AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jasprit Bumrah: ಜಸ್​ಪ್ರೀತ್ ಬುಮ್ರಾ ಮೈದಾನ ತೊರೆದಿದ್ದೇಕೆ? ಇಲ್ಲಿದೆ ಕಾರಣ

Jasprit Bumrah Injury Update: ಭಾರತ ತಂಡದ ಪ್ರಮುಖ ವೇಗಿ ಜಸ್​ಪ್ರೀತ್ ಬುಮ್ರಾ ಆಸ್ಟ್ರೇಲಿಯಾ ತಂಡದ ಮೊದಲ ಇನಿಂಗ್ಸ್​ನ ಮೂರನೇ ಸೆಷನ್​ನಲ್ಲಿ ಕಾಣಿಸಿಕೊಂಡಿರಲಿಲ್ಲ. ಇದಕ್ಕೆ ಮುಖ್ಯ ಕಾರಣ ಬೆನ್ನು ನೋವಿನ ಸಮಸ್ಯೆ ಎಂದು ಟೀಮ್ ಇಂಡಿಯಾ ವೇಗಿ ಪ್ರಸಿದ್ಧ್ ಕೃಷ್ಣ ತಿಳಿಸಿದ್ದಾರೆ. ಇದೇ ಕಾರಣದಿಂದಾಗಿ ಬುಮ್ರಾ ಅವರು ವೈದ್ಯಕೀಯ ಪರೀಕ್ಷೆಗೂ ಒಳಗಾಗಿದ್ದಾರೆ.

ಝಾಹಿರ್ ಯೂಸುಫ್
|

Updated on: Jan 04, 2025 | 1:24 PM

ಟೀಮ್ ಇಂಡಿಯಾ ನಾಯಕ ಜಸ್​ಪ್ರೀತ್ ಬುಮ್ರಾ ಆಸ್ಟ್ರೇಲಿಯಾ ವಿರುದ್ಧದ 5ನೇ ಟೆಸ್ಟ್ ಪಂದ್ಯದ ನಡುವೆ ಮೈದಾನ ತೊರೆದಿದ್ದರು. ಸಿಡ್ನಿಯಲ್ಲಿ ನಡೆಯುತ್ತಿರುವ ಈ ಪಂದ್ಯದ 2ನೇ ದಿನದಾಟದ ಭೋಜನಾ ವಿರಾಮದ ಬಳಿಕ ಬುಮ್ರಾ ದಿಢೀರ್ ಆಗಿ ಡ್ರೆಸ್ಸಿಂಗ್ ರೂಮ್​ಗೆ ಮರಳಿದ್ದರು.

ಟೀಮ್ ಇಂಡಿಯಾ ನಾಯಕ ಜಸ್​ಪ್ರೀತ್ ಬುಮ್ರಾ ಆಸ್ಟ್ರೇಲಿಯಾ ವಿರುದ್ಧದ 5ನೇ ಟೆಸ್ಟ್ ಪಂದ್ಯದ ನಡುವೆ ಮೈದಾನ ತೊರೆದಿದ್ದರು. ಸಿಡ್ನಿಯಲ್ಲಿ ನಡೆಯುತ್ತಿರುವ ಈ ಪಂದ್ಯದ 2ನೇ ದಿನದಾಟದ ಭೋಜನಾ ವಿರಾಮದ ಬಳಿಕ ಬುಮ್ರಾ ದಿಢೀರ್ ಆಗಿ ಡ್ರೆಸ್ಸಿಂಗ್ ರೂಮ್​ಗೆ ಮರಳಿದ್ದರು.

1 / 6
ಇದಾದ ಕೆಲವೇ ಕ್ಷಣಗಳಲ್ಲಿ ಅವರು ಟೀಮ್ ಇಂಡಿಯಾದ ವೈದ್ಯಕೀಯ ಸಿಬ್ಬಂದಿಗಳೊಂದಿಗೆ ಕಾರಿನಲ್ಲಿ ತೆರಳಿದ್ದರು. ಆದರೆ ಹೋಗಿದೆಲ್ಲಿಗೆ ಅಥವಾ ಅವರಿಗೆ ಏನಾಗಿದೆ ಎಂಬುದರ ಮಾಹಿತಿ ಮಾತ್ರ ಹೊರಬಿದ್ದಿರಲಿಲ್ಲ. ಇದೀಗ ಜಸ್​ಪ್ರೀತ್ ಬುಮ್ರಾ ಅವರಿಗೆ ಏನಾಗಿತ್ತು ಎಂಬುದರ ಸ್ಪಷ್ಟ ಮಾಹಿತಿ ಸಿಕ್ಕಿದೆ.

ಇದಾದ ಕೆಲವೇ ಕ್ಷಣಗಳಲ್ಲಿ ಅವರು ಟೀಮ್ ಇಂಡಿಯಾದ ವೈದ್ಯಕೀಯ ಸಿಬ್ಬಂದಿಗಳೊಂದಿಗೆ ಕಾರಿನಲ್ಲಿ ತೆರಳಿದ್ದರು. ಆದರೆ ಹೋಗಿದೆಲ್ಲಿಗೆ ಅಥವಾ ಅವರಿಗೆ ಏನಾಗಿದೆ ಎಂಬುದರ ಮಾಹಿತಿ ಮಾತ್ರ ಹೊರಬಿದ್ದಿರಲಿಲ್ಲ. ಇದೀಗ ಜಸ್​ಪ್ರೀತ್ ಬುಮ್ರಾ ಅವರಿಗೆ ಏನಾಗಿತ್ತು ಎಂಬುದರ ಸ್ಪಷ್ಟ ಮಾಹಿತಿ ಸಿಕ್ಕಿದೆ.

2 / 6
ಭೋಜನಾ ವಿರಾಮದ ಬಳಿಕ ಓವರ್​ ಎಸೆದ ಜಸ್​ಪ್ರೀತ್ ಬುಮ್ರಾ ಬೆನ್ನು ನೋವಿನ ಸಮಸ್ಯೆಗೆ ಒಳಗಾಗಿದ್ದಾರೆ. ಅವರ ಬೆನ್ನಿನ ಸ್ನಾಯುವಿನಲ್ಲಿ ಸೆಳೆತ ಉಂಟಾಗಿದ್ದು, ಹೀಗಾಗಿ ಮುನ್ನೆಚ್ಚರಿಕೆಯ ಸಲುವಾಗಿ ಅವರು ಮೈದಾನದಿಂದ ಹೊರ ನಡೆದಿದ್ದಾರೆ. ಅದಕ್ಕೂ ಮುನ್ನ ವಿರಾಟ್ ಕೊಹ್ಲಿಗೆ ನಾಯಕತ್ವ ವಹಿಸಿಕೊಳ್ಳುವಂತೆ ತಿಳಿಸಿದ್ದಾರೆ.

ಭೋಜನಾ ವಿರಾಮದ ಬಳಿಕ ಓವರ್​ ಎಸೆದ ಜಸ್​ಪ್ರೀತ್ ಬುಮ್ರಾ ಬೆನ್ನು ನೋವಿನ ಸಮಸ್ಯೆಗೆ ಒಳಗಾಗಿದ್ದಾರೆ. ಅವರ ಬೆನ್ನಿನ ಸ್ನಾಯುವಿನಲ್ಲಿ ಸೆಳೆತ ಉಂಟಾಗಿದ್ದು, ಹೀಗಾಗಿ ಮುನ್ನೆಚ್ಚರಿಕೆಯ ಸಲುವಾಗಿ ಅವರು ಮೈದಾನದಿಂದ ಹೊರ ನಡೆದಿದ್ದಾರೆ. ಅದಕ್ಕೂ ಮುನ್ನ ವಿರಾಟ್ ಕೊಹ್ಲಿಗೆ ನಾಯಕತ್ವ ವಹಿಸಿಕೊಳ್ಳುವಂತೆ ತಿಳಿಸಿದ್ದಾರೆ.

3 / 6
ಇನ್ನು ಡ್ರೆಸ್ಸಿಂಗ್ ರೂಮ್​ಗೆ ತೆರಳಿದ ಬಳಿಕ ಜಸ್​ಪ್ರೀತ್ ಬುಮ್ರಾ ಅವರನ್ನು ಫಿಸಿಯೋ ಪರೀಕ್ಷಿಸಿದ್ದಾರೆ. ಅಲ್ಲದೆ ಸ್ಕ್ಯಾನಿಂಗ್​ಗಾಗಿ ಸಿಡ್ನಿಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಇದೀಗ ಆಸ್ಪತ್ರೆಯಿಂದ ಜಸ್​ಪ್ರೀತ್ ಬುಮ್ರಾ ಮರಳಿದ್ದು, ವೈದ್ಯಕೀಯ ತಂಡವು ಅವರನ್ನು ಮೇಲ್ವಿಚಾರಣೆ ಮಾಡುತ್ತಿದೆ.

ಇನ್ನು ಡ್ರೆಸ್ಸಿಂಗ್ ರೂಮ್​ಗೆ ತೆರಳಿದ ಬಳಿಕ ಜಸ್​ಪ್ರೀತ್ ಬುಮ್ರಾ ಅವರನ್ನು ಫಿಸಿಯೋ ಪರೀಕ್ಷಿಸಿದ್ದಾರೆ. ಅಲ್ಲದೆ ಸ್ಕ್ಯಾನಿಂಗ್​ಗಾಗಿ ಸಿಡ್ನಿಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಇದೀಗ ಆಸ್ಪತ್ರೆಯಿಂದ ಜಸ್​ಪ್ರೀತ್ ಬುಮ್ರಾ ಮರಳಿದ್ದು, ವೈದ್ಯಕೀಯ ತಂಡವು ಅವರನ್ನು ಮೇಲ್ವಿಚಾರಣೆ ಮಾಡುತ್ತಿದೆ.

4 / 6
ಜಸ್​ಪ್ರೀತ್ ಬುಮ್ರಾ ಅವರ ಸ್ಕ್ಯಾನಿಂಗ್ ರಿಪೋರ್ಟ್ ಇನ್ನಷ್ಟೇ ಬರಬೇಕಿದ್ದು, ಹೀಗಾಗಿ ಅವರು ಮೂರನೇ ದಿನದಾಟದಲ್ಲಿ ಕಣಕ್ಕಿಳಿಯಲಿದ್ದಾರಾ ಎಂಬುದೇ ಪ್ರಶ್ನೆ. ಅದರಲ್ಲೂ ಕೊನೆಯ ಇನಿಂಗ್ಸ್​ ವೇಳೆ ಜಸ್​ಪ್ರೀತ್ ಬುಮ್ರಾ ಅಲಭ್ಯರಾದರೆ ಅದು ಟೀಮ್ ಇಂಡಿಯಾ ಪಾಲಿಗೆ ಹಿನ್ನಡೆಯಾಗುವುದರಲ್ಲಿ ಅನುಮಾನವೇ ಇಲ್ಲ.

ಜಸ್​ಪ್ರೀತ್ ಬುಮ್ರಾ ಅವರ ಸ್ಕ್ಯಾನಿಂಗ್ ರಿಪೋರ್ಟ್ ಇನ್ನಷ್ಟೇ ಬರಬೇಕಿದ್ದು, ಹೀಗಾಗಿ ಅವರು ಮೂರನೇ ದಿನದಾಟದಲ್ಲಿ ಕಣಕ್ಕಿಳಿಯಲಿದ್ದಾರಾ ಎಂಬುದೇ ಪ್ರಶ್ನೆ. ಅದರಲ್ಲೂ ಕೊನೆಯ ಇನಿಂಗ್ಸ್​ ವೇಳೆ ಜಸ್​ಪ್ರೀತ್ ಬುಮ್ರಾ ಅಲಭ್ಯರಾದರೆ ಅದು ಟೀಮ್ ಇಂಡಿಯಾ ಪಾಲಿಗೆ ಹಿನ್ನಡೆಯಾಗುವುದರಲ್ಲಿ ಅನುಮಾನವೇ ಇಲ್ಲ.

5 / 6

ಏಕೆಂದರೆ ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ 185 ರನ್​ಗಳಿಗೆ ಆಲೌಟ್ ಆದರೆ, ಆಸ್ಟ್ರೇಲಿಯಾ 181 ರನ್​ಗಳಿಗೆ ಸರ್ವಪತನ ಕಂಡಿದೆ. ಇದೀಗ ದ್ವಿತೀಯ ಇನಿಂಗ್ಸ್ ಆರಂಭಿಸಿರುವ ಟೀಮ್ ಇಂಡಿಯಾ 2ನೇ ದಿನದಾಟದ ಅಂತ್ಯಕ್ಕೆ 6 ವಿಕೆಟ್ ಕಳೆದುಕೊಂಡು 141 ರನ್ ಕಲೆಹಾಕಿದೆ. ಇನ್ನು ಈ ಪಂದ್ಯದಲ್ಲಿ ಭಾರತ ತಂಡ ಗೆಲ್ಲಬೇಕಿದ್ದರೆ ಟೀಮ್ ಇಂಡಿಯಾ ಪರ ಜಸ್​ಪ್ರೀತ್ ಬುಮ್ರಾ ಬೌಲಿಂಗ್ ಮಾಡುವುದು ಅನಿವಾರ್ಯ ಎನ್ನಬಹುದು.

ಏಕೆಂದರೆ ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ 185 ರನ್​ಗಳಿಗೆ ಆಲೌಟ್ ಆದರೆ, ಆಸ್ಟ್ರೇಲಿಯಾ 181 ರನ್​ಗಳಿಗೆ ಸರ್ವಪತನ ಕಂಡಿದೆ. ಇದೀಗ ದ್ವಿತೀಯ ಇನಿಂಗ್ಸ್ ಆರಂಭಿಸಿರುವ ಟೀಮ್ ಇಂಡಿಯಾ 2ನೇ ದಿನದಾಟದ ಅಂತ್ಯಕ್ಕೆ 6 ವಿಕೆಟ್ ಕಳೆದುಕೊಂಡು 141 ರನ್ ಕಲೆಹಾಕಿದೆ. ಇನ್ನು ಈ ಪಂದ್ಯದಲ್ಲಿ ಭಾರತ ತಂಡ ಗೆಲ್ಲಬೇಕಿದ್ದರೆ ಟೀಮ್ ಇಂಡಿಯಾ ಪರ ಜಸ್​ಪ್ರೀತ್ ಬುಮ್ರಾ ಬೌಲಿಂಗ್ ಮಾಡುವುದು ಅನಿವಾರ್ಯ ಎನ್ನಬಹುದು.

6 / 6
Follow us
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ