AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಗಂಭೀರ್, ಗಿಲ್ ತಲೆನೋವ ಶಮನಗೊಳಿಸಿದ ಜೈಸ್ವಾಲ್

Yashasvi Jaiswal half-century: ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಯಶಸ್ವಿ ಜೈಸ್ವಾಲ್ ತಮ್ಮ ಹಳೆಯ ಲಯಕ್ಕೆ ಮರಳಿದ್ದಾರೆ. ಅಭ್ಯಾಸ ಪಂದ್ಯದಲ್ಲಿ ಸೊನ್ನೆಗೆ ಔಟಾಗಿದ್ದರೂ, ಎರಡನೇ ಇನ್ನಿಂಗ್ಸ್‌ನಲ್ಲಿ 46 ಎಸೆತಗಳಲ್ಲಿ 61 ರನ್ ಸಿಡಿಸಿ ಅರ್ಧಶತಕ ಬಾರಿಸಿದರು. ಶುಭ್​ಮನ್ ಗಿಲ್ ಜೊತೆ 100 ರನ್ ಪಾಲುದಾರಿಕೆ ಸಹ ಹಂಚಿಕೊಂಡರು. ಗಿಲ್ ಕೂಡ 44 ರನ್ ಗಳಿಸಿದರೂ, ಬೆರಳಿನ ನೋವಿನಿಂದ ಬಳಲುತ್ತಿದ್ದು, ಮೊದಲ ಟೆಸ್ಟ್‌ಗೆ ಚೇತರಿಸಿಕೊಳ್ಳುವ ಭರವಸೆ ಇದೆ.

ಪೃಥ್ವಿಶಂಕರ
|

Updated on: Aug 09, 2026 | 5:11 PM

Share
ಶ್ರೀಲಂಕಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಗೂ ಮುನ್ನ ಭಾರತೀಯ ಟೆಸ್ಟ್ ತಂಡದ ಆರಂಭಿಕ ಬ್ಯಾಟ್ಸ್‌ಮನ್ ಯಶಸ್ವಿ ಜೈಸ್ವಾಲ್ ತಮ್ಮ ಹಳೆಯ ಲಯಕ್ಕೆ ಮರಳಿದ್ದಾರೆ. ಶ್ರೀಲಂಕಾ XI ವಿರುದ್ಧದ ಮೂರು ದಿನಗಳ ಅಭ್ಯಾಸ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ ಸೊನ್ನೆಗೆ ಔಟಾಗಿದ್ದ ಯಶಸ್ವಿ ಜೈಸ್ವಾಲ್, ಎರಡನೇ ಇನ್ನಿಂಗ್ಸ್‌ನಲ್ಲಿ ಅರ್ಧಶತಕ ಬಾರಿಸುವ ಮೂಲಕ ಫಾರ್ಮ್​ ಕಂಡುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ(PC-BCCI).

ಶ್ರೀಲಂಕಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಗೂ ಮುನ್ನ ಭಾರತೀಯ ಟೆಸ್ಟ್ ತಂಡದ ಆರಂಭಿಕ ಬ್ಯಾಟ್ಸ್‌ಮನ್ ಯಶಸ್ವಿ ಜೈಸ್ವಾಲ್ ತಮ್ಮ ಹಳೆಯ ಲಯಕ್ಕೆ ಮರಳಿದ್ದಾರೆ. ಶ್ರೀಲಂಕಾ XI ವಿರುದ್ಧದ ಮೂರು ದಿನಗಳ ಅಭ್ಯಾಸ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ ಸೊನ್ನೆಗೆ ಔಟಾಗಿದ್ದ ಯಶಸ್ವಿ ಜೈಸ್ವಾಲ್, ಎರಡನೇ ಇನ್ನಿಂಗ್ಸ್‌ನಲ್ಲಿ ಅರ್ಧಶತಕ ಬಾರಿಸುವ ಮೂಲಕ ಫಾರ್ಮ್​ ಕಂಡುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ(PC-BCCI).

1 / 5
ಮೊದಲ ಇನ್ನಿಂಗ್ಸ್‌ನಲ್ಲಿ ಎರಡು ಎಸೆತಗಳನ್ನು ಎದುರಿಸಿ ಖಾತೆ ತೆರೆಯದೆ ವಿಕೆಟ್ ಒಪ್ಪಿಸಿದ್ದ ಜೈಸ್ವಾಲ್ ಎರಡನೇ ಇನ್ನಿಂಗ್ಸ್‌ನಲ್ಲಿ 43 ಎಸೆತಗಳಲ್ಲಿ ತಮ್ಮ ಅರ್ಧಶತಕ ಪೂರ್ಣಗೊಳಿಸಿದರು. ಆ ಬಳಿಕ 46 ಎಸೆತಗಳಲ್ಲಿ 61 ರನ್ ಗಳಿಸಿ ರಿಟೈರ್ಡ್​ ಹರ್ಟ್​ ಆದರು. 132.61 ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿದ ಜೈಸ್ವಾಲ್ ಎರಡು ಸಿಕ್ಸರ್‌ಗಳು ಮತ್ತು ಒಂಬತ್ತು ಬೌಂಡರಿಗಳನ್ನು ಸಹ ಬಾರಿಸಿದರು(PC-BCCI).

ಮೊದಲ ಇನ್ನಿಂಗ್ಸ್‌ನಲ್ಲಿ ಎರಡು ಎಸೆತಗಳನ್ನು ಎದುರಿಸಿ ಖಾತೆ ತೆರೆಯದೆ ವಿಕೆಟ್ ಒಪ್ಪಿಸಿದ್ದ ಜೈಸ್ವಾಲ್ ಎರಡನೇ ಇನ್ನಿಂಗ್ಸ್‌ನಲ್ಲಿ 43 ಎಸೆತಗಳಲ್ಲಿ ತಮ್ಮ ಅರ್ಧಶತಕ ಪೂರ್ಣಗೊಳಿಸಿದರು. ಆ ಬಳಿಕ 46 ಎಸೆತಗಳಲ್ಲಿ 61 ರನ್ ಗಳಿಸಿ ರಿಟೈರ್ಡ್​ ಹರ್ಟ್​ ಆದರು. 132.61 ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿದ ಜೈಸ್ವಾಲ್ ಎರಡು ಸಿಕ್ಸರ್‌ಗಳು ಮತ್ತು ಒಂಬತ್ತು ಬೌಂಡರಿಗಳನ್ನು ಸಹ ಬಾರಿಸಿದರು(PC-BCCI).

2 / 5
ಜೈಸ್ವಾಲ್ ಅರ್ಧಶತಕದ ಇನ್ನಿಂಗ್ಸ್ ಆಡುವುದರ ಜೊತೆಗೆ ನಾಯಕ ಶುಭ್​ಮನ್ ಗಿಲ್ ಅವರೊಂದಿಗೆ ಮೊದಲ ವಿಕೆಟ್​ಗೆ 90 ಎಸೆತಗಳಲ್ಲಿ 100 ರನ್‌ಗಳ ಪಾಲುದಾರಿಕೆಯನ್ನು ಹಂಚಿಕೊಂಡರು. ಅರ್ಧಶತಕದ ಬಳಿಕ ತಮ್ಮ ಗೇರ್ ಬದಲಿಸಿದ ಜೈಸ್ವಾಲ್ ಬೌಂಡರಿ ಬಾರಿಸುವುದರೊಂದಿಗೆ ಅರ್ಧಶತಕ ಪೂರೈಸಿದರೆ,  ಮುಂದಿನ ಎರಡು ಎಸೆತಗಳಲ್ಲಿ ಒಂದು ಸಿಕ್ಸರ್ ಮತ್ತು ಒಂದು ಬೌಂಡರಿ ಕೂಡ ಬಾರಿಸಿದರು(PC-BCCI).

ಜೈಸ್ವಾಲ್ ಅರ್ಧಶತಕದ ಇನ್ನಿಂಗ್ಸ್ ಆಡುವುದರ ಜೊತೆಗೆ ನಾಯಕ ಶುಭ್​ಮನ್ ಗಿಲ್ ಅವರೊಂದಿಗೆ ಮೊದಲ ವಿಕೆಟ್​ಗೆ 90 ಎಸೆತಗಳಲ್ಲಿ 100 ರನ್‌ಗಳ ಪಾಲುದಾರಿಕೆಯನ್ನು ಹಂಚಿಕೊಂಡರು. ಅರ್ಧಶತಕದ ಬಳಿಕ ತಮ್ಮ ಗೇರ್ ಬದಲಿಸಿದ ಜೈಸ್ವಾಲ್ ಬೌಂಡರಿ ಬಾರಿಸುವುದರೊಂದಿಗೆ ಅರ್ಧಶತಕ ಪೂರೈಸಿದರೆ, ಮುಂದಿನ ಎರಡು ಎಸೆತಗಳಲ್ಲಿ ಒಂದು ಸಿಕ್ಸರ್ ಮತ್ತು ಒಂದು ಬೌಂಡರಿ ಕೂಡ ಬಾರಿಸಿದರು(PC-BCCI).

3 / 5
ಜೈಸ್ವಾಲ್ ಜೊತೆಗೆ ನಾಯಕ ಶುಭ್​ಮನ್ ಗಿಲ್ ಕೂಡ ಉಪಯುಕ್ತ ಇನ್ನಿಂಗ್ಸ್ ಆಡಿದರು. ಗಾಯದಿಂದಾಗಿ ಮೊದಲೆರಡು ದಿನ ಕಣಕ್ಕಿಳಿಯದ ಗಿಲ್, ಪಂದ್ಯದ ಮೂರನೇ ದಿನದಾಟದಂದು 54 ಎಸೆತಗಳಲ್ಲಿ 7 ಬೌಂಡರಿಗಳ ಸಹಾಯದಿಂದ 44 ರನ್ ಗಳಿಸಿ ಔಟಾದರು. ಆದಾಗ್ಯೂ ಗಿಲ್​ಗೆ ಬೆರಳಿನ ನೋವು ಹಾಗೆಯೇ ಇದೆಯಾದರೂ ಮೊದಲ ಟೆಸ್ಟ್ ವೇಳೆಗೆ ಚೇತರಿಸಿಕೊಳ್ಳುವ ಭರವಸೆ ಇದೆ(PC-BCCI).

ಜೈಸ್ವಾಲ್ ಜೊತೆಗೆ ನಾಯಕ ಶುಭ್​ಮನ್ ಗಿಲ್ ಕೂಡ ಉಪಯುಕ್ತ ಇನ್ನಿಂಗ್ಸ್ ಆಡಿದರು. ಗಾಯದಿಂದಾಗಿ ಮೊದಲೆರಡು ದಿನ ಕಣಕ್ಕಿಳಿಯದ ಗಿಲ್, ಪಂದ್ಯದ ಮೂರನೇ ದಿನದಾಟದಂದು 54 ಎಸೆತಗಳಲ್ಲಿ 7 ಬೌಂಡರಿಗಳ ಸಹಾಯದಿಂದ 44 ರನ್ ಗಳಿಸಿ ಔಟಾದರು. ಆದಾಗ್ಯೂ ಗಿಲ್​ಗೆ ಬೆರಳಿನ ನೋವು ಹಾಗೆಯೇ ಇದೆಯಾದರೂ ಮೊದಲ ಟೆಸ್ಟ್ ವೇಳೆಗೆ ಚೇತರಿಸಿಕೊಳ್ಳುವ ಭರವಸೆ ಇದೆ(PC-BCCI).

4 / 5
ಮೂರನೇ ದಿನದ ಆಟದ ಬಗ್ಗೆ ಹೇಳುವುದಾದರೆ, ಶ್ರೀಲಂಕಾ ಕ್ರಿಕೆಟ್ XI ತಂಡ ಆಕ್ರಮಣಕಾರಿಯಾಗಿ ಬ್ಯಾಟಿಂಗ್ ಮಾಡಿ 200 ರನ್​ಗಳಿಗೆ ಡಿಕ್ಲೇರ್ ಮಾಡಿತು. ಎರಡನೇ ಇನ್ನಿಂಗ್ಸ್‌ನಲ್ಲಿ, ಅನುಭವಿ ಸ್ಪಿನ್ನರ್ ರವೀಂದ್ರ ಜಡೇಜಾ ಟೀಂ ಇಂಡಿಯಾ ಪರ ಎರಡು ವಿಕೆಟ್‌ಗಳನ್ನು ಕಬಳಿಸಿದರೆ, ವೇಗದ ಬೌಲರ್ ಗುರ್ನೂರ್ ಬ್ರಾರ್ ಈ ಬಾರಿಯೂ ಎರಡು ವಿಕೆಟ್‌ಗಳನ್ನು ಪಡೆದು ಪರಿಣಾಮಕಾರಿ ಎಂದು ಸಾಬೀತುಪಡಿಸಿದರು(PC-BCCI).

ಮೂರನೇ ದಿನದ ಆಟದ ಬಗ್ಗೆ ಹೇಳುವುದಾದರೆ, ಶ್ರೀಲಂಕಾ ಕ್ರಿಕೆಟ್ XI ತಂಡ ಆಕ್ರಮಣಕಾರಿಯಾಗಿ ಬ್ಯಾಟಿಂಗ್ ಮಾಡಿ 200 ರನ್​ಗಳಿಗೆ ಡಿಕ್ಲೇರ್ ಮಾಡಿತು. ಎರಡನೇ ಇನ್ನಿಂಗ್ಸ್‌ನಲ್ಲಿ, ಅನುಭವಿ ಸ್ಪಿನ್ನರ್ ರವೀಂದ್ರ ಜಡೇಜಾ ಟೀಂ ಇಂಡಿಯಾ ಪರ ಎರಡು ವಿಕೆಟ್‌ಗಳನ್ನು ಕಬಳಿಸಿದರೆ, ವೇಗದ ಬೌಲರ್ ಗುರ್ನೂರ್ ಬ್ರಾರ್ ಈ ಬಾರಿಯೂ ಎರಡು ವಿಕೆಟ್‌ಗಳನ್ನು ಪಡೆದು ಪರಿಣಾಮಕಾರಿ ಎಂದು ಸಾಬೀತುಪಡಿಸಿದರು(PC-BCCI).

5 / 5
Follow Us
ಯತೀಂದ್ರಗೆ ಮತ್ತೊಂದು ಜಾಕ್​​ ಪಾಟ್, ಸಿದ್ದರಾಮಯ್ಯ ಮುನಿಸು ತಣಿಸುವ ಪ್ರಯತ್ನ
ಯತೀಂದ್ರಗೆ ಮತ್ತೊಂದು ಜಾಕ್​​ ಪಾಟ್, ಸಿದ್ದರಾಮಯ್ಯ ಮುನಿಸು ತಣಿಸುವ ಪ್ರಯತ್ನ
‘ಖಾಕಿ’ ಧರಿಸಿದರೆ ಜೋಶ್ ಬರುತ್ತೆ: ಪೊಲೀಸರ ಬಗ್ಗೆ ಡಾಲಿ ಧನಂಜಯ್ ಮಾತು
‘ಖಾಕಿ’ ಧರಿಸಿದರೆ ಜೋಶ್ ಬರುತ್ತೆ: ಪೊಲೀಸರ ಬಗ್ಗೆ ಡಾಲಿ ಧನಂಜಯ್ ಮಾತು
GBDA ಯೋಜನೆ ಕುರಿತು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂದೇಶ
GBDA ಯೋಜನೆ ಕುರಿತು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂದೇಶ
‘ನನ್ನ ಕನಸನ್ನು ಹೆಗಲ ಮೇಲೆ ಹೊತ್ತುಕೊಂಡ ಯಶ್: ಗೀತು ಮೋಹನ್​​ದಾಸ್ ಭಾವುಕ
‘ನನ್ನ ಕನಸನ್ನು ಹೆಗಲ ಮೇಲೆ ಹೊತ್ತುಕೊಂಡ ಯಶ್: ಗೀತು ಮೋಹನ್​​ದಾಸ್ ಭಾವುಕ
ಟೆಕ್ಕಿ ಅದ್ವೈತ್ ಶಿವಗಂಗೆ ಬೆಟ್ಟ ಏರುತ್ತಿರುವ ಸಿಸಿಟಿವಿ ದೃಶ್ಯಾವಳಿ ಪತ್ತೆ!
ಟೆಕ್ಕಿ ಅದ್ವೈತ್ ಶಿವಗಂಗೆ ಬೆಟ್ಟ ಏರುತ್ತಿರುವ ಸಿಸಿಟಿವಿ ದೃಶ್ಯಾವಳಿ ಪತ್ತೆ!
ಆಗಸ್ಟ್ 10 ರಿಂದ 16 ರವರೆಗಿನ ದ್ವಾದಶ ರಾಶಿಗಳ ಸಂಪೂರ್ಣ ವಾರಭವಿಷ್ಯ ಇಲ್ಲಿದೆ
ಆಗಸ್ಟ್ 10 ರಿಂದ 16 ರವರೆಗಿನ ದ್ವಾದಶ ರಾಶಿಗಳ ಸಂಪೂರ್ಣ ವಾರಭವಿಷ್ಯ ಇಲ್ಲಿದೆ
ಚಾಮುಂಡೇಶ್ವರಿ ದರ್ಶನ ಪಡೆದ ಕೇಂದ್ರ ಸಚಿವ ಹೆಚ್​​ಡಿಕೆ
ಚಾಮುಂಡೇಶ್ವರಿ ದರ್ಶನ ಪಡೆದ ಕೇಂದ್ರ ಸಚಿವ ಹೆಚ್​​ಡಿಕೆ
ಇಂದು ಕಾಮಿಕಾ ಏಕಾದಶಿ; ಉಪವಾಸ ವೃತದಿಂದ ಭಗವಂತನ ಕೃಪೆಗೆ ಪಾತ್ರರಾಗುವಿರಿ
ಇಂದು ಕಾಮಿಕಾ ಏಕಾದಶಿ; ಉಪವಾಸ ವೃತದಿಂದ ಭಗವಂತನ ಕೃಪೆಗೆ ಪಾತ್ರರಾಗುವಿರಿ
ದೆಹಲಿಯಲ್ಲಿ ಭಾರೀ ಮಳೆ; ಪಾರ್ಕಿಂಗ್ ಗೋಡೆ ಕುಸಿದು 8 ಕಾರುಗಳು ಪೂರ್ತಿ ಜಖಂ
ದೆಹಲಿಯಲ್ಲಿ ಭಾರೀ ಮಳೆ; ಪಾರ್ಕಿಂಗ್ ಗೋಡೆ ಕುಸಿದು 8 ಕಾರುಗಳು ಪೂರ್ತಿ ಜಖಂ
ಹೈದರಾಬಾದ್​ನ ರಸ್ತೆ ಮಧ್ಯೆ ಬಲೂನ್ ಗ್ಯಾಸ್ ಸಿಲಿಂಡರ್ ಸ್ಫೋಟ
ಹೈದರಾಬಾದ್​ನ ರಸ್ತೆ ಮಧ್ಯೆ ಬಲೂನ್ ಗ್ಯಾಸ್ ಸಿಲಿಂಡರ್ ಸ್ಫೋಟ