IND vs AUS: ಶತಕದಂಚಿನಲ್ಲಿ ಎಡವಿದ ಕೆಎಲ್ ರಾಹುಲ್

Australia vs India, 3rd Test: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೂರನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು ಪ್ರಥಮ ಇನಿಂಗ್ಸ್​ನಲ್ಲಿ 445 ರನ್ ಕಲೆಹಾಕಿದೆ. ಇದಕ್ಕುತ್ತರವಾಗಿ ಇನಿಂಗ್ಸ್ ಆರಂಭಿಸಿರುವ ಟೀಮ್ ಇಂಡಿಯಾ ನಾಲ್ಕನೇ ದಿನದಾಟದ ಭೋಜನಾ ವಿರಾಮದ ವೇಳೆಗೆ 6 ವಿಕೆಟ್ ಕಳೆದುಕೊಂಡು 167 ರನ್ ಕಲೆಹಾಕಿದೆ.

ಝಾಹಿರ್ ಯೂಸುಫ್
|

Updated on: Dec 17, 2024 | 8:25 AM

ಬ್ರಿಸ್ಬೇನ್​ನ ಗಾಬಾ ಮೈದಾನದಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಕೆಎಲ್ ರಾಹುಲ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಕೆಎಲ್ ರಾಹುಲ್ ಎಚ್ಚರಿಕೆಯ ಬ್ಯಾಟಿಂಗ್​ಗೆ ಒತ್ತು ನೀಡಿದರು.

ಬ್ರಿಸ್ಬೇನ್​ನ ಗಾಬಾ ಮೈದಾನದಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಕೆಎಲ್ ರಾಹುಲ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಕೆಎಲ್ ರಾಹುಲ್ ಎಚ್ಚರಿಕೆಯ ಬ್ಯಾಟಿಂಗ್​ಗೆ ಒತ್ತು ನೀಡಿದರು.

1 / 7
ಒಂದೆಡೆ ಟೀಮ್ ಇಂಡಿಯಾ ಬ್ಯಾಟರ್​​ಗಳು ಪೆವಿಲಿಯನ್ ಪರೇಡ್ ನಡೆಸುತ್ತಿದ್ದರೆ, ಮತ್ತೊಂದೆಡೆ ರಾಹುಲ್ ಕ್ರೀಸ್ ಕಚ್ಚಿ ನಿಂತರು. ಈ ಮೂಲಕ 85 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಈ ಅರ್ಧಶತಕದ ಬಳಿಕ ಕೂಡ ಭಾರತದ ಪಾಲಿಗೆ ಆಸರೆಯಾಗಿ ನಿಂತ ರಾಹುಲ್ ಅತ್ಯಾಕರ್ಷಕ ಹೊಡೆತಗಳ ಮೂಲಕ ಗಮನ ಸೆಳೆದರು.

ಒಂದೆಡೆ ಟೀಮ್ ಇಂಡಿಯಾ ಬ್ಯಾಟರ್​​ಗಳು ಪೆವಿಲಿಯನ್ ಪರೇಡ್ ನಡೆಸುತ್ತಿದ್ದರೆ, ಮತ್ತೊಂದೆಡೆ ರಾಹುಲ್ ಕ್ರೀಸ್ ಕಚ್ಚಿ ನಿಂತರು. ಈ ಮೂಲಕ 85 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಈ ಅರ್ಧಶತಕದ ಬಳಿಕ ಕೂಡ ಭಾರತದ ಪಾಲಿಗೆ ಆಸರೆಯಾಗಿ ನಿಂತ ರಾಹುಲ್ ಅತ್ಯಾಕರ್ಷಕ ಹೊಡೆತಗಳ ಮೂಲಕ ಗಮನ ಸೆಳೆದರು.

2 / 7
ಈ ಮೂಲಕ 138 ಎಸೆತಗಳಲ್ಲಿ 84 ರನ್ ಬಾರಿಸಿ ಶತಕದತ್ತ ದಾಪುಗಾಲಿಟ್ಟಿದ್ದ ರಾಹುಲ್ ಸ್ಪಿನ್ನರ್ ನಾಥನ್ ಲಿಯಾನ್ ಎಸೆತವನ್ನು ಗುರುತಿಸುವಲ್ಲಿ ಎಡವಿ ಸ್ಲಿಪ್​ನಲ್ಲಿ ಕ್ಯಾಚ್ ನೀಡಿದರು. ಇದರೊಂದಿಗೆ ಟೆಸ್ಟ್​ನಲ್ಲಿ 9ನೇ ಶತಕ ಸಿಡಿಸುವ ಅವಕಾಶವನ್ನು ಕೆಎಲ್ ರಾಹುಲ್ ಕೇವಲ 16 ರನ್​​ಗಳಿಂದ ಕೈ ತಪ್ಪಿಸಿಕೊಂಡರು.

ಈ ಮೂಲಕ 138 ಎಸೆತಗಳಲ್ಲಿ 84 ರನ್ ಬಾರಿಸಿ ಶತಕದತ್ತ ದಾಪುಗಾಲಿಟ್ಟಿದ್ದ ರಾಹುಲ್ ಸ್ಪಿನ್ನರ್ ನಾಥನ್ ಲಿಯಾನ್ ಎಸೆತವನ್ನು ಗುರುತಿಸುವಲ್ಲಿ ಎಡವಿ ಸ್ಲಿಪ್​ನಲ್ಲಿ ಕ್ಯಾಚ್ ನೀಡಿದರು. ಇದರೊಂದಿಗೆ ಟೆಸ್ಟ್​ನಲ್ಲಿ 9ನೇ ಶತಕ ಸಿಡಿಸುವ ಅವಕಾಶವನ್ನು ಕೆಎಲ್ ರಾಹುಲ್ ಕೇವಲ 16 ರನ್​​ಗಳಿಂದ ಕೈ ತಪ್ಪಿಸಿಕೊಂಡರು.

3 / 7
ಇನ್ನು ಕೆಎಲ್ ರಾಹುಲ್ ಅವರ ದಿಟ್ಟ ಹೋರಾಟದ ಫಲವಾಗಿ ಟೀಮ್ ಇಂಡಿಯಾ 49 ಓವರ್​ಗಳ ಮುಕ್ತಾಯದ ವೇಳೆಗೆ ಮೊದಲ ಇನಿಂಗ್ಸ್​ನಲ್ಲಿ 6 ವಿಕೆಟ್ ಕಳೆದುಕೊಂಡು 167 ರನ್ ಕಲೆಹಾಕಿದೆ. ಸದ್ಯ ಕ್ರೀಸ್​ನಲ್ಲಿ ರವೀಂದ್ರ ಜಡೇಜಾ ಹಾಗೂ ನಿತೀಶ್ ಕುಮಾರ್ ರೆಡ್ಡಿ ಬ್ಯಾಟಿಂಗ್ ಮಾಡುತ್ತಿದ್ದಾರೆ.

ಇನ್ನು ಕೆಎಲ್ ರಾಹುಲ್ ಅವರ ದಿಟ್ಟ ಹೋರಾಟದ ಫಲವಾಗಿ ಟೀಮ್ ಇಂಡಿಯಾ 49 ಓವರ್​ಗಳ ಮುಕ್ತಾಯದ ವೇಳೆಗೆ ಮೊದಲ ಇನಿಂಗ್ಸ್​ನಲ್ಲಿ 6 ವಿಕೆಟ್ ಕಳೆದುಕೊಂಡು 167 ರನ್ ಕಲೆಹಾಕಿದೆ. ಸದ್ಯ ಕ್ರೀಸ್​ನಲ್ಲಿ ರವೀಂದ್ರ ಜಡೇಜಾ ಹಾಗೂ ನಿತೀಶ್ ಕುಮಾರ್ ರೆಡ್ಡಿ ಬ್ಯಾಟಿಂಗ್ ಮಾಡುತ್ತಿದ್ದಾರೆ.

4 / 7
ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಪ್ರಥಮ ಇನಿಂಗ್ಸ್ ಆಡಿದ ಆಸ್ಟ್ರೇಲಿಯಾ ಪರ ಟ್ರಾವಿಸ್ ಹೆಡ್ (152) ಹಾಗೂ ಸ್ಟೀವ್ ಸ್ಮಿತ್ (101) ಶತಕ ಬಾರಿಸಿದ್ದರು. ಈ ಶತಕಗಳ ನೆರವಿನಿಂದ ಆಸ್ಟ್ರೇಲಿಯಾ ಮೊದಲ ಇನಿಂಗ್ಸ್​ನಲ್ಲಿ 445 ರನ್ ಕಲೆಹಾಕಿದೆ.

ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಪ್ರಥಮ ಇನಿಂಗ್ಸ್ ಆಡಿದ ಆಸ್ಟ್ರೇಲಿಯಾ ಪರ ಟ್ರಾವಿಸ್ ಹೆಡ್ (152) ಹಾಗೂ ಸ್ಟೀವ್ ಸ್ಮಿತ್ (101) ಶತಕ ಬಾರಿಸಿದ್ದರು. ಈ ಶತಕಗಳ ನೆರವಿನಿಂದ ಆಸ್ಟ್ರೇಲಿಯಾ ಮೊದಲ ಇನಿಂಗ್ಸ್​ನಲ್ಲಿ 445 ರನ್ ಕಲೆಹಾಕಿದೆ.

5 / 7
ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ರಿಷಭ್ ಪಂತ್, ಕೆಎಲ್ ರಾಹುಲ್, ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ಆಕಾಶ್ ದೀಪ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ರಿಷಭ್ ಪಂತ್, ಕೆಎಲ್ ರಾಹುಲ್, ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ಆಕಾಶ್ ದೀಪ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

6 / 7
ಆಸ್ಟ್ರೇಲಿಯಾ ಪ್ಲೇಯಿಂಗ್ 11: ಉಸ್ಮಾನ್ ಖ್ವಾಜಾ, ನಾಥನ್ ಮೆಕ್‌ಸ್ವೀನಿ, ಮಾರ್ನಸ್ ಲ್ಯಾಬುಶೇನ್, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್, ಮಿಚ್ ಮಾರ್ಷ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್) ಪ್ಯಾಟ್ ಕಮಿನ್ಸ್, ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಜೋಶ್ ಹ್ಯಾಝಲ್‌ವುಡ್.

ಆಸ್ಟ್ರೇಲಿಯಾ ಪ್ಲೇಯಿಂಗ್ 11: ಉಸ್ಮಾನ್ ಖ್ವಾಜಾ, ನಾಥನ್ ಮೆಕ್‌ಸ್ವೀನಿ, ಮಾರ್ನಸ್ ಲ್ಯಾಬುಶೇನ್, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್, ಮಿಚ್ ಮಾರ್ಷ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್) ಪ್ಯಾಟ್ ಕಮಿನ್ಸ್, ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಜೋಶ್ ಹ್ಯಾಝಲ್‌ವುಡ್.

7 / 7
Follow us
Daily Devotional: ತುಳಸಿ ತೀರ್ಥದ ಮಹತ್ವ ತಿಳಿಯಿರಿ
Daily Devotional: ತುಳಸಿ ತೀರ್ಥದ ಮಹತ್ವ ತಿಳಿಯಿರಿ
Daily horoscope: ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿದೆ
Daily horoscope: ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿದೆ
‘ಯುಐ’ ಸಿನಿಮಾ ಪ್ರೀ-ರಿಲೀಸ್ ಇವೆಂಟ್​: ಇಲ್ಲಿದೆ ಲೈವ್ ವಿಡಿಯೋ
‘ಯುಐ’ ಸಿನಿಮಾ ಪ್ರೀ-ರಿಲೀಸ್ ಇವೆಂಟ್​: ಇಲ್ಲಿದೆ ಲೈವ್ ವಿಡಿಯೋ
ಹೊಸ ಹೋಸ್ಟ್ ನನ್ನಂತೆ ನಡೆಸಿಕೊಡುತ್ತಾರೋ ಇಲ್ಲವೋ ಬೇರೆ ವಿಚಾರ: ಸುದೀಪ್
ಹೊಸ ಹೋಸ್ಟ್ ನನ್ನಂತೆ ನಡೆಸಿಕೊಡುತ್ತಾರೋ ಇಲ್ಲವೋ ಬೇರೆ ವಿಚಾರ: ಸುದೀಪ್
ಹಣಕಾಸು ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಲು ಕಾನೂನು ಬಲಪಡಿಸುತ್ತೇವೆ: ಸಚಿವ
ಹಣಕಾಸು ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಲು ಕಾನೂನು ಬಲಪಡಿಸುತ್ತೇವೆ: ಸಚಿವ
ಎತ್ತಿನ ಜನ್ಮದಿನ ಆಚರಣೆ: ಕೇಕ್ ಕತ್ತರಿಸಿ..ಊರಿಗೆಲ್ಲ ಊಟ ಹಾಕಿಸಿದ ರೈತ
ಎತ್ತಿನ ಜನ್ಮದಿನ ಆಚರಣೆ: ಕೇಕ್ ಕತ್ತರಿಸಿ..ಊರಿಗೆಲ್ಲ ಊಟ ಹಾಕಿಸಿದ ರೈತ
ನ್ಯಾಯಾಲಯದಿಂದ ಪುನಃ ಆಸ್ಪತ್ರೆಗೆ ವಾಪಸ್ಸು ಹೋದ ದರ್ಶನ್ ತೂಗುದೀಪ
ನ್ಯಾಯಾಲಯದಿಂದ ಪುನಃ ಆಸ್ಪತ್ರೆಗೆ ವಾಪಸ್ಸು ಹೋದ ದರ್ಶನ್ ತೂಗುದೀಪ
ಕುಮಾರ ಬಂಗಾರಪ್ಪ ಸೊರಬದಲ್ಲಿ ಬಿಜೆಪಿ ಸೊರಗುವಂತೆ ಮಾಡಿದ್ದಾರೆ: ರೇಣುಕಾಚಾರ್ಯ
ಕುಮಾರ ಬಂಗಾರಪ್ಪ ಸೊರಬದಲ್ಲಿ ಬಿಜೆಪಿ ಸೊರಗುವಂತೆ ಮಾಡಿದ್ದಾರೆ: ರೇಣುಕಾಚಾರ್ಯ
ಜುಟ್ಟು ಹಿಡಿದುಕೊಂಡು ಕಿತ್ತಾಡಿದ ಭವ್ಯಾ, ಐಶ್ವರ್ಯಾ; ದೊಡ್ಮನೆಯಲ್ಲಿ ಗದ್ದಲ
ಜುಟ್ಟು ಹಿಡಿದುಕೊಂಡು ಕಿತ್ತಾಡಿದ ಭವ್ಯಾ, ಐಶ್ವರ್ಯಾ; ದೊಡ್ಮನೆಯಲ್ಲಿ ಗದ್ದಲ
ದರ್ಶನ್ ಮೇಲಿನ ಅಭಿಮಾನ ಹೆಚ್ಚಾಗಿದೆಯೇ ಹೊರತು ಕಮ್ಮಿಯಾಗಿಲ್ಲ: ಅಭಿಮಾನಿ
ದರ್ಶನ್ ಮೇಲಿನ ಅಭಿಮಾನ ಹೆಚ್ಚಾಗಿದೆಯೇ ಹೊರತು ಕಮ್ಮಿಯಾಗಿಲ್ಲ: ಅಭಿಮಾನಿ