AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS Test: ಭಾರತ-ಆಸ್ಟ್ರೇಲಿಯಾ ಟೆಸ್ಟ್ ಬಳಿಕ ನೀವೃತ್ತಿ ನೀಡಲಿದ್ದಾರೆ ಭಾರತದ ಈ ಆಟಗಾರರು?

India vs Australia Test: ಅನೇಕ ಕಾರಣಗಳಿಂದ ಉಭಯ ತಂಡಗಳಿಗೆ ಮೂರನೇ ಟೆಸ್ಟ್ ಸರಣಿ ಬಹಳ ಮುಖ್ಯವಾಗಿದೆ. ಅಂತೆಯೆ ಕೆಲ ಆಟಗಾರರಿಗೆ ಇಂಡೋ- ಆಸೀಸ್ ಕೊನೆಯ ಟೆಸ್ಟ್ ಆಗಿರಲಿದೆ. ಮುಖ್ಯವಾಗಿ ಭಾರತದ ಈ ಮೂವರು ಆಟಗಾರರಿಗೆ.

Vinay Bhat
|

Updated on: Feb 28, 2023 | 7:25 AM

Share
ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟ್ರೋಫಿಯ ಟೆಸ್ಟ್ ಸರಣಿಯ ಮೂರನೇ ಟೆಸ್ಟ್ ಪಂದ್ಯ ಮಾರ್ಚ್ 1 ಬುಧವಾರದಿಂದ ಆರಂಭವಾಗಲಿದೆ. ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಈಗಾಗಲೇ ಭಾರತ 2-0 ಮುನ್ನಡೆ ಪಡೆದುಕೊಂಡು ಟ್ರೋಫಿಯನ್ನು ತನ್ನಲ್ಲೇ ಉಳಿಸಿಕೊಂಡಿದೆ. ಇನ್ನೊಂದು ಪಂದ್ಯ ಭಾರತ ಗೆದ್ದರೆ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ಗೆ ಏರಲಿದೆ.

ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟ್ರೋಫಿಯ ಟೆಸ್ಟ್ ಸರಣಿಯ ಮೂರನೇ ಟೆಸ್ಟ್ ಪಂದ್ಯ ಮಾರ್ಚ್ 1 ಬುಧವಾರದಿಂದ ಆರಂಭವಾಗಲಿದೆ. ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಈಗಾಗಲೇ ಭಾರತ 2-0 ಮುನ್ನಡೆ ಪಡೆದುಕೊಂಡು ಟ್ರೋಫಿಯನ್ನು ತನ್ನಲ್ಲೇ ಉಳಿಸಿಕೊಂಡಿದೆ. ಇನ್ನೊಂದು ಪಂದ್ಯ ಭಾರತ ಗೆದ್ದರೆ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ಗೆ ಏರಲಿದೆ.

1 / 7
ಹೀಗೆ ಅನೇಕ ಕಾರಣಗಳಿಂದ ಉಭಯ ತಂಡಗಳಿಗೆ ಮೂರನೇ ಟೆಸ್ಟ್ ಸರಣಿ ಬಹಳ ಮುಖ್ಯವಾಗಿದೆ. ಅಂತೆಯೆ ಕೆಲ ಆಟಗಾರರಿಗೆ ಇಂಡೋ- ಆಸೀಸ್ ಕೊನೆಯ ಟೆಸ್ಟ್ ಆಗಿರಲಿದೆ. ಮುಖ್ಯವಾಗಿ ಭಾರತದ ಈ ಮೂವರು ಆಟಗಾರರು ಬಾರ್ಡರ್-ಗವಾಸ್ಕರ್ ಟ್ರೋಫಿಯ ಟೆಸ್ಟ್ ಸರಣಿ ಮುಗಿದ ಬಳಿಕ ವಿದಾಯ ಹೇಳುವ ಸಾಧ್ಯತೆ ಇದೆ. ಅವರು ಯಾರು ಎಂಬುದನ್ನು ನೋಡೋಣ.

ಹೀಗೆ ಅನೇಕ ಕಾರಣಗಳಿಂದ ಉಭಯ ತಂಡಗಳಿಗೆ ಮೂರನೇ ಟೆಸ್ಟ್ ಸರಣಿ ಬಹಳ ಮುಖ್ಯವಾಗಿದೆ. ಅಂತೆಯೆ ಕೆಲ ಆಟಗಾರರಿಗೆ ಇಂಡೋ- ಆಸೀಸ್ ಕೊನೆಯ ಟೆಸ್ಟ್ ಆಗಿರಲಿದೆ. ಮುಖ್ಯವಾಗಿ ಭಾರತದ ಈ ಮೂವರು ಆಟಗಾರರು ಬಾರ್ಡರ್-ಗವಾಸ್ಕರ್ ಟ್ರೋಫಿಯ ಟೆಸ್ಟ್ ಸರಣಿ ಮುಗಿದ ಬಳಿಕ ವಿದಾಯ ಹೇಳುವ ಸಾಧ್ಯತೆ ಇದೆ. ಅವರು ಯಾರು ಎಂಬುದನ್ನು ನೋಡೋಣ.

2 / 7
ರವಿಚಂದ್ರನ್ ಅಶ್ವಿನ್: ಟೆಸ್ಟ್ ಕ್ರಿಕೆಟ್​ನಲ್ಲಿ ಆರ್. ಅಶ್ವಿನ್ ಈಗಲೂ ಒಬ್ಬ ಅಪಾಯಕಾರಿ ಸ್ಪಿನ್ನರ್ ಎಂಬುದರಲ್ಲಿ ಅನುಮಾನವಿಲ್ಲ. ಅಗತ್ಯವಿದ್ದರೆ ಬ್ಯಾಟಿಂಗ್​ನಲ್ಲೂ ಕೊಡುಗೆ ನೀಡಬಲ್ಲ ಸಾಮರ್ಥ್ಯ ಹೊಂದಿದ್ದಾರೆ. ಆದರೆ, ಅಶ್ವಿನ್​ಗೆ ಈಗ 36 ವರ್ಷ. ಅಲ್ಲದೆ ಅಶ್ವಿನ್ ಜಾಗ ತುಂಬಲು ರವೀಂದ್ರ ಜಡೇಜಾ ಮತ್ತು ಅಕ್ಷರ್ ಪಟೇಲ್ ತಂಡದಲ್ಲಿದ್ದಾರೆ.

ರವಿಚಂದ್ರನ್ ಅಶ್ವಿನ್: ಟೆಸ್ಟ್ ಕ್ರಿಕೆಟ್​ನಲ್ಲಿ ಆರ್. ಅಶ್ವಿನ್ ಈಗಲೂ ಒಬ್ಬ ಅಪಾಯಕಾರಿ ಸ್ಪಿನ್ನರ್ ಎಂಬುದರಲ್ಲಿ ಅನುಮಾನವಿಲ್ಲ. ಅಗತ್ಯವಿದ್ದರೆ ಬ್ಯಾಟಿಂಗ್​ನಲ್ಲೂ ಕೊಡುಗೆ ನೀಡಬಲ್ಲ ಸಾಮರ್ಥ್ಯ ಹೊಂದಿದ್ದಾರೆ. ಆದರೆ, ಅಶ್ವಿನ್​ಗೆ ಈಗ 36 ವರ್ಷ. ಅಲ್ಲದೆ ಅಶ್ವಿನ್ ಜಾಗ ತುಂಬಲು ರವೀಂದ್ರ ಜಡೇಜಾ ಮತ್ತು ಅಕ್ಷರ್ ಪಟೇಲ್ ತಂಡದಲ್ಲಿದ್ದಾರೆ.

3 / 7
ಅಶ್ವಿನ್ ಸ್ಪಿನ್ ಸ್ಥಾನ ತುಂಬಲು ಕುಲ್ದೀಪ್ ಯಾದವ್ ಕೂಡ ಕಾದು ಕುಳಿತಿದ್ದಾರೆ. ಹೀಗಾಗಿ ಆರ್. ಅಶ್ವಿನ್ ಈ ಟೆಸ್ಟ್ ಸರಣಿ ಮುಗಿದ ಬಳಿಕ ರೆಡ್ ಬಾಲ್ ಕ್ರಿಕೆಟ್​ನಿಂದ ಹಿಂದೆ ಸರಿಯುವ ಸಾಧ್ಯತೆ ಇದೆ.

ಅಶ್ವಿನ್ ಸ್ಪಿನ್ ಸ್ಥಾನ ತುಂಬಲು ಕುಲ್ದೀಪ್ ಯಾದವ್ ಕೂಡ ಕಾದು ಕುಳಿತಿದ್ದಾರೆ. ಹೀಗಾಗಿ ಆರ್. ಅಶ್ವಿನ್ ಈ ಟೆಸ್ಟ್ ಸರಣಿ ಮುಗಿದ ಬಳಿಕ ರೆಡ್ ಬಾಲ್ ಕ್ರಿಕೆಟ್​ನಿಂದ ಹಿಂದೆ ಸರಿಯುವ ಸಾಧ್ಯತೆ ಇದೆ.

4 / 7
ಜಯದೇವ್ ಉನಾದ್ಕಟ್: ಈ ಟೆಸ್ಟ್ ಸರಣಿ ಬಳಿಕ ಟೆಸ್ಟ್ ಕ್ರಿಕೆಟ್​ಗೆ ನಿವೃತ್ತಿ ನೀಡಬಹುದಾದ ಮೊದಲ ಆಟಗಾರ ಜಯದೇವ್ ಉನಾದ್ಕಟ್. ಟೆಸ್ಟ್ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ 10 ವರ್ಷದ ನಂತರ ಅವಕಾಶ ಪಡೆದ ಉನಾದ್ಕಟ್ ಇದುವರೆಗೆ ಆಡಿದ್ದು ಕೇವಲ ಎರಡು ಪಂದ್ಯ. ಜಸ್​ಪ್ರೀತ್ ಬುಮ್ರಾ ತಂಡಕ್ಕೆ ಮರಳಿದ ನಂತರ ಇವರು ಮತ್ತೆ ಟೀಮ್ ಇಂಡಿಯಾಕ್ಕೆ ಆಯ್ಕೆ ಆಗುವುದು ಅನುಮಾನ. ಹೀಗಾಗಿ ಭಾರತ-ಆಸೀಸ್ ಟೆಸ್ಟ್ ಬಳಿಕ ನಿವೃತ್ತಿ ಘೋಷಿಸಬಹುದು.

ಜಯದೇವ್ ಉನಾದ್ಕಟ್: ಈ ಟೆಸ್ಟ್ ಸರಣಿ ಬಳಿಕ ಟೆಸ್ಟ್ ಕ್ರಿಕೆಟ್​ಗೆ ನಿವೃತ್ತಿ ನೀಡಬಹುದಾದ ಮೊದಲ ಆಟಗಾರ ಜಯದೇವ್ ಉನಾದ್ಕಟ್. ಟೆಸ್ಟ್ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ 10 ವರ್ಷದ ನಂತರ ಅವಕಾಶ ಪಡೆದ ಉನಾದ್ಕಟ್ ಇದುವರೆಗೆ ಆಡಿದ್ದು ಕೇವಲ ಎರಡು ಪಂದ್ಯ. ಜಸ್​ಪ್ರೀತ್ ಬುಮ್ರಾ ತಂಡಕ್ಕೆ ಮರಳಿದ ನಂತರ ಇವರು ಮತ್ತೆ ಟೀಮ್ ಇಂಡಿಯಾಕ್ಕೆ ಆಯ್ಕೆ ಆಗುವುದು ಅನುಮಾನ. ಹೀಗಾಗಿ ಭಾರತ-ಆಸೀಸ್ ಟೆಸ್ಟ್ ಬಳಿಕ ನಿವೃತ್ತಿ ಘೋಷಿಸಬಹುದು.

5 / 7
ಉಮೇಶ್ ಯಾದವ್: ಭಾರತ-ಆಸ್ಟ್ರೇಲಿಯಾ ಸರಣಿ ಬಳಿಕ ಟೆಸ್ಟ್ ಕ್ರಿಕೆಟ್​ಗೆ ಗುಡ್ ಬೈ ಹೇಳಬಹುದಾದ ಮತ್ತೊಬ್ಬ ಕ್ರಿಕೆಟಿಗ ಉಮೇಶ್ ಯಾದವ್. ಕಳೆದ ವರ್ಷವೇ ಇವರನ್ನು ತಂಡದಿಂದ ಕೈಬಿಡಲಾಗಿತ್ತು. ಆದರೆ, ಕೌಂಟಿ ಚಾಂಪಿಯನ್​ಶಿಪ್​ನಲ್ಲಿ ಉತ್ತಮ ಪ್ರದರ್ಶನ ತೋರಿದ ಪರಿಣಾಮ ಪುನಃ ತಂಡಕ್ಕೆ ಆಯ್ಕೆ ಮಾಡಲಾಯಿತು.

ಉಮೇಶ್ ಯಾದವ್: ಭಾರತ-ಆಸ್ಟ್ರೇಲಿಯಾ ಸರಣಿ ಬಳಿಕ ಟೆಸ್ಟ್ ಕ್ರಿಕೆಟ್​ಗೆ ಗುಡ್ ಬೈ ಹೇಳಬಹುದಾದ ಮತ್ತೊಬ್ಬ ಕ್ರಿಕೆಟಿಗ ಉಮೇಶ್ ಯಾದವ್. ಕಳೆದ ವರ್ಷವೇ ಇವರನ್ನು ತಂಡದಿಂದ ಕೈಬಿಡಲಾಗಿತ್ತು. ಆದರೆ, ಕೌಂಟಿ ಚಾಂಪಿಯನ್​ಶಿಪ್​ನಲ್ಲಿ ಉತ್ತಮ ಪ್ರದರ್ಶನ ತೋರಿದ ಪರಿಣಾಮ ಪುನಃ ತಂಡಕ್ಕೆ ಆಯ್ಕೆ ಮಾಡಲಾಯಿತು.

6 / 7
ಟೀಮ್ ಇಂಡಿಯಾದಲ್ಲಿ ಈಗಾಗಲೇ ಮೊಹಮ್ಮದ್ ಶಮಿ, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಶಾರ್ದೂಲ್ ಥಾಕೂರ್​ರಂತಹ ವೇಗಿಗಳಿದ್ದಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಉಮೇಶ್​ಗೆ ತಂಡದಲ್ಲಿ ಸ್ಥಾನ ಸಿಗುವುದು ಅನುಮಾನ. ಇದರಿಂದ ನಿವೃತ್ತಿ ಘೋಷಿಸಬಹುದು.

ಟೀಮ್ ಇಂಡಿಯಾದಲ್ಲಿ ಈಗಾಗಲೇ ಮೊಹಮ್ಮದ್ ಶಮಿ, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಶಾರ್ದೂಲ್ ಥಾಕೂರ್​ರಂತಹ ವೇಗಿಗಳಿದ್ದಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಉಮೇಶ್​ಗೆ ತಂಡದಲ್ಲಿ ಸ್ಥಾನ ಸಿಗುವುದು ಅನುಮಾನ. ಇದರಿಂದ ನಿವೃತ್ತಿ ಘೋಷಿಸಬಹುದು.

7 / 7
‘ಬಂದೂಕ್’ ಸಿನಿಮಾದಲ್ಲಿ ಪೊಲೀಸ್ ಪಾತ್ರ ಮಾಡಿದ ನಟಿ ಶ್ವೇತಾ ಪ್ರಸಾದ್
‘ಬಂದೂಕ್’ ಸಿನಿಮಾದಲ್ಲಿ ಪೊಲೀಸ್ ಪಾತ್ರ ಮಾಡಿದ ನಟಿ ಶ್ವೇತಾ ಪ್ರಸಾದ್
ರಿಸೆಪ್ಷನಿಸ್ಟ್​​ಗೆ ಒದ್ದು, ಕೂದಲು ಎಳೆದಾಡಿದ ರೋಗಿಯ ವಿಡಿಯೋ ವೈರಲ್
ರಿಸೆಪ್ಷನಿಸ್ಟ್​​ಗೆ ಒದ್ದು, ಕೂದಲು ಎಳೆದಾಡಿದ ರೋಗಿಯ ವಿಡಿಯೋ ವೈರಲ್
ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
ಮಚ್ಚಿನೊಂದಿಗೆ ಆರೋಪಿ ನ್ಯಾಯಾಲಯ ಪ್ರವೇಶಿಸಿದ್ದು ಪೊಲೀಸರ ಕರ್ತವ್ಯಲೋಪ
ಮಚ್ಚಿನೊಂದಿಗೆ ಆರೋಪಿ ನ್ಯಾಯಾಲಯ ಪ್ರವೇಶಿಸಿದ್ದು ಪೊಲೀಸರ ಕರ್ತವ್ಯಲೋಪ
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ