Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಬರೋಬ್ಬರಿ 10 ವರ್ಷಗಳ ಬಳಿಕ ಭಾರತ ಏಕದಿನ ತಂಡಕ್ಕೆ ಎಂಟ್ರಿಕೊಟ್ಟ ರಣಜಿ ಹೀರೋ..!

IND vs AUS: ಟೀಂ ಇಂಡಿಯಾ ಆಯ್ಕೆ ಮಾಡಿರುವ ತಂಡದಲ್ಲಿರುವ ಏಕೈಕ ಎಡಗೈ ವೇಗದ ಬೌಲರ್ ಆಗಿರುವುದರಿಂದ ಉನದ್ಕಟ್ ಆಗಮನ ತಂಡದಲ್ಲಿ ಬದಲಾವಣೆ ತರಲಿದೆ.

ಪೃಥ್ವಿಶಂಕರ
|

Updated on:Feb 20, 2023 | 11:56 AM

ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಹಿರಿಯ ಆಯ್ಕೆ ಸಮಿತಿಯು ಭಾನುವಾರ ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿಗೆ ತಂಡವನ್ನು ಪ್ರಕಟಿಸಿದೆ. ಈ ಸರಣಿಗೆ ಆಯ್ಕೆಯಾಗಿರುವ ಒಂದು ಆಶ್ಚರ್ಯಕರ ಹೆಸರೆಂದರೆ ಅದು ಜಯದೇವ್ ಉನದ್ಕಟ್.

ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಹಿರಿಯ ಆಯ್ಕೆ ಸಮಿತಿಯು ಭಾನುವಾರ ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿಗೆ ತಂಡವನ್ನು ಪ್ರಕಟಿಸಿದೆ. ಈ ಸರಣಿಗೆ ಆಯ್ಕೆಯಾಗಿರುವ ಒಂದು ಆಶ್ಚರ್ಯಕರ ಹೆಸರೆಂದರೆ ಅದು ಜಯದೇವ್ ಉನದ್ಕಟ್.

1 / 5
ಟೀಂ ಇಂಡಿಯಾ ವೇಗಿ ಉನದ್ಕಟ್ ಬರೋಬ್ಬರಿ 10 ವರ್ಷಗಳ ನಂತರ ಭಾರತ ಏಕದಿನ ತಂಡಕ್ಕೆ ಮರಳಿದ್ದಾರೆ. ತಮ್ಮ ಕೊನೆಯ ಏಕದಿನ ಪಂದ್ಯವನ್ನು 21 ನವೆಂಬರ್ 2013 ರಂದು ವೆಸ್ಟ್ ಇಂಡೀಸ್ ವಿರುದ್ಧ ಕೊಚ್ಚಿಯಲ್ಲಿ ಆಡಿದ್ದ ಉನದ್ಕಟ್, ಆ ಬಳಿಕ ತಂಡದಿಂದ ಹೊರಗಿದ್ದರು.

ಟೀಂ ಇಂಡಿಯಾ ವೇಗಿ ಉನದ್ಕಟ್ ಬರೋಬ್ಬರಿ 10 ವರ್ಷಗಳ ನಂತರ ಭಾರತ ಏಕದಿನ ತಂಡಕ್ಕೆ ಮರಳಿದ್ದಾರೆ. ತಮ್ಮ ಕೊನೆಯ ಏಕದಿನ ಪಂದ್ಯವನ್ನು 21 ನವೆಂಬರ್ 2013 ರಂದು ವೆಸ್ಟ್ ಇಂಡೀಸ್ ವಿರುದ್ಧ ಕೊಚ್ಚಿಯಲ್ಲಿ ಆಡಿದ್ದ ಉನದ್ಕಟ್, ಆ ಬಳಿಕ ತಂಡದಿಂದ ಹೊರಗಿದ್ದರು.

2 / 5
ಈ ನಡುವೆ ದೇಶೀಯ ಕ್ರಿಕೆಟ್‌ನಲ್ಲಿ ಸ್ಥಿರ ಪ್ರದರ್ಶನವನ್ನು ತೋರಿಸಿದ್ದರಿಂದ ಉನದ್ಕಟ್​ರನ್ನು ಮತ್ತೆ ಏಕದಿನ ತಂಡಕ್ಕೆ ಆಯ್ಕೆ ಮಾಡಲಾಗಿದೆ. ಅಲ್ಲದೆ ಉನದ್ಕಟ್ ತಮ್ಮ ನಾಯಕತ್ವದಲ್ಲಿ ಸೌರಾಷ್ಟ್ರ ತಂಡವವನ್ನು ಎರಡನೇ ಬಾರಿಗೆ ರಣಜಿ ಟ್ರೋಫಿ ಚಾಂಪಿಯನ್ ಮಾಡಿದರು. ಇದು ಕೂಡ ಅವರ ಆಯ್ಕೆಗೆ ನೆರವಾಗಿದೆ.

ಈ ನಡುವೆ ದೇಶೀಯ ಕ್ರಿಕೆಟ್‌ನಲ್ಲಿ ಸ್ಥಿರ ಪ್ರದರ್ಶನವನ್ನು ತೋರಿಸಿದ್ದರಿಂದ ಉನದ್ಕಟ್​ರನ್ನು ಮತ್ತೆ ಏಕದಿನ ತಂಡಕ್ಕೆ ಆಯ್ಕೆ ಮಾಡಲಾಗಿದೆ. ಅಲ್ಲದೆ ಉನದ್ಕಟ್ ತಮ್ಮ ನಾಯಕತ್ವದಲ್ಲಿ ಸೌರಾಷ್ಟ್ರ ತಂಡವವನ್ನು ಎರಡನೇ ಬಾರಿಗೆ ರಣಜಿ ಟ್ರೋಫಿ ಚಾಂಪಿಯನ್ ಮಾಡಿದರು. ಇದು ಕೂಡ ಅವರ ಆಯ್ಕೆಗೆ ನೆರವಾಗಿದೆ.

3 / 5
ಉನದ್ಕಟ್ ಈ ವರ್ಷ ಆಡಿದ ರಣಜಿ ಫೈನಲ್‌ನಲ್ಲಿ ಒಟ್ಟು ಒಂಬತ್ತು ವಿಕೆಟ್ ಪಡೆದರು. ಸೀಮಿತ ಓವರ್‌ಗಳಿಗೆ ಸಂಬಂಧಿಸಿದಂತೆ, ಈ ಎಡಗೈ ಬೌಲರ್ ಈ ವರ್ಷ 50 ಓವರ್‌ಗಳ ಪಂದ್ಯಾವಳಿಯ ವಿಜಯ್ ಹಜಾರೆ ಟ್ರೋಫಿಯಲ್ಲಿ 10 ಪಂದ್ಯಗಳಲ್ಲಿ 19 ವಿಕೆಟ್‌ಗಳನ್ನು ಪಡೆದಿದ್ದಾರೆ. ಈ ಮೂಲಕ ಈ ಸರಣಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ. ಅಲ್ಲದೆ ಅವರ ನಾಯಕತ್ವದಲ್ಲಿ ಸೌರಾಷ್ಟ್ರ ತಂಡ ಈ ವರ್ಷ ವಿಜಯ್ ಹಜಾರೆ ಟ್ರೋಫಿ ಪ್ರಶಸ್ತಿಯನ್ನೂ ಗೆದ್ದುಕೊಂಡಿತು.

ಉನದ್ಕಟ್ ಈ ವರ್ಷ ಆಡಿದ ರಣಜಿ ಫೈನಲ್‌ನಲ್ಲಿ ಒಟ್ಟು ಒಂಬತ್ತು ವಿಕೆಟ್ ಪಡೆದರು. ಸೀಮಿತ ಓವರ್‌ಗಳಿಗೆ ಸಂಬಂಧಿಸಿದಂತೆ, ಈ ಎಡಗೈ ಬೌಲರ್ ಈ ವರ್ಷ 50 ಓವರ್‌ಗಳ ಪಂದ್ಯಾವಳಿಯ ವಿಜಯ್ ಹಜಾರೆ ಟ್ರೋಫಿಯಲ್ಲಿ 10 ಪಂದ್ಯಗಳಲ್ಲಿ 19 ವಿಕೆಟ್‌ಗಳನ್ನು ಪಡೆದಿದ್ದಾರೆ. ಈ ಮೂಲಕ ಈ ಸರಣಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ. ಅಲ್ಲದೆ ಅವರ ನಾಯಕತ್ವದಲ್ಲಿ ಸೌರಾಷ್ಟ್ರ ತಂಡ ಈ ವರ್ಷ ವಿಜಯ್ ಹಜಾರೆ ಟ್ರೋಫಿ ಪ್ರಶಸ್ತಿಯನ್ನೂ ಗೆದ್ದುಕೊಂಡಿತು.

4 / 5
ಟೀಂ ಇಂಡಿಯಾ ಆಯ್ಕೆ ಮಾಡಿರುವ ತಂಡದಲ್ಲಿರುವ ಏಕೈಕ ಎಡಗೈ ವೇಗದ ಬೌಲರ್ ಆಗಿರುವುದರಿಂದ ಉನದ್ಕಟ್ ಆಗಮನ ತಂಡದಲ್ಲಿ ಬದಲಾವಣೆ ತರಲಿದೆ. ಇಂತಹ ಪರಿಸ್ಥಿತಿಯಲ್ಲಿ ಪ್ಲೇಯಿಂಗ್-11ರಲ್ಲಿ ಅವಕಾಶ ಸಿಕ್ಕರೆ ಈ ತಂಡ ಸಂಯೋಜನೆಯಲ್ಲಿ ವೈವಿಧ್ಯತೆ ತರಲಿದೆ. ಉನದ್ಕಟ್ ಭಾರತದ ಪರ ಇದುವರೆಗೆ ಏಳು ಏಕದಿನ ಪಂದ್ಯಗಳನ್ನು ಆಡಿದ್ದು, ಇದರಲ್ಲಿ ಎಂಟು ವಿಕೆಟ್‌ಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಟೀಂ ಇಂಡಿಯಾ ಆಯ್ಕೆ ಮಾಡಿರುವ ತಂಡದಲ್ಲಿರುವ ಏಕೈಕ ಎಡಗೈ ವೇಗದ ಬೌಲರ್ ಆಗಿರುವುದರಿಂದ ಉನದ್ಕಟ್ ಆಗಮನ ತಂಡದಲ್ಲಿ ಬದಲಾವಣೆ ತರಲಿದೆ. ಇಂತಹ ಪರಿಸ್ಥಿತಿಯಲ್ಲಿ ಪ್ಲೇಯಿಂಗ್-11ರಲ್ಲಿ ಅವಕಾಶ ಸಿಕ್ಕರೆ ಈ ತಂಡ ಸಂಯೋಜನೆಯಲ್ಲಿ ವೈವಿಧ್ಯತೆ ತರಲಿದೆ. ಉನದ್ಕಟ್ ಭಾರತದ ಪರ ಇದುವರೆಗೆ ಏಳು ಏಕದಿನ ಪಂದ್ಯಗಳನ್ನು ಆಡಿದ್ದು, ಇದರಲ್ಲಿ ಎಂಟು ವಿಕೆಟ್‌ಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

5 / 5

Published On - 11:56 am, Mon, 20 February 23

Follow us
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ