AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ILT20 ಲೀಗ್ ಗೆದ್ದ ಮುಂಬೈ ಫ್ರಾಂಚೈಸಿ ತಂಡಕ್ಕೆ ಸಿಕ್ಕ ಬಹುಮಾನ ಮೊತ್ತ ಎಷ್ಟು ಗೊತ್ತಾ?

ILT20 2024: ದುಬೈ ಇಂಟರ್​ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ILT20 ಲೀಗ್ ಫೈನಲ್ ಪಂದ್ಯದಲ್ಲಿ ಎಂಐ ಎಮಿರೇಟ್ಸ್ ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಎಂಐ ಎಮಿರೇಟ್ಸ್ ತಂಡವು 208 ರನ್ ಕಲೆಹಾಕಿತು. ಈ ಬೃಹತ್ ಗುರಿಯನ್ನು ಬೆನ್ನತ್ತಿದ ದುಬೈ ಕ್ಯಾಪಿಟಲ್ಸ್ ತಂಡ 163 ರನ್​ಗಳಿಸಲಷ್ಟೇ ಶಕ್ತರಾದರು.

TV9 Web
| Edited By: |

Updated on: Feb 18, 2024 | 8:23 AM

Share
ಇಂಟರ್​ನ್ಯಾಷನಲ್ ಲೀಗ್ (ILT20 2024) ಟಿ20 ಕ್ರಿಕೆಟ್​ನ ಹೊಸ ಅಧಿಪತಿಯಾಗಿ ಎಂಐ ಎಮಿರೇಟ್ಸ್ ತಂಡ ಹೊರಹೊಮ್ಮಿದೆ. ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ದುಬೈ ಕ್ಯಾಪಿಟಲ್ಸ್ (Dubai Capitals) ತಂಡವನ್ನು 45 ರನ್​ಗಳಿಂದ ಮಣಿಸಿ ಎಂಐ ಎಮಿರೇಟ್ಸ್ (MI Emirates) ಚಾಂಪಿಯನ್ ಪಟ್ಟ ಅಲಂಕರಿಸಿದೆ.

ಇಂಟರ್​ನ್ಯಾಷನಲ್ ಲೀಗ್ (ILT20 2024) ಟಿ20 ಕ್ರಿಕೆಟ್​ನ ಹೊಸ ಅಧಿಪತಿಯಾಗಿ ಎಂಐ ಎಮಿರೇಟ್ಸ್ ತಂಡ ಹೊರಹೊಮ್ಮಿದೆ. ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ದುಬೈ ಕ್ಯಾಪಿಟಲ್ಸ್ (Dubai Capitals) ತಂಡವನ್ನು 45 ರನ್​ಗಳಿಂದ ಮಣಿಸಿ ಎಂಐ ಎಮಿರೇಟ್ಸ್ (MI Emirates) ಚಾಂಪಿಯನ್ ಪಟ್ಟ ಅಲಂಕರಿಸಿದೆ.

1 / 7
ಇದರೊಂದಿಗೆ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯ ಮತ್ತೊಂದು ತಂಡ ಮತ್ತೊಂದು ಕಿರೀಟವನ್ನು ಮುಡಿಗೇರಿಸಿಕೊಂಡಂತಾಗಿದೆ. ಇದಕ್ಕೂ ಮುನ್ನ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯ ತಂಡಗಳು ಐಪಿಎಲ್​, ಸಿಎಲ್​ಟಿ20, ಡಬ್ಲ್ಯೂಪಿಎಲ್, ಎಂಎಲ್​ಸಿ ಲೀಗ್​ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಇದೀಗ ಇಂಟರ್​ನ್ಯಾಷನಲ್ ಲೀಗ್ ಟಿ20 ಯಲ್ಲೂ ಟ್ರೋಫಿ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಈ ಚಾಂಪಿಯನ್ ಪಟ್ಟದೊಂದಿಗೆ ಎಂಐ ಎಮಿರೇಟ್ಸ್ ತಂಡಕ್ಕೆ ಸಿಕ್ಕ ಬಹುಮಾನ ಮೊತ್ತ ಎಷ್ಟು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ...

ಇದರೊಂದಿಗೆ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯ ಮತ್ತೊಂದು ತಂಡ ಮತ್ತೊಂದು ಕಿರೀಟವನ್ನು ಮುಡಿಗೇರಿಸಿಕೊಂಡಂತಾಗಿದೆ. ಇದಕ್ಕೂ ಮುನ್ನ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯ ತಂಡಗಳು ಐಪಿಎಲ್​, ಸಿಎಲ್​ಟಿ20, ಡಬ್ಲ್ಯೂಪಿಎಲ್, ಎಂಎಲ್​ಸಿ ಲೀಗ್​ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಇದೀಗ ಇಂಟರ್​ನ್ಯಾಷನಲ್ ಲೀಗ್ ಟಿ20 ಯಲ್ಲೂ ಟ್ರೋಫಿ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಈ ಚಾಂಪಿಯನ್ ಪಟ್ಟದೊಂದಿಗೆ ಎಂಐ ಎಮಿರೇಟ್ಸ್ ತಂಡಕ್ಕೆ ಸಿಕ್ಕ ಬಹುಮಾನ ಮೊತ್ತ ಎಷ್ಟು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ...

2 / 7
ಇಂಟರ್​ನ್ಯಾಷನಲ್ ಲೀಗ್ ಟಿ20 ಟೂರ್ನಿಯಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸುವ ತಂಡಕ್ಕೆ 7 ಲಕ್ಷ ಡಾಲರ್ ಬಹುಮಾನ ಮೊತ್ತ ನೀಡಲಾಗುತ್ತದೆ. ಅಂದರಂತೆ ಇದೀಗ ಎಂಐ ಎಮಿರೇಟ್ಸ್ ತಂಡವು ಭಾರತೀಯ ಮೌಲ್ಯ 5,80,91,950 ರೂ. ಬಹುಮಾನ ಮೊತ್ತವಾಗಿ ಪಡೆದುಕೊಂಡಿದೆ.

ಇಂಟರ್​ನ್ಯಾಷನಲ್ ಲೀಗ್ ಟಿ20 ಟೂರ್ನಿಯಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸುವ ತಂಡಕ್ಕೆ 7 ಲಕ್ಷ ಡಾಲರ್ ಬಹುಮಾನ ಮೊತ್ತ ನೀಡಲಾಗುತ್ತದೆ. ಅಂದರಂತೆ ಇದೀಗ ಎಂಐ ಎಮಿರೇಟ್ಸ್ ತಂಡವು ಭಾರತೀಯ ಮೌಲ್ಯ 5,80,91,950 ರೂ. ಬಹುಮಾನ ಮೊತ್ತವಾಗಿ ಪಡೆದುಕೊಂಡಿದೆ.

3 / 7
ಇನ್ನು ಈ ಟೂರ್ನಿಯಲ್ಲಿ ರನ್ನರ್ ಅಪ್ ಆಗುವ ತಂಡಕ್ಕೆ 3 ಲಕ್ಷ ಡಾಲರ್ ಬಹುಮಾನ ಮೊತ್ತ ನಿಗದಿ ಮಾಡಲಾಗಿದ್ದು, ಇದೀಗ ಫೈನಲ್​ನಲ್ಲಿ ಎಡವಿರುವ ದುಬೈ ಕ್ಯಾಪಿಟಲ್ಸ್ ತಂಡವು ಒಟ್ಟು 2,48,96,550 ರೂ. ಬಹುಮಾನ ಮೊತ್ತ ಪಡೆದುಕೊಂಡಿದೆ.

ಇನ್ನು ಈ ಟೂರ್ನಿಯಲ್ಲಿ ರನ್ನರ್ ಅಪ್ ಆಗುವ ತಂಡಕ್ಕೆ 3 ಲಕ್ಷ ಡಾಲರ್ ಬಹುಮಾನ ಮೊತ್ತ ನಿಗದಿ ಮಾಡಲಾಗಿದ್ದು, ಇದೀಗ ಫೈನಲ್​ನಲ್ಲಿ ಎಡವಿರುವ ದುಬೈ ಕ್ಯಾಪಿಟಲ್ಸ್ ತಂಡವು ಒಟ್ಟು 2,48,96,550 ರೂ. ಬಹುಮಾನ ಮೊತ್ತ ಪಡೆದುಕೊಂಡಿದೆ.

4 / 7
ಹಾಗೆಯೇ ಅತೀ ಹೆಚ್ಚು ಸಿಕ್ಸ್ ಬಾರಿಸಿದ ಆಟಗಾರನಿಗೆ 15000 ಡಾಲರ್ ನೀಡಲಾಗಿದೆ. ಅದರಂತೆ ಈ ಬಾರಿಯ ಟೂರ್ನಿಯಲ್ಲಿ 31 ಸಿಕ್ಸ್ ಸಿಡಿಸಿದ ನಿಕೋಲಸ್ ಪೂರನ್ 12,44,827 ರೂ. ಮೊತ್ತ ಪಡೆದುಕೊಂಡಿದ್ದಾರೆ.

ಹಾಗೆಯೇ ಅತೀ ಹೆಚ್ಚು ಸಿಕ್ಸ್ ಬಾರಿಸಿದ ಆಟಗಾರನಿಗೆ 15000 ಡಾಲರ್ ನೀಡಲಾಗಿದೆ. ಅದರಂತೆ ಈ ಬಾರಿಯ ಟೂರ್ನಿಯಲ್ಲಿ 31 ಸಿಕ್ಸ್ ಸಿಡಿಸಿದ ನಿಕೋಲಸ್ ಪೂರನ್ 12,44,827 ರೂ. ಮೊತ್ತ ಪಡೆದುಕೊಂಡಿದ್ದಾರೆ.

5 / 7
ಇನ್ನು ಅತ್ಯುತ್ತಮ ಬೌಲರ್​ ಪ್ರಶಸ್ತಿಯನ್ನು ವಾಖರ್ ಸಕ್ಲೈನ್ (12,44,827 ರೂ.) ಪಡೆದುಕೊಂಡರೆ, ಅತ್ಯುತ್ತಮ ಬ್ಯಾಟ್ಸ್​ಮನ್ ಪ್ರಶಸ್ತಿಯನ್ನು ಜೇಮ್ಸ್ ವಿನ್ಸ್​ (12,44,827 ರೂ.) ತಮ್ಮದಾಗಿಸಿಕೊಂಡಿದ್ದಾರೆ.

ಇನ್ನು ಅತ್ಯುತ್ತಮ ಬೌಲರ್​ ಪ್ರಶಸ್ತಿಯನ್ನು ವಾಖರ್ ಸಕ್ಲೈನ್ (12,44,827 ರೂ.) ಪಡೆದುಕೊಂಡರೆ, ಅತ್ಯುತ್ತಮ ಬ್ಯಾಟ್ಸ್​ಮನ್ ಪ್ರಶಸ್ತಿಯನ್ನು ಜೇಮ್ಸ್ ವಿನ್ಸ್​ (12,44,827 ರೂ.) ತಮ್ಮದಾಗಿಸಿಕೊಂಡಿದ್ದಾರೆ.

6 / 7
ಹಾಗೆಯೇ ಟೂರ್ನಿಯುದ್ದಕ್ಕೂ ಅದ್ಭುತ ಆಲ್​ರೌಂಡರ್ ಪ್ರದರ್ಶನದ ಮೂಲಕ ಮಿಂಚಿದ್ದ ಸಿಕಂದರ್ ರಾಝಗೆ (313 ರನ್ಸ್​ + 13 ವಿಕೆಟ್​) ಅತ್ಯಂತ ಮೌಲ್ಯಯುತ ಆಟಗಾರನ ಪ್ರಶಸ್ತಿ ಒಲಿದಿದೆ. ಈ ಪ್ರಶಸ್ತಿಯೊಂದಿಗೆ ರಾಝ 12,44,827 ರೂ. ಬಹುಮಾನ ಮೊತ್ತ ಪಡೆದುಕೊಂಡಿದ್ದಾರೆ.

ಹಾಗೆಯೇ ಟೂರ್ನಿಯುದ್ದಕ್ಕೂ ಅದ್ಭುತ ಆಲ್​ರೌಂಡರ್ ಪ್ರದರ್ಶನದ ಮೂಲಕ ಮಿಂಚಿದ್ದ ಸಿಕಂದರ್ ರಾಝಗೆ (313 ರನ್ಸ್​ + 13 ವಿಕೆಟ್​) ಅತ್ಯಂತ ಮೌಲ್ಯಯುತ ಆಟಗಾರನ ಪ್ರಶಸ್ತಿ ಒಲಿದಿದೆ. ಈ ಪ್ರಶಸ್ತಿಯೊಂದಿಗೆ ರಾಝ 12,44,827 ರೂ. ಬಹುಮಾನ ಮೊತ್ತ ಪಡೆದುಕೊಂಡಿದ್ದಾರೆ.

7 / 7
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!