AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯೂಝಿಲೆಂಡ್ ಗೆದ್ದರೆ ಭಾರತ ಸೆಮೀಸ್​ಗೆ, ಪಾಕಿಸ್ತಾನ್ ಮನೆಗೆ..!

India vs Pakistan: ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಮ್ ಇಂಡಿಯಾ ಗೆಲುವಿನ ನಾಗಾಲೋಟ ಮುಂದುವರೆಸಿದೆ. ಭಾನುವಾರ (ಫೆ.23) ಪಾಕಿಸ್ತಾನ್ ವಿರುದ್ಧ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ ತಂಡ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ಸೆಮಿಫೈನಲ್​ನಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿಕೊಂಡಿದೆ.

ಝಾಹಿರ್ ಯೂಸುಫ್
|

Updated on:Feb 24, 2025 | 8:34 AM

Share
ಚಾಂಪಿಯನ್ಸ್ ಟ್ರೋಫಿಯ ಲೀಗ್​ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಟೀಮ್ ಇಂಡಿಯಾ ಆಡಿದ ಎರಡೂ ಪಂದ್ಯಗಳಲ್ಲೂ ಜಯ ಸಾಧಿಸಿದರೆ, ಪಾಕಿಸ್ತಾನ್ ತಂಡ ಎರಡೂ ಮ್ಯಾಚ್​ಗಳಲ್ಲೂ ಮುಗ್ಗರಿಸಿದೆ. ಪರಿಣಾಮ ಪಾಕಿಸ್ತಾನ್ ತಂಡ ಟೂರ್ನಿಯಿಂದಲೇ ಹೊರಬೀಳುವ ಹೊಸ್ತಿಲಲ್ಲಿದ್ದರೆ, ಭಾರತ ತಂಡವು ಸೆಮಿಫೈನಲ್​ಗೇರುವ ಸನಿಹದಲ್ಲಿದೆ.

ಚಾಂಪಿಯನ್ಸ್ ಟ್ರೋಫಿಯ ಲೀಗ್​ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಟೀಮ್ ಇಂಡಿಯಾ ಆಡಿದ ಎರಡೂ ಪಂದ್ಯಗಳಲ್ಲೂ ಜಯ ಸಾಧಿಸಿದರೆ, ಪಾಕಿಸ್ತಾನ್ ತಂಡ ಎರಡೂ ಮ್ಯಾಚ್​ಗಳಲ್ಲೂ ಮುಗ್ಗರಿಸಿದೆ. ಪರಿಣಾಮ ಪಾಕಿಸ್ತಾನ್ ತಂಡ ಟೂರ್ನಿಯಿಂದಲೇ ಹೊರಬೀಳುವ ಹೊಸ್ತಿಲಲ್ಲಿದ್ದರೆ, ಭಾರತ ತಂಡವು ಸೆಮಿಫೈನಲ್​ಗೇರುವ ಸನಿಹದಲ್ಲಿದೆ.

1 / 6
ಅದರಂತೆ ಇಂದು (ಫೆ.24) ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯ 6ನೇ ಪಂದ್ಯವು ಟೀಮ್ ಇಂಡಿಯಾದ ಸೆಮಿಫೈನಲ್​ ಹಾಗೂ ಪಾಕಿಸ್ತಾನ್​ ತಂಡದ ಚಾಂಪಿಯನ್ಸ್ ಟ್ರೋಫಿಯ ಭವಿಷ್ಯವನ್ನು ನಿರ್ಧರಿಸಲಿದೆ. ಅಂದರೆ ಬಾಂಗ್ಲಾದೇಶ್ ವಿರುದ್ಧದ ಈ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡ ಗೆದ್ದರೆ, ಭಾರತ ತಂಡ ಸೆಮಿಫೈನಲ್​ಗೇರುವುದು ಖಚಿತವಾಗಲಿದೆ.

ಅದರಂತೆ ಇಂದು (ಫೆ.24) ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯ 6ನೇ ಪಂದ್ಯವು ಟೀಮ್ ಇಂಡಿಯಾದ ಸೆಮಿಫೈನಲ್​ ಹಾಗೂ ಪಾಕಿಸ್ತಾನ್​ ತಂಡದ ಚಾಂಪಿಯನ್ಸ್ ಟ್ರೋಫಿಯ ಭವಿಷ್ಯವನ್ನು ನಿರ್ಧರಿಸಲಿದೆ. ಅಂದರೆ ಬಾಂಗ್ಲಾದೇಶ್ ವಿರುದ್ಧದ ಈ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡ ಗೆದ್ದರೆ, ಭಾರತ ತಂಡ ಸೆಮಿಫೈನಲ್​ಗೇರುವುದು ಖಚಿತವಾಗಲಿದೆ.

2 / 6
ಏಕೆಂದರೆ ಭಾರತ ತಂಡವು ಈಗಾಗಲೇ 4 ಅಂಕಗಳನ್ನು ಹೊಂದಿದ್ದು, ಇದೀಗ ನ್ಯೂಝಿಲೆಂಡ್ ಕೂಡ 4 ಪಾಯಿಂಟ್ಸ್ ಪಡೆದರೆ ಉಭಯ ತಂಡಗಳು ಗ್ರೂಪ್-ಎ ನಿಂದ ಸೆಮಿಫೈನಲ್​ಗೆ ಅರ್ಹತೆ ಪಡೆಯಲಿರುವುದು ಖಚಿತವಾಗಲಿದೆ. ಅತ್ತ ಪಾಕಿಸ್ತಾನ್ ಹಾಗೂ ಬಾಂಗ್ಲಾದೇಶ್ ತಂಡಗಳು ಅಧಿಕೃತವಾಗಿ ಟೂರ್ನಿಯಿಂದ ಹೊರಬೀಳಲಿದೆ.

ಏಕೆಂದರೆ ಭಾರತ ತಂಡವು ಈಗಾಗಲೇ 4 ಅಂಕಗಳನ್ನು ಹೊಂದಿದ್ದು, ಇದೀಗ ನ್ಯೂಝಿಲೆಂಡ್ ಕೂಡ 4 ಪಾಯಿಂಟ್ಸ್ ಪಡೆದರೆ ಉಭಯ ತಂಡಗಳು ಗ್ರೂಪ್-ಎ ನಿಂದ ಸೆಮಿಫೈನಲ್​ಗೆ ಅರ್ಹತೆ ಪಡೆಯಲಿರುವುದು ಖಚಿತವಾಗಲಿದೆ. ಅತ್ತ ಪಾಕಿಸ್ತಾನ್ ಹಾಗೂ ಬಾಂಗ್ಲಾದೇಶ್ ತಂಡಗಳು ಅಧಿಕೃತವಾಗಿ ಟೂರ್ನಿಯಿಂದ ಹೊರಬೀಳಲಿದೆ.

3 / 6
ಇದಾಗ್ಯೂ ಮಾರ್ಚ್ 2 ರಂದು ಭಾರತ ಮತ್ತು ನ್ಯೂಝಿಲೆಂಡ್ ನಡುವೆ ಔಪಚಾರಿಕ ಪಂದ್ಯ ನಡೆಯಲಿದೆ. ಈ ಪಂದ್ಯದ ಫಲಿತಾಂಶ ಏನೇ ಹಾಗಿದ್ದರೂ ಟೀಮ್ ಇಂಡಿಯಾ ಮಾರ್ಚ್ 4 ರಂದು ಸೆಮಿಫೈನಲ್​ ಆಡುವುದು ಬಹುತೇಕ ಖಚಿತ.

ಇದಾಗ್ಯೂ ಮಾರ್ಚ್ 2 ರಂದು ಭಾರತ ಮತ್ತು ನ್ಯೂಝಿಲೆಂಡ್ ನಡುವೆ ಔಪಚಾರಿಕ ಪಂದ್ಯ ನಡೆಯಲಿದೆ. ಈ ಪಂದ್ಯದ ಫಲಿತಾಂಶ ಏನೇ ಹಾಗಿದ್ದರೂ ಟೀಮ್ ಇಂಡಿಯಾ ಮಾರ್ಚ್ 4 ರಂದು ಸೆಮಿಫೈನಲ್​ ಆಡುವುದು ಬಹುತೇಕ ಖಚಿತ.

4 / 6
ಏಕೆಂದರೆ ಮೊದಲ ಸೆಮಿಫೈನಲ್ ಪಂದ್ಯಕ್ಕೆ ದುಬೈನ ಅಂತಾರಾಷ್ಟ್ರೀಯ ಸ್ಟೇಡಿಯಂ ಅನ್ನು ನಿಗದಿ ಮಾಡಲಾಗಿದ್ದು, ಅದರಂತೆ ಈ ಪಂದ್ಯದಲ್ಲಿ ಒಂದು ಕಡೆ ಭಾರತ ತಂಡ ಕಾಣಿಸಿಕೊಳ್ಳಲಿದೆ ಎನ್ನಬಹುದು. ಇನ್ನು ಟೀಮ್ ಇಂಡಿಯಾಗೆ ಎದುರಾಳಿಯಾಗಿ ಗ್ರೂಪ್-ಬಿ ನಲ್ಲಿರುವ ಸೌತ್ ಆಫ್ರಿಕಾ, ಆಸ್ಟ್ರೇಲಿಯಾ, ಇಂಗ್ಲೆಂಡ್ ಅಥವಾ ಅಫ್ಘಾನಿಸ್ತಾನ್ ತಂಡ ಕಣಕ್ಕಿಳಿಯಲಿದೆ.

ಏಕೆಂದರೆ ಮೊದಲ ಸೆಮಿಫೈನಲ್ ಪಂದ್ಯಕ್ಕೆ ದುಬೈನ ಅಂತಾರಾಷ್ಟ್ರೀಯ ಸ್ಟೇಡಿಯಂ ಅನ್ನು ನಿಗದಿ ಮಾಡಲಾಗಿದ್ದು, ಅದರಂತೆ ಈ ಪಂದ್ಯದಲ್ಲಿ ಒಂದು ಕಡೆ ಭಾರತ ತಂಡ ಕಾಣಿಸಿಕೊಳ್ಳಲಿದೆ ಎನ್ನಬಹುದು. ಇನ್ನು ಟೀಮ್ ಇಂಡಿಯಾಗೆ ಎದುರಾಳಿಯಾಗಿ ಗ್ರೂಪ್-ಬಿ ನಲ್ಲಿರುವ ಸೌತ್ ಆಫ್ರಿಕಾ, ಆಸ್ಟ್ರೇಲಿಯಾ, ಇಂಗ್ಲೆಂಡ್ ಅಥವಾ ಅಫ್ಘಾನಿಸ್ತಾನ್ ತಂಡ ಕಣಕ್ಕಿಳಿಯಲಿದೆ.

5 / 6
ಅದರಂತೆ ಮಾರ್ಚ್ 4 ಮತ್ತು ಮಾರ್ಚ್ 5 ರಂದು ನಡೆಯಲಿರುವ ಸೆಮಿಫೈನಲ್​ನಲ್ಲಿ ಕಣಕ್ಕಿಳಿಯಲಿರುವ ತಂಡಗಳಾವುವು ಎಂಬುದರ ಸ್ಪಷ್ಟ ಚಿತ್ರಣ ಶುಕ್ರವಾರ ಹೊರಬೀಳುವುದು ಖಚಿತ. ಇನ್ನು ಫೈನಲ್ ಪಂದ್ಯವು ಮಾರ್ಚ್ 9 ರಂದು ನಡೆಯಲಿದ್ದು, ಟೀಮ್ ಇಂಡಿಯಾ ಫೈನಲ್​ಗೇರಿದರೆ ಅಂತಿಮ ಹಣಾಹಣಿ ದುಬೈನ ಇಂಟರ್​ನ್ಯಾಷನಲ್​ ಸ್ಟೇಡಿಯಂನಲ್ಲಿ ಜರುಗಲಿದೆ.

ಅದರಂತೆ ಮಾರ್ಚ್ 4 ಮತ್ತು ಮಾರ್ಚ್ 5 ರಂದು ನಡೆಯಲಿರುವ ಸೆಮಿಫೈನಲ್​ನಲ್ಲಿ ಕಣಕ್ಕಿಳಿಯಲಿರುವ ತಂಡಗಳಾವುವು ಎಂಬುದರ ಸ್ಪಷ್ಟ ಚಿತ್ರಣ ಶುಕ್ರವಾರ ಹೊರಬೀಳುವುದು ಖಚಿತ. ಇನ್ನು ಫೈನಲ್ ಪಂದ್ಯವು ಮಾರ್ಚ್ 9 ರಂದು ನಡೆಯಲಿದ್ದು, ಟೀಮ್ ಇಂಡಿಯಾ ಫೈನಲ್​ಗೇರಿದರೆ ಅಂತಿಮ ಹಣಾಹಣಿ ದುಬೈನ ಇಂಟರ್​ನ್ಯಾಷನಲ್​ ಸ್ಟೇಡಿಯಂನಲ್ಲಿ ಜರುಗಲಿದೆ.

6 / 6

Published On - 7:32 am, Mon, 24 February 25

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ