AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಂಪಿಯನ್ಸ್​ ಟ್ರೋಫಿಯಿಂದ ಪಾಕಿಸ್ತಾನ್ ಹೊರಬಿದ್ದರೆ, ಯಾವ ತಂಡಕ್ಕೆ ಚಾನ್ಸ್?

Champions Trophy 2025: ಚಾಂಪಿಯನ್ಸ್ ಟ್ರೋಫಿ ಟೂರ್ನಿಯನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಲು ಪಿಸಿಬಿ ಒಪ್ಪದಿದ್ದರೆ, ಇಡೀ ಟೂರ್ನಿ ಸ್ಥಳಾಂತರವಾಗಲಿದೆ. ಈಗಾಗಲೇ ಸೌತ್ ಆಫ್ರಿಕಾ ಕ್ರಿಕೆಟ್ ಮಂಡಳಿ ಮತ್ತು ಬಿಸಿಸಿಐ ಚಾಂಪಿಯನ್ಸ್​ ಆಯೋಜಿಸಲು ತುದಿಗಾಲಲ್ಲಿ ನಿಂತಿದೆ. ಒಂದು ವೇಳೆ ಟೂರ್ನಿ ಸ್ಥಳಾಂತರಗೊಂಡರೆ ಪಾಕಿಸ್ತಾನ್ ತಂಡ ಚಾಂಪಿಯನ್ಸ್ ಟ್ರೋಫಿಯಲ್ಲಿ ಪಾಲ್ಗೊಳ್ಳುವುದಿಲ್ಲ.

ಝಾಹಿರ್ ಯೂಸುಫ್
|

Updated on: Nov 30, 2024 | 10:53 AM

Share
ಚಾಂಪಿಯನ್ಸ್ ಟ್ರೋಫಿ 2025ರ ಆಯೋಜನೆಯ ಹಕ್ಕಿನಿಂದ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಸಂಕಷ್ಟಕ್ಕೆ ಸಿಲುಕಿದೆ. ಏಕೆಂದರೆ ಪಾಕ್​​​ನಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳನ್ನು ಆಡಲು ಭಾರತ ನಿರಾಕರಿಸಿದೆ. ಅಲ್ಲದೆ ಹೈಬ್ರಿಡ್ ಮಾದರಿಯಲ್ಲಿ ಟೂರ್ನಿ ಆಯೋಜಿಸಬೇಕೆಂದು ಬೇಡಿಕೆ ಮುಂದಿಟ್ಟಿದೆ. ಬಿಸಿಸಿಐನ ಈ ಬೇಡಿಕೆಯನ್ನು ಐಸಿಸಿ ಈಡೇರಿಸುವುದು ಬಹುತೇಕ ಖಚಿತ. ಇದರಿಂದ ಇಕ್ಕಟ್ಟಿಗೆ ಸಿಲುಕಿರುವುದು ಪಾಕಿಸ್ತಾನ್.

ಚಾಂಪಿಯನ್ಸ್ ಟ್ರೋಫಿ 2025ರ ಆಯೋಜನೆಯ ಹಕ್ಕಿನಿಂದ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಸಂಕಷ್ಟಕ್ಕೆ ಸಿಲುಕಿದೆ. ಏಕೆಂದರೆ ಪಾಕ್​​​ನಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳನ್ನು ಆಡಲು ಭಾರತ ನಿರಾಕರಿಸಿದೆ. ಅಲ್ಲದೆ ಹೈಬ್ರಿಡ್ ಮಾದರಿಯಲ್ಲಿ ಟೂರ್ನಿ ಆಯೋಜಿಸಬೇಕೆಂದು ಬೇಡಿಕೆ ಮುಂದಿಟ್ಟಿದೆ. ಬಿಸಿಸಿಐನ ಈ ಬೇಡಿಕೆಯನ್ನು ಐಸಿಸಿ ಈಡೇರಿಸುವುದು ಬಹುತೇಕ ಖಚಿತ. ಇದರಿಂದ ಇಕ್ಕಟ್ಟಿಗೆ ಸಿಲುಕಿರುವುದು ಪಾಕಿಸ್ತಾನ್.

1 / 6
ಏಕೆಂದರೆ ಈ ಹಿಂದಿನಿಂದಲೂ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಹೈಬ್ರಿಡ್ ಮಾದರಿಯಲ್ಲಿ ಟೂರ್ನಿ ಆಯೋಜಿಸುವುದಿಲ್ಲ ಎಂದು ತನ್ನ ಗರ್ವ ಪ್ರದರ್ಶಿಸಿತ್ತು.ಆದರೀಗ ಇತರೆ ಕ್ರಿಕೆಟ್ ಮಂಡಳಿ ಹಾಗೂ ಐಸಿಸಿ ಭಾರತದ ಪರ ನಿಂತಿದೆ. ಹೀಗಾಗಿ ಹೈಬ್ರಿಡ್ ಮಾದರಿಯಲ್ಲಿ ಟೂರ್ನಿ ಆಯೋಜಿಸಬೇಕಾದ ಅನಿವಾರ್ಯತೆ ಪಿಸಿಬಿ ಮುಂದಿದೆ.

ಏಕೆಂದರೆ ಈ ಹಿಂದಿನಿಂದಲೂ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಹೈಬ್ರಿಡ್ ಮಾದರಿಯಲ್ಲಿ ಟೂರ್ನಿ ಆಯೋಜಿಸುವುದಿಲ್ಲ ಎಂದು ತನ್ನ ಗರ್ವ ಪ್ರದರ್ಶಿಸಿತ್ತು.ಆದರೀಗ ಇತರೆ ಕ್ರಿಕೆಟ್ ಮಂಡಳಿ ಹಾಗೂ ಐಸಿಸಿ ಭಾರತದ ಪರ ನಿಂತಿದೆ. ಹೀಗಾಗಿ ಹೈಬ್ರಿಡ್ ಮಾದರಿಯಲ್ಲಿ ಟೂರ್ನಿ ಆಯೋಜಿಸಬೇಕಾದ ಅನಿವಾರ್ಯತೆ ಪಿಸಿಬಿ ಮುಂದಿದೆ.

2 / 6
ಒಂದು ವೇಳೆ ಹೈಬ್ರಿಡ್ ಮಾದರಿಯಲ್ಲಿ ಚಾಂಪಿಯನ್ಸ್ ಟ್ರೋಫಿ ಆಯೋಜಿಸಲು ಸಿದ್ಧವಿಲ್ಲದಿದ್ದರೆ, ಪಾಕಿಸ್ತಾನ್ ತಂಡವನ್ನು ಟೂರ್ನಿಯಿಂದಲೇ ಕೈ ಬಿಡಲು ಐಸಿಸಿ ಚಿಂತಿಸಿದೆ. ಅಲ್ಲದೆ ಮತ್ತೊಂದು ಕ್ರಿಕೆಟ್ ಮಂಡಳಿ ಚಾಂಪಿಯನ್ಸ್ ಟ್ರೋಫಿ ಆಯೋಜನೆಯ ಹಕ್ಕು ನೀಡುವ ಬಗ್ಗೆ ಚರ್ಚಿಸಲಾಗಿದೆ.

ಒಂದು ವೇಳೆ ಹೈಬ್ರಿಡ್ ಮಾದರಿಯಲ್ಲಿ ಚಾಂಪಿಯನ್ಸ್ ಟ್ರೋಫಿ ಆಯೋಜಿಸಲು ಸಿದ್ಧವಿಲ್ಲದಿದ್ದರೆ, ಪಾಕಿಸ್ತಾನ್ ತಂಡವನ್ನು ಟೂರ್ನಿಯಿಂದಲೇ ಕೈ ಬಿಡಲು ಐಸಿಸಿ ಚಿಂತಿಸಿದೆ. ಅಲ್ಲದೆ ಮತ್ತೊಂದು ಕ್ರಿಕೆಟ್ ಮಂಡಳಿ ಚಾಂಪಿಯನ್ಸ್ ಟ್ರೋಫಿ ಆಯೋಜನೆಯ ಹಕ್ಕು ನೀಡುವ ಬಗ್ಗೆ ಚರ್ಚಿಸಲಾಗಿದೆ.

3 / 6
ಇದೀಗ ಪಾಕಿಸ್ತಾನ್ ತಂಡದ ಚಾಂಪಿಯನ್ಸ್ ಟ್ರೋಫಿಯ ಭವಿಷ್ಯ ಪಿಸಿಬಿ ಕೈಯಲ್ಲಿದೆ. ಪಾಕ್ ಕ್ರಿಕೆಟ್ ಮಂಡಳಿ ಹೈಬ್ರಿಡ್ ಮಾದರಿಯಲ್ಲಿ ಟೂರ್ನಿ ಆಯೋಜಿಸದಿದ್ದರೆ, ಟೂರ್ನಿ ಕೈ ತಪ್ಪುವುದಲ್ಲದೇ ಚಾಂಪಿಯನ್ಸ್ ಟ್ರೋಫಿಯಿಂದಲೂ ಹೊರಬೀಳುವ ಸಾಧ್ಯತೆ ಹೆಚ್ಚಿದೆ. ಪಾಕ್ ತಂಡವನ್ನು ಚಾಂಪಿಯನ್ಸ್ ಟ್ರೋಫಿ ಟರ್ನಿಯಿಂದ ಕೈ ಬಿಟ್ಟರೆ, ಯಾವ ತಂಡಕ್ಕೆ ಚಾನ್ಸ್ ಸಿಗಲಿದೆ ಎಂಬ ಪ್ರಶ್ನೆ ಮೂಡುವುದು ಸಹಜ.

ಇದೀಗ ಪಾಕಿಸ್ತಾನ್ ತಂಡದ ಚಾಂಪಿಯನ್ಸ್ ಟ್ರೋಫಿಯ ಭವಿಷ್ಯ ಪಿಸಿಬಿ ಕೈಯಲ್ಲಿದೆ. ಪಾಕ್ ಕ್ರಿಕೆಟ್ ಮಂಡಳಿ ಹೈಬ್ರಿಡ್ ಮಾದರಿಯಲ್ಲಿ ಟೂರ್ನಿ ಆಯೋಜಿಸದಿದ್ದರೆ, ಟೂರ್ನಿ ಕೈ ತಪ್ಪುವುದಲ್ಲದೇ ಚಾಂಪಿಯನ್ಸ್ ಟ್ರೋಫಿಯಿಂದಲೂ ಹೊರಬೀಳುವ ಸಾಧ್ಯತೆ ಹೆಚ್ಚಿದೆ. ಪಾಕ್ ತಂಡವನ್ನು ಚಾಂಪಿಯನ್ಸ್ ಟ್ರೋಫಿ ಟರ್ನಿಯಿಂದ ಕೈ ಬಿಟ್ಟರೆ, ಯಾವ ತಂಡಕ್ಕೆ ಚಾನ್ಸ್ ಸಿಗಲಿದೆ ಎಂಬ ಪ್ರಶ್ನೆ ಮೂಡುವುದು ಸಹಜ.

4 / 6
ಈ ಪ್ರಶ್ನೆಗೆ ಉತ್ತರ ಶ್ರೀಲಂಕಾ. ಏಕೆಂದರೆ ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿವೆ. ಏಕದಿನ ವಿಶ್ವಕಪ್ 2023 ರ ಅಂಕ ಪಟ್ಟಿಯಲ್ಲಿ ಟಾಪ್-8 ನಲ್ಲಿ ಕಾಣಿಸಿಕೊಂಡ ತಂಡಗಳು ಚಾಂಪಿಯನ್ಸ್​ ಟ್ರೋಫಿಗೆ ಅರ್ಹತೆ ಪಡೆದುಕೊಂಡಿದೆ. ಆದರೆ ಈ 8 ತಂಡಗಳಲ್ಲಿ ಶ್ರೀಲಂಕಾ ಇಲ್ಲ.

ಈ ಪ್ರಶ್ನೆಗೆ ಉತ್ತರ ಶ್ರೀಲಂಕಾ. ಏಕೆಂದರೆ ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿವೆ. ಏಕದಿನ ವಿಶ್ವಕಪ್ 2023 ರ ಅಂಕ ಪಟ್ಟಿಯಲ್ಲಿ ಟಾಪ್-8 ನಲ್ಲಿ ಕಾಣಿಸಿಕೊಂಡ ತಂಡಗಳು ಚಾಂಪಿಯನ್ಸ್​ ಟ್ರೋಫಿಗೆ ಅರ್ಹತೆ ಪಡೆದುಕೊಂಡಿದೆ. ಆದರೆ ಈ 8 ತಂಡಗಳಲ್ಲಿ ಶ್ರೀಲಂಕಾ ಇಲ್ಲ.

5 / 6
ಒಂದು ವೇಳೆ ಪಾಕಿಸ್ತಾನ್ ತಂಡವನ್ನು ಟೂರ್ನಿಯಿಂದ ಕೈ ಬಿಟ್ಟರೆ ಶ್ರೀಲಂಕಾ ತಂಡಕ್ಕೆ ಅವಕಾಶ ಸಿಗಲಿದೆ. ಏಕೆಂದರೆ ಏಕದಿನ ವಿಶ್ವಕಪ್ 2023ರ ಅಂಕ ಪಟ್ಟಿಯಲ್ಲಿ ಶ್ರೀಲಂಕಾ ತಂಡವು 9ನೇ ಸ್ಥಾನದಲ್ಲಿದೆ. ಹೀಗಾಗಿ ಒಂದು ತಂಡ ಟೂರ್ನಿಯಿಂದ ಹಿಂದೆ ಸರಿದರೆ, ಅಂಕ ಪಟ್ಟಿಯಲ್ಲಿ ನಂತರದ ಸ್ಥಾನದಲ್ಲಿರುವ ತಂಡಕ್ಕೆ ಅವಕಾಶ ನೀಡಲಾಗುತ್ತದೆ. ಅದರಂತೆ ಪಾಕಿಸ್ತಾನ್ ತಂಡ ಚಾಂಪಿಯನ್ಸ್​ ಟ್ರೋಫಿಯಿಂದ ಹೊರಬಿದ್ದರೆ ಶ್ರೀಲಂಕಾ ತಂಡವು ಟೂರ್ನಿಗೆ ಅರ್ಹತೆ ಪಡೆಯಲಿದೆ.

ಒಂದು ವೇಳೆ ಪಾಕಿಸ್ತಾನ್ ತಂಡವನ್ನು ಟೂರ್ನಿಯಿಂದ ಕೈ ಬಿಟ್ಟರೆ ಶ್ರೀಲಂಕಾ ತಂಡಕ್ಕೆ ಅವಕಾಶ ಸಿಗಲಿದೆ. ಏಕೆಂದರೆ ಏಕದಿನ ವಿಶ್ವಕಪ್ 2023ರ ಅಂಕ ಪಟ್ಟಿಯಲ್ಲಿ ಶ್ರೀಲಂಕಾ ತಂಡವು 9ನೇ ಸ್ಥಾನದಲ್ಲಿದೆ. ಹೀಗಾಗಿ ಒಂದು ತಂಡ ಟೂರ್ನಿಯಿಂದ ಹಿಂದೆ ಸರಿದರೆ, ಅಂಕ ಪಟ್ಟಿಯಲ್ಲಿ ನಂತರದ ಸ್ಥಾನದಲ್ಲಿರುವ ತಂಡಕ್ಕೆ ಅವಕಾಶ ನೀಡಲಾಗುತ್ತದೆ. ಅದರಂತೆ ಪಾಕಿಸ್ತಾನ್ ತಂಡ ಚಾಂಪಿಯನ್ಸ್​ ಟ್ರೋಫಿಯಿಂದ ಹೊರಬಿದ್ದರೆ ಶ್ರೀಲಂಕಾ ತಂಡವು ಟೂರ್ನಿಗೆ ಅರ್ಹತೆ ಪಡೆಯಲಿದೆ.

6 / 6
Follow Us
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ