AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ILT20 ಲೀಗ್ ಗೆದ್ದ ಮುಂಬೈ ಫ್ರಾಂಚೈಸಿ ತಂಡಕ್ಕೆ ಸಿಕ್ಕ ಬಹುಮಾನ ಮೊತ್ತ ಎಷ್ಟು ಗೊತ್ತಾ?

ILT20 2024: ದುಬೈ ಇಂಟರ್​ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ILT20 ಲೀಗ್ ಫೈನಲ್ ಪಂದ್ಯದಲ್ಲಿ ಎಂಐ ಎಮಿರೇಟ್ಸ್ ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಎಂಐ ಎಮಿರೇಟ್ಸ್ ತಂಡವು 208 ರನ್ ಕಲೆಹಾಕಿತು. ಈ ಬೃಹತ್ ಗುರಿಯನ್ನು ಬೆನ್ನತ್ತಿದ ದುಬೈ ಕ್ಯಾಪಿಟಲ್ಸ್ ತಂಡ 163 ರನ್​ಗಳಿಸಲಷ್ಟೇ ಶಕ್ತರಾದರು.

TV9 Web
| Edited By: |

Updated on: Feb 18, 2024 | 8:23 AM

Share
ಇಂಟರ್​ನ್ಯಾಷನಲ್ ಲೀಗ್ (ILT20 2024) ಟಿ20 ಕ್ರಿಕೆಟ್​ನ ಹೊಸ ಅಧಿಪತಿಯಾಗಿ ಎಂಐ ಎಮಿರೇಟ್ಸ್ ತಂಡ ಹೊರಹೊಮ್ಮಿದೆ. ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ದುಬೈ ಕ್ಯಾಪಿಟಲ್ಸ್ (Dubai Capitals) ತಂಡವನ್ನು 45 ರನ್​ಗಳಿಂದ ಮಣಿಸಿ ಎಂಐ ಎಮಿರೇಟ್ಸ್ (MI Emirates) ಚಾಂಪಿಯನ್ ಪಟ್ಟ ಅಲಂಕರಿಸಿದೆ.

ಇಂಟರ್​ನ್ಯಾಷನಲ್ ಲೀಗ್ (ILT20 2024) ಟಿ20 ಕ್ರಿಕೆಟ್​ನ ಹೊಸ ಅಧಿಪತಿಯಾಗಿ ಎಂಐ ಎಮಿರೇಟ್ಸ್ ತಂಡ ಹೊರಹೊಮ್ಮಿದೆ. ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ದುಬೈ ಕ್ಯಾಪಿಟಲ್ಸ್ (Dubai Capitals) ತಂಡವನ್ನು 45 ರನ್​ಗಳಿಂದ ಮಣಿಸಿ ಎಂಐ ಎಮಿರೇಟ್ಸ್ (MI Emirates) ಚಾಂಪಿಯನ್ ಪಟ್ಟ ಅಲಂಕರಿಸಿದೆ.

1 / 7
ಇದರೊಂದಿಗೆ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯ ಮತ್ತೊಂದು ತಂಡ ಮತ್ತೊಂದು ಕಿರೀಟವನ್ನು ಮುಡಿಗೇರಿಸಿಕೊಂಡಂತಾಗಿದೆ. ಇದಕ್ಕೂ ಮುನ್ನ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯ ತಂಡಗಳು ಐಪಿಎಲ್​, ಸಿಎಲ್​ಟಿ20, ಡಬ್ಲ್ಯೂಪಿಎಲ್, ಎಂಎಲ್​ಸಿ ಲೀಗ್​ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಇದೀಗ ಇಂಟರ್​ನ್ಯಾಷನಲ್ ಲೀಗ್ ಟಿ20 ಯಲ್ಲೂ ಟ್ರೋಫಿ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಈ ಚಾಂಪಿಯನ್ ಪಟ್ಟದೊಂದಿಗೆ ಎಂಐ ಎಮಿರೇಟ್ಸ್ ತಂಡಕ್ಕೆ ಸಿಕ್ಕ ಬಹುಮಾನ ಮೊತ್ತ ಎಷ್ಟು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ...

ಇದರೊಂದಿಗೆ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯ ಮತ್ತೊಂದು ತಂಡ ಮತ್ತೊಂದು ಕಿರೀಟವನ್ನು ಮುಡಿಗೇರಿಸಿಕೊಂಡಂತಾಗಿದೆ. ಇದಕ್ಕೂ ಮುನ್ನ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯ ತಂಡಗಳು ಐಪಿಎಲ್​, ಸಿಎಲ್​ಟಿ20, ಡಬ್ಲ್ಯೂಪಿಎಲ್, ಎಂಎಲ್​ಸಿ ಲೀಗ್​ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಇದೀಗ ಇಂಟರ್​ನ್ಯಾಷನಲ್ ಲೀಗ್ ಟಿ20 ಯಲ್ಲೂ ಟ್ರೋಫಿ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಈ ಚಾಂಪಿಯನ್ ಪಟ್ಟದೊಂದಿಗೆ ಎಂಐ ಎಮಿರೇಟ್ಸ್ ತಂಡಕ್ಕೆ ಸಿಕ್ಕ ಬಹುಮಾನ ಮೊತ್ತ ಎಷ್ಟು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ...

2 / 7
ಇಂಟರ್​ನ್ಯಾಷನಲ್ ಲೀಗ್ ಟಿ20 ಟೂರ್ನಿಯಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸುವ ತಂಡಕ್ಕೆ 7 ಲಕ್ಷ ಡಾಲರ್ ಬಹುಮಾನ ಮೊತ್ತ ನೀಡಲಾಗುತ್ತದೆ. ಅಂದರಂತೆ ಇದೀಗ ಎಂಐ ಎಮಿರೇಟ್ಸ್ ತಂಡವು ಭಾರತೀಯ ಮೌಲ್ಯ 5,80,91,950 ರೂ. ಬಹುಮಾನ ಮೊತ್ತವಾಗಿ ಪಡೆದುಕೊಂಡಿದೆ.

ಇಂಟರ್​ನ್ಯಾಷನಲ್ ಲೀಗ್ ಟಿ20 ಟೂರ್ನಿಯಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸುವ ತಂಡಕ್ಕೆ 7 ಲಕ್ಷ ಡಾಲರ್ ಬಹುಮಾನ ಮೊತ್ತ ನೀಡಲಾಗುತ್ತದೆ. ಅಂದರಂತೆ ಇದೀಗ ಎಂಐ ಎಮಿರೇಟ್ಸ್ ತಂಡವು ಭಾರತೀಯ ಮೌಲ್ಯ 5,80,91,950 ರೂ. ಬಹುಮಾನ ಮೊತ್ತವಾಗಿ ಪಡೆದುಕೊಂಡಿದೆ.

3 / 7
ಇನ್ನು ಈ ಟೂರ್ನಿಯಲ್ಲಿ ರನ್ನರ್ ಅಪ್ ಆಗುವ ತಂಡಕ್ಕೆ 3 ಲಕ್ಷ ಡಾಲರ್ ಬಹುಮಾನ ಮೊತ್ತ ನಿಗದಿ ಮಾಡಲಾಗಿದ್ದು, ಇದೀಗ ಫೈನಲ್​ನಲ್ಲಿ ಎಡವಿರುವ ದುಬೈ ಕ್ಯಾಪಿಟಲ್ಸ್ ತಂಡವು ಒಟ್ಟು 2,48,96,550 ರೂ. ಬಹುಮಾನ ಮೊತ್ತ ಪಡೆದುಕೊಂಡಿದೆ.

ಇನ್ನು ಈ ಟೂರ್ನಿಯಲ್ಲಿ ರನ್ನರ್ ಅಪ್ ಆಗುವ ತಂಡಕ್ಕೆ 3 ಲಕ್ಷ ಡಾಲರ್ ಬಹುಮಾನ ಮೊತ್ತ ನಿಗದಿ ಮಾಡಲಾಗಿದ್ದು, ಇದೀಗ ಫೈನಲ್​ನಲ್ಲಿ ಎಡವಿರುವ ದುಬೈ ಕ್ಯಾಪಿಟಲ್ಸ್ ತಂಡವು ಒಟ್ಟು 2,48,96,550 ರೂ. ಬಹುಮಾನ ಮೊತ್ತ ಪಡೆದುಕೊಂಡಿದೆ.

4 / 7
ಹಾಗೆಯೇ ಅತೀ ಹೆಚ್ಚು ಸಿಕ್ಸ್ ಬಾರಿಸಿದ ಆಟಗಾರನಿಗೆ 15000 ಡಾಲರ್ ನೀಡಲಾಗಿದೆ. ಅದರಂತೆ ಈ ಬಾರಿಯ ಟೂರ್ನಿಯಲ್ಲಿ 31 ಸಿಕ್ಸ್ ಸಿಡಿಸಿದ ನಿಕೋಲಸ್ ಪೂರನ್ 12,44,827 ರೂ. ಮೊತ್ತ ಪಡೆದುಕೊಂಡಿದ್ದಾರೆ.

ಹಾಗೆಯೇ ಅತೀ ಹೆಚ್ಚು ಸಿಕ್ಸ್ ಬಾರಿಸಿದ ಆಟಗಾರನಿಗೆ 15000 ಡಾಲರ್ ನೀಡಲಾಗಿದೆ. ಅದರಂತೆ ಈ ಬಾರಿಯ ಟೂರ್ನಿಯಲ್ಲಿ 31 ಸಿಕ್ಸ್ ಸಿಡಿಸಿದ ನಿಕೋಲಸ್ ಪೂರನ್ 12,44,827 ರೂ. ಮೊತ್ತ ಪಡೆದುಕೊಂಡಿದ್ದಾರೆ.

5 / 7
ಇನ್ನು ಅತ್ಯುತ್ತಮ ಬೌಲರ್​ ಪ್ರಶಸ್ತಿಯನ್ನು ವಾಖರ್ ಸಕ್ಲೈನ್ (12,44,827 ರೂ.) ಪಡೆದುಕೊಂಡರೆ, ಅತ್ಯುತ್ತಮ ಬ್ಯಾಟ್ಸ್​ಮನ್ ಪ್ರಶಸ್ತಿಯನ್ನು ಜೇಮ್ಸ್ ವಿನ್ಸ್​ (12,44,827 ರೂ.) ತಮ್ಮದಾಗಿಸಿಕೊಂಡಿದ್ದಾರೆ.

ಇನ್ನು ಅತ್ಯುತ್ತಮ ಬೌಲರ್​ ಪ್ರಶಸ್ತಿಯನ್ನು ವಾಖರ್ ಸಕ್ಲೈನ್ (12,44,827 ರೂ.) ಪಡೆದುಕೊಂಡರೆ, ಅತ್ಯುತ್ತಮ ಬ್ಯಾಟ್ಸ್​ಮನ್ ಪ್ರಶಸ್ತಿಯನ್ನು ಜೇಮ್ಸ್ ವಿನ್ಸ್​ (12,44,827 ರೂ.) ತಮ್ಮದಾಗಿಸಿಕೊಂಡಿದ್ದಾರೆ.

6 / 7
ಹಾಗೆಯೇ ಟೂರ್ನಿಯುದ್ದಕ್ಕೂ ಅದ್ಭುತ ಆಲ್​ರೌಂಡರ್ ಪ್ರದರ್ಶನದ ಮೂಲಕ ಮಿಂಚಿದ್ದ ಸಿಕಂದರ್ ರಾಝಗೆ (313 ರನ್ಸ್​ + 13 ವಿಕೆಟ್​) ಅತ್ಯಂತ ಮೌಲ್ಯಯುತ ಆಟಗಾರನ ಪ್ರಶಸ್ತಿ ಒಲಿದಿದೆ. ಈ ಪ್ರಶಸ್ತಿಯೊಂದಿಗೆ ರಾಝ 12,44,827 ರೂ. ಬಹುಮಾನ ಮೊತ್ತ ಪಡೆದುಕೊಂಡಿದ್ದಾರೆ.

ಹಾಗೆಯೇ ಟೂರ್ನಿಯುದ್ದಕ್ಕೂ ಅದ್ಭುತ ಆಲ್​ರೌಂಡರ್ ಪ್ರದರ್ಶನದ ಮೂಲಕ ಮಿಂಚಿದ್ದ ಸಿಕಂದರ್ ರಾಝಗೆ (313 ರನ್ಸ್​ + 13 ವಿಕೆಟ್​) ಅತ್ಯಂತ ಮೌಲ್ಯಯುತ ಆಟಗಾರನ ಪ್ರಶಸ್ತಿ ಒಲಿದಿದೆ. ಈ ಪ್ರಶಸ್ತಿಯೊಂದಿಗೆ ರಾಝ 12,44,827 ರೂ. ಬಹುಮಾನ ಮೊತ್ತ ಪಡೆದುಕೊಂಡಿದ್ದಾರೆ.

7 / 7
Web contact
Web contact

TV9 Kannada

Read More
Follow Us
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?