AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯೂಝಿಲೆಂಡ್ ಗೆದ್ದರೆ ಭಾರತ ಸೆಮೀಸ್​ಗೆ, ಪಾಕಿಸ್ತಾನ್ ಮನೆಗೆ..!

India vs Pakistan: ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಮ್ ಇಂಡಿಯಾ ಗೆಲುವಿನ ನಾಗಾಲೋಟ ಮುಂದುವರೆಸಿದೆ. ಭಾನುವಾರ (ಫೆ.23) ಪಾಕಿಸ್ತಾನ್ ವಿರುದ್ಧ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ ತಂಡ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ಸೆಮಿಫೈನಲ್​ನಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿಕೊಂಡಿದೆ.

ಝಾಹಿರ್ ಯೂಸುಫ್
|

Updated on:Feb 24, 2025 | 8:34 AM

Share
ಚಾಂಪಿಯನ್ಸ್ ಟ್ರೋಫಿಯ ಲೀಗ್​ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಟೀಮ್ ಇಂಡಿಯಾ ಆಡಿದ ಎರಡೂ ಪಂದ್ಯಗಳಲ್ಲೂ ಜಯ ಸಾಧಿಸಿದರೆ, ಪಾಕಿಸ್ತಾನ್ ತಂಡ ಎರಡೂ ಮ್ಯಾಚ್​ಗಳಲ್ಲೂ ಮುಗ್ಗರಿಸಿದೆ. ಪರಿಣಾಮ ಪಾಕಿಸ್ತಾನ್ ತಂಡ ಟೂರ್ನಿಯಿಂದಲೇ ಹೊರಬೀಳುವ ಹೊಸ್ತಿಲಲ್ಲಿದ್ದರೆ, ಭಾರತ ತಂಡವು ಸೆಮಿಫೈನಲ್​ಗೇರುವ ಸನಿಹದಲ್ಲಿದೆ.

ಚಾಂಪಿಯನ್ಸ್ ಟ್ರೋಫಿಯ ಲೀಗ್​ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಟೀಮ್ ಇಂಡಿಯಾ ಆಡಿದ ಎರಡೂ ಪಂದ್ಯಗಳಲ್ಲೂ ಜಯ ಸಾಧಿಸಿದರೆ, ಪಾಕಿಸ್ತಾನ್ ತಂಡ ಎರಡೂ ಮ್ಯಾಚ್​ಗಳಲ್ಲೂ ಮುಗ್ಗರಿಸಿದೆ. ಪರಿಣಾಮ ಪಾಕಿಸ್ತಾನ್ ತಂಡ ಟೂರ್ನಿಯಿಂದಲೇ ಹೊರಬೀಳುವ ಹೊಸ್ತಿಲಲ್ಲಿದ್ದರೆ, ಭಾರತ ತಂಡವು ಸೆಮಿಫೈನಲ್​ಗೇರುವ ಸನಿಹದಲ್ಲಿದೆ.

1 / 6
ಅದರಂತೆ ಇಂದು (ಫೆ.24) ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯ 6ನೇ ಪಂದ್ಯವು ಟೀಮ್ ಇಂಡಿಯಾದ ಸೆಮಿಫೈನಲ್​ ಹಾಗೂ ಪಾಕಿಸ್ತಾನ್​ ತಂಡದ ಚಾಂಪಿಯನ್ಸ್ ಟ್ರೋಫಿಯ ಭವಿಷ್ಯವನ್ನು ನಿರ್ಧರಿಸಲಿದೆ. ಅಂದರೆ ಬಾಂಗ್ಲಾದೇಶ್ ವಿರುದ್ಧದ ಈ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡ ಗೆದ್ದರೆ, ಭಾರತ ತಂಡ ಸೆಮಿಫೈನಲ್​ಗೇರುವುದು ಖಚಿತವಾಗಲಿದೆ.

ಅದರಂತೆ ಇಂದು (ಫೆ.24) ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯ 6ನೇ ಪಂದ್ಯವು ಟೀಮ್ ಇಂಡಿಯಾದ ಸೆಮಿಫೈನಲ್​ ಹಾಗೂ ಪಾಕಿಸ್ತಾನ್​ ತಂಡದ ಚಾಂಪಿಯನ್ಸ್ ಟ್ರೋಫಿಯ ಭವಿಷ್ಯವನ್ನು ನಿರ್ಧರಿಸಲಿದೆ. ಅಂದರೆ ಬಾಂಗ್ಲಾದೇಶ್ ವಿರುದ್ಧದ ಈ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡ ಗೆದ್ದರೆ, ಭಾರತ ತಂಡ ಸೆಮಿಫೈನಲ್​ಗೇರುವುದು ಖಚಿತವಾಗಲಿದೆ.

2 / 6
ಏಕೆಂದರೆ ಭಾರತ ತಂಡವು ಈಗಾಗಲೇ 4 ಅಂಕಗಳನ್ನು ಹೊಂದಿದ್ದು, ಇದೀಗ ನ್ಯೂಝಿಲೆಂಡ್ ಕೂಡ 4 ಪಾಯಿಂಟ್ಸ್ ಪಡೆದರೆ ಉಭಯ ತಂಡಗಳು ಗ್ರೂಪ್-ಎ ನಿಂದ ಸೆಮಿಫೈನಲ್​ಗೆ ಅರ್ಹತೆ ಪಡೆಯಲಿರುವುದು ಖಚಿತವಾಗಲಿದೆ. ಅತ್ತ ಪಾಕಿಸ್ತಾನ್ ಹಾಗೂ ಬಾಂಗ್ಲಾದೇಶ್ ತಂಡಗಳು ಅಧಿಕೃತವಾಗಿ ಟೂರ್ನಿಯಿಂದ ಹೊರಬೀಳಲಿದೆ.

ಏಕೆಂದರೆ ಭಾರತ ತಂಡವು ಈಗಾಗಲೇ 4 ಅಂಕಗಳನ್ನು ಹೊಂದಿದ್ದು, ಇದೀಗ ನ್ಯೂಝಿಲೆಂಡ್ ಕೂಡ 4 ಪಾಯಿಂಟ್ಸ್ ಪಡೆದರೆ ಉಭಯ ತಂಡಗಳು ಗ್ರೂಪ್-ಎ ನಿಂದ ಸೆಮಿಫೈನಲ್​ಗೆ ಅರ್ಹತೆ ಪಡೆಯಲಿರುವುದು ಖಚಿತವಾಗಲಿದೆ. ಅತ್ತ ಪಾಕಿಸ್ತಾನ್ ಹಾಗೂ ಬಾಂಗ್ಲಾದೇಶ್ ತಂಡಗಳು ಅಧಿಕೃತವಾಗಿ ಟೂರ್ನಿಯಿಂದ ಹೊರಬೀಳಲಿದೆ.

3 / 6
ಇದಾಗ್ಯೂ ಮಾರ್ಚ್ 2 ರಂದು ಭಾರತ ಮತ್ತು ನ್ಯೂಝಿಲೆಂಡ್ ನಡುವೆ ಔಪಚಾರಿಕ ಪಂದ್ಯ ನಡೆಯಲಿದೆ. ಈ ಪಂದ್ಯದ ಫಲಿತಾಂಶ ಏನೇ ಹಾಗಿದ್ದರೂ ಟೀಮ್ ಇಂಡಿಯಾ ಮಾರ್ಚ್ 4 ರಂದು ಸೆಮಿಫೈನಲ್​ ಆಡುವುದು ಬಹುತೇಕ ಖಚಿತ.

ಇದಾಗ್ಯೂ ಮಾರ್ಚ್ 2 ರಂದು ಭಾರತ ಮತ್ತು ನ್ಯೂಝಿಲೆಂಡ್ ನಡುವೆ ಔಪಚಾರಿಕ ಪಂದ್ಯ ನಡೆಯಲಿದೆ. ಈ ಪಂದ್ಯದ ಫಲಿತಾಂಶ ಏನೇ ಹಾಗಿದ್ದರೂ ಟೀಮ್ ಇಂಡಿಯಾ ಮಾರ್ಚ್ 4 ರಂದು ಸೆಮಿಫೈನಲ್​ ಆಡುವುದು ಬಹುತೇಕ ಖಚಿತ.

4 / 6
ಏಕೆಂದರೆ ಮೊದಲ ಸೆಮಿಫೈನಲ್ ಪಂದ್ಯಕ್ಕೆ ದುಬೈನ ಅಂತಾರಾಷ್ಟ್ರೀಯ ಸ್ಟೇಡಿಯಂ ಅನ್ನು ನಿಗದಿ ಮಾಡಲಾಗಿದ್ದು, ಅದರಂತೆ ಈ ಪಂದ್ಯದಲ್ಲಿ ಒಂದು ಕಡೆ ಭಾರತ ತಂಡ ಕಾಣಿಸಿಕೊಳ್ಳಲಿದೆ ಎನ್ನಬಹುದು. ಇನ್ನು ಟೀಮ್ ಇಂಡಿಯಾಗೆ ಎದುರಾಳಿಯಾಗಿ ಗ್ರೂಪ್-ಬಿ ನಲ್ಲಿರುವ ಸೌತ್ ಆಫ್ರಿಕಾ, ಆಸ್ಟ್ರೇಲಿಯಾ, ಇಂಗ್ಲೆಂಡ್ ಅಥವಾ ಅಫ್ಘಾನಿಸ್ತಾನ್ ತಂಡ ಕಣಕ್ಕಿಳಿಯಲಿದೆ.

ಏಕೆಂದರೆ ಮೊದಲ ಸೆಮಿಫೈನಲ್ ಪಂದ್ಯಕ್ಕೆ ದುಬೈನ ಅಂತಾರಾಷ್ಟ್ರೀಯ ಸ್ಟೇಡಿಯಂ ಅನ್ನು ನಿಗದಿ ಮಾಡಲಾಗಿದ್ದು, ಅದರಂತೆ ಈ ಪಂದ್ಯದಲ್ಲಿ ಒಂದು ಕಡೆ ಭಾರತ ತಂಡ ಕಾಣಿಸಿಕೊಳ್ಳಲಿದೆ ಎನ್ನಬಹುದು. ಇನ್ನು ಟೀಮ್ ಇಂಡಿಯಾಗೆ ಎದುರಾಳಿಯಾಗಿ ಗ್ರೂಪ್-ಬಿ ನಲ್ಲಿರುವ ಸೌತ್ ಆಫ್ರಿಕಾ, ಆಸ್ಟ್ರೇಲಿಯಾ, ಇಂಗ್ಲೆಂಡ್ ಅಥವಾ ಅಫ್ಘಾನಿಸ್ತಾನ್ ತಂಡ ಕಣಕ್ಕಿಳಿಯಲಿದೆ.

5 / 6
ಅದರಂತೆ ಮಾರ್ಚ್ 4 ಮತ್ತು ಮಾರ್ಚ್ 5 ರಂದು ನಡೆಯಲಿರುವ ಸೆಮಿಫೈನಲ್​ನಲ್ಲಿ ಕಣಕ್ಕಿಳಿಯಲಿರುವ ತಂಡಗಳಾವುವು ಎಂಬುದರ ಸ್ಪಷ್ಟ ಚಿತ್ರಣ ಶುಕ್ರವಾರ ಹೊರಬೀಳುವುದು ಖಚಿತ. ಇನ್ನು ಫೈನಲ್ ಪಂದ್ಯವು ಮಾರ್ಚ್ 9 ರಂದು ನಡೆಯಲಿದ್ದು, ಟೀಮ್ ಇಂಡಿಯಾ ಫೈನಲ್​ಗೇರಿದರೆ ಅಂತಿಮ ಹಣಾಹಣಿ ದುಬೈನ ಇಂಟರ್​ನ್ಯಾಷನಲ್​ ಸ್ಟೇಡಿಯಂನಲ್ಲಿ ಜರುಗಲಿದೆ.

ಅದರಂತೆ ಮಾರ್ಚ್ 4 ಮತ್ತು ಮಾರ್ಚ್ 5 ರಂದು ನಡೆಯಲಿರುವ ಸೆಮಿಫೈನಲ್​ನಲ್ಲಿ ಕಣಕ್ಕಿಳಿಯಲಿರುವ ತಂಡಗಳಾವುವು ಎಂಬುದರ ಸ್ಪಷ್ಟ ಚಿತ್ರಣ ಶುಕ್ರವಾರ ಹೊರಬೀಳುವುದು ಖಚಿತ. ಇನ್ನು ಫೈನಲ್ ಪಂದ್ಯವು ಮಾರ್ಚ್ 9 ರಂದು ನಡೆಯಲಿದ್ದು, ಟೀಮ್ ಇಂಡಿಯಾ ಫೈನಲ್​ಗೇರಿದರೆ ಅಂತಿಮ ಹಣಾಹಣಿ ದುಬೈನ ಇಂಟರ್​ನ್ಯಾಷನಲ್​ ಸ್ಟೇಡಿಯಂನಲ್ಲಿ ಜರುಗಲಿದೆ.

6 / 6

Published On - 7:32 am, Mon, 24 February 25

ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು