AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Imran Tahir: ಇಮ್ರಾನ್ ತಾಹಿರ್ ಹೆಸರಿಗೆ 500 ವಿಕೆಟ್​ಗಳ ವಿಶ್ವ ದಾಖಲೆ

Imran Tahir: ಟಿ20 ಕ್ರಿಕೆಟ್​ನಲ್ಲಿ 500 ವಿಕೆಟ್​ಗಳನ್ನು ಪಡೆದ ವಿಶೇಷ ಸಾಧಕರ ಪಟ್ಟಿಗೆ ಸೌತ್ ಆಫ್ರಿಕಾದ ಸ್ಪಿನ್ನರ್ ಇಮ್ರಾನ್ ತಾಹಿರ್ ಸೇರ್ಪಡೆಯಾಗಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ವಿಶ್ವದ ನಾಲ್ಕನೇ ಆಟಗಾರ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಮೂವರು ಆಟಗಾರರು ಟಿ20 ಕ್ರಿಕೆಟ್​ನಲ್ಲಿ ಐನೂರಕ್ಕಿಂತ ಹೆಚ್ಚಿನ ವಿಕೆಟ್​ಗಳನ್ನು ಕಬಳಿಸಿದ್ದಾರೆ.

TV9 Web
| Edited By: |

Updated on: Feb 15, 2024 | 8:22 AM

Share
ಬಾಂಗ್ಲಾದೇಶ್ ಪ್ರೀಮಿಯರ್ ಲೀಗ್​ನ 30ನೇ ಪಂದ್ಯದಲ್ಲಿ ಇಮ್ರಾನ್ ತಾಹಿರ್ (Imran Tahir) 5 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಈ ಐದು ವಿಕೆಟ್​ಗಳೊಂದಿಗೆ ಸೌತ್ ಆಫ್ರಿಕಾ ಸ್ಪಿನ್ನರ್ ಟಿ20 ಕ್ರಿಕೆಟ್​ನಲ್ಲಿ 500 ವಿಕೆಟ್​ಗಳ ಸಾಧನೆ ಮಾಡಿರುವುದು ವಿಶೇಷ.

ಬಾಂಗ್ಲಾದೇಶ್ ಪ್ರೀಮಿಯರ್ ಲೀಗ್​ನ 30ನೇ ಪಂದ್ಯದಲ್ಲಿ ಇಮ್ರಾನ್ ತಾಹಿರ್ (Imran Tahir) 5 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಈ ಐದು ವಿಕೆಟ್​ಗಳೊಂದಿಗೆ ಸೌತ್ ಆಫ್ರಿಕಾ ಸ್ಪಿನ್ನರ್ ಟಿ20 ಕ್ರಿಕೆಟ್​ನಲ್ಲಿ 500 ವಿಕೆಟ್​ಗಳ ಸಾಧನೆ ಮಾಡಿರುವುದು ವಿಶೇಷ.

1 / 6
ಚಟ್ಟೋಗ್ರಾಮ್​ನಲ್ಲಿ ನಡೆದ ಈ ಪಂದ್ಯದಲ್ಲಿ ಖುಲ್ನಾ ಟೈಗರ್ಸ್ ಮತ್ತು ರಂಗ್‌ಪುರ್ ರೈಡರ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಮೊದಲು ಬ್ಯಾಟ್ ಮಾಡಿದ ರಂಗ್‌ಪುರ್ ರೈಡರ್ಸ್ ತಂಡ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 219 ರನ್ ಕಲೆಹಾಕಿತು.

ಚಟ್ಟೋಗ್ರಾಮ್​ನಲ್ಲಿ ನಡೆದ ಈ ಪಂದ್ಯದಲ್ಲಿ ಖುಲ್ನಾ ಟೈಗರ್ಸ್ ಮತ್ತು ರಂಗ್‌ಪುರ್ ರೈಡರ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಮೊದಲು ಬ್ಯಾಟ್ ಮಾಡಿದ ರಂಗ್‌ಪುರ್ ರೈಡರ್ಸ್ ತಂಡ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 219 ರನ್ ಕಲೆಹಾಕಿತು.

2 / 6
220 ರನ್​ಗಳ ಕಠಿಣ ಗುರಿಯನ್ನು ಬೆನ್ನತ್ತಿದ ಖುಲ್ನಾ ಟೈಗರ್ಸ್ ತಂಡವು ಇಮ್ರಾನ್ ತಾಹಿರ್ ಸ್ಪಿನ್ ಮೋಡಿ ಮುಂದೆ ಮಂಕಾದರು. ಹಿರಿ ವಯಸ್ಸಿನಲ್ಲೂ ಅತ್ಯುತ್ತಮ ದಾಳಿ ಸಂಘಟಿಸಿದ ತಾಹಿರ್ 4 ಓವರ್​ಗಳಲ್ಲಿ 26 ರನ್ ನೀಡಿ 5 ವಿಕೆಟ್ ಕಬಳಿಸಿದರು. ಪರಿಣಾಮ ಖುಲ್ನಾ ಟೈಗರ್ಸ್ ತಂಡವು 141 ರನ್​ಗಳಿಗೆ ಆಲೌಟ್ ಆಗಿ ಸೋಲೊಪ್ಪಿಕೊಂಡಿತು.

220 ರನ್​ಗಳ ಕಠಿಣ ಗುರಿಯನ್ನು ಬೆನ್ನತ್ತಿದ ಖುಲ್ನಾ ಟೈಗರ್ಸ್ ತಂಡವು ಇಮ್ರಾನ್ ತಾಹಿರ್ ಸ್ಪಿನ್ ಮೋಡಿ ಮುಂದೆ ಮಂಕಾದರು. ಹಿರಿ ವಯಸ್ಸಿನಲ್ಲೂ ಅತ್ಯುತ್ತಮ ದಾಳಿ ಸಂಘಟಿಸಿದ ತಾಹಿರ್ 4 ಓವರ್​ಗಳಲ್ಲಿ 26 ರನ್ ನೀಡಿ 5 ವಿಕೆಟ್ ಕಬಳಿಸಿದರು. ಪರಿಣಾಮ ಖುಲ್ನಾ ಟೈಗರ್ಸ್ ತಂಡವು 141 ರನ್​ಗಳಿಗೆ ಆಲೌಟ್ ಆಗಿ ಸೋಲೊಪ್ಪಿಕೊಂಡಿತು.

3 / 6
ಇನ್ನು ಈ ಪಂದ್ಯದಲ್ಲಿ 5 ವಿಕೆಟ್​ ಕಬಳಿಸುವುದರೊಂದಿಗೆ ಇಮ್ರಾನ್ ತಾಹಿರ್ ಟಿ20 ಕ್ರಿಕೆಟ್​ನಲ್ಲಿ 500 ವಿಕೆಟ್​ ಕಬಳಿಸಿದ ಸೌತ್ ಆಫ್ರಿಕಾದ ಮೊದಲ ಬೌಲರ್ ಎನಿಸಿಕೊಂಡಿದ್ದಾರೆ. ಹಾಗೆಯೇ ಈ ಸಾಧನೆ ಮಾಡಿದ ವಿಶ್ವದ 4ನೇ ಆಟಗಾರ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ.

ಇನ್ನು ಈ ಪಂದ್ಯದಲ್ಲಿ 5 ವಿಕೆಟ್​ ಕಬಳಿಸುವುದರೊಂದಿಗೆ ಇಮ್ರಾನ್ ತಾಹಿರ್ ಟಿ20 ಕ್ರಿಕೆಟ್​ನಲ್ಲಿ 500 ವಿಕೆಟ್​ ಕಬಳಿಸಿದ ಸೌತ್ ಆಫ್ರಿಕಾದ ಮೊದಲ ಬೌಲರ್ ಎನಿಸಿಕೊಂಡಿದ್ದಾರೆ. ಹಾಗೆಯೇ ಈ ಸಾಧನೆ ಮಾಡಿದ ವಿಶ್ವದ 4ನೇ ಆಟಗಾರ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ.

4 / 6
ಇದಕ್ಕೂ ಮುನ್ನ ವೆಸ್ಟ್ ಇಂಡೀಸ್​ನ ಡ್ವೇನ್ ಬ್ರಾವೊ (624), ಅಫ್ಘಾನಿಸ್ತಾನದ ರಶೀದ್ ಖಾನ್ (556), ಮತ್ತು ವೆಸ್ಟ್ ಇಂಡೀಸ್​ನ ಸುನಿಲ್ ನರೈನ್ (532) ಮಾತ್ರ ಈ ಸಾಧನೆ ಮಾಡಿದ್ದರು.

ಇದಕ್ಕೂ ಮುನ್ನ ವೆಸ್ಟ್ ಇಂಡೀಸ್​ನ ಡ್ವೇನ್ ಬ್ರಾವೊ (624), ಅಫ್ಘಾನಿಸ್ತಾನದ ರಶೀದ್ ಖಾನ್ (556), ಮತ್ತು ವೆಸ್ಟ್ ಇಂಡೀಸ್​ನ ಸುನಿಲ್ ನರೈನ್ (532) ಮಾತ್ರ ಈ ಸಾಧನೆ ಮಾಡಿದ್ದರು.

5 / 6
ಇದೀಗ 387 ಟಿ20 ಇನಿಂಗ್ಸ್​ಗಳ ಮೂಲಕ ಇಮ್ರಾನ್ ತಾಹಿರ್ 502 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ವಿಶ್ವದ ಅತ್ಯಂತ ಹಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ 44 ವರ್ಷದ ಇಮ್ರಾನ್ ತಾಹಿರ್ ಪಾತ್ರರಾಗಿದ್ದಾರೆ.

ಇದೀಗ 387 ಟಿ20 ಇನಿಂಗ್ಸ್​ಗಳ ಮೂಲಕ ಇಮ್ರಾನ್ ತಾಹಿರ್ 502 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ವಿಶ್ವದ ಅತ್ಯಂತ ಹಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ 44 ವರ್ಷದ ಇಮ್ರಾನ್ ತಾಹಿರ್ ಪಾತ್ರರಾಗಿದ್ದಾರೆ.

6 / 6
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?