AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಂಪಿಯನ್ಸ್​ ಟ್ರೋಫಿಯಿಂದ ಪಾಕಿಸ್ತಾನ್ ಹೊರಬಿದ್ದರೆ, ಯಾವ ತಂಡಕ್ಕೆ ಚಾನ್ಸ್?

Champions Trophy 2025: ಚಾಂಪಿಯನ್ಸ್ ಟ್ರೋಫಿ ಟೂರ್ನಿಯನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಲು ಪಿಸಿಬಿ ಒಪ್ಪದಿದ್ದರೆ, ಇಡೀ ಟೂರ್ನಿ ಸ್ಥಳಾಂತರವಾಗಲಿದೆ. ಈಗಾಗಲೇ ಸೌತ್ ಆಫ್ರಿಕಾ ಕ್ರಿಕೆಟ್ ಮಂಡಳಿ ಮತ್ತು ಬಿಸಿಸಿಐ ಚಾಂಪಿಯನ್ಸ್​ ಆಯೋಜಿಸಲು ತುದಿಗಾಲಲ್ಲಿ ನಿಂತಿದೆ. ಒಂದು ವೇಳೆ ಟೂರ್ನಿ ಸ್ಥಳಾಂತರಗೊಂಡರೆ ಪಾಕಿಸ್ತಾನ್ ತಂಡ ಚಾಂಪಿಯನ್ಸ್ ಟ್ರೋಫಿಯಲ್ಲಿ ಪಾಲ್ಗೊಳ್ಳುವುದಿಲ್ಲ.

ಝಾಹಿರ್ ಯೂಸುಫ್
|

Updated on: Nov 30, 2024 | 10:53 AM

Share
ಚಾಂಪಿಯನ್ಸ್ ಟ್ರೋಫಿ 2025ರ ಆಯೋಜನೆಯ ಹಕ್ಕಿನಿಂದ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಸಂಕಷ್ಟಕ್ಕೆ ಸಿಲುಕಿದೆ. ಏಕೆಂದರೆ ಪಾಕ್​​​ನಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳನ್ನು ಆಡಲು ಭಾರತ ನಿರಾಕರಿಸಿದೆ. ಅಲ್ಲದೆ ಹೈಬ್ರಿಡ್ ಮಾದರಿಯಲ್ಲಿ ಟೂರ್ನಿ ಆಯೋಜಿಸಬೇಕೆಂದು ಬೇಡಿಕೆ ಮುಂದಿಟ್ಟಿದೆ. ಬಿಸಿಸಿಐನ ಈ ಬೇಡಿಕೆಯನ್ನು ಐಸಿಸಿ ಈಡೇರಿಸುವುದು ಬಹುತೇಕ ಖಚಿತ. ಇದರಿಂದ ಇಕ್ಕಟ್ಟಿಗೆ ಸಿಲುಕಿರುವುದು ಪಾಕಿಸ್ತಾನ್.

ಚಾಂಪಿಯನ್ಸ್ ಟ್ರೋಫಿ 2025ರ ಆಯೋಜನೆಯ ಹಕ್ಕಿನಿಂದ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಸಂಕಷ್ಟಕ್ಕೆ ಸಿಲುಕಿದೆ. ಏಕೆಂದರೆ ಪಾಕ್​​​ನಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳನ್ನು ಆಡಲು ಭಾರತ ನಿರಾಕರಿಸಿದೆ. ಅಲ್ಲದೆ ಹೈಬ್ರಿಡ್ ಮಾದರಿಯಲ್ಲಿ ಟೂರ್ನಿ ಆಯೋಜಿಸಬೇಕೆಂದು ಬೇಡಿಕೆ ಮುಂದಿಟ್ಟಿದೆ. ಬಿಸಿಸಿಐನ ಈ ಬೇಡಿಕೆಯನ್ನು ಐಸಿಸಿ ಈಡೇರಿಸುವುದು ಬಹುತೇಕ ಖಚಿತ. ಇದರಿಂದ ಇಕ್ಕಟ್ಟಿಗೆ ಸಿಲುಕಿರುವುದು ಪಾಕಿಸ್ತಾನ್.

1 / 6
ಏಕೆಂದರೆ ಈ ಹಿಂದಿನಿಂದಲೂ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಹೈಬ್ರಿಡ್ ಮಾದರಿಯಲ್ಲಿ ಟೂರ್ನಿ ಆಯೋಜಿಸುವುದಿಲ್ಲ ಎಂದು ತನ್ನ ಗರ್ವ ಪ್ರದರ್ಶಿಸಿತ್ತು.ಆದರೀಗ ಇತರೆ ಕ್ರಿಕೆಟ್ ಮಂಡಳಿ ಹಾಗೂ ಐಸಿಸಿ ಭಾರತದ ಪರ ನಿಂತಿದೆ. ಹೀಗಾಗಿ ಹೈಬ್ರಿಡ್ ಮಾದರಿಯಲ್ಲಿ ಟೂರ್ನಿ ಆಯೋಜಿಸಬೇಕಾದ ಅನಿವಾರ್ಯತೆ ಪಿಸಿಬಿ ಮುಂದಿದೆ.

ಏಕೆಂದರೆ ಈ ಹಿಂದಿನಿಂದಲೂ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಹೈಬ್ರಿಡ್ ಮಾದರಿಯಲ್ಲಿ ಟೂರ್ನಿ ಆಯೋಜಿಸುವುದಿಲ್ಲ ಎಂದು ತನ್ನ ಗರ್ವ ಪ್ರದರ್ಶಿಸಿತ್ತು.ಆದರೀಗ ಇತರೆ ಕ್ರಿಕೆಟ್ ಮಂಡಳಿ ಹಾಗೂ ಐಸಿಸಿ ಭಾರತದ ಪರ ನಿಂತಿದೆ. ಹೀಗಾಗಿ ಹೈಬ್ರಿಡ್ ಮಾದರಿಯಲ್ಲಿ ಟೂರ್ನಿ ಆಯೋಜಿಸಬೇಕಾದ ಅನಿವಾರ್ಯತೆ ಪಿಸಿಬಿ ಮುಂದಿದೆ.

2 / 6
ಒಂದು ವೇಳೆ ಹೈಬ್ರಿಡ್ ಮಾದರಿಯಲ್ಲಿ ಚಾಂಪಿಯನ್ಸ್ ಟ್ರೋಫಿ ಆಯೋಜಿಸಲು ಸಿದ್ಧವಿಲ್ಲದಿದ್ದರೆ, ಪಾಕಿಸ್ತಾನ್ ತಂಡವನ್ನು ಟೂರ್ನಿಯಿಂದಲೇ ಕೈ ಬಿಡಲು ಐಸಿಸಿ ಚಿಂತಿಸಿದೆ. ಅಲ್ಲದೆ ಮತ್ತೊಂದು ಕ್ರಿಕೆಟ್ ಮಂಡಳಿ ಚಾಂಪಿಯನ್ಸ್ ಟ್ರೋಫಿ ಆಯೋಜನೆಯ ಹಕ್ಕು ನೀಡುವ ಬಗ್ಗೆ ಚರ್ಚಿಸಲಾಗಿದೆ.

ಒಂದು ವೇಳೆ ಹೈಬ್ರಿಡ್ ಮಾದರಿಯಲ್ಲಿ ಚಾಂಪಿಯನ್ಸ್ ಟ್ರೋಫಿ ಆಯೋಜಿಸಲು ಸಿದ್ಧವಿಲ್ಲದಿದ್ದರೆ, ಪಾಕಿಸ್ತಾನ್ ತಂಡವನ್ನು ಟೂರ್ನಿಯಿಂದಲೇ ಕೈ ಬಿಡಲು ಐಸಿಸಿ ಚಿಂತಿಸಿದೆ. ಅಲ್ಲದೆ ಮತ್ತೊಂದು ಕ್ರಿಕೆಟ್ ಮಂಡಳಿ ಚಾಂಪಿಯನ್ಸ್ ಟ್ರೋಫಿ ಆಯೋಜನೆಯ ಹಕ್ಕು ನೀಡುವ ಬಗ್ಗೆ ಚರ್ಚಿಸಲಾಗಿದೆ.

3 / 6
ಇದೀಗ ಪಾಕಿಸ್ತಾನ್ ತಂಡದ ಚಾಂಪಿಯನ್ಸ್ ಟ್ರೋಫಿಯ ಭವಿಷ್ಯ ಪಿಸಿಬಿ ಕೈಯಲ್ಲಿದೆ. ಪಾಕ್ ಕ್ರಿಕೆಟ್ ಮಂಡಳಿ ಹೈಬ್ರಿಡ್ ಮಾದರಿಯಲ್ಲಿ ಟೂರ್ನಿ ಆಯೋಜಿಸದಿದ್ದರೆ, ಟೂರ್ನಿ ಕೈ ತಪ್ಪುವುದಲ್ಲದೇ ಚಾಂಪಿಯನ್ಸ್ ಟ್ರೋಫಿಯಿಂದಲೂ ಹೊರಬೀಳುವ ಸಾಧ್ಯತೆ ಹೆಚ್ಚಿದೆ. ಪಾಕ್ ತಂಡವನ್ನು ಚಾಂಪಿಯನ್ಸ್ ಟ್ರೋಫಿ ಟರ್ನಿಯಿಂದ ಕೈ ಬಿಟ್ಟರೆ, ಯಾವ ತಂಡಕ್ಕೆ ಚಾನ್ಸ್ ಸಿಗಲಿದೆ ಎಂಬ ಪ್ರಶ್ನೆ ಮೂಡುವುದು ಸಹಜ.

ಇದೀಗ ಪಾಕಿಸ್ತಾನ್ ತಂಡದ ಚಾಂಪಿಯನ್ಸ್ ಟ್ರೋಫಿಯ ಭವಿಷ್ಯ ಪಿಸಿಬಿ ಕೈಯಲ್ಲಿದೆ. ಪಾಕ್ ಕ್ರಿಕೆಟ್ ಮಂಡಳಿ ಹೈಬ್ರಿಡ್ ಮಾದರಿಯಲ್ಲಿ ಟೂರ್ನಿ ಆಯೋಜಿಸದಿದ್ದರೆ, ಟೂರ್ನಿ ಕೈ ತಪ್ಪುವುದಲ್ಲದೇ ಚಾಂಪಿಯನ್ಸ್ ಟ್ರೋಫಿಯಿಂದಲೂ ಹೊರಬೀಳುವ ಸಾಧ್ಯತೆ ಹೆಚ್ಚಿದೆ. ಪಾಕ್ ತಂಡವನ್ನು ಚಾಂಪಿಯನ್ಸ್ ಟ್ರೋಫಿ ಟರ್ನಿಯಿಂದ ಕೈ ಬಿಟ್ಟರೆ, ಯಾವ ತಂಡಕ್ಕೆ ಚಾನ್ಸ್ ಸಿಗಲಿದೆ ಎಂಬ ಪ್ರಶ್ನೆ ಮೂಡುವುದು ಸಹಜ.

4 / 6
ಈ ಪ್ರಶ್ನೆಗೆ ಉತ್ತರ ಶ್ರೀಲಂಕಾ. ಏಕೆಂದರೆ ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿವೆ. ಏಕದಿನ ವಿಶ್ವಕಪ್ 2023 ರ ಅಂಕ ಪಟ್ಟಿಯಲ್ಲಿ ಟಾಪ್-8 ನಲ್ಲಿ ಕಾಣಿಸಿಕೊಂಡ ತಂಡಗಳು ಚಾಂಪಿಯನ್ಸ್​ ಟ್ರೋಫಿಗೆ ಅರ್ಹತೆ ಪಡೆದುಕೊಂಡಿದೆ. ಆದರೆ ಈ 8 ತಂಡಗಳಲ್ಲಿ ಶ್ರೀಲಂಕಾ ಇಲ್ಲ.

ಈ ಪ್ರಶ್ನೆಗೆ ಉತ್ತರ ಶ್ರೀಲಂಕಾ. ಏಕೆಂದರೆ ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿವೆ. ಏಕದಿನ ವಿಶ್ವಕಪ್ 2023 ರ ಅಂಕ ಪಟ್ಟಿಯಲ್ಲಿ ಟಾಪ್-8 ನಲ್ಲಿ ಕಾಣಿಸಿಕೊಂಡ ತಂಡಗಳು ಚಾಂಪಿಯನ್ಸ್​ ಟ್ರೋಫಿಗೆ ಅರ್ಹತೆ ಪಡೆದುಕೊಂಡಿದೆ. ಆದರೆ ಈ 8 ತಂಡಗಳಲ್ಲಿ ಶ್ರೀಲಂಕಾ ಇಲ್ಲ.

5 / 6
ಒಂದು ವೇಳೆ ಪಾಕಿಸ್ತಾನ್ ತಂಡವನ್ನು ಟೂರ್ನಿಯಿಂದ ಕೈ ಬಿಟ್ಟರೆ ಶ್ರೀಲಂಕಾ ತಂಡಕ್ಕೆ ಅವಕಾಶ ಸಿಗಲಿದೆ. ಏಕೆಂದರೆ ಏಕದಿನ ವಿಶ್ವಕಪ್ 2023ರ ಅಂಕ ಪಟ್ಟಿಯಲ್ಲಿ ಶ್ರೀಲಂಕಾ ತಂಡವು 9ನೇ ಸ್ಥಾನದಲ್ಲಿದೆ. ಹೀಗಾಗಿ ಒಂದು ತಂಡ ಟೂರ್ನಿಯಿಂದ ಹಿಂದೆ ಸರಿದರೆ, ಅಂಕ ಪಟ್ಟಿಯಲ್ಲಿ ನಂತರದ ಸ್ಥಾನದಲ್ಲಿರುವ ತಂಡಕ್ಕೆ ಅವಕಾಶ ನೀಡಲಾಗುತ್ತದೆ. ಅದರಂತೆ ಪಾಕಿಸ್ತಾನ್ ತಂಡ ಚಾಂಪಿಯನ್ಸ್​ ಟ್ರೋಫಿಯಿಂದ ಹೊರಬಿದ್ದರೆ ಶ್ರೀಲಂಕಾ ತಂಡವು ಟೂರ್ನಿಗೆ ಅರ್ಹತೆ ಪಡೆಯಲಿದೆ.

ಒಂದು ವೇಳೆ ಪಾಕಿಸ್ತಾನ್ ತಂಡವನ್ನು ಟೂರ್ನಿಯಿಂದ ಕೈ ಬಿಟ್ಟರೆ ಶ್ರೀಲಂಕಾ ತಂಡಕ್ಕೆ ಅವಕಾಶ ಸಿಗಲಿದೆ. ಏಕೆಂದರೆ ಏಕದಿನ ವಿಶ್ವಕಪ್ 2023ರ ಅಂಕ ಪಟ್ಟಿಯಲ್ಲಿ ಶ್ರೀಲಂಕಾ ತಂಡವು 9ನೇ ಸ್ಥಾನದಲ್ಲಿದೆ. ಹೀಗಾಗಿ ಒಂದು ತಂಡ ಟೂರ್ನಿಯಿಂದ ಹಿಂದೆ ಸರಿದರೆ, ಅಂಕ ಪಟ್ಟಿಯಲ್ಲಿ ನಂತರದ ಸ್ಥಾನದಲ್ಲಿರುವ ತಂಡಕ್ಕೆ ಅವಕಾಶ ನೀಡಲಾಗುತ್ತದೆ. ಅದರಂತೆ ಪಾಕಿಸ್ತಾನ್ ತಂಡ ಚಾಂಪಿಯನ್ಸ್​ ಟ್ರೋಫಿಯಿಂದ ಹೊರಬಿದ್ದರೆ ಶ್ರೀಲಂಕಾ ತಂಡವು ಟೂರ್ನಿಗೆ ಅರ್ಹತೆ ಪಡೆಯಲಿದೆ.

6 / 6
Follow Us
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ