AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಟೀಂ ಇಂಡಿಯಾ ಖಾತೆಗೆ ಬೇಡದ ದಾಖಲೆಗಳನ್ನು ಹಾಕಿದ ಇಂದೋರ್ ಟೆಸ್ಟ್ ಸೋಲು..!

IND vs AUS: ಈ ಪಂದ್ಯದಲ್ಲಿ ಭಾರತ ಮೊದಲು ಬ್ಯಾಟ್ ಮಾಡಿದ್ದು, ಎರಡೂವರೆ ದಿನಗಳಲ್ಲಿ ಈ ಪಂದ್ಯ ಮುಗಿದಿದೆ. 2012-13ರ ನಂತರ ತವರಿನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತಕ್ಕೆ ಇದು ಮೊದಲ ಸೋಲು.

ಪೃಥ್ವಿಶಂಕರ
|

Updated on:Mar 03, 2023 | 6:00 PM

Share
ಇಂದೋರ್‌ನಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಸರಣಿಯಲ್ಲಿ ತನ್ನ ಮೊದಲ ಸೋಲು ಅನುಭವಿಸಿದೆ. ಈ ಸೋಲು ನಿರೀಕ್ಷಿತವಾಗಿಲ್ಲದಿದ್ದರೂ, ಆಸ್ಟ್ರೇಲಿಯಾ ತನ್ನ ಅದ್ಭುತ ಆಟದ ಆಧಾರದ ಮೇಲೆ ಭಾರತವನ್ನು ಅಚ್ಚರಿಗೊಳಿಸಿತು. ಆಸ್ಟ್ರೇಲಿಯಾ ಒಂಬತ್ತು ವಿಕೆಟ್‌ಗಳಿಂದ ಗೆದ್ದು ಸರಣಿಯನ್ನು ಸಮಬಲಗೊಳಿಸುವ ಅವಕಾಶವನ್ನು ಜೀವಂತವಾಗಿರಿಸಿಕೊಂಡಿದೆ. ಈ ಸೋಲಿನೊಂದಿಗೆ ಟೀಂ ಇಂಡಿಯಾ ಕೂಡ ಕೆಲವು ಬೇಡದ ದಾಖಲೆಗಳಿಗೆ ಕೊರಳ್ಳೊಡ್ಡಿದೆ.

ಇಂದೋರ್‌ನಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಸರಣಿಯಲ್ಲಿ ತನ್ನ ಮೊದಲ ಸೋಲು ಅನುಭವಿಸಿದೆ. ಈ ಸೋಲು ನಿರೀಕ್ಷಿತವಾಗಿಲ್ಲದಿದ್ದರೂ, ಆಸ್ಟ್ರೇಲಿಯಾ ತನ್ನ ಅದ್ಭುತ ಆಟದ ಆಧಾರದ ಮೇಲೆ ಭಾರತವನ್ನು ಅಚ್ಚರಿಗೊಳಿಸಿತು. ಆಸ್ಟ್ರೇಲಿಯಾ ಒಂಬತ್ತು ವಿಕೆಟ್‌ಗಳಿಂದ ಗೆದ್ದು ಸರಣಿಯನ್ನು ಸಮಬಲಗೊಳಿಸುವ ಅವಕಾಶವನ್ನು ಜೀವಂತವಾಗಿರಿಸಿಕೊಂಡಿದೆ. ಈ ಸೋಲಿನೊಂದಿಗೆ ಟೀಂ ಇಂಡಿಯಾ ಕೂಡ ಕೆಲವು ಬೇಡದ ದಾಖಲೆಗಳಿಗೆ ಕೊರಳ್ಳೊಡ್ಡಿದೆ.

1 / 5
ಈ ಪಂದ್ಯದಲ್ಲಿ ಭಾರತ ಮೊದಲು ಬ್ಯಾಟ್ ಮಾಡಿದ್ದು, ಎರಡೂವರೆ ದಿನಗಳಲ್ಲಿ ಈ ಪಂದ್ಯ ಮುಗಿದಿದೆ. 2012-13ರ ನಂತರ ತವರಿನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತಕ್ಕೆ ಇದು ಮೊದಲ ಸೋಲು. 2012-13ರಲ್ಲಿ ಇಂಗ್ಲೆಂಡ್ ಭಾರತವನ್ನು ಸೋಲಿಸಿತ್ತು. ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ, ಇಂಗ್ಲೆಂಡ್ ವಿರುದ್ಧ ಮಂಡಿಯೂರಿತ್ತು.

ಈ ಪಂದ್ಯದಲ್ಲಿ ಭಾರತ ಮೊದಲು ಬ್ಯಾಟ್ ಮಾಡಿದ್ದು, ಎರಡೂವರೆ ದಿನಗಳಲ್ಲಿ ಈ ಪಂದ್ಯ ಮುಗಿದಿದೆ. 2012-13ರ ನಂತರ ತವರಿನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತಕ್ಕೆ ಇದು ಮೊದಲ ಸೋಲು. 2012-13ರಲ್ಲಿ ಇಂಗ್ಲೆಂಡ್ ಭಾರತವನ್ನು ಸೋಲಿಸಿತ್ತು. ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ, ಇಂಗ್ಲೆಂಡ್ ವಿರುದ್ಧ ಮಂಡಿಯೂರಿತ್ತು.

2 / 5
ಈ ಪಂದ್ಯ ಮೂರನೇ ದಿನವೇ ಮುಕ್ತಾಯಗೊಂಡಿತು. ಮೂರನೇ ದಿನವೇ ತವರಿನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಭಾರತ ಸೋಲನುಭವಿಸಿದ್ದು ಇದು ಆರನೇ ಬಾರಿ. ಇಂದೋರ್‌ಗಿಂತ ಮೊದಲು, 2016-17ರಲ್ಲಿ ಪುಣೆಯಲ್ಲಿ ಭಾರತ ಮೂರು ದಿನಗಳಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತಿತ್ತು. ಅದಕ್ಕೂ ಮೊದಲು 2007-08ರಲ್ಲಿ ಅಹಮದಾಬಾದ್‌ನಲ್ಲಿ, 2000-01ರಲ್ಲಿ ಮುಂಬೈನಲ್ಲಿ, 1999-00ರಲ್ಲಿ ಮುಂಬೈನಲ್ಲಿಯೇ ದಕ್ಷಿಣ ಆಫ್ರಿಕಾ ವಿರುದ್ಧ ಸೋತಿತ್ತು. ಮತ್ತು 1951-52 ರಲ್ಲಿ ಕಾನ್ಪುರದಲ್ಲಿ ಇಂಗ್ಲೆಂಡ್ ವಿರುದ್ಧ ಮೂರು ದಿನಗಳಲ್ಲಿ ಸೋತಿತ್ತು.

ಈ ಪಂದ್ಯ ಮೂರನೇ ದಿನವೇ ಮುಕ್ತಾಯಗೊಂಡಿತು. ಮೂರನೇ ದಿನವೇ ತವರಿನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಭಾರತ ಸೋಲನುಭವಿಸಿದ್ದು ಇದು ಆರನೇ ಬಾರಿ. ಇಂದೋರ್‌ಗಿಂತ ಮೊದಲು, 2016-17ರಲ್ಲಿ ಪುಣೆಯಲ್ಲಿ ಭಾರತ ಮೂರು ದಿನಗಳಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತಿತ್ತು. ಅದಕ್ಕೂ ಮೊದಲು 2007-08ರಲ್ಲಿ ಅಹಮದಾಬಾದ್‌ನಲ್ಲಿ, 2000-01ರಲ್ಲಿ ಮುಂಬೈನಲ್ಲಿ, 1999-00ರಲ್ಲಿ ಮುಂಬೈನಲ್ಲಿಯೇ ದಕ್ಷಿಣ ಆಫ್ರಿಕಾ ವಿರುದ್ಧ ಸೋತಿತ್ತು. ಮತ್ತು 1951-52 ರಲ್ಲಿ ಕಾನ್ಪುರದಲ್ಲಿ ಇಂಗ್ಲೆಂಡ್ ವಿರುದ್ಧ ಮೂರು ದಿನಗಳಲ್ಲಿ ಸೋತಿತ್ತು.

3 / 5
ಅಲ್ಲದೆ ಇಂದೋರ್‌ನಲ್ಲಿ ನಡೆದ ಟೆಸ್ಟ್ ಪಂದ್ಯ ಅತಿ ಕಡಿಮೆ ಚೆಂಡುಗಳಲ್ಲಿ ಮುಕ್ತಾಯಗೊಂಡಿತು. ಈ ಪಂದ್ಯ ಕೇವಲ 1135 ಎಸೆತಗಳಲ್ಲಿ ಕೊನೆಗೊಂಡಿತು. ಈ ಹಿಂದೆ 1951-52ರಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ಆಡಿದ ಟೆಸ್ಟ್ ಪಂದ್ಯ 14549 ಎಸೆತಗಳ ನಂತರ ಕೊನೆಗೊಂಡಿತ್ತು. 1983-84ರಲ್ಲಿ ಕೋಲ್ಕತ್ತಾದಲ್ಲಿ ನಡೆದ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಟೆಸ್ಟ್ ಪಂದ್ಯವು 1474 ಎಸೆತಗಳಲ್ಲಿ ಕೊನೆಗೊಂಡಿತು.

ಅಲ್ಲದೆ ಇಂದೋರ್‌ನಲ್ಲಿ ನಡೆದ ಟೆಸ್ಟ್ ಪಂದ್ಯ ಅತಿ ಕಡಿಮೆ ಚೆಂಡುಗಳಲ್ಲಿ ಮುಕ್ತಾಯಗೊಂಡಿತು. ಈ ಪಂದ್ಯ ಕೇವಲ 1135 ಎಸೆತಗಳಲ್ಲಿ ಕೊನೆಗೊಂಡಿತು. ಈ ಹಿಂದೆ 1951-52ರಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ಆಡಿದ ಟೆಸ್ಟ್ ಪಂದ್ಯ 14549 ಎಸೆತಗಳ ನಂತರ ಕೊನೆಗೊಂಡಿತ್ತು. 1983-84ರಲ್ಲಿ ಕೋಲ್ಕತ್ತಾದಲ್ಲಿ ನಡೆದ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಟೆಸ್ಟ್ ಪಂದ್ಯವು 1474 ಎಸೆತಗಳಲ್ಲಿ ಕೊನೆಗೊಂಡಿತು.

4 / 5
ಮಾರ್ಚ್ 9 ರಂದು ಅಹಮದಾಬಾದ್‌ನಲ್ಲಿ ಆರಂಭವಾಗಲಿರುವ ನಾಲ್ಕನೇ ಮತ್ತು ಕೊನೆಯ ಟೆಸ್ಟ್ ಪಂದ್ಯದ ಮೇಲೆ ಈಗ ಆಸ್ಟ್ರೇಲಿಯಾದ ಕಣ್ಣು ನೆಟ್ಟಿದೆ. ಈ ಪಂದ್ಯವನ್ನು ಆಸ್ಟ್ರೇಲಿಯಾ ಗೆದ್ದರೆ ಸರಣಿ 2-2ರಿಂದ ಸಮವಾಗಲಿದೆ. ಒಂದು ವೇಳೆ ಈ ಪಂದ್ಯ ಡ್ರಾ ಅಥವಾ ಭಾರತ ಗೆದ್ದರೆ ಆತಿಥೇಯ ತಂಡ 2-1 ಅಂತರದಲ್ಲಿ ಸರಣಿ ಕೈವಶ ಮಾಡಿಕೊಳ್ಳಲಿದೆ.

ಮಾರ್ಚ್ 9 ರಂದು ಅಹಮದಾಬಾದ್‌ನಲ್ಲಿ ಆರಂಭವಾಗಲಿರುವ ನಾಲ್ಕನೇ ಮತ್ತು ಕೊನೆಯ ಟೆಸ್ಟ್ ಪಂದ್ಯದ ಮೇಲೆ ಈಗ ಆಸ್ಟ್ರೇಲಿಯಾದ ಕಣ್ಣು ನೆಟ್ಟಿದೆ. ಈ ಪಂದ್ಯವನ್ನು ಆಸ್ಟ್ರೇಲಿಯಾ ಗೆದ್ದರೆ ಸರಣಿ 2-2ರಿಂದ ಸಮವಾಗಲಿದೆ. ಒಂದು ವೇಳೆ ಈ ಪಂದ್ಯ ಡ್ರಾ ಅಥವಾ ಭಾರತ ಗೆದ್ದರೆ ಆತಿಥೇಯ ತಂಡ 2-1 ಅಂತರದಲ್ಲಿ ಸರಣಿ ಕೈವಶ ಮಾಡಿಕೊಳ್ಳಲಿದೆ.

5 / 5

Published On - 6:00 pm, Fri, 3 March 23

ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ
ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ