AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯೂಝಿಲೆಂಡ್ ಗೆದ್ದರೆ ಭಾರತ ಸೆಮೀಸ್​ಗೆ, ಪಾಕಿಸ್ತಾನ್ ಮನೆಗೆ..!

India vs Pakistan: ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಮ್ ಇಂಡಿಯಾ ಗೆಲುವಿನ ನಾಗಾಲೋಟ ಮುಂದುವರೆಸಿದೆ. ಭಾನುವಾರ (ಫೆ.23) ಪಾಕಿಸ್ತಾನ್ ವಿರುದ್ಧ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ ತಂಡ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ಸೆಮಿಫೈನಲ್​ನಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿಕೊಂಡಿದೆ.

ಝಾಹಿರ್ ಯೂಸುಫ್
|

Updated on:Feb 24, 2025 | 8:34 AM

Share
ಚಾಂಪಿಯನ್ಸ್ ಟ್ರೋಫಿಯ ಲೀಗ್​ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಟೀಮ್ ಇಂಡಿಯಾ ಆಡಿದ ಎರಡೂ ಪಂದ್ಯಗಳಲ್ಲೂ ಜಯ ಸಾಧಿಸಿದರೆ, ಪಾಕಿಸ್ತಾನ್ ತಂಡ ಎರಡೂ ಮ್ಯಾಚ್​ಗಳಲ್ಲೂ ಮುಗ್ಗರಿಸಿದೆ. ಪರಿಣಾಮ ಪಾಕಿಸ್ತಾನ್ ತಂಡ ಟೂರ್ನಿಯಿಂದಲೇ ಹೊರಬೀಳುವ ಹೊಸ್ತಿಲಲ್ಲಿದ್ದರೆ, ಭಾರತ ತಂಡವು ಸೆಮಿಫೈನಲ್​ಗೇರುವ ಸನಿಹದಲ್ಲಿದೆ.

ಚಾಂಪಿಯನ್ಸ್ ಟ್ರೋಫಿಯ ಲೀಗ್​ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಟೀಮ್ ಇಂಡಿಯಾ ಆಡಿದ ಎರಡೂ ಪಂದ್ಯಗಳಲ್ಲೂ ಜಯ ಸಾಧಿಸಿದರೆ, ಪಾಕಿಸ್ತಾನ್ ತಂಡ ಎರಡೂ ಮ್ಯಾಚ್​ಗಳಲ್ಲೂ ಮುಗ್ಗರಿಸಿದೆ. ಪರಿಣಾಮ ಪಾಕಿಸ್ತಾನ್ ತಂಡ ಟೂರ್ನಿಯಿಂದಲೇ ಹೊರಬೀಳುವ ಹೊಸ್ತಿಲಲ್ಲಿದ್ದರೆ, ಭಾರತ ತಂಡವು ಸೆಮಿಫೈನಲ್​ಗೇರುವ ಸನಿಹದಲ್ಲಿದೆ.

1 / 6
ಅದರಂತೆ ಇಂದು (ಫೆ.24) ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯ 6ನೇ ಪಂದ್ಯವು ಟೀಮ್ ಇಂಡಿಯಾದ ಸೆಮಿಫೈನಲ್​ ಹಾಗೂ ಪಾಕಿಸ್ತಾನ್​ ತಂಡದ ಚಾಂಪಿಯನ್ಸ್ ಟ್ರೋಫಿಯ ಭವಿಷ್ಯವನ್ನು ನಿರ್ಧರಿಸಲಿದೆ. ಅಂದರೆ ಬಾಂಗ್ಲಾದೇಶ್ ವಿರುದ್ಧದ ಈ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡ ಗೆದ್ದರೆ, ಭಾರತ ತಂಡ ಸೆಮಿಫೈನಲ್​ಗೇರುವುದು ಖಚಿತವಾಗಲಿದೆ.

ಅದರಂತೆ ಇಂದು (ಫೆ.24) ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯ 6ನೇ ಪಂದ್ಯವು ಟೀಮ್ ಇಂಡಿಯಾದ ಸೆಮಿಫೈನಲ್​ ಹಾಗೂ ಪಾಕಿಸ್ತಾನ್​ ತಂಡದ ಚಾಂಪಿಯನ್ಸ್ ಟ್ರೋಫಿಯ ಭವಿಷ್ಯವನ್ನು ನಿರ್ಧರಿಸಲಿದೆ. ಅಂದರೆ ಬಾಂಗ್ಲಾದೇಶ್ ವಿರುದ್ಧದ ಈ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡ ಗೆದ್ದರೆ, ಭಾರತ ತಂಡ ಸೆಮಿಫೈನಲ್​ಗೇರುವುದು ಖಚಿತವಾಗಲಿದೆ.

2 / 6
ಏಕೆಂದರೆ ಭಾರತ ತಂಡವು ಈಗಾಗಲೇ 4 ಅಂಕಗಳನ್ನು ಹೊಂದಿದ್ದು, ಇದೀಗ ನ್ಯೂಝಿಲೆಂಡ್ ಕೂಡ 4 ಪಾಯಿಂಟ್ಸ್ ಪಡೆದರೆ ಉಭಯ ತಂಡಗಳು ಗ್ರೂಪ್-ಎ ನಿಂದ ಸೆಮಿಫೈನಲ್​ಗೆ ಅರ್ಹತೆ ಪಡೆಯಲಿರುವುದು ಖಚಿತವಾಗಲಿದೆ. ಅತ್ತ ಪಾಕಿಸ್ತಾನ್ ಹಾಗೂ ಬಾಂಗ್ಲಾದೇಶ್ ತಂಡಗಳು ಅಧಿಕೃತವಾಗಿ ಟೂರ್ನಿಯಿಂದ ಹೊರಬೀಳಲಿದೆ.

ಏಕೆಂದರೆ ಭಾರತ ತಂಡವು ಈಗಾಗಲೇ 4 ಅಂಕಗಳನ್ನು ಹೊಂದಿದ್ದು, ಇದೀಗ ನ್ಯೂಝಿಲೆಂಡ್ ಕೂಡ 4 ಪಾಯಿಂಟ್ಸ್ ಪಡೆದರೆ ಉಭಯ ತಂಡಗಳು ಗ್ರೂಪ್-ಎ ನಿಂದ ಸೆಮಿಫೈನಲ್​ಗೆ ಅರ್ಹತೆ ಪಡೆಯಲಿರುವುದು ಖಚಿತವಾಗಲಿದೆ. ಅತ್ತ ಪಾಕಿಸ್ತಾನ್ ಹಾಗೂ ಬಾಂಗ್ಲಾದೇಶ್ ತಂಡಗಳು ಅಧಿಕೃತವಾಗಿ ಟೂರ್ನಿಯಿಂದ ಹೊರಬೀಳಲಿದೆ.

3 / 6
ಇದಾಗ್ಯೂ ಮಾರ್ಚ್ 2 ರಂದು ಭಾರತ ಮತ್ತು ನ್ಯೂಝಿಲೆಂಡ್ ನಡುವೆ ಔಪಚಾರಿಕ ಪಂದ್ಯ ನಡೆಯಲಿದೆ. ಈ ಪಂದ್ಯದ ಫಲಿತಾಂಶ ಏನೇ ಹಾಗಿದ್ದರೂ ಟೀಮ್ ಇಂಡಿಯಾ ಮಾರ್ಚ್ 4 ರಂದು ಸೆಮಿಫೈನಲ್​ ಆಡುವುದು ಬಹುತೇಕ ಖಚಿತ.

ಇದಾಗ್ಯೂ ಮಾರ್ಚ್ 2 ರಂದು ಭಾರತ ಮತ್ತು ನ್ಯೂಝಿಲೆಂಡ್ ನಡುವೆ ಔಪಚಾರಿಕ ಪಂದ್ಯ ನಡೆಯಲಿದೆ. ಈ ಪಂದ್ಯದ ಫಲಿತಾಂಶ ಏನೇ ಹಾಗಿದ್ದರೂ ಟೀಮ್ ಇಂಡಿಯಾ ಮಾರ್ಚ್ 4 ರಂದು ಸೆಮಿಫೈನಲ್​ ಆಡುವುದು ಬಹುತೇಕ ಖಚಿತ.

4 / 6
ಏಕೆಂದರೆ ಮೊದಲ ಸೆಮಿಫೈನಲ್ ಪಂದ್ಯಕ್ಕೆ ದುಬೈನ ಅಂತಾರಾಷ್ಟ್ರೀಯ ಸ್ಟೇಡಿಯಂ ಅನ್ನು ನಿಗದಿ ಮಾಡಲಾಗಿದ್ದು, ಅದರಂತೆ ಈ ಪಂದ್ಯದಲ್ಲಿ ಒಂದು ಕಡೆ ಭಾರತ ತಂಡ ಕಾಣಿಸಿಕೊಳ್ಳಲಿದೆ ಎನ್ನಬಹುದು. ಇನ್ನು ಟೀಮ್ ಇಂಡಿಯಾಗೆ ಎದುರಾಳಿಯಾಗಿ ಗ್ರೂಪ್-ಬಿ ನಲ್ಲಿರುವ ಸೌತ್ ಆಫ್ರಿಕಾ, ಆಸ್ಟ್ರೇಲಿಯಾ, ಇಂಗ್ಲೆಂಡ್ ಅಥವಾ ಅಫ್ಘಾನಿಸ್ತಾನ್ ತಂಡ ಕಣಕ್ಕಿಳಿಯಲಿದೆ.

ಏಕೆಂದರೆ ಮೊದಲ ಸೆಮಿಫೈನಲ್ ಪಂದ್ಯಕ್ಕೆ ದುಬೈನ ಅಂತಾರಾಷ್ಟ್ರೀಯ ಸ್ಟೇಡಿಯಂ ಅನ್ನು ನಿಗದಿ ಮಾಡಲಾಗಿದ್ದು, ಅದರಂತೆ ಈ ಪಂದ್ಯದಲ್ಲಿ ಒಂದು ಕಡೆ ಭಾರತ ತಂಡ ಕಾಣಿಸಿಕೊಳ್ಳಲಿದೆ ಎನ್ನಬಹುದು. ಇನ್ನು ಟೀಮ್ ಇಂಡಿಯಾಗೆ ಎದುರಾಳಿಯಾಗಿ ಗ್ರೂಪ್-ಬಿ ನಲ್ಲಿರುವ ಸೌತ್ ಆಫ್ರಿಕಾ, ಆಸ್ಟ್ರೇಲಿಯಾ, ಇಂಗ್ಲೆಂಡ್ ಅಥವಾ ಅಫ್ಘಾನಿಸ್ತಾನ್ ತಂಡ ಕಣಕ್ಕಿಳಿಯಲಿದೆ.

5 / 6
ಅದರಂತೆ ಮಾರ್ಚ್ 4 ಮತ್ತು ಮಾರ್ಚ್ 5 ರಂದು ನಡೆಯಲಿರುವ ಸೆಮಿಫೈನಲ್​ನಲ್ಲಿ ಕಣಕ್ಕಿಳಿಯಲಿರುವ ತಂಡಗಳಾವುವು ಎಂಬುದರ ಸ್ಪಷ್ಟ ಚಿತ್ರಣ ಶುಕ್ರವಾರ ಹೊರಬೀಳುವುದು ಖಚಿತ. ಇನ್ನು ಫೈನಲ್ ಪಂದ್ಯವು ಮಾರ್ಚ್ 9 ರಂದು ನಡೆಯಲಿದ್ದು, ಟೀಮ್ ಇಂಡಿಯಾ ಫೈನಲ್​ಗೇರಿದರೆ ಅಂತಿಮ ಹಣಾಹಣಿ ದುಬೈನ ಇಂಟರ್​ನ್ಯಾಷನಲ್​ ಸ್ಟೇಡಿಯಂನಲ್ಲಿ ಜರುಗಲಿದೆ.

ಅದರಂತೆ ಮಾರ್ಚ್ 4 ಮತ್ತು ಮಾರ್ಚ್ 5 ರಂದು ನಡೆಯಲಿರುವ ಸೆಮಿಫೈನಲ್​ನಲ್ಲಿ ಕಣಕ್ಕಿಳಿಯಲಿರುವ ತಂಡಗಳಾವುವು ಎಂಬುದರ ಸ್ಪಷ್ಟ ಚಿತ್ರಣ ಶುಕ್ರವಾರ ಹೊರಬೀಳುವುದು ಖಚಿತ. ಇನ್ನು ಫೈನಲ್ ಪಂದ್ಯವು ಮಾರ್ಚ್ 9 ರಂದು ನಡೆಯಲಿದ್ದು, ಟೀಮ್ ಇಂಡಿಯಾ ಫೈನಲ್​ಗೇರಿದರೆ ಅಂತಿಮ ಹಣಾಹಣಿ ದುಬೈನ ಇಂಟರ್​ನ್ಯಾಷನಲ್​ ಸ್ಟೇಡಿಯಂನಲ್ಲಿ ಜರುಗಲಿದೆ.

6 / 6

Published On - 7:32 am, Mon, 24 February 25

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ