರೆ, ಟೀಮ್ ಇಂಡಿಯಾ ಚಾಂಪಿಯನ್ಸ್ ಟ್ರೋಫಿಯಿಂದ ಹಿಂದೆ ಸರಿಯಲಿದೆ. ಭಾರತ ತಂಡ ಚಾಂಪಿಯನ್ಸ್ ಟ್ರೋಫಿಯಿಂದ ಹಿಂದೆ ಸರಿದರೆ ಯಾವ ತಂಡಕ್ಕೆ ಚಾನ್ಸ್ ಸಿಗಲಿದೆ ಎಂಬ ಪ್ರಶ್ನೆ ಮೂಡುವುದು ಸಹಜ.

ಅತ್ತ ಹೈಬ್ರಿಡ್ ಮಾದರಿಯಲ್ಲಿ ಟೂರ್ನಿ ಆಯೋಜಿಸಲು ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ನಿರಾಕರಿಸಿದರೆ, ಟೀಮ್ ಇಂಡಿಯಾ ಚಾಂಪಿಯನ್ಸ್ ಟ್ರೋಫಿಯಿಂದ ಹಿಂದೆ ಸರಿಯಲಿದೆ. ಭಾರತ ತಂಡ ಚಾಂಪಿಯನ್ಸ್ ಟ್ರೋಫಿಯಿಂದ ಹಿಂದೆ ಸರಿದರೆ ಯಾವ ತಂಡಕ್ಕೆ ಚಾನ್ಸ್ ಸಿಗಲಿದೆ ಎಂಬ ಪ್ರಶ್ನೆ ಮೂಡುವುದು ಸಹಜ.

3 / 5
ಈ ಪ್ರಶ್ನೆಗೆ ಉತ್ತರ ಶ್ರೀಲಂಕಾ. ಏಕೆಂದರೆ ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿವೆ. ಏಕದಿನ ವಿಶ್ವಕಪ್ 2023 ರ ಅಂಕ ಪಟ್ಟಿಯಲ್ಲಿ ಟಾಪ್-8 ನಲ್ಲಿ ಕಾಣಿಸಿಕೊಂಡ ತಂಡಗಳು ಚಾಂಪಿಯನ್ಸ್​ ಟ್ರೋಫಿಗೆ ಅರ್ಹತೆ ಪಡೆದುಕೊಂಡಿದೆ. ಆದರೆ ಈ 8 ತಂಡಗಳಲ್ಲಿ ಶ್ರೀಲಂಕಾ ಇಲ್ಲ.

ಈ ಪ್ರಶ್ನೆಗೆ ಉತ್ತರ ಶ್ರೀಲಂಕಾ. ಏಕೆಂದರೆ ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿವೆ. ಏಕದಿನ ವಿಶ್ವಕಪ್ 2023 ರ ಅಂಕ ಪಟ್ಟಿಯಲ್ಲಿ ಟಾಪ್-8 ನಲ್ಲಿ ಕಾಣಿಸಿಕೊಂಡ ತಂಡಗಳು ಚಾಂಪಿಯನ್ಸ್​ ಟ್ರೋಫಿಗೆ ಅರ್ಹತೆ ಪಡೆದುಕೊಂಡಿದೆ. ಆದರೆ ಈ 8 ತಂಡಗಳಲ್ಲಿ ಶ್ರೀಲಂಕಾ ಇಲ್ಲ.

4 / 5
ಒಂದು ವೇಳೆ ಇದೀಗ ಭಾರತ ತಂಡವು ಟೂರ್ನಿಯಿಂದ ಹಿಂದೆ ಸರಿದರೆ ಶ್ರೀಲಂಕಾ ತಂಡಕ್ಕೆ ಅವಕಾಶ ಸಿಗಲಿದೆ. ಏಕೆಂದರೆ ಏಕದಿನ ವಿಶ್ವಕಪ್ 2023ರ ಅಂಕ ಪಟ್ಟಿಯಲ್ಲಿ ಶ್ರೀಲಂಕಾ ತಂಡವು 9ನೇ ಸ್ಥಾನದಲ್ಲಿದೆ. ಹೀಗಾಗಿ ಒಂದು ತಂಡ ಟೂರ್ನಿಯನ್ನು ಬಹಿಷ್ಕರಿಸಿದರೆ, ಅಂಕ ಪಟ್ಟಿಯಲ್ಲಿ ನಂತರದ ಸ್ಥಾನದಲ್ಲಿರುವ ತಂಡಕ್ಕೆ ಅವಕಾಶ ನೀಡಲಾಗುತ್ತದೆ. ಅದರಂತೆ ಭಾರತ ತಂಡವು ಚಾಂಪಿಯನ್ಸ್ ಟ್ರೋಫಿಯಿಂದ ಹಿಂದೆ ಸರಿದರೆ ಶ್ರೀಲಂಕಾ ತಂಡವು ಟೂರ್ನಿಗೆ ಅರ್ಹತೆ ಪಡೆಯಲಿದೆ.

ಒಂದು ವೇಳೆ ಇದೀಗ ಭಾರತ ತಂಡವು ಟೂರ್ನಿಯಿಂದ ಹಿಂದೆ ಸರಿದರೆ ಶ್ರೀಲಂಕಾ ತಂಡಕ್ಕೆ ಅವಕಾಶ ಸಿಗಲಿದೆ. ಏಕೆಂದರೆ ಏಕದಿನ ವಿಶ್ವಕಪ್ 2023ರ ಅಂಕ ಪಟ್ಟಿಯಲ್ಲಿ ಶ್ರೀಲಂಕಾ ತಂಡವು 9ನೇ ಸ್ಥಾನದಲ್ಲಿದೆ. ಹೀಗಾಗಿ ಒಂದು ತಂಡ ಟೂರ್ನಿಯನ್ನು ಬಹಿಷ್ಕರಿಸಿದರೆ, ಅಂಕ ಪಟ್ಟಿಯಲ್ಲಿ ನಂತರದ ಸ್ಥಾನದಲ್ಲಿರುವ ತಂಡಕ್ಕೆ ಅವಕಾಶ ನೀಡಲಾಗುತ್ತದೆ. ಅದರಂತೆ ಭಾರತ ತಂಡವು ಚಾಂಪಿಯನ್ಸ್ ಟ್ರೋಫಿಯಿಂದ ಹಿಂದೆ ಸರಿದರೆ ಶ್ರೀಲಂಕಾ ತಂಡವು ಟೂರ್ನಿಗೆ ಅರ್ಹತೆ ಪಡೆಯಲಿದೆ.

5 / 5
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ