AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS Final: ಆಸೀಸ್ ತಂತ್ರದ ಮುಂದೆ ಭಾರತದ ಅನಾನುಭವಿಗಳ ಆಟ ನಡೆಯಲ್ಲಿಲ್ಲ..!

IND vs AUS Final: ಭಾರತದ ಅನುಭವಿ ಬ್ಯಾಟರ್​ಗಳನ್ನು ಬಿಟ್ಟರೆ ತಂಡದ ಮತ್ತ್ಯಾವ ಆಟಗಾರನು ಆಸೀಸ್ ದಾಳಿಯ ಮುಂದೆ ನೆಲಕಚ್ಚಿ ಆಡುವ ಉದ್ದೇಶದೊಂದಿಗೆ ಬ್ಯಾಟ್ ಬೀಸಲಿಲ್ಲ. ಹೀಗಾಗಿ ಭಾರತ ಅಲ್ಪ ರನ್​ಗಳಿಗೆ ಆಸೀಸ್ ಮುಂದೆ ಮಂಡಿಯೂರಿತು.

ಪೃಥ್ವಿಶಂಕರ
|

Updated on: Nov 19, 2023 | 8:28 PM

Share
ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ 50 ಓವರ್‌ಗಳಲ್ಲಿ ತನ್ನೆಲ್ಲ ವಿಕೆಟ್‌ ಕಳೆದುಕೊಂಡು 240 ರನ್‌ ಕಲೆಹಾಕಿತು. ಟೀಂ ಇಂಡಿಯಾ ಪರ ಕೊಹ್ಲಿ 54 ರನ್ ಮತ್ತು ಕೆಎಲ್ ರಾಹುಲ್ 66 ರನ್ ಗಳಿಸಿದರೆ, ನಾಯಕ ರೋಹಿತ್ 47 ರನ್​ಗಳ ಇನ್ನಿಂಗ್ಸ್ ಆಡಿದರು.

ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ 50 ಓವರ್‌ಗಳಲ್ಲಿ ತನ್ನೆಲ್ಲ ವಿಕೆಟ್‌ ಕಳೆದುಕೊಂಡು 240 ರನ್‌ ಕಲೆಹಾಕಿತು. ಟೀಂ ಇಂಡಿಯಾ ಪರ ಕೊಹ್ಲಿ 54 ರನ್ ಮತ್ತು ಕೆಎಲ್ ರಾಹುಲ್ 66 ರನ್ ಗಳಿಸಿದರೆ, ನಾಯಕ ರೋಹಿತ್ 47 ರನ್​ಗಳ ಇನ್ನಿಂಗ್ಸ್ ಆಡಿದರು.

1 / 8
ಈ ಮೂವರು ಅನುಭವಿ ಬ್ಯಾಟರ್​ಗಳು ಬಿಟ್ಟರೆ ತಂಡದ ಮತ್ತ್ಯಾವ ಆಟಗಾರನು ಆಸೀಸ್ ದಾಳಿಯ ಮುಂದೆ ನೆಲಕಚ್ಚಿ ಆಡುವ ಉದ್ದೇಶದೊಂದಿಗೆ ಬ್ಯಾಟ್ ಬೀಸಲಿಲ್ಲ. ಹೀಗಾಗಿ ಭಾರತ ಅಲ್ಪ ರನ್​ಗಳಿಗೆ ಆಸೀಸ್ ಮುಂದೆ ಮಂಡಿಯೂರಿತು.

ಈ ಮೂವರು ಅನುಭವಿ ಬ್ಯಾಟರ್​ಗಳು ಬಿಟ್ಟರೆ ತಂಡದ ಮತ್ತ್ಯಾವ ಆಟಗಾರನು ಆಸೀಸ್ ದಾಳಿಯ ಮುಂದೆ ನೆಲಕಚ್ಚಿ ಆಡುವ ಉದ್ದೇಶದೊಂದಿಗೆ ಬ್ಯಾಟ್ ಬೀಸಲಿಲ್ಲ. ಹೀಗಾಗಿ ಭಾರತ ಅಲ್ಪ ರನ್​ಗಳಿಗೆ ಆಸೀಸ್ ಮುಂದೆ ಮಂಡಿಯೂರಿತು.

2 / 8
ಇಡೀ ಟೂರ್ನಿಯಲ್ಲಿ ಒಂದೇ ಒಂದು ಶತಕ ಬಾರಿಸದಿದ್ದರೂ, ಕೆಲವೊಂದು ಪಂದ್ಯಗಳಲ್ಲಿ ಉಪಯುಕ್ತ ಇನ್ನಿಂಗ್ಸ್ ಆಡಿದ್ದ ಶುಭ್​ಮನ್​ ಗಿಲ್ ಅವರಿಂದ ಈ ಪಂದ್ಯದಲ್ಲಿ ಬಿಗ್ ಇನ್ನಿಂಗ್ಸ್ ಆಡುವ ನಿರೀಕ್ಷೆ ಇತ್ತು. ಏಕೆಂದರೆ ಐಪಿಎಲ್​ನಲ್ಲಿ ಗಿಲ್ ಅವರಿಗೆ ಇದು ಹೋಂ ಪಿಚ್ ಆಗಿತ್ತು.

ಇಡೀ ಟೂರ್ನಿಯಲ್ಲಿ ಒಂದೇ ಒಂದು ಶತಕ ಬಾರಿಸದಿದ್ದರೂ, ಕೆಲವೊಂದು ಪಂದ್ಯಗಳಲ್ಲಿ ಉಪಯುಕ್ತ ಇನ್ನಿಂಗ್ಸ್ ಆಡಿದ್ದ ಶುಭ್​ಮನ್​ ಗಿಲ್ ಅವರಿಂದ ಈ ಪಂದ್ಯದಲ್ಲಿ ಬಿಗ್ ಇನ್ನಿಂಗ್ಸ್ ಆಡುವ ನಿರೀಕ್ಷೆ ಇತ್ತು. ಏಕೆಂದರೆ ಐಪಿಎಲ್​ನಲ್ಲಿ ಗಿಲ್ ಅವರಿಗೆ ಇದು ಹೋಂ ಪಿಚ್ ಆಗಿತ್ತು.

3 / 8
ಆದರೆ ಶುಭ್​ಮನ್ ಗಿಲ್ ಮಾತ್ರ ಪ್ರಮುಖ ಪಂದ್ಯಗಳಲ್ಲಿ ಸುಲಭವಾಗಿ ವಿಕೆಟ್ ಕೈಚೆಲ್ಲುವ ಚಾಳಿ ಮುಂದುವರೆಸಿ ಕೇವಲ 4 ರನ್​ಗಳಿಗೆ ಬೇಡದ ಶಾಟ್ ಆಡಲು ಹೋಗಿ ವಿಕೆಟ್ ಒಪ್ಪಿಸಿದರು.

ಆದರೆ ಶುಭ್​ಮನ್ ಗಿಲ್ ಮಾತ್ರ ಪ್ರಮುಖ ಪಂದ್ಯಗಳಲ್ಲಿ ಸುಲಭವಾಗಿ ವಿಕೆಟ್ ಕೈಚೆಲ್ಲುವ ಚಾಳಿ ಮುಂದುವರೆಸಿ ಕೇವಲ 4 ರನ್​ಗಳಿಗೆ ಬೇಡದ ಶಾಟ್ ಆಡಲು ಹೋಗಿ ವಿಕೆಟ್ ಒಪ್ಪಿಸಿದರು.

4 / 8
ನಾಲ್ಕನೇ ಕ್ರಮಾಂಕದಲ್ಲಿ ಅದ್ಭುತ ಇನ್ನಿಂಗ್ಸ್​ಗಳನ್ನು ಆಡುವ ಮೂಲಕ ಭಾರತದ ಬ್ಯಾಟಿಂಗ್ ಬೆನ್ನೆಲುಬಾಗಿದ್ದ ಶ್ರೇಯಸ್ ಅಯ್ಯರ್​ಗೂ ಈ ಪಂದ್ಯದಲ್ಲಿ ಹೆಚ್ಚು ಹೊತ್ತು ಬ್ಯಾಟಿಂಗ್ ಮಾಡಲು ಸಾಧ್ಯವಾಗಲಿಲ್ಲ. ಅವರೂ ಕೂಡ 4 ರನ್​ಗಳಿಗೆ ಬ್ಯಾಟ್ ಎತ್ತಿಟ್ಟರು.

ನಾಲ್ಕನೇ ಕ್ರಮಾಂಕದಲ್ಲಿ ಅದ್ಭುತ ಇನ್ನಿಂಗ್ಸ್​ಗಳನ್ನು ಆಡುವ ಮೂಲಕ ಭಾರತದ ಬ್ಯಾಟಿಂಗ್ ಬೆನ್ನೆಲುಬಾಗಿದ್ದ ಶ್ರೇಯಸ್ ಅಯ್ಯರ್​ಗೂ ಈ ಪಂದ್ಯದಲ್ಲಿ ಹೆಚ್ಚು ಹೊತ್ತು ಬ್ಯಾಟಿಂಗ್ ಮಾಡಲು ಸಾಧ್ಯವಾಗಲಿಲ್ಲ. ಅವರೂ ಕೂಡ 4 ರನ್​ಗಳಿಗೆ ಬ್ಯಾಟ್ ಎತ್ತಿಟ್ಟರು.

5 / 8
ಇಡೀ ಟೂರ್ನಿಯಲ್ಲಿ 6ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿ ತಂಡದ ಪರ ಕೆಲವು ಪಂದ್ಯಗಳಲ್ಲಿ ಗಮನಾರ್ಹ ಕೊಡುಗೆ ನೀಡಿದ್ದ ರವೀಂದ್ರ ಜಡೇಜಾ ಕೂಡ 9 ರನ್​ಗಳಿಗೆ ಪೆವಿಲಿಯನ್ ಸೇರಿಕೊಂಡರು.

ಇಡೀ ಟೂರ್ನಿಯಲ್ಲಿ 6ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿ ತಂಡದ ಪರ ಕೆಲವು ಪಂದ್ಯಗಳಲ್ಲಿ ಗಮನಾರ್ಹ ಕೊಡುಗೆ ನೀಡಿದ್ದ ರವೀಂದ್ರ ಜಡೇಜಾ ಕೂಡ 9 ರನ್​ಗಳಿಗೆ ಪೆವಿಲಿಯನ್ ಸೇರಿಕೊಂಡರು.

6 / 8
ಹಾರ್ದಿಕ್ ಪಾಂಡ್ಯ ಇಂಜುರಿಯಿಂದ ಟೀಂ ಇಂಡಿಯಾದ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆದಿದ್ದ ಸೂರ್ಯಕುಮಾರ್ ಯಾದವ್ ಹಿಂದಿನ ಮ್ಯಾಚ್​ಗಳಲ್ಲಿ ಯಾವ ರೀತಿಯ ಪ್ರದರ್ಶನ ನೀಡಿದ್ದರೋ ಈ ಮ್ಯಾಚ್​ನಲ್ಲೂ ಅದನ್ನೇ ಮುಂದುವರೆಸಿದರು. ಕೇವಲ 18 ರನ್ ಬಾರಿಸಿ ಸೂರ್ಯ ಪೆವಿಲಿಯನ್ ಹಾದಿ ಹಿಡಿದರು.

ಹಾರ್ದಿಕ್ ಪಾಂಡ್ಯ ಇಂಜುರಿಯಿಂದ ಟೀಂ ಇಂಡಿಯಾದ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆದಿದ್ದ ಸೂರ್ಯಕುಮಾರ್ ಯಾದವ್ ಹಿಂದಿನ ಮ್ಯಾಚ್​ಗಳಲ್ಲಿ ಯಾವ ರೀತಿಯ ಪ್ರದರ್ಶನ ನೀಡಿದ್ದರೋ ಈ ಮ್ಯಾಚ್​ನಲ್ಲೂ ಅದನ್ನೇ ಮುಂದುವರೆಸಿದರು. ಕೇವಲ 18 ರನ್ ಬಾರಿಸಿ ಸೂರ್ಯ ಪೆವಿಲಿಯನ್ ಹಾದಿ ಹಿಡಿದರು.

7 / 8
ಉಳಿದಂತೆ ಟೀಂ ಇಂಡಿಯಾದ ಬಾಲಗೋಂಚಿಗಳು ಕೂಡ ಹೆಚ್ಚಿನದ್ದೇನು ಮಾಡದೆ ಆಸೀಸ್ ದಾಳಿಯ ಮುಂದೆ ಮಂಕಾಗಿ ಮಂಡಿಯೂರಿದರು. ಹೀಗಾಗಿ ಈ ಪಂದ್ಯದಲ್ಲಿ ಅನುಭವಿಗಳಿಂದ ಬಂದ ಇನ್ನಿಂಗ್ಸ್, ಯುವ ಕ್ರಿಕೆಟಿಗರಿಂದ ಬಂದಿದ್ದರೆ ಭಾರತ ಬೃಹತ್ ಸ್ಕೋರ್ ದಾಖಲಿಸಬಹುದಿತ್ತು.

ಉಳಿದಂತೆ ಟೀಂ ಇಂಡಿಯಾದ ಬಾಲಗೋಂಚಿಗಳು ಕೂಡ ಹೆಚ್ಚಿನದ್ದೇನು ಮಾಡದೆ ಆಸೀಸ್ ದಾಳಿಯ ಮುಂದೆ ಮಂಕಾಗಿ ಮಂಡಿಯೂರಿದರು. ಹೀಗಾಗಿ ಈ ಪಂದ್ಯದಲ್ಲಿ ಅನುಭವಿಗಳಿಂದ ಬಂದ ಇನ್ನಿಂಗ್ಸ್, ಯುವ ಕ್ರಿಕೆಟಿಗರಿಂದ ಬಂದಿದ್ದರೆ ಭಾರತ ಬೃಹತ್ ಸ್ಕೋರ್ ದಾಖಲಿಸಬಹುದಿತ್ತು.

8 / 8
Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ