AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia 3rd Test: ಭಾರತ-ಆಸ್ಟ್ರೇಲಿಯಾ ನಡುವಣ 3ನೇ ಟೆಸ್ಟ್​ಗೆ 6 ಆಟಗಾರರು ಅಲಭ್ಯ..!

India vs Australia 3rd Test: ಆಸ್ಟ್ರೇಲಿಯಾ ತಂಡದ ಆಲ್​ರೌಂಡರ್ ಆಷ್ಟನ್ ಅಗರ್ ಮೊದಲೆರಡು ಟೆಸ್ಟ್ ಪಂದ್ಯಗಳಲ್ಲಿ ಕಣಕ್ಕಿಳಿದಿರಲಿಲ್ಲ. ಇದೀಗ ಅವರು ಕೂಡ ತವರಿಗೆ ಮರಳಿದ್ದಾರೆ.

TV9 Web
| Edited By: |

Updated on: Feb 25, 2023 | 8:29 PM

Share
ಭಾರತ-ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೂರನೇ ಪಂದ್ಯವು ಮಾರ್ಚ್ 1 ರಿಂದ ಶುರುವಾಗಲಿದೆ. ಇಂದೋರ್​ನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ 6 ಆಟಗಾರರು ಅಲಭ್ಯರಾಗಿದ್ದಾರೆ ಎಂಬುದೇ ಅಚ್ಚರಿ. ಅದು ಕೂಡ ಆಸ್ಟ್ರೇಲಿಯಾ ತಂಡದ ಆಟಗಾರರು ಎಂಬುದು ಇಲ್ಲಿ ಮತ್ತೊಂದು ವಿಶೇಷ.

ಭಾರತ-ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೂರನೇ ಪಂದ್ಯವು ಮಾರ್ಚ್ 1 ರಿಂದ ಶುರುವಾಗಲಿದೆ. ಇಂದೋರ್​ನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ 6 ಆಟಗಾರರು ಅಲಭ್ಯರಾಗಿದ್ದಾರೆ ಎಂಬುದೇ ಅಚ್ಚರಿ. ಅದು ಕೂಡ ಆಸ್ಟ್ರೇಲಿಯಾ ತಂಡದ ಆಟಗಾರರು ಎಂಬುದು ಇಲ್ಲಿ ಮತ್ತೊಂದು ವಿಶೇಷ.

1 / 9
ಅಂದರೆ ದೆಹಲಿ ಟೆಸ್ಟ್ ಪಂದ್ಯದ ವೇಳೆ ತಂಡದಲ್ಲಿದ್ದ 6 ಆಟಗಾರರು ಈಗಾಗಲೇ ಆಸ್ಟ್ರೇಲಿಯಾಗೆ ಮರಳಿದ್ದಾರೆ. ಹೀಗಾಗಿ ಈ ಆಟಗಾರರು ಇಂದೋರ್​ ಟೆಸ್ಟ್​ನಲ್ಲಿ ಕಣಕ್ಕಿಳಿಯುವುದಿಲ್ಲ ಎಂಬುದು ಖಚಿತವಾಗಿದೆ. ಆ ಆಟಗಾರರು ಯಾರೆಂದರೆ...

ಅಂದರೆ ದೆಹಲಿ ಟೆಸ್ಟ್ ಪಂದ್ಯದ ವೇಳೆ ತಂಡದಲ್ಲಿದ್ದ 6 ಆಟಗಾರರು ಈಗಾಗಲೇ ಆಸ್ಟ್ರೇಲಿಯಾಗೆ ಮರಳಿದ್ದಾರೆ. ಹೀಗಾಗಿ ಈ ಆಟಗಾರರು ಇಂದೋರ್​ ಟೆಸ್ಟ್​ನಲ್ಲಿ ಕಣಕ್ಕಿಳಿಯುವುದಿಲ್ಲ ಎಂಬುದು ಖಚಿತವಾಗಿದೆ. ಆ ಆಟಗಾರರು ಯಾರೆಂದರೆ...

2 / 9
1- ಪ್ಯಾಟ್ ಕಮಿನ್ಸ್: ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಈಗಾಗಲೇ ತವರಿಗೆ ತೆರಳಿದ್ದಾರೆ. ತಾಯಿಯ ಅನಾರೋಗ್ಯದ ನಿಮಿತ್ತ ಆಸ್ಟ್ರೇಲಿಯಾಗೆ ಮರಳಿರುವ ಕಮಿನ್ಸ್ ಮರಳುವುದು ಕೂಡ ಅನುಮಾನ. ಹೀಗಾಗಿ ಮೂರನೇ ಟೆಸ್ಟ್ ಪಂದ್ಯಕ್ಕೆ ಆಸ್ಟ್ರೇಲಿಯಾ ತಂಡದ ನಾಯಕನಾಗಿ ಸ್ಟೀವ್ ಸ್ಮಿತ್ ಅವರನ್ನು ಆಯ್ಕೆ ಮಾಡಲಾಗಿದೆ.

1- ಪ್ಯಾಟ್ ಕಮಿನ್ಸ್: ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಈಗಾಗಲೇ ತವರಿಗೆ ತೆರಳಿದ್ದಾರೆ. ತಾಯಿಯ ಅನಾರೋಗ್ಯದ ನಿಮಿತ್ತ ಆಸ್ಟ್ರೇಲಿಯಾಗೆ ಮರಳಿರುವ ಕಮಿನ್ಸ್ ಮರಳುವುದು ಕೂಡ ಅನುಮಾನ. ಹೀಗಾಗಿ ಮೂರನೇ ಟೆಸ್ಟ್ ಪಂದ್ಯಕ್ಕೆ ಆಸ್ಟ್ರೇಲಿಯಾ ತಂಡದ ನಾಯಕನಾಗಿ ಸ್ಟೀವ್ ಸ್ಮಿತ್ ಅವರನ್ನು ಆಯ್ಕೆ ಮಾಡಲಾಗಿದೆ.

3 / 9
2- ಡೇವಿಡ್ ವಾರ್ನರ್: ಆಸ್ಟ್ರೇಲಿಯಾ ತಂಡದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ದೆಹಲಿ ಟೆಸ್ಟ್ ಪಂದ್ಯದ ವೇಳೆ ಮೊಣಕೈಗೆ ಗಾಯ ಮಾಡಿಕೊಂಡಿದ್ದರು. ಗಂಭೀರ ಗಾಯವಾಗಿರುವ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ವಾರ್ನರ್ ಕೂಡ ತವರಿಗೆ ಮರಳಿದ್ದಾರೆ.

2- ಡೇವಿಡ್ ವಾರ್ನರ್: ಆಸ್ಟ್ರೇಲಿಯಾ ತಂಡದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ದೆಹಲಿ ಟೆಸ್ಟ್ ಪಂದ್ಯದ ವೇಳೆ ಮೊಣಕೈಗೆ ಗಾಯ ಮಾಡಿಕೊಂಡಿದ್ದರು. ಗಂಭೀರ ಗಾಯವಾಗಿರುವ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ವಾರ್ನರ್ ಕೂಡ ತವರಿಗೆ ಮರಳಿದ್ದಾರೆ.

4 / 9
3- ಮ್ಯಾಟ್ ರೆನ್​ಶಾ: ಮೊಣಕಾಲಿನ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಮ್ಯಾಟ್ ರೆನ್​ಶಾ ಕೂಡ 3ನೇ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗುವುದು ಖಚಿತವಾಗಿದೆ.

3- ಮ್ಯಾಟ್ ರೆನ್​ಶಾ: ಮೊಣಕಾಲಿನ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಮ್ಯಾಟ್ ರೆನ್​ಶಾ ಕೂಡ 3ನೇ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗುವುದು ಖಚಿತವಾಗಿದೆ.

5 / 9
4- ಆಷ್ಟನ್ ಅಗರ್: ಆಸ್ಟ್ರೇಲಿಯಾ ತಂಡದ ಆಲ್​ರೌಂಡರ್ ಆಷ್ಟನ್ ಅಗರ್ ಮೊದಲೆರಡು ಟೆಸ್ಟ್ ಪಂದ್ಯಗಳಲ್ಲಿ ಕಣಕ್ಕಿಳಿದಿರಲಿಲ್ಲ. ಇದೀಗ ಆಸ್ಟ್ರೇಲಿಯಾದಲ್ಲಿ ದೇಶೀಯ ಕ್ರಿಕೆಟ್​ ಆಡಲು ಅಗರ್ ಕೂಡ ತಂಡವನ್ನು ತೊರೆದಿದ್ದಾರೆ.

4- ಆಷ್ಟನ್ ಅಗರ್: ಆಸ್ಟ್ರೇಲಿಯಾ ತಂಡದ ಆಲ್​ರೌಂಡರ್ ಆಷ್ಟನ್ ಅಗರ್ ಮೊದಲೆರಡು ಟೆಸ್ಟ್ ಪಂದ್ಯಗಳಲ್ಲಿ ಕಣಕ್ಕಿಳಿದಿರಲಿಲ್ಲ. ಇದೀಗ ಆಸ್ಟ್ರೇಲಿಯಾದಲ್ಲಿ ದೇಶೀಯ ಕ್ರಿಕೆಟ್​ ಆಡಲು ಅಗರ್ ಕೂಡ ತಂಡವನ್ನು ತೊರೆದಿದ್ದಾರೆ.

6 / 9
5- ಜೋಶ್ ಹ್ಯಾಝಲ್​ವುಡ್: ಪಾದದ ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಆಸ್ಟ್ರೇಲಿಯಾ ವೇಗಿ ಜೋಶ್ ಹ್ಯಾಝಲ್​ವುಡ್ ಕೂಡ ತವರಿಗೆ ಮರಳಿದ್ದಾರೆ. ಹೀಗಾಗಿ ಅವರು ಕೂಡ ಕೊನೆಯ ಎರಡು ಟೆಸ್ಟ್ ಪಂದ್ಯಗಳಲ್ಲಿ ಕಾಣಿಸಿಕೊಳ್ಳುವುದಿಲ್ಲ.

5- ಜೋಶ್ ಹ್ಯಾಝಲ್​ವುಡ್: ಪಾದದ ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಆಸ್ಟ್ರೇಲಿಯಾ ವೇಗಿ ಜೋಶ್ ಹ್ಯಾಝಲ್​ವುಡ್ ಕೂಡ ತವರಿಗೆ ಮರಳಿದ್ದಾರೆ. ಹೀಗಾಗಿ ಅವರು ಕೂಡ ಕೊನೆಯ ಎರಡು ಟೆಸ್ಟ್ ಪಂದ್ಯಗಳಲ್ಲಿ ಕಾಣಿಸಿಕೊಳ್ಳುವುದಿಲ್ಲ.

7 / 9
6- ಟಾಡ್ ಮರ್ಫಿ: ಪೆಕ್ಕೆಲುಬಿನ ನೋವಿನಿಂದ ಬಳಲುತ್ತಿರುವ ಯುವ ಸ್ಪಿನ್ನರ್ ಟಾಡ್ ಮರ್ಫಿ ಕೂಡ ಚಿಕಿತ್ಸೆಗಾಗಿ ಆಸ್ಟ್ರೇಲಿಯಾಗೆ ತೆರಳಿದ್ದಾರೆ. ಹೀಗಾಗಿ ಇಂದೋರ್ ಟೆಸ್ಟ್ ಪಂದ್ಯದಲ್ಲಿ ಮರ್ಫಿ ಕಣಕ್ಕಿಳಿಯುವುದಿಲ್ಲ.

6- ಟಾಡ್ ಮರ್ಫಿ: ಪೆಕ್ಕೆಲುಬಿನ ನೋವಿನಿಂದ ಬಳಲುತ್ತಿರುವ ಯುವ ಸ್ಪಿನ್ನರ್ ಟಾಡ್ ಮರ್ಫಿ ಕೂಡ ಚಿಕಿತ್ಸೆಗಾಗಿ ಆಸ್ಟ್ರೇಲಿಯಾಗೆ ತೆರಳಿದ್ದಾರೆ. ಹೀಗಾಗಿ ಇಂದೋರ್ ಟೆಸ್ಟ್ ಪಂದ್ಯದಲ್ಲಿ ಮರ್ಫಿ ಕಣಕ್ಕಿಳಿಯುವುದಿಲ್ಲ.

8 / 9
ಪ್ರಸ್ತುತ ಆಸ್ಟ್ರೇಲಿಯಾ ತಂಡ ಹೀಗಿದೆ: ಸ್ಟೀವ್ ಸ್ಮಿತ್ (ನಾಯಕ), ಸ್ಕಾಟ್ ಬೋಲ್ಯಾಂಡ್ , ಅಲೆಕ್ಸ್ ಕ್ಯಾರಿ , ಕ್ಯಾಮರೋನ್ ಗ್ರೀನ್ , ಪೀಟರ್ ಹ್ಯಾಂಡ್ಸ್‌ಕಾಂಬ್ , ಟ್ರಾವಿಸ್ ಹೆಡ್ , ಉಸ್ಮಾನ್ ಖ್ವಾಜಾ , ಮಾರ್ನಸ್ ಲ್ಯಾಬುಶೇನ್ , ನಾಥನ್ ಲಿಯಾನ್ , ಲ್ಯಾನ್ಸ್ ಮೋರಿಸ್, ಮಿಚೆಲ್ ಸ್ಟಾರ್ಕ್​, ಮ್ಯಾಥ್ಯೂ ಕುಹ್ನೆಮನ್

ಪ್ರಸ್ತುತ ಆಸ್ಟ್ರೇಲಿಯಾ ತಂಡ ಹೀಗಿದೆ: ಸ್ಟೀವ್ ಸ್ಮಿತ್ (ನಾಯಕ), ಸ್ಕಾಟ್ ಬೋಲ್ಯಾಂಡ್ , ಅಲೆಕ್ಸ್ ಕ್ಯಾರಿ , ಕ್ಯಾಮರೋನ್ ಗ್ರೀನ್ , ಪೀಟರ್ ಹ್ಯಾಂಡ್ಸ್‌ಕಾಂಬ್ , ಟ್ರಾವಿಸ್ ಹೆಡ್ , ಉಸ್ಮಾನ್ ಖ್ವಾಜಾ , ಮಾರ್ನಸ್ ಲ್ಯಾಬುಶೇನ್ , ನಾಥನ್ ಲಿಯಾನ್ , ಲ್ಯಾನ್ಸ್ ಮೋರಿಸ್, ಮಿಚೆಲ್ ಸ್ಟಾರ್ಕ್​, ಮ್ಯಾಥ್ಯೂ ಕುಹ್ನೆಮನ್

9 / 9
Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್