AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dinesh Karthik: ಹೊಸ ತಂಡದತ್ತ ಮುಖ ಮಾಡಿದ ದಿನೇಶ್ ಕಾರ್ತಿಕ್..!

Dinesh Karthik ILT20 2026: ದಿನೇಶ್ ಕಾರ್ತಿಕ್ 17 ವರ್ಷಗಳ ಐಪಿಎಲ್​ ಕೆರಿಯರ್​ನಲ್ಲಿ ಒಟ್ಟು 6 ತಂಡಗಳ ಪರ ಕಣಕ್ಕಿಳಿದಿದ್ದಾರೆ. ಈ ವೇಳೆ 2013 ರಲ್ಲಿ ಮುಂಬೈ ಇಂಡಿಯನ್ಸ್ ಪರ ಅವರು ಟ್ರೋಫಿ ಗೆದ್ದಿದ್ದರು. ಹಾಗೆಯೇ ಡೆಲ್ಲಿ ಕ್ಯಾಪಿಟಲ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಪಂಜಾಬ್ ಕಿಂಗ್ಸ್​, ಗುಜರಾತ್ ಲಯನ್ಸ್ (ಈಗಿಲ್ಲ), ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳ ಪರ ಆಡಿದ್ದರು. ಇದೀಗ ವಿದೇಶಿ ಲೀಗ್​ನತ್ತ ಮುಖ ಮಾಡಿದ್ದಾರೆ.

ಝಾಹಿರ್ ಯೂಸುಫ್
|

Updated on:Oct 01, 2025 | 8:24 AM

Share
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಮೆಂಟರ್ ದಿನೇಶ್ ಕಾರ್ತಿಕ್ (Dinesh Karthik) ಮುಂಬರುವ ಇಂಟರ್​ನ್ಯಾಷನಲ್ ಲೀಗ್ ಟಿ20 ಟೂರ್ನಿಯಲ್ಲಿ ಶಾರ್ಜಾ ವಾರಿಯರ್ಸ್ ಪರ ಕಣಕ್ಕಿಳಿಯಲಿದ್ದಾರೆ. ಶಾರ್ಜಾ ವಾರಿಯರ್ಸ್ ಫ್ರಾಂಚೈಸಿಯು ಡ್ರಾಫ್ಟ್ ಆಯ್ಕೆಯ ಮೂಲಕ ಡಿಕೆ ಅವರನ್ನು ತಂಡಕ್ಕೆ ಸೇರಿಸಿಕೊಂಡಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಮೆಂಟರ್ ದಿನೇಶ್ ಕಾರ್ತಿಕ್ (Dinesh Karthik) ಮುಂಬರುವ ಇಂಟರ್​ನ್ಯಾಷನಲ್ ಲೀಗ್ ಟಿ20 ಟೂರ್ನಿಯಲ್ಲಿ ಶಾರ್ಜಾ ವಾರಿಯರ್ಸ್ ಪರ ಕಣಕ್ಕಿಳಿಯಲಿದ್ದಾರೆ. ಶಾರ್ಜಾ ವಾರಿಯರ್ಸ್ ಫ್ರಾಂಚೈಸಿಯು ಡ್ರಾಫ್ಟ್ ಆಯ್ಕೆಯ ಮೂಲಕ ಡಿಕೆ ಅವರನ್ನು ತಂಡಕ್ಕೆ ಸೇರಿಸಿಕೊಂಡಿದ್ದಾರೆ.

1 / 5
ಇದಕ್ಕೂ ಮುನ್ನ ದಿನೇಶ್ ಕಾರ್ತಿಕ್ ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಕಾಣಿಸಿಕೊಂಡಿದ್ದರು. ಐಪಿಎಲ್​ಗೆ ಗುಡ್ ಬೈ ಹೇಳಿದ ಬಳಿಕ ಪರ್ಲ್ ರಾಯಲ್ಸ್ ಪರ ಸೆಕೆಂಡ್ ಇನಿಂಗ್ಸ್ ಆರಂಭಿಸಿದ್ದ ಕಾರ್ತಿಕ್​​ ನಿರೀಕ್ಷಿತ ಪ್ರದರ್ಶನ ನೀಡಿರಲಿಲ್ಲ. ಈ ವೈಫಲ್ಯದ ಹೊರತಾಗಿಯೂ ಇದೀಗ ಯುಎಇ ಟಿ20 ಲೀಗ್​ನತ್ತ ಮುಖ ಮಾಡಿದ್ದಾರೆ.

ಇದಕ್ಕೂ ಮುನ್ನ ದಿನೇಶ್ ಕಾರ್ತಿಕ್ ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಕಾಣಿಸಿಕೊಂಡಿದ್ದರು. ಐಪಿಎಲ್​ಗೆ ಗುಡ್ ಬೈ ಹೇಳಿದ ಬಳಿಕ ಪರ್ಲ್ ರಾಯಲ್ಸ್ ಪರ ಸೆಕೆಂಡ್ ಇನಿಂಗ್ಸ್ ಆರಂಭಿಸಿದ್ದ ಕಾರ್ತಿಕ್​​ ನಿರೀಕ್ಷಿತ ಪ್ರದರ್ಶನ ನೀಡಿರಲಿಲ್ಲ. ಈ ವೈಫಲ್ಯದ ಹೊರತಾಗಿಯೂ ಇದೀಗ ಯುಎಇ ಟಿ20 ಲೀಗ್​ನತ್ತ ಮುಖ ಮಾಡಿದ್ದಾರೆ.

2 / 5
ಇತ್ತ ಐಪಿಎಲ್​ನಲ್ಲಿ ದಿನೇಶ್ ಕಾರ್ತಿಕ್ ಆರ್​ಸಿಬಿ ತಂಡದ ಬ್ಯಾಟಿಂಗ್ ಕೋಚ್ ಹಾಗೂ ಮೆಂಟರ್ ಹುದ್ದೆಯೊಂದಿಗೆ ಮುಂದುವರೆಯಲಿದ್ದಾರೆ. ಇದರ ನಡುವೆ ಇಂಟರ್​ನ್ಯಾಷನಲ್ ಟಿ20 ಲೀಗ್​ನಲ್ಲಿ ಶಾರ್ಜಾ ವಾರಿಯರ್ಸ್ ಪರ ವಿಕೆಟ್ ಕೀಪರ್ ಬ್ಯಾಟರ್ ಆಗಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ.

ಇತ್ತ ಐಪಿಎಲ್​ನಲ್ಲಿ ದಿನೇಶ್ ಕಾರ್ತಿಕ್ ಆರ್​ಸಿಬಿ ತಂಡದ ಬ್ಯಾಟಿಂಗ್ ಕೋಚ್ ಹಾಗೂ ಮೆಂಟರ್ ಹುದ್ದೆಯೊಂದಿಗೆ ಮುಂದುವರೆಯಲಿದ್ದಾರೆ. ಇದರ ನಡುವೆ ಇಂಟರ್​ನ್ಯಾಷನಲ್ ಟಿ20 ಲೀಗ್​ನಲ್ಲಿ ಶಾರ್ಜಾ ವಾರಿಯರ್ಸ್ ಪರ ವಿಕೆಟ್ ಕೀಪರ್ ಬ್ಯಾಟರ್ ಆಗಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ.

3 / 5
2024 ರಲ್ಲಿ ಐಪಿಎಲ್​ಗೆ ವಿದಾಯ ಹೇಳಿದ್ದ ದಿನೇಶ್ ಕಾರ್ತಿಕ್, ಐಪಿಎಲ್ 2025 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕೋಚಿಂಗ್ ಸಿಬ್ಬಂದಿ ವರ್ಗದಲ್ಲಿ ಕಾಣಿಸಿಕೊಂಡಿದ್ದರು. ಅಲ್ಲದೆ ಮೆಂಟರ್ ಆದ ಚೊಚ್ಚಲ ಸೀಸನ್​ನಲ್ಲೇ ಆರ್​ಸಿಬಿ ತಂಡವನ್ನು ಚಾಂಪಿಯನ್​ ಪಟ್ಟಕ್ಕೇರಿಸುವಲ್ಲಿ ಯಶಸ್ವಿಯಾಗಿದ್ದರು. ಇದೀಗ ಯುಎಇ ಟಿ20 ಲೀಗ್​ನಲ್ಲಿ ಆಟಗಾರನಾಗಿ ಮತ್ತೆ ಕಮಾಲ್ ಮಾಡಲಿದ್ದಾರಾ ಕಾದು ನೋಡಬೇಕಿದೆ.

2024 ರಲ್ಲಿ ಐಪಿಎಲ್​ಗೆ ವಿದಾಯ ಹೇಳಿದ್ದ ದಿನೇಶ್ ಕಾರ್ತಿಕ್, ಐಪಿಎಲ್ 2025 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕೋಚಿಂಗ್ ಸಿಬ್ಬಂದಿ ವರ್ಗದಲ್ಲಿ ಕಾಣಿಸಿಕೊಂಡಿದ್ದರು. ಅಲ್ಲದೆ ಮೆಂಟರ್ ಆದ ಚೊಚ್ಚಲ ಸೀಸನ್​ನಲ್ಲೇ ಆರ್​ಸಿಬಿ ತಂಡವನ್ನು ಚಾಂಪಿಯನ್​ ಪಟ್ಟಕ್ಕೇರಿಸುವಲ್ಲಿ ಯಶಸ್ವಿಯಾಗಿದ್ದರು. ಇದೀಗ ಯುಎಇ ಟಿ20 ಲೀಗ್​ನಲ್ಲಿ ಆಟಗಾರನಾಗಿ ಮತ್ತೆ ಕಮಾಲ್ ಮಾಡಲಿದ್ದಾರಾ ಕಾದು ನೋಡಬೇಕಿದೆ.

4 / 5
ದಿನೇಶ್ ಕಾರ್ತಿಕ್ ಐಪಿಎಲ್​ನಲ್ಲಿ ಒಟ್ಟು 257 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 22 ಅರ್ಧಶತಕಗಳೊಂದಿಗೆ ಒಟ್ಟು 4842 ರನ್ ಕಲೆಹಾಕಿದ್ದಾರೆ. ಅಲ್ಲದೆ ಮಹೇಂದ್ರ ಸಿಂಗ್ ಧೋನಿ ಬಳಿಕ ಐಪಿಎಲ್​ನಲ್ಲಿ ಅತೀ ಹೆಚ್ಚು ಪಂದ್ಯವಾಡಿದ ವಿಕೆಟ್ ಕೀಪರ್ ಎಂಬ ದಾಖಲೆ ಕೂಡ ದಿನೇಶ್ ಕಾರ್ತಿಕ್ ನಿರ್ಮಿಸಿದ್ದಾರೆ. ಈ ಎಲ್ಲಾ ಅನುಭವಗಳೊಂದಿಗೆ ಇದೀಗ ಯುಎಇ ಟಿ20 ಲೀಗ್​ನಲ್ಲಿ ಹೊಸ ಇನಿಂಗ್ಸ್ ಆರಂಭಿಸಲು ಸಜ್ಜಾಗಿದ್ದಾರೆ.

ದಿನೇಶ್ ಕಾರ್ತಿಕ್ ಐಪಿಎಲ್​ನಲ್ಲಿ ಒಟ್ಟು 257 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 22 ಅರ್ಧಶತಕಗಳೊಂದಿಗೆ ಒಟ್ಟು 4842 ರನ್ ಕಲೆಹಾಕಿದ್ದಾರೆ. ಅಲ್ಲದೆ ಮಹೇಂದ್ರ ಸಿಂಗ್ ಧೋನಿ ಬಳಿಕ ಐಪಿಎಲ್​ನಲ್ಲಿ ಅತೀ ಹೆಚ್ಚು ಪಂದ್ಯವಾಡಿದ ವಿಕೆಟ್ ಕೀಪರ್ ಎಂಬ ದಾಖಲೆ ಕೂಡ ದಿನೇಶ್ ಕಾರ್ತಿಕ್ ನಿರ್ಮಿಸಿದ್ದಾರೆ. ಈ ಎಲ್ಲಾ ಅನುಭವಗಳೊಂದಿಗೆ ಇದೀಗ ಯುಎಇ ಟಿ20 ಲೀಗ್​ನಲ್ಲಿ ಹೊಸ ಇನಿಂಗ್ಸ್ ಆರಂಭಿಸಲು ಸಜ್ಜಾಗಿದ್ದಾರೆ.

5 / 5

Published On - 8:24 am, Wed, 1 October 25

Follow Us
SIR ವಿವಾದ: ಸರ್ಕಾರದ ವಿರುದ್ಧ ಜಂಟಿ ಸಮರಕ್ಕೆ ಬಿಜೆಪಿ, ಜೆಡಿಎಸ್‌ ಸಿದ್ಧತೆ
SIR ವಿವಾದ: ಸರ್ಕಾರದ ವಿರುದ್ಧ ಜಂಟಿ ಸಮರಕ್ಕೆ ಬಿಜೆಪಿ, ಜೆಡಿಎಸ್‌ ಸಿದ್ಧತೆ
ಟ್ರಾಫಿಕ್ ಸಿಗ್ನಲ್​ನಲ್ಲಿ ನಿಂತಿದ್ದ ಎಸಿ ಬಸ್​ಗೆ ಮತ್ತೊಂದು ಬಸ್ ಡಿಕ್ಕಿ!
ಟ್ರಾಫಿಕ್ ಸಿಗ್ನಲ್​ನಲ್ಲಿ ನಿಂತಿದ್ದ ಎಸಿ ಬಸ್​ಗೆ ಮತ್ತೊಂದು ಬಸ್ ಡಿಕ್ಕಿ!
ಸರ್ಕಾರಿ ಕೆಲಸ ಕೊಡಿಸುವ ನೆಪದಲ್ಲಿ ವಂಚನೆ: ಟಿವಿ9 ವರದಿ ಬಳಿಕ ಆರೋಪಿಗಳ ಬಂಧನ
ಸರ್ಕಾರಿ ಕೆಲಸ ಕೊಡಿಸುವ ನೆಪದಲ್ಲಿ ವಂಚನೆ: ಟಿವಿ9 ವರದಿ ಬಳಿಕ ಆರೋಪಿಗಳ ಬಂಧನ
ಮಂಡ್ಯ ಫೈರಿಂಗ್: ಪ್ರಭಾವಿ ಪುತ್ರನ ಬೆನ್ನಿಗೆ ನಿಂತ್ರಾ ಎಸ್‌ಪಿ ಶೋಭಾರಾಣಿ?
ಮಂಡ್ಯ ಫೈರಿಂಗ್: ಪ್ರಭಾವಿ ಪುತ್ರನ ಬೆನ್ನಿಗೆ ನಿಂತ್ರಾ ಎಸ್‌ಪಿ ಶೋಭಾರಾಣಿ?
ರೌಡಿಶೀಟರ್​ಗಳಿಗೆ ಸಿಸಿಬಿ ಬಿಗ್ ಶಾಕ್, ರಾತ್ರೋರಾತ್ರಿ ಮಿಂಚಿನ ಕಾರ್ಯಾಚರಣೆ
ರೌಡಿಶೀಟರ್​ಗಳಿಗೆ ಸಿಸಿಬಿ ಬಿಗ್ ಶಾಕ್, ರಾತ್ರೋರಾತ್ರಿ ಮಿಂಚಿನ ಕಾರ್ಯಾಚರಣೆ
ಕೊರತೆ ತಪ್ಪಿಸಲು ಸಿಎಂ ಡಿಕೆ ಶಿವಕುಮಾರ್ ತುರ್ತು ಸಭೆ, ಅಧಿಕಾರಿಗಳಿಗೆ ಸೂಚನೆ
ಕೊರತೆ ತಪ್ಪಿಸಲು ಸಿಎಂ ಡಿಕೆ ಶಿವಕುಮಾರ್ ತುರ್ತು ಸಭೆ, ಅಧಿಕಾರಿಗಳಿಗೆ ಸೂಚನೆ
Video: ಮಕ್ಕಳ ನಡುವೆಯೇ ಚಾಪೆಯಲ್ಲಿತ್ತು 5 ಅಡಿಯ ಬೃಹತ್ ನಾಗರಹಾವು!
Video: ಮಕ್ಕಳ ನಡುವೆಯೇ ಚಾಪೆಯಲ್ಲಿತ್ತು 5 ಅಡಿಯ ಬೃಹತ್ ನಾಗರಹಾವು!
ಇಂದು ಈ ರಾಶಿಯವರಿಗೆ ಸಾಲದಿಂದ ಮುಕ್ತಿ
ಇಂದು ಈ ರಾಶಿಯವರಿಗೆ ಸಾಲದಿಂದ ಮುಕ್ತಿ
ಗುಜರಾತ್​​ನಲ್ಲಿ ಮಳೆಯಿಂದ ಪ್ರವಾಹ, ಉಕ್ಕಿ ಹರಿಯುತ್ತಿದೆ ಡಾಂಗ್ ನದಿ
ಗುಜರಾತ್​​ನಲ್ಲಿ ಮಳೆಯಿಂದ ಪ್ರವಾಹ, ಉಕ್ಕಿ ಹರಿಯುತ್ತಿದೆ ಡಾಂಗ್ ನದಿ
ಬಾಲಕಿಯನ್ನು ಆಸ್ಪತ್ರೆಗೆ ಸೇರಿಸಲು 6 ಕಿಮೀ ಹೊತ್ತು ಸಾಗಿದ ಶಾಲಾ ವಾರ್ಡನ್!
ಬಾಲಕಿಯನ್ನು ಆಸ್ಪತ್ರೆಗೆ ಸೇರಿಸಲು 6 ಕಿಮೀ ಹೊತ್ತು ಸಾಗಿದ ಶಾಲಾ ವಾರ್ಡನ್!