AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS Test: ಭಾರತ-ಆಸ್ಟ್ರೇಲಿಯಾ ಟೆಸ್ಟ್ ಬಳಿಕ ನೀವೃತ್ತಿ ನೀಡಲಿದ್ದಾರೆ ಭಾರತದ ಈ ಆಟಗಾರರು?

India vs Australia Test: ಅನೇಕ ಕಾರಣಗಳಿಂದ ಉಭಯ ತಂಡಗಳಿಗೆ ಮೂರನೇ ಟೆಸ್ಟ್ ಸರಣಿ ಬಹಳ ಮುಖ್ಯವಾಗಿದೆ. ಅಂತೆಯೆ ಕೆಲ ಆಟಗಾರರಿಗೆ ಇಂಡೋ- ಆಸೀಸ್ ಕೊನೆಯ ಟೆಸ್ಟ್ ಆಗಿರಲಿದೆ. ಮುಖ್ಯವಾಗಿ ಭಾರತದ ಈ ಮೂವರು ಆಟಗಾರರಿಗೆ.

Vinay Bhat
|

Updated on: Feb 28, 2023 | 7:25 AM

Share
ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟ್ರೋಫಿಯ ಟೆಸ್ಟ್ ಸರಣಿಯ ಮೂರನೇ ಟೆಸ್ಟ್ ಪಂದ್ಯ ಮಾರ್ಚ್ 1 ಬುಧವಾರದಿಂದ ಆರಂಭವಾಗಲಿದೆ. ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಈಗಾಗಲೇ ಭಾರತ 2-0 ಮುನ್ನಡೆ ಪಡೆದುಕೊಂಡು ಟ್ರೋಫಿಯನ್ನು ತನ್ನಲ್ಲೇ ಉಳಿಸಿಕೊಂಡಿದೆ. ಇನ್ನೊಂದು ಪಂದ್ಯ ಭಾರತ ಗೆದ್ದರೆ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ಗೆ ಏರಲಿದೆ.

ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟ್ರೋಫಿಯ ಟೆಸ್ಟ್ ಸರಣಿಯ ಮೂರನೇ ಟೆಸ್ಟ್ ಪಂದ್ಯ ಮಾರ್ಚ್ 1 ಬುಧವಾರದಿಂದ ಆರಂಭವಾಗಲಿದೆ. ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಈಗಾಗಲೇ ಭಾರತ 2-0 ಮುನ್ನಡೆ ಪಡೆದುಕೊಂಡು ಟ್ರೋಫಿಯನ್ನು ತನ್ನಲ್ಲೇ ಉಳಿಸಿಕೊಂಡಿದೆ. ಇನ್ನೊಂದು ಪಂದ್ಯ ಭಾರತ ಗೆದ್ದರೆ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ಗೆ ಏರಲಿದೆ.

1 / 7
ಹೀಗೆ ಅನೇಕ ಕಾರಣಗಳಿಂದ ಉಭಯ ತಂಡಗಳಿಗೆ ಮೂರನೇ ಟೆಸ್ಟ್ ಸರಣಿ ಬಹಳ ಮುಖ್ಯವಾಗಿದೆ. ಅಂತೆಯೆ ಕೆಲ ಆಟಗಾರರಿಗೆ ಇಂಡೋ- ಆಸೀಸ್ ಕೊನೆಯ ಟೆಸ್ಟ್ ಆಗಿರಲಿದೆ. ಮುಖ್ಯವಾಗಿ ಭಾರತದ ಈ ಮೂವರು ಆಟಗಾರರು ಬಾರ್ಡರ್-ಗವಾಸ್ಕರ್ ಟ್ರೋಫಿಯ ಟೆಸ್ಟ್ ಸರಣಿ ಮುಗಿದ ಬಳಿಕ ವಿದಾಯ ಹೇಳುವ ಸಾಧ್ಯತೆ ಇದೆ. ಅವರು ಯಾರು ಎಂಬುದನ್ನು ನೋಡೋಣ.

ಹೀಗೆ ಅನೇಕ ಕಾರಣಗಳಿಂದ ಉಭಯ ತಂಡಗಳಿಗೆ ಮೂರನೇ ಟೆಸ್ಟ್ ಸರಣಿ ಬಹಳ ಮುಖ್ಯವಾಗಿದೆ. ಅಂತೆಯೆ ಕೆಲ ಆಟಗಾರರಿಗೆ ಇಂಡೋ- ಆಸೀಸ್ ಕೊನೆಯ ಟೆಸ್ಟ್ ಆಗಿರಲಿದೆ. ಮುಖ್ಯವಾಗಿ ಭಾರತದ ಈ ಮೂವರು ಆಟಗಾರರು ಬಾರ್ಡರ್-ಗವಾಸ್ಕರ್ ಟ್ರೋಫಿಯ ಟೆಸ್ಟ್ ಸರಣಿ ಮುಗಿದ ಬಳಿಕ ವಿದಾಯ ಹೇಳುವ ಸಾಧ್ಯತೆ ಇದೆ. ಅವರು ಯಾರು ಎಂಬುದನ್ನು ನೋಡೋಣ.

2 / 7
ರವಿಚಂದ್ರನ್ ಅಶ್ವಿನ್: ಟೆಸ್ಟ್ ಕ್ರಿಕೆಟ್​ನಲ್ಲಿ ಆರ್. ಅಶ್ವಿನ್ ಈಗಲೂ ಒಬ್ಬ ಅಪಾಯಕಾರಿ ಸ್ಪಿನ್ನರ್ ಎಂಬುದರಲ್ಲಿ ಅನುಮಾನವಿಲ್ಲ. ಅಗತ್ಯವಿದ್ದರೆ ಬ್ಯಾಟಿಂಗ್​ನಲ್ಲೂ ಕೊಡುಗೆ ನೀಡಬಲ್ಲ ಸಾಮರ್ಥ್ಯ ಹೊಂದಿದ್ದಾರೆ. ಆದರೆ, ಅಶ್ವಿನ್​ಗೆ ಈಗ 36 ವರ್ಷ. ಅಲ್ಲದೆ ಅಶ್ವಿನ್ ಜಾಗ ತುಂಬಲು ರವೀಂದ್ರ ಜಡೇಜಾ ಮತ್ತು ಅಕ್ಷರ್ ಪಟೇಲ್ ತಂಡದಲ್ಲಿದ್ದಾರೆ.

ರವಿಚಂದ್ರನ್ ಅಶ್ವಿನ್: ಟೆಸ್ಟ್ ಕ್ರಿಕೆಟ್​ನಲ್ಲಿ ಆರ್. ಅಶ್ವಿನ್ ಈಗಲೂ ಒಬ್ಬ ಅಪಾಯಕಾರಿ ಸ್ಪಿನ್ನರ್ ಎಂಬುದರಲ್ಲಿ ಅನುಮಾನವಿಲ್ಲ. ಅಗತ್ಯವಿದ್ದರೆ ಬ್ಯಾಟಿಂಗ್​ನಲ್ಲೂ ಕೊಡುಗೆ ನೀಡಬಲ್ಲ ಸಾಮರ್ಥ್ಯ ಹೊಂದಿದ್ದಾರೆ. ಆದರೆ, ಅಶ್ವಿನ್​ಗೆ ಈಗ 36 ವರ್ಷ. ಅಲ್ಲದೆ ಅಶ್ವಿನ್ ಜಾಗ ತುಂಬಲು ರವೀಂದ್ರ ಜಡೇಜಾ ಮತ್ತು ಅಕ್ಷರ್ ಪಟೇಲ್ ತಂಡದಲ್ಲಿದ್ದಾರೆ.

3 / 7
ಅಶ್ವಿನ್ ಸ್ಪಿನ್ ಸ್ಥಾನ ತುಂಬಲು ಕುಲ್ದೀಪ್ ಯಾದವ್ ಕೂಡ ಕಾದು ಕುಳಿತಿದ್ದಾರೆ. ಹೀಗಾಗಿ ಆರ್. ಅಶ್ವಿನ್ ಈ ಟೆಸ್ಟ್ ಸರಣಿ ಮುಗಿದ ಬಳಿಕ ರೆಡ್ ಬಾಲ್ ಕ್ರಿಕೆಟ್​ನಿಂದ ಹಿಂದೆ ಸರಿಯುವ ಸಾಧ್ಯತೆ ಇದೆ.

ಅಶ್ವಿನ್ ಸ್ಪಿನ್ ಸ್ಥಾನ ತುಂಬಲು ಕುಲ್ದೀಪ್ ಯಾದವ್ ಕೂಡ ಕಾದು ಕುಳಿತಿದ್ದಾರೆ. ಹೀಗಾಗಿ ಆರ್. ಅಶ್ವಿನ್ ಈ ಟೆಸ್ಟ್ ಸರಣಿ ಮುಗಿದ ಬಳಿಕ ರೆಡ್ ಬಾಲ್ ಕ್ರಿಕೆಟ್​ನಿಂದ ಹಿಂದೆ ಸರಿಯುವ ಸಾಧ್ಯತೆ ಇದೆ.

4 / 7
ಜಯದೇವ್ ಉನಾದ್ಕಟ್: ಈ ಟೆಸ್ಟ್ ಸರಣಿ ಬಳಿಕ ಟೆಸ್ಟ್ ಕ್ರಿಕೆಟ್​ಗೆ ನಿವೃತ್ತಿ ನೀಡಬಹುದಾದ ಮೊದಲ ಆಟಗಾರ ಜಯದೇವ್ ಉನಾದ್ಕಟ್. ಟೆಸ್ಟ್ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ 10 ವರ್ಷದ ನಂತರ ಅವಕಾಶ ಪಡೆದ ಉನಾದ್ಕಟ್ ಇದುವರೆಗೆ ಆಡಿದ್ದು ಕೇವಲ ಎರಡು ಪಂದ್ಯ. ಜಸ್​ಪ್ರೀತ್ ಬುಮ್ರಾ ತಂಡಕ್ಕೆ ಮರಳಿದ ನಂತರ ಇವರು ಮತ್ತೆ ಟೀಮ್ ಇಂಡಿಯಾಕ್ಕೆ ಆಯ್ಕೆ ಆಗುವುದು ಅನುಮಾನ. ಹೀಗಾಗಿ ಭಾರತ-ಆಸೀಸ್ ಟೆಸ್ಟ್ ಬಳಿಕ ನಿವೃತ್ತಿ ಘೋಷಿಸಬಹುದು.

ಜಯದೇವ್ ಉನಾದ್ಕಟ್: ಈ ಟೆಸ್ಟ್ ಸರಣಿ ಬಳಿಕ ಟೆಸ್ಟ್ ಕ್ರಿಕೆಟ್​ಗೆ ನಿವೃತ್ತಿ ನೀಡಬಹುದಾದ ಮೊದಲ ಆಟಗಾರ ಜಯದೇವ್ ಉನಾದ್ಕಟ್. ಟೆಸ್ಟ್ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ 10 ವರ್ಷದ ನಂತರ ಅವಕಾಶ ಪಡೆದ ಉನಾದ್ಕಟ್ ಇದುವರೆಗೆ ಆಡಿದ್ದು ಕೇವಲ ಎರಡು ಪಂದ್ಯ. ಜಸ್​ಪ್ರೀತ್ ಬುಮ್ರಾ ತಂಡಕ್ಕೆ ಮರಳಿದ ನಂತರ ಇವರು ಮತ್ತೆ ಟೀಮ್ ಇಂಡಿಯಾಕ್ಕೆ ಆಯ್ಕೆ ಆಗುವುದು ಅನುಮಾನ. ಹೀಗಾಗಿ ಭಾರತ-ಆಸೀಸ್ ಟೆಸ್ಟ್ ಬಳಿಕ ನಿವೃತ್ತಿ ಘೋಷಿಸಬಹುದು.

5 / 7
ಉಮೇಶ್ ಯಾದವ್: ಭಾರತ-ಆಸ್ಟ್ರೇಲಿಯಾ ಸರಣಿ ಬಳಿಕ ಟೆಸ್ಟ್ ಕ್ರಿಕೆಟ್​ಗೆ ಗುಡ್ ಬೈ ಹೇಳಬಹುದಾದ ಮತ್ತೊಬ್ಬ ಕ್ರಿಕೆಟಿಗ ಉಮೇಶ್ ಯಾದವ್. ಕಳೆದ ವರ್ಷವೇ ಇವರನ್ನು ತಂಡದಿಂದ ಕೈಬಿಡಲಾಗಿತ್ತು. ಆದರೆ, ಕೌಂಟಿ ಚಾಂಪಿಯನ್​ಶಿಪ್​ನಲ್ಲಿ ಉತ್ತಮ ಪ್ರದರ್ಶನ ತೋರಿದ ಪರಿಣಾಮ ಪುನಃ ತಂಡಕ್ಕೆ ಆಯ್ಕೆ ಮಾಡಲಾಯಿತು.

ಉಮೇಶ್ ಯಾದವ್: ಭಾರತ-ಆಸ್ಟ್ರೇಲಿಯಾ ಸರಣಿ ಬಳಿಕ ಟೆಸ್ಟ್ ಕ್ರಿಕೆಟ್​ಗೆ ಗುಡ್ ಬೈ ಹೇಳಬಹುದಾದ ಮತ್ತೊಬ್ಬ ಕ್ರಿಕೆಟಿಗ ಉಮೇಶ್ ಯಾದವ್. ಕಳೆದ ವರ್ಷವೇ ಇವರನ್ನು ತಂಡದಿಂದ ಕೈಬಿಡಲಾಗಿತ್ತು. ಆದರೆ, ಕೌಂಟಿ ಚಾಂಪಿಯನ್​ಶಿಪ್​ನಲ್ಲಿ ಉತ್ತಮ ಪ್ರದರ್ಶನ ತೋರಿದ ಪರಿಣಾಮ ಪುನಃ ತಂಡಕ್ಕೆ ಆಯ್ಕೆ ಮಾಡಲಾಯಿತು.

6 / 7
ಟೀಮ್ ಇಂಡಿಯಾದಲ್ಲಿ ಈಗಾಗಲೇ ಮೊಹಮ್ಮದ್ ಶಮಿ, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಶಾರ್ದೂಲ್ ಥಾಕೂರ್​ರಂತಹ ವೇಗಿಗಳಿದ್ದಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಉಮೇಶ್​ಗೆ ತಂಡದಲ್ಲಿ ಸ್ಥಾನ ಸಿಗುವುದು ಅನುಮಾನ. ಇದರಿಂದ ನಿವೃತ್ತಿ ಘೋಷಿಸಬಹುದು.

ಟೀಮ್ ಇಂಡಿಯಾದಲ್ಲಿ ಈಗಾಗಲೇ ಮೊಹಮ್ಮದ್ ಶಮಿ, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಶಾರ್ದೂಲ್ ಥಾಕೂರ್​ರಂತಹ ವೇಗಿಗಳಿದ್ದಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಉಮೇಶ್​ಗೆ ತಂಡದಲ್ಲಿ ಸ್ಥಾನ ಸಿಗುವುದು ಅನುಮಾನ. ಇದರಿಂದ ನಿವೃತ್ತಿ ಘೋಷಿಸಬಹುದು.

7 / 7
Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
Follow Us
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಅಹಮದಾಬಾದ್‌ನಲ್ಲೂ ಆರ್‌ಸಿಬಿ ಅಲೆ!
ಅಹಮದಾಬಾದ್‌ನಲ್ಲೂ ಆರ್‌ಸಿಬಿ ಅಲೆ!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​