IND vs AFG: ಸೂರ್ಯ, ಪಾಂಡ್ಯ ಸೇರಿದಂತೆ ತಂಡದ ಮತ್ತೊಬ್ಬ ಆರಂಭಿಕ ಆಟಗಾರ ಟಿ20 ಸರಣಿಗೆ ಅಲಭ್ಯ..!

|

Updated on: Jan 07, 2024 | 6:33 PM

IND vs AFG: ಅಫ್ಘಾನಿಸ್ತಾನ ವಿರುದ್ಧ ನಡೆಯಲಿರುವ ಟಿ20 ಸರಣಿಗೆ ಆರಂಭಿಕ ಆಟಗಾರ ರುತುರಾಜ್ ಗಾಯಕ್ವಾಡ್ ಲಭ್ಯರಿರುವುದಿಲ್ಲ ಎಂದು ವರದಿಯಾಗಿದೆ. ESPNcricinfo ವರದಿಯ ಪ್ರಕಾರ, ರುತುರಾಜ್ ಗಾಯಕ್ವಾಡ್ ಪ್ರಸ್ತುತ ಬೆರಳಿನ ಗಾಯದಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರನ್ನು ತಂಡದಿಂದ ಕೈಬಿಡಲಾಗಿದೆ ಎಂದು ವರದಿಯಾಗಿದೆ.

1 / 7
ಭಾರತ ಮತ್ತು ಅಫ್ಘಾನಿಸ್ತಾನ ತಂಡಗಳ ನಡುವಿನ 3 ಪಂದ್ಯಗಳ ಟಿ20 ಸರಣಿ ಇದೇ ಜನವರಿ 11 ರಿಂದ ಆರಂಭವಾಗಲಿದೆ. ಈ ಸರಣಿಗಾಗಿ ಅಫ್ಘಾನಿಸ್ತಾನ ತಂಡ ಭಾರತಕ್ಕೆ ಆಗಮಿಸಿದೆ. ಆದರೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಇನ್ನೂ ಭಾರತ ತಂಡದ ತಂಡವನ್ನು ಪ್ರಕಟಿಸಿಲ್ಲ. ಈ ನಡುವೆ ದೊಡ್ಡ ಸುದ್ದಿಯೊಂದು ಹೊರಬಿದ್ದಿದ್ದು, ಈ ಸರಣಿಯಿಂದ ಟೀಂ ಇಂಡಿಯಾದ ಮೂವರು ಸ್ಟಾರ್ ಆಟಗಾರರು ಹೊರಬಿದ್ದಿದ್ದಾರೆ.

ಭಾರತ ಮತ್ತು ಅಫ್ಘಾನಿಸ್ತಾನ ತಂಡಗಳ ನಡುವಿನ 3 ಪಂದ್ಯಗಳ ಟಿ20 ಸರಣಿ ಇದೇ ಜನವರಿ 11 ರಿಂದ ಆರಂಭವಾಗಲಿದೆ. ಈ ಸರಣಿಗಾಗಿ ಅಫ್ಘಾನಿಸ್ತಾನ ತಂಡ ಭಾರತಕ್ಕೆ ಆಗಮಿಸಿದೆ. ಆದರೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಇನ್ನೂ ಭಾರತ ತಂಡದ ತಂಡವನ್ನು ಪ್ರಕಟಿಸಿಲ್ಲ. ಈ ನಡುವೆ ದೊಡ್ಡ ಸುದ್ದಿಯೊಂದು ಹೊರಬಿದ್ದಿದ್ದು, ಈ ಸರಣಿಯಿಂದ ಟೀಂ ಇಂಡಿಯಾದ ಮೂವರು ಸ್ಟಾರ್ ಆಟಗಾರರು ಹೊರಬಿದ್ದಿದ್ದಾರೆ.

2 / 7
ಅಫ್ಘಾನಿಸ್ತಾನ ವಿರುದ್ಧ ನಡೆಯಲಿರುವ ಟಿ20 ಸರಣಿಗೆ ಆರಂಭಿಕ ಆಟಗಾರ ರುತುರಾಜ್ ಗಾಯಕ್ವಾಡ್ ಲಭ್ಯರಿರುವುದಿಲ್ಲ ಎಂದು ವರದಿಯಾಗಿದೆ. ESPNcricinfo ವರದಿಯ ಪ್ರಕಾರ, ರುತುರಾಜ್ ಗಾಯಕ್ವಾಡ್ ಪ್ರಸ್ತುತ ಬೆರಳಿನ ಗಾಯದಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರನ್ನು ತಂಡದಿಂದ ಕೈಬಿಡಲಾಗಿದೆ ಎಂದು ವರದಿಯಾಗಿದೆ.

ಅಫ್ಘಾನಿಸ್ತಾನ ವಿರುದ್ಧ ನಡೆಯಲಿರುವ ಟಿ20 ಸರಣಿಗೆ ಆರಂಭಿಕ ಆಟಗಾರ ರುತುರಾಜ್ ಗಾಯಕ್ವಾಡ್ ಲಭ್ಯರಿರುವುದಿಲ್ಲ ಎಂದು ವರದಿಯಾಗಿದೆ. ESPNcricinfo ವರದಿಯ ಪ್ರಕಾರ, ರುತುರಾಜ್ ಗಾಯಕ್ವಾಡ್ ಪ್ರಸ್ತುತ ಬೆರಳಿನ ಗಾಯದಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರನ್ನು ತಂಡದಿಂದ ಕೈಬಿಡಲಾಗಿದೆ ಎಂದು ವರದಿಯಾಗಿದೆ.

3 / 7
ವಾಸ್ತವವಾಗಿ ಡಿಸೆಂಬರ್ 19 ರಂದು ಪೋರ್ಟ್ ಎಲಿಜಬೆತ್‌ನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಏಕದಿನ ಪಂದ್ಯದ ವೇಳೆ ಗಾಯಕ್ವಾಡ್ ಬೆರಳಿಗೆ ಗಾಯ ಮಾಡಿಕೊಂಡಿದ್ದರು. ಈ ಗಾಯದಿಂದಾಗಿ ಅವರು ಏಕದಿನ ನಂತರ ಟೆಸ್ಟ್ ಸರಣಿಯಿಂದಲೂ ಹೊರಗುಳಿದಿದ್ದರು.

ವಾಸ್ತವವಾಗಿ ಡಿಸೆಂಬರ್ 19 ರಂದು ಪೋರ್ಟ್ ಎಲಿಜಬೆತ್‌ನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಏಕದಿನ ಪಂದ್ಯದ ವೇಳೆ ಗಾಯಕ್ವಾಡ್ ಬೆರಳಿಗೆ ಗಾಯ ಮಾಡಿಕೊಂಡಿದ್ದರು. ಈ ಗಾಯದಿಂದಾಗಿ ಅವರು ಏಕದಿನ ನಂತರ ಟೆಸ್ಟ್ ಸರಣಿಯಿಂದಲೂ ಹೊರಗುಳಿದಿದ್ದರು.

4 / 7
ರುತುರಾಜ್ ಜೊತೆಗೆ ಸೂರ್ಯಕುಮಾರ್ ಯಾದವ್ ಮತ್ತು ಹಾರ್ದಿಕ್ ಪಾಂಡ್ಯ ಕೂಡ ಗಾಯದ ಸಮಸ್ಯೆಯಿಂದಾಗಿ ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಗೆ ಭಾರತ ತಂಡದ ಭಾಗವಾಗಿರುವುದಿಲ್ಲ.

ರುತುರಾಜ್ ಜೊತೆಗೆ ಸೂರ್ಯಕುಮಾರ್ ಯಾದವ್ ಮತ್ತು ಹಾರ್ದಿಕ್ ಪಾಂಡ್ಯ ಕೂಡ ಗಾಯದ ಸಮಸ್ಯೆಯಿಂದಾಗಿ ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಗೆ ಭಾರತ ತಂಡದ ಭಾಗವಾಗಿರುವುದಿಲ್ಲ.

5 / 7
ಇಎಸ್‌ಪಿಎನ್‌ಕ್ರಿಕ್‌ಇನ್‌ಫೋ ವರದಿಯ ಪ್ರಕಾರ ಸೂರ್ಯಕುಮಾರ್ ಮತ್ತು ಹಾರ್ದಿಕ್ ಇಬ್ಬರೂ ಐಪಿಎಲ್‌ ವೇಳೆಗೆ ಫಿಟ್ ಆಗುವ ಸಾಧ್ಯತೆ ಇದೆ. ದಕ್ಷಿಣ ಆಫ್ರಿಕಾ ಪ್ರವಾಸದ ವೇಳೆ ಸೂರ್ಯಕುಮಾರ್ ಯಾದವ್ ಗಾಯಗೊಂಡಿದ್ದರೆ, 2023 ರ ವಿಶ್ವಕಪ್‌ನಲ್ಲಿ ಹಾರ್ದಿಕ್ ಪಾಂಡ್ಯ ಗಾಯಗೊಂಡಿದ್ದರು.

ಇಎಸ್‌ಪಿಎನ್‌ಕ್ರಿಕ್‌ಇನ್‌ಫೋ ವರದಿಯ ಪ್ರಕಾರ ಸೂರ್ಯಕುಮಾರ್ ಮತ್ತು ಹಾರ್ದಿಕ್ ಇಬ್ಬರೂ ಐಪಿಎಲ್‌ ವೇಳೆಗೆ ಫಿಟ್ ಆಗುವ ಸಾಧ್ಯತೆ ಇದೆ. ದಕ್ಷಿಣ ಆಫ್ರಿಕಾ ಪ್ರವಾಸದ ವೇಳೆ ಸೂರ್ಯಕುಮಾರ್ ಯಾದವ್ ಗಾಯಗೊಂಡಿದ್ದರೆ, 2023 ರ ವಿಶ್ವಕಪ್‌ನಲ್ಲಿ ಹಾರ್ದಿಕ್ ಪಾಂಡ್ಯ ಗಾಯಗೊಂಡಿದ್ದರು.

6 / 7
ಈ ಮೂವರ ಅಲಭ್ಯತೆಯಿಂದಾಗಿ ತಂಡದ ಯುವ ಆಟಗಾರರಿಗೆ ಟೀಂ ಇಂಡಿಯಾದ ಭಾಗ್ಯದ ಬಾಗಿಲು ತೆರೆಯಲಿದೆ. ಈ ಸರಣಿಗೆ ಯುವ ಆಟಗಾರರನ್ನೇ ಹೆಚ್ಚಾಗಿ ಆಯ್ಕೆ ಮಾಡಲಾಗುತ್ತದೆ ಎಂಬ ಮಾತು ಕೇಳಿಬರುತ್ತಿದೆ. ಇಲ್ಲದೆ ಈ ಸರಣಿಯಲ್ಲಿ ಇಬ್ಬರು ಅನುಭವಿಗಳಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಕೂಡ ತಂಡದಲ್ಲಿ ಆಡಲಿದ್ದಾರೆ ಎಂದು ವರದಿಯಾಗುತ್ತಿದೆ.

ಈ ಮೂವರ ಅಲಭ್ಯತೆಯಿಂದಾಗಿ ತಂಡದ ಯುವ ಆಟಗಾರರಿಗೆ ಟೀಂ ಇಂಡಿಯಾದ ಭಾಗ್ಯದ ಬಾಗಿಲು ತೆರೆಯಲಿದೆ. ಈ ಸರಣಿಗೆ ಯುವ ಆಟಗಾರರನ್ನೇ ಹೆಚ್ಚಾಗಿ ಆಯ್ಕೆ ಮಾಡಲಾಗುತ್ತದೆ ಎಂಬ ಮಾತು ಕೇಳಿಬರುತ್ತಿದೆ. ಇಲ್ಲದೆ ಈ ಸರಣಿಯಲ್ಲಿ ಇಬ್ಬರು ಅನುಭವಿಗಳಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಕೂಡ ತಂಡದಲ್ಲಿ ಆಡಲಿದ್ದಾರೆ ಎಂದು ವರದಿಯಾಗುತ್ತಿದೆ.

7 / 7
ಸರಣಿಯ ವೇಳಾಪಟ್ಟಿ ನೋಡುವುದಾದರೆ.. ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಟಿ20 ಸರಣಿಯ ಮೊದಲ ಪಂದ್ಯ ಗುರುವಾರ (ಜನವರಿ 11) ಮೊಹಾಲಿಯ ಪಂಜಾಬ್ ಕ್ರಿಕೆಟ್ ಸಂಸ್ಥೆ ಐಎಸ್ ಬಿಂದ್ರಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಎರಡನೇ ಟಿ20 ಪಂದ್ಯ (ಜನವರಿ 14) ಇಂದೋರ್‌ನ ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಅದೇ ಸಮಯದಲ್ಲಿ, ಸರಣಿಯ ಕೊನೆಯ ಪಂದ್ಯದಲ್ಲಿ (ಜನವರಿ 17) ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉಭಯ ತಂಡಗಳು ಮುಖಾಮುಖಿಯಾಗಲಿವೆ.

ಸರಣಿಯ ವೇಳಾಪಟ್ಟಿ ನೋಡುವುದಾದರೆ.. ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಟಿ20 ಸರಣಿಯ ಮೊದಲ ಪಂದ್ಯ ಗುರುವಾರ (ಜನವರಿ 11) ಮೊಹಾಲಿಯ ಪಂಜಾಬ್ ಕ್ರಿಕೆಟ್ ಸಂಸ್ಥೆ ಐಎಸ್ ಬಿಂದ್ರಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಎರಡನೇ ಟಿ20 ಪಂದ್ಯ (ಜನವರಿ 14) ಇಂದೋರ್‌ನ ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಅದೇ ಸಮಯದಲ್ಲಿ, ಸರಣಿಯ ಕೊನೆಯ ಪಂದ್ಯದಲ್ಲಿ (ಜನವರಿ 17) ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉಭಯ ತಂಡಗಳು ಮುಖಾಮುಖಿಯಾಗಲಿವೆ.