AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಲ್​ಗೆ ಬಿಗ್ ಶಾಕ್; ಉಪನಾಯಕತ್ವ ಕಿತ್ತುಕೊಂಡ ಬಿಸಿಸಿಐ! ರೋಹಿತ್- ದ್ರಾವಿಡ್ ಹೇಳಿದ್ದೇನು ಗೊತ್ತಾ?

KL Rahul: ಇದೀಗ ಪ್ರಕಟವಾಗಿರುವ ತಂಡದಲ್ಲಿ ರಾಹುಲ್ ಹೆಸರಿನ ಮುಂದೆ ಉಪನಾಯಕ ಎಂಬ ಪದ ಮರೆಯಾಗಿದೆ. ಹೀಗಿರುವಾಗ ಅವರ ಪ್ರದರ್ಶನ ಸುಧಾರಿಸದಿದ್ದರೆ ಅವರನ್ನು ತಂಡದಿಂದ ಕೂಡ ಕೈಬಿಡುವುದಾಗಿ ಬಿಸಿಸಿಐ ಅವರಿಗೆ ಸೂಚಿಸಿದೆ ಎಂದು ಹೇಳಲಾಗುತ್ತಿದೆ.

ಪೃಥ್ವಿಶಂಕರ
|

Updated on: Feb 20, 2023 | 9:41 AM

Share
ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿರುವ ಭಾರತ ತಂಡದಲ್ಲಿ ಒಬ್ಬ ಆಟಗಾರನ ಬಗ್ಗೆ ಮಾತ್ರ ನಿರಂತರವಾಗಿ ಚರ್ಚೆ ನಡೆಯುತ್ತಿದೆ. ಆ ಆಟಗಾರ ಬೇರ್ಯಾರು ಅಲ್ಲ ಕನ್ನಡಿಗ ಕೆಎಲ್ ರಾಹುಲ್. ಸತತ  ವೈಫಲ್ಯಗಳಿಂದ ಬಳಲುತ್ತಿದ್ದರೂ ರಾಹುಲ್​ಗೆ ಅವಕಾಶ ನೀಡಲಾಗುತ್ತಿದೆ. ಅಲ್ಲದೆ ಅವರನ್ನು ಟೆಸ್ಟ್ ತಂಡದ ಉಪನಾಯಕನನ್ನಾಗಿ ಮಾಡಲಾಗಿದೆ ಎಂದು ಕ್ರಿಕೆಟ್ ಪ್ರಿಯರು ಬಿಸಿಸಿಐ ಮೇಲೆ ಗರಂ ಆಗಿದ್ದರು. ರಾಹುಲ್ ಮೇಲೆ ವಿಶ್ವಾಸ ವ್ಯಕ್ತವಾಗುತ್ತಿದ್ದು, ಇದೀಗ ರಾಹುಲ್ ಸ್ಥಾನಕ್ಕೆ ಕುತ್ತು ಎದುರಾಗಿದ್ದು, ಬಿಸಿಸಿಐನ ಆಯ್ಕೆ ಸಮಿತಿ ಕೂಡ ಸನ್ನೆಗಳ ಮೂಲಕ ಎಚ್ಚರಿಕೆ ನೀಡಲು ಆರಂಭಿಸಿರುವಂತಿದೆ.

ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿರುವ ಭಾರತ ತಂಡದಲ್ಲಿ ಒಬ್ಬ ಆಟಗಾರನ ಬಗ್ಗೆ ಮಾತ್ರ ನಿರಂತರವಾಗಿ ಚರ್ಚೆ ನಡೆಯುತ್ತಿದೆ. ಆ ಆಟಗಾರ ಬೇರ್ಯಾರು ಅಲ್ಲ ಕನ್ನಡಿಗ ಕೆಎಲ್ ರಾಹುಲ್. ಸತತ ವೈಫಲ್ಯಗಳಿಂದ ಬಳಲುತ್ತಿದ್ದರೂ ರಾಹುಲ್​ಗೆ ಅವಕಾಶ ನೀಡಲಾಗುತ್ತಿದೆ. ಅಲ್ಲದೆ ಅವರನ್ನು ಟೆಸ್ಟ್ ತಂಡದ ಉಪನಾಯಕನನ್ನಾಗಿ ಮಾಡಲಾಗಿದೆ ಎಂದು ಕ್ರಿಕೆಟ್ ಪ್ರಿಯರು ಬಿಸಿಸಿಐ ಮೇಲೆ ಗರಂ ಆಗಿದ್ದರು. ರಾಹುಲ್ ಮೇಲೆ ವಿಶ್ವಾಸ ವ್ಯಕ್ತವಾಗುತ್ತಿದ್ದು, ಇದೀಗ ರಾಹುಲ್ ಸ್ಥಾನಕ್ಕೆ ಕುತ್ತು ಎದುರಾಗಿದ್ದು, ಬಿಸಿಸಿಐನ ಆಯ್ಕೆ ಸಮಿತಿ ಕೂಡ ಸನ್ನೆಗಳ ಮೂಲಕ ಎಚ್ಚರಿಕೆ ನೀಡಲು ಆರಂಭಿಸಿರುವಂತಿದೆ.

1 / 6
ಫೆಬ್ರವರಿ 19 ಭಾನುವಾರದಂದು ದೆಹಲಿ ಟೆಸ್ಟ್‌ನಲ್ಲಿ ಟೀಂ ಇಂಡಿಯಾ ಜಯಗಳಿಸಿದ ನಂತರ, ಬಿಸಿಸಿಐ ಉಳಿದ ಎರಡು ಟೆಸ್ಟ್ ಪಂದ್ಯಗಳಿಗೆ ತಂಡವನ್ನು ಪ್ರಕಟಿಸಿದೆ. ಸತತ ವೈಫಲ್ಯದ ನಡುವೆಯೂ ಕೆಎಲ್ ರಾಹುಲ್ ಅವರನ್ನು ಈ ಎರಡೂ ಪಂದ್ಯಗಳಿಗೆ ತಂಡದಲ್ಲಿ ಉಳಿಸಿಕೊಳ್ಳಲಾಗಿದೆ.

ಫೆಬ್ರವರಿ 19 ಭಾನುವಾರದಂದು ದೆಹಲಿ ಟೆಸ್ಟ್‌ನಲ್ಲಿ ಟೀಂ ಇಂಡಿಯಾ ಜಯಗಳಿಸಿದ ನಂತರ, ಬಿಸಿಸಿಐ ಉಳಿದ ಎರಡು ಟೆಸ್ಟ್ ಪಂದ್ಯಗಳಿಗೆ ತಂಡವನ್ನು ಪ್ರಕಟಿಸಿದೆ. ಸತತ ವೈಫಲ್ಯದ ನಡುವೆಯೂ ಕೆಎಲ್ ರಾಹುಲ್ ಅವರನ್ನು ಈ ಎರಡೂ ಪಂದ್ಯಗಳಿಗೆ ತಂಡದಲ್ಲಿ ಉಳಿಸಿಕೊಳ್ಳಲಾಗಿದೆ.

2 / 6
ಹೀಗಾಗಿ ಟೀಂ ಇಂಡಿಯಾ ಅಭಿಮಾನಿಗಳು ಮತ್ತೆ ಕ್ರಿಕೆಟ್ ಪರಿಣಿತರು ಆಯ್ಕೆ ಮಂಡಳಿ ವಿರುದ್ಧ ಗರಂ ಆಗಿದ್ದಾರೆ. ಏಕೆಂದರೆ ರಾಹುಲ್ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿಲ್ಲ. ಆಡಿದ 3 ಇನ್ನಿಂಗ್ಸ್‌ಗಳಲ್ಲಿ ಕೇವಲ 38 ರನ್ ಮಾತ್ರ ಗಳಿಸಿದರು. ಇದರ ನಡುವೆಯೂ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದ್ದು, ಸದ್ಯ ಅವರಿಗೆ ಕೊಂಚ ಹೆಚ್ಚಿನ ಅವಕಾಶ ನೀಡುವತ್ತ ಟೀಂ ಮ್ಯಾನೇಜ್ ಮೆಂಟ್ ಚಿತ್ತ ಹರಿಸಿದ್ದು ಬಿಸಿಸಿಐ ತಾಳ್ಮೆಯ ಕಟ್ಟೆಯೊಡೆಯುವ ಹಂತದಲ್ಲಿದೆ ಎನ್ನಿಸುತ್ತಿದೆ.

ಹೀಗಾಗಿ ಟೀಂ ಇಂಡಿಯಾ ಅಭಿಮಾನಿಗಳು ಮತ್ತೆ ಕ್ರಿಕೆಟ್ ಪರಿಣಿತರು ಆಯ್ಕೆ ಮಂಡಳಿ ವಿರುದ್ಧ ಗರಂ ಆಗಿದ್ದಾರೆ. ಏಕೆಂದರೆ ರಾಹುಲ್ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿಲ್ಲ. ಆಡಿದ 3 ಇನ್ನಿಂಗ್ಸ್‌ಗಳಲ್ಲಿ ಕೇವಲ 38 ರನ್ ಮಾತ್ರ ಗಳಿಸಿದರು. ಇದರ ನಡುವೆಯೂ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದ್ದು, ಸದ್ಯ ಅವರಿಗೆ ಕೊಂಚ ಹೆಚ್ಚಿನ ಅವಕಾಶ ನೀಡುವತ್ತ ಟೀಂ ಮ್ಯಾನೇಜ್ ಮೆಂಟ್ ಚಿತ್ತ ಹರಿಸಿದ್ದು ಬಿಸಿಸಿಐ ತಾಳ್ಮೆಯ ಕಟ್ಟೆಯೊಡೆಯುವ ಹಂತದಲ್ಲಿದೆ ಎನ್ನಿಸುತ್ತಿದೆ.

3 / 6
ಏಕೆಂದರೆ ಈ ಬಾರಿ ತಂಡವನ್ನು ಪ್ರಕಟಿಸುವುದರೊಂದಿಗೆ ಮಂಡಳಿಯು ಯಾರನ್ನೂ ಉಪನಾಯಕರನ್ನಾಗಿ ಮಾಡಿಲ್ಲ. ಮೊದಲ ಎರಡು ಪಂದ್ಯಗಳಿಗೆ ತಂಡವನ್ನು ಪ್ರಕಟಿಸುವಾಗ ರಾಹುಲ್ ಅವರನ್ನು ಉಪನಾಯಕರನ್ನಾಗಿ ನೇಮಿಸಲಾಗಿತ್ತು. ಬಿಸಿಸಿಐ ಪತ್ರಿಕಾ ಪ್ರಕಟಣೆಯಲ್ಲಿ ಅವರ ಹೆಸರಿನ ಮುಂದೆ ಉಪನಾಯಕ ಎಂದು ಬರೆಯಲಾಗಿತ್ತು. ಆದರೆ ಇದೀಗ ಪ್ರಕಟವಾಗಿರುವ ತಂಡದಲ್ಲಿ ರಾಹುಲ್ ಹೆಸರಿನ ಮುಂದೆ ಉಪನಾಯಕ ಎಂಬ ಪದ ಮರೆಯಾಗಿದೆ. ಹೀಗಿರುವಾಗ ಅವರ ಪ್ರದರ್ಶನ ಸುಧಾರಿಸದಿದ್ದರೆ ಅವರನ್ನು ತಂಡದಿಂದ ಕೂಡ ಕೈಬಿಡುವುದಾಗಿ ಬಿಸಿಸಿಐ ಅವರಿಗೆ ಸೂಚಿಸಿದೆ ಎಂದು ಹೇಳಲಾಗುತ್ತಿದೆ.

ಏಕೆಂದರೆ ಈ ಬಾರಿ ತಂಡವನ್ನು ಪ್ರಕಟಿಸುವುದರೊಂದಿಗೆ ಮಂಡಳಿಯು ಯಾರನ್ನೂ ಉಪನಾಯಕರನ್ನಾಗಿ ಮಾಡಿಲ್ಲ. ಮೊದಲ ಎರಡು ಪಂದ್ಯಗಳಿಗೆ ತಂಡವನ್ನು ಪ್ರಕಟಿಸುವಾಗ ರಾಹುಲ್ ಅವರನ್ನು ಉಪನಾಯಕರನ್ನಾಗಿ ನೇಮಿಸಲಾಗಿತ್ತು. ಬಿಸಿಸಿಐ ಪತ್ರಿಕಾ ಪ್ರಕಟಣೆಯಲ್ಲಿ ಅವರ ಹೆಸರಿನ ಮುಂದೆ ಉಪನಾಯಕ ಎಂದು ಬರೆಯಲಾಗಿತ್ತು. ಆದರೆ ಇದೀಗ ಪ್ರಕಟವಾಗಿರುವ ತಂಡದಲ್ಲಿ ರಾಹುಲ್ ಹೆಸರಿನ ಮುಂದೆ ಉಪನಾಯಕ ಎಂಬ ಪದ ಮರೆಯಾಗಿದೆ. ಹೀಗಿರುವಾಗ ಅವರ ಪ್ರದರ್ಶನ ಸುಧಾರಿಸದಿದ್ದರೆ ಅವರನ್ನು ತಂಡದಿಂದ ಕೂಡ ಕೈಬಿಡುವುದಾಗಿ ಬಿಸಿಸಿಐ ಅವರಿಗೆ ಸೂಚಿಸಿದೆ ಎಂದು ಹೇಳಲಾಗುತ್ತಿದೆ.

4 / 6
ದೆಹಲಿ ಟೆಸ್ಟ್‌ನ ಎರಡನೇ ಇನ್ನಿಂಗ್ಸ್‌ನಲ್ಲಿ ರಾಹುಲ್ ಕೇವಲ ಒಂದು ರನ್ ಗಳಿಸಲು ಸಾಧ್ಯವಾಯಿತು. ಆದರೆ, ಟೀಮ್ ಮ್ಯಾನೇಜ್‌ಮೆಂಟ್ ಸದ್ಯ ಅವರ ಮೇಲೆ ನಂಬಿಕೆ ಇಟ್ಟಿದೆ. ಪಂದ್ಯದ ಬಳಿಕ ಮಾತನಾಡಿದ ನಾಯಕ ರೋಹಿತ್, ಲಾರ್ಡ್ಸ್‌ನಲ್ಲಿ ಕಠಿಣ ಪಿಚ್‌ನಲ್ಲಿ ರಾಹುಲ್ ಅದ್ಭುತ ಇನ್ನಿಂಗ್ಸ್ ಆಡಿದರು. ಸೆಂಚುರಿಯನ್​ ಲ್ಲೂ ಅವರು ಇದೇ ರೀತಿಯ ಇನ್ನಿಂಗ್ಸ್ ಆಡಿದ್ದರು. ಹೀಗಾಗಿ ಅವರು ಪ್ರತಿಭಾವಂತ ಆಟಗಾರ ಆದ್ದರಿಂದ ನಾವು ಅವರನ್ನು ಬೆಂಬಲಿಸುವುದನ್ನು ಮುಂದುವರಿಸುತ್ತೇವೆ ಎಂದಿದ್ದರು.

ದೆಹಲಿ ಟೆಸ್ಟ್‌ನ ಎರಡನೇ ಇನ್ನಿಂಗ್ಸ್‌ನಲ್ಲಿ ರಾಹುಲ್ ಕೇವಲ ಒಂದು ರನ್ ಗಳಿಸಲು ಸಾಧ್ಯವಾಯಿತು. ಆದರೆ, ಟೀಮ್ ಮ್ಯಾನೇಜ್‌ಮೆಂಟ್ ಸದ್ಯ ಅವರ ಮೇಲೆ ನಂಬಿಕೆ ಇಟ್ಟಿದೆ. ಪಂದ್ಯದ ಬಳಿಕ ಮಾತನಾಡಿದ ನಾಯಕ ರೋಹಿತ್, ಲಾರ್ಡ್ಸ್‌ನಲ್ಲಿ ಕಠಿಣ ಪಿಚ್‌ನಲ್ಲಿ ರಾಹುಲ್ ಅದ್ಭುತ ಇನ್ನಿಂಗ್ಸ್ ಆಡಿದರು. ಸೆಂಚುರಿಯನ್​ ಲ್ಲೂ ಅವರು ಇದೇ ರೀತಿಯ ಇನ್ನಿಂಗ್ಸ್ ಆಡಿದ್ದರು. ಹೀಗಾಗಿ ಅವರು ಪ್ರತಿಭಾವಂತ ಆಟಗಾರ ಆದ್ದರಿಂದ ನಾವು ಅವರನ್ನು ಬೆಂಬಲಿಸುವುದನ್ನು ಮುಂದುವರಿಸುತ್ತೇವೆ ಎಂದಿದ್ದರು.

5 / 6
ರೋಹಿತ್ ಮಾತ್ರವಲ್ಲ, ಕೋಚ್ ರಾಹುಲ್ ದ್ರಾವಿಡ್ ಕೂಡ ಈ ವಿಷಯಗಳನ್ನು ಪ್ರಸ್ತಾಪಿಸಿ ಅವರಿಗೆ ಬೆಂಬಲ ವ್ಯಕ್ತಪಡಿಸಿದರು. ರಾಹುಲ್, “ಅವರು ವಿದೇಶದಲ್ಲಿ ನಮ್ಮ ಅತ್ಯಂತ ಯಶಸ್ವಿ ಆರಂಭಿಕರಲ್ಲಿ ಒಬ್ಬರು. ಅವರು ದಕ್ಷಿಣ ಆಫ್ರಿಕಾ ಮತ್ತು ಇಂಗ್ಲೆಂಡ್‌ನಲ್ಲಿ ಶತಕಗಳನ್ನು ಗಳಿಸಿದರು. ಅದಕ್ಕಾಗಿಯೇ ನಾವು ಅವರನ್ನು ಬೆಂಬಲಿಸುತ್ತೇವೆ.” ಎಂದು ಕೋಚ್ ದ್ರಾವಿಡ್ ಹೇಳಿಕೊಂಡಿದ್ದಾರೆ.

ರೋಹಿತ್ ಮಾತ್ರವಲ್ಲ, ಕೋಚ್ ರಾಹುಲ್ ದ್ರಾವಿಡ್ ಕೂಡ ಈ ವಿಷಯಗಳನ್ನು ಪ್ರಸ್ತಾಪಿಸಿ ಅವರಿಗೆ ಬೆಂಬಲ ವ್ಯಕ್ತಪಡಿಸಿದರು. ರಾಹುಲ್, “ಅವರು ವಿದೇಶದಲ್ಲಿ ನಮ್ಮ ಅತ್ಯಂತ ಯಶಸ್ವಿ ಆರಂಭಿಕರಲ್ಲಿ ಒಬ್ಬರು. ಅವರು ದಕ್ಷಿಣ ಆಫ್ರಿಕಾ ಮತ್ತು ಇಂಗ್ಲೆಂಡ್‌ನಲ್ಲಿ ಶತಕಗಳನ್ನು ಗಳಿಸಿದರು. ಅದಕ್ಕಾಗಿಯೇ ನಾವು ಅವರನ್ನು ಬೆಂಬಲಿಸುತ್ತೇವೆ.” ಎಂದು ಕೋಚ್ ದ್ರಾವಿಡ್ ಹೇಳಿಕೊಂಡಿದ್ದಾರೆ.

6 / 6
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು