AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಬರೋಬ್ಬರಿ 10 ವರ್ಷಗಳ ಬಳಿಕ ಭಾರತ ಏಕದಿನ ತಂಡಕ್ಕೆ ಎಂಟ್ರಿಕೊಟ್ಟ ರಣಜಿ ಹೀರೋ..!

IND vs AUS: ಟೀಂ ಇಂಡಿಯಾ ಆಯ್ಕೆ ಮಾಡಿರುವ ತಂಡದಲ್ಲಿರುವ ಏಕೈಕ ಎಡಗೈ ವೇಗದ ಬೌಲರ್ ಆಗಿರುವುದರಿಂದ ಉನದ್ಕಟ್ ಆಗಮನ ತಂಡದಲ್ಲಿ ಬದಲಾವಣೆ ತರಲಿದೆ.

ಪೃಥ್ವಿಶಂಕರ
|

Updated on:Feb 20, 2023 | 11:56 AM

Share
ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಹಿರಿಯ ಆಯ್ಕೆ ಸಮಿತಿಯು ಭಾನುವಾರ ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿಗೆ ತಂಡವನ್ನು ಪ್ರಕಟಿಸಿದೆ. ಈ ಸರಣಿಗೆ ಆಯ್ಕೆಯಾಗಿರುವ ಒಂದು ಆಶ್ಚರ್ಯಕರ ಹೆಸರೆಂದರೆ ಅದು ಜಯದೇವ್ ಉನದ್ಕಟ್.

ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಹಿರಿಯ ಆಯ್ಕೆ ಸಮಿತಿಯು ಭಾನುವಾರ ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿಗೆ ತಂಡವನ್ನು ಪ್ರಕಟಿಸಿದೆ. ಈ ಸರಣಿಗೆ ಆಯ್ಕೆಯಾಗಿರುವ ಒಂದು ಆಶ್ಚರ್ಯಕರ ಹೆಸರೆಂದರೆ ಅದು ಜಯದೇವ್ ಉನದ್ಕಟ್.

1 / 5
ಟೀಂ ಇಂಡಿಯಾ ವೇಗಿ ಉನದ್ಕಟ್ ಬರೋಬ್ಬರಿ 10 ವರ್ಷಗಳ ನಂತರ ಭಾರತ ಏಕದಿನ ತಂಡಕ್ಕೆ ಮರಳಿದ್ದಾರೆ. ತಮ್ಮ ಕೊನೆಯ ಏಕದಿನ ಪಂದ್ಯವನ್ನು 21 ನವೆಂಬರ್ 2013 ರಂದು ವೆಸ್ಟ್ ಇಂಡೀಸ್ ವಿರುದ್ಧ ಕೊಚ್ಚಿಯಲ್ಲಿ ಆಡಿದ್ದ ಉನದ್ಕಟ್, ಆ ಬಳಿಕ ತಂಡದಿಂದ ಹೊರಗಿದ್ದರು.

ಟೀಂ ಇಂಡಿಯಾ ವೇಗಿ ಉನದ್ಕಟ್ ಬರೋಬ್ಬರಿ 10 ವರ್ಷಗಳ ನಂತರ ಭಾರತ ಏಕದಿನ ತಂಡಕ್ಕೆ ಮರಳಿದ್ದಾರೆ. ತಮ್ಮ ಕೊನೆಯ ಏಕದಿನ ಪಂದ್ಯವನ್ನು 21 ನವೆಂಬರ್ 2013 ರಂದು ವೆಸ್ಟ್ ಇಂಡೀಸ್ ವಿರುದ್ಧ ಕೊಚ್ಚಿಯಲ್ಲಿ ಆಡಿದ್ದ ಉನದ್ಕಟ್, ಆ ಬಳಿಕ ತಂಡದಿಂದ ಹೊರಗಿದ್ದರು.

2 / 5
ಈ ನಡುವೆ ದೇಶೀಯ ಕ್ರಿಕೆಟ್‌ನಲ್ಲಿ ಸ್ಥಿರ ಪ್ರದರ್ಶನವನ್ನು ತೋರಿಸಿದ್ದರಿಂದ ಉನದ್ಕಟ್​ರನ್ನು ಮತ್ತೆ ಏಕದಿನ ತಂಡಕ್ಕೆ ಆಯ್ಕೆ ಮಾಡಲಾಗಿದೆ. ಅಲ್ಲದೆ ಉನದ್ಕಟ್ ತಮ್ಮ ನಾಯಕತ್ವದಲ್ಲಿ ಸೌರಾಷ್ಟ್ರ ತಂಡವವನ್ನು ಎರಡನೇ ಬಾರಿಗೆ ರಣಜಿ ಟ್ರೋಫಿ ಚಾಂಪಿಯನ್ ಮಾಡಿದರು. ಇದು ಕೂಡ ಅವರ ಆಯ್ಕೆಗೆ ನೆರವಾಗಿದೆ.

ಈ ನಡುವೆ ದೇಶೀಯ ಕ್ರಿಕೆಟ್‌ನಲ್ಲಿ ಸ್ಥಿರ ಪ್ರದರ್ಶನವನ್ನು ತೋರಿಸಿದ್ದರಿಂದ ಉನದ್ಕಟ್​ರನ್ನು ಮತ್ತೆ ಏಕದಿನ ತಂಡಕ್ಕೆ ಆಯ್ಕೆ ಮಾಡಲಾಗಿದೆ. ಅಲ್ಲದೆ ಉನದ್ಕಟ್ ತಮ್ಮ ನಾಯಕತ್ವದಲ್ಲಿ ಸೌರಾಷ್ಟ್ರ ತಂಡವವನ್ನು ಎರಡನೇ ಬಾರಿಗೆ ರಣಜಿ ಟ್ರೋಫಿ ಚಾಂಪಿಯನ್ ಮಾಡಿದರು. ಇದು ಕೂಡ ಅವರ ಆಯ್ಕೆಗೆ ನೆರವಾಗಿದೆ.

3 / 5
ಉನದ್ಕಟ್ ಈ ವರ್ಷ ಆಡಿದ ರಣಜಿ ಫೈನಲ್‌ನಲ್ಲಿ ಒಟ್ಟು ಒಂಬತ್ತು ವಿಕೆಟ್ ಪಡೆದರು. ಸೀಮಿತ ಓವರ್‌ಗಳಿಗೆ ಸಂಬಂಧಿಸಿದಂತೆ, ಈ ಎಡಗೈ ಬೌಲರ್ ಈ ವರ್ಷ 50 ಓವರ್‌ಗಳ ಪಂದ್ಯಾವಳಿಯ ವಿಜಯ್ ಹಜಾರೆ ಟ್ರೋಫಿಯಲ್ಲಿ 10 ಪಂದ್ಯಗಳಲ್ಲಿ 19 ವಿಕೆಟ್‌ಗಳನ್ನು ಪಡೆದಿದ್ದಾರೆ. ಈ ಮೂಲಕ ಈ ಸರಣಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ. ಅಲ್ಲದೆ ಅವರ ನಾಯಕತ್ವದಲ್ಲಿ ಸೌರಾಷ್ಟ್ರ ತಂಡ ಈ ವರ್ಷ ವಿಜಯ್ ಹಜಾರೆ ಟ್ರೋಫಿ ಪ್ರಶಸ್ತಿಯನ್ನೂ ಗೆದ್ದುಕೊಂಡಿತು.

ಉನದ್ಕಟ್ ಈ ವರ್ಷ ಆಡಿದ ರಣಜಿ ಫೈನಲ್‌ನಲ್ಲಿ ಒಟ್ಟು ಒಂಬತ್ತು ವಿಕೆಟ್ ಪಡೆದರು. ಸೀಮಿತ ಓವರ್‌ಗಳಿಗೆ ಸಂಬಂಧಿಸಿದಂತೆ, ಈ ಎಡಗೈ ಬೌಲರ್ ಈ ವರ್ಷ 50 ಓವರ್‌ಗಳ ಪಂದ್ಯಾವಳಿಯ ವಿಜಯ್ ಹಜಾರೆ ಟ್ರೋಫಿಯಲ್ಲಿ 10 ಪಂದ್ಯಗಳಲ್ಲಿ 19 ವಿಕೆಟ್‌ಗಳನ್ನು ಪಡೆದಿದ್ದಾರೆ. ಈ ಮೂಲಕ ಈ ಸರಣಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ. ಅಲ್ಲದೆ ಅವರ ನಾಯಕತ್ವದಲ್ಲಿ ಸೌರಾಷ್ಟ್ರ ತಂಡ ಈ ವರ್ಷ ವಿಜಯ್ ಹಜಾರೆ ಟ್ರೋಫಿ ಪ್ರಶಸ್ತಿಯನ್ನೂ ಗೆದ್ದುಕೊಂಡಿತು.

4 / 5
ಟೀಂ ಇಂಡಿಯಾ ಆಯ್ಕೆ ಮಾಡಿರುವ ತಂಡದಲ್ಲಿರುವ ಏಕೈಕ ಎಡಗೈ ವೇಗದ ಬೌಲರ್ ಆಗಿರುವುದರಿಂದ ಉನದ್ಕಟ್ ಆಗಮನ ತಂಡದಲ್ಲಿ ಬದಲಾವಣೆ ತರಲಿದೆ. ಇಂತಹ ಪರಿಸ್ಥಿತಿಯಲ್ಲಿ ಪ್ಲೇಯಿಂಗ್-11ರಲ್ಲಿ ಅವಕಾಶ ಸಿಕ್ಕರೆ ಈ ತಂಡ ಸಂಯೋಜನೆಯಲ್ಲಿ ವೈವಿಧ್ಯತೆ ತರಲಿದೆ. ಉನದ್ಕಟ್ ಭಾರತದ ಪರ ಇದುವರೆಗೆ ಏಳು ಏಕದಿನ ಪಂದ್ಯಗಳನ್ನು ಆಡಿದ್ದು, ಇದರಲ್ಲಿ ಎಂಟು ವಿಕೆಟ್‌ಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಟೀಂ ಇಂಡಿಯಾ ಆಯ್ಕೆ ಮಾಡಿರುವ ತಂಡದಲ್ಲಿರುವ ಏಕೈಕ ಎಡಗೈ ವೇಗದ ಬೌಲರ್ ಆಗಿರುವುದರಿಂದ ಉನದ್ಕಟ್ ಆಗಮನ ತಂಡದಲ್ಲಿ ಬದಲಾವಣೆ ತರಲಿದೆ. ಇಂತಹ ಪರಿಸ್ಥಿತಿಯಲ್ಲಿ ಪ್ಲೇಯಿಂಗ್-11ರಲ್ಲಿ ಅವಕಾಶ ಸಿಕ್ಕರೆ ಈ ತಂಡ ಸಂಯೋಜನೆಯಲ್ಲಿ ವೈವಿಧ್ಯತೆ ತರಲಿದೆ. ಉನದ್ಕಟ್ ಭಾರತದ ಪರ ಇದುವರೆಗೆ ಏಳು ಏಕದಿನ ಪಂದ್ಯಗಳನ್ನು ಆಡಿದ್ದು, ಇದರಲ್ಲಿ ಎಂಟು ವಿಕೆಟ್‌ಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

5 / 5

Published On - 11:56 am, Mon, 20 February 23

pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ