AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS 3rd ODI: ಭಾರತ-ಆಸ್ಟ್ರೇಲಿಯಾ ಮೂರನೇ ಏಕದಿನ ಪಂದ್ಯದ ರೋಚಕ ಫೋಟೋಗಳು ಇಲ್ಲಿದೆ ನೋಡಿ

India vs Australia 3rd ODI: 2019ರ ಬಳಿಕ ಭಾರತ ತಂಡ ತಾಯ್ನಾಡಿನಲ್ಲಿ ಸೋತ ಮೊದಲ ಒಡಿಐ ಸರಣಿ ಇದಾಯಿತು. ಅಲ್ಲದೆ ಅಂತರರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ (ಐಸಿಸಿ) ಒಡಿಐ ಶ್ರೇಯಾಂಕ ಪಟ್ಟಿಯಲ್ಲಿ ಭಾರತ ನಂ.1 ಪಟ್ಟವನ್ನು ಕಳೆದುಕೊಂಡಿದೆ.

Vinay Bhat
|

Updated on: Mar 23, 2023 | 9:37 AM

Share
ಬುಧವಾರ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ನಿರ್ಣಾಯಕ ಮೂರನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಸಂಪೂರ್ಣ ಬ್ಯಾಟಿಂಗ್ ವೈಫಲ್ಯ ಅನುಭವಿಸಿದರೆ, ಆಸೀಸ್ ಭರ್ಜರಿ ಪ್ರದರ್ಶನ ತೋರಿ 21 ರನ್​ಗಳ ಜಯ ದಾಖಲಿಸಿ 2-1 ಅಂತರದಿಂದ ಸರಣಿ ತನ್ನದಾಗಿಸಿತು.

ಬುಧವಾರ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ನಿರ್ಣಾಯಕ ಮೂರನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಸಂಪೂರ್ಣ ಬ್ಯಾಟಿಂಗ್ ವೈಫಲ್ಯ ಅನುಭವಿಸಿದರೆ, ಆಸೀಸ್ ಭರ್ಜರಿ ಪ್ರದರ್ಶನ ತೋರಿ 21 ರನ್​ಗಳ ಜಯ ದಾಖಲಿಸಿ 2-1 ಅಂತರದಿಂದ ಸರಣಿ ತನ್ನದಾಗಿಸಿತು.

1 / 8
ಈ ಮೂಲಕ ಭಾರತ ಪ್ರವಾಸ ಬೆಳೆಸಿದ್ದ ಆಸ್ಟ್ರೇಲಿಯಾ ಕ್ರಿಕೆಟ್ ತಂಡ ಏಕದಿನ ಸರಣಿಯನ್ನು ವಶಪಡಿಸಿಕೊಂಡು ಹಿಂತಿರುಗಿದೆ. ಜೊತೆಗೆ ಬಾರ್ಡರ್- ಗವಾಸ್ಕರ್ ಟ್ರೋಫಿ ಕಳೆದುಕೊಂಡಿದ್ದಕ್ಕೆ ಸೇಡುಕೂಡ ತೀರಿಸಿಕೊಂಡಿದೆ.

ಈ ಮೂಲಕ ಭಾರತ ಪ್ರವಾಸ ಬೆಳೆಸಿದ್ದ ಆಸ್ಟ್ರೇಲಿಯಾ ಕ್ರಿಕೆಟ್ ತಂಡ ಏಕದಿನ ಸರಣಿಯನ್ನು ವಶಪಡಿಸಿಕೊಂಡು ಹಿಂತಿರುಗಿದೆ. ಜೊತೆಗೆ ಬಾರ್ಡರ್- ಗವಾಸ್ಕರ್ ಟ್ರೋಫಿ ಕಳೆದುಕೊಂಡಿದ್ದಕ್ಕೆ ಸೇಡುಕೂಡ ತೀರಿಸಿಕೊಂಡಿದೆ.

2 / 8
2019ರ ಬಳಿಕ ಭಾರತ ತಂಡ ತಾಯ್ನಾಡಿನಲ್ಲಿ ಸೋತ ಮೊದಲ ಒಡಿಐ ಸರಣಿ ಇದಾಯಿತು. ಅಲ್ಲದೆ ಅಂತರರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ (ಐಸಿಸಿ) ಒಡಿಐ ಶ್ರೇಯಾಂಕ ಪಟ್ಟಿಯಲ್ಲಿ ಭಾರತ ನಂ.1 ಪಟ್ಟವನ್ನು ಕಳೆದುಕೊಂಡಿದೆ.

2019ರ ಬಳಿಕ ಭಾರತ ತಂಡ ತಾಯ್ನಾಡಿನಲ್ಲಿ ಸೋತ ಮೊದಲ ಒಡಿಐ ಸರಣಿ ಇದಾಯಿತು. ಅಲ್ಲದೆ ಅಂತರರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ (ಐಸಿಸಿ) ಒಡಿಐ ಶ್ರೇಯಾಂಕ ಪಟ್ಟಿಯಲ್ಲಿ ಭಾರತ ನಂ.1 ಪಟ್ಟವನ್ನು ಕಳೆದುಕೊಂಡಿದೆ.

3 / 8
ಟಾಸ್​ ಗೆದ್ದು ಬ್ಯಾಟಿಂಗ್​ ತೆಗೆದುಕೊಂಡ ಆಸ್ಟ್ರೇಲಿಯಾ ಪರ ಆರಂಭಿಕರು 68 ರನ್​ನ ಜೊತೆಯಾಟ ಬಿಟ್ಟರೆ ಮತ್ತಾವ ಜೋಡಿ ಬೃಹತ್ ರನ್​ ಕಲೆ ಹಾಕಲಿಲ್ಲ. ಎಲ್ಲ ಆಟಗಾರರು 20 ಮತ್ತು 30 ರನ್​ ಗಳಿಕೆಗೆ ವಿಕೆಟ್​ ಒಪ್ಪಿಸಿದರು. ಟ್ರಾವಿಸ್ ಹೆಡ್ 33 ರನ್​ ಗಳಿಸಿದರೆ ಸ್ಟೀವ್​ ಸ್ಮಿತ್​ ಶೂನ್ಯಕ್ಕೆ ವಿಕೆಟ್​ ನೀಡಿದರು.

ಟಾಸ್​ ಗೆದ್ದು ಬ್ಯಾಟಿಂಗ್​ ತೆಗೆದುಕೊಂಡ ಆಸ್ಟ್ರೇಲಿಯಾ ಪರ ಆರಂಭಿಕರು 68 ರನ್​ನ ಜೊತೆಯಾಟ ಬಿಟ್ಟರೆ ಮತ್ತಾವ ಜೋಡಿ ಬೃಹತ್ ರನ್​ ಕಲೆ ಹಾಕಲಿಲ್ಲ. ಎಲ್ಲ ಆಟಗಾರರು 20 ಮತ್ತು 30 ರನ್​ ಗಳಿಕೆಗೆ ವಿಕೆಟ್​ ಒಪ್ಪಿಸಿದರು. ಟ್ರಾವಿಸ್ ಹೆಡ್ 33 ರನ್​ ಗಳಿಸಿದರೆ ಸ್ಟೀವ್​ ಸ್ಮಿತ್​ ಶೂನ್ಯಕ್ಕೆ ವಿಕೆಟ್​ ನೀಡಿದರು.

4 / 8
47 ರನ್​ ಗಳಿಸಿದ್ದ ಮಿಚೆಲ್ ಮಾರ್ಷ್ 3 ರನ್​ನಿಂದ ಅರ್ಧಶತಕದಿಂದ ವಂಚಿತರಾದರು. ವಾರ್ನರ್ ಆಟ 23ಕ್ಕೆ ಅಂತ್ಯವಾಯಿತು. ಲಾಬುಶೇನ್ 28, ಅಲೆಕ್ಸ್​ ಕ್ಯಾರಿ 38 ರನ್​ ಗಳಿಸಿದರು. ಅಂತಿಮವಾಗಿ ಆಸೀಸ್ 49 ಓವರ್​ಗಳಲ್ಲಿ 269 ರನ್​ಗೆ ಆಲೌಟ್ ಆಯಿತು.

47 ರನ್​ ಗಳಿಸಿದ್ದ ಮಿಚೆಲ್ ಮಾರ್ಷ್ 3 ರನ್​ನಿಂದ ಅರ್ಧಶತಕದಿಂದ ವಂಚಿತರಾದರು. ವಾರ್ನರ್ ಆಟ 23ಕ್ಕೆ ಅಂತ್ಯವಾಯಿತು. ಲಾಬುಶೇನ್ 28, ಅಲೆಕ್ಸ್​ ಕ್ಯಾರಿ 38 ರನ್​ ಗಳಿಸಿದರು. ಅಂತಿಮವಾಗಿ ಆಸೀಸ್ 49 ಓವರ್​ಗಳಲ್ಲಿ 269 ರನ್​ಗೆ ಆಲೌಟ್ ಆಯಿತು.

5 / 8
ಭಾರತ ಪರ ಕುಲ್ದೀಪ್ ಯಾದವ್ ಹಾಗೂ ಹಾರ್ದಿಕ್ ಪಾಂಡ್ಯ 3 ವಿಕೆಟ್ ಕಿತ್ತು ಮಿಂಚಿದರೆ ಮೊಹಮ್ಮದ್ ಸಿರಾಜ್ ಹಾಗೂ ಅಕ್ಷರ್ ಪಟೇಲ್ ತಲಾ 2 ವಿಕೆಟ್ ತಮ್ಮದಾಗಿಸಿಕೊಂಡರು.

ಭಾರತ ಪರ ಕುಲ್ದೀಪ್ ಯಾದವ್ ಹಾಗೂ ಹಾರ್ದಿಕ್ ಪಾಂಡ್ಯ 3 ವಿಕೆಟ್ ಕಿತ್ತು ಮಿಂಚಿದರೆ ಮೊಹಮ್ಮದ್ ಸಿರಾಜ್ ಹಾಗೂ ಅಕ್ಷರ್ ಪಟೇಲ್ ತಲಾ 2 ವಿಕೆಟ್ ತಮ್ಮದಾಗಿಸಿಕೊಂಡರು.

6 / 8
ಟಾರ್ಗೆಟ್ ಬೆನ್ನಟ್ಟಿದ ಭಾರತ ಪರ ನಾಯಕ ರೋಹಿತ್​ ಶರ್ಮಾ (30) ಮತ್ತು ಶುಭ್​ಮನ್ ಗಿಲ್​ (37) ಮೊದಲ ವಿಕೆಟ್​ಗೆ 65 ಕಲೆ ಹಾಕಿ ಉತ್ತಮ ಅಡಿಪಾಯ ಹಾಕಿದರು. ನಂತರಲ್ಲಿ ವಿರಾಟ್ ಕೊಹ್ಲಿ (54) ಮತ್ತು ಕೆಎಲ್ ರಾಹುಲ್​ (32), ಹಾರ್ದಿಕ್​ ಪಾಂಡ್ಯ (40) ಅಲ್ಪ ಮೊತ್ತದ ಕಾಣಿಕೆ ನೀಡಿದರೂ ಅದು ತಂಡದ ಗೆಲುವಿಗೆ ಸಾಕಾಗಲಿಲ್ಲ.

ಟಾರ್ಗೆಟ್ ಬೆನ್ನಟ್ಟಿದ ಭಾರತ ಪರ ನಾಯಕ ರೋಹಿತ್​ ಶರ್ಮಾ (30) ಮತ್ತು ಶುಭ್​ಮನ್ ಗಿಲ್​ (37) ಮೊದಲ ವಿಕೆಟ್​ಗೆ 65 ಕಲೆ ಹಾಕಿ ಉತ್ತಮ ಅಡಿಪಾಯ ಹಾಕಿದರು. ನಂತರಲ್ಲಿ ವಿರಾಟ್ ಕೊಹ್ಲಿ (54) ಮತ್ತು ಕೆಎಲ್ ರಾಹುಲ್​ (32), ಹಾರ್ದಿಕ್​ ಪಾಂಡ್ಯ (40) ಅಲ್ಪ ಮೊತ್ತದ ಕಾಣಿಕೆ ನೀಡಿದರೂ ಅದು ತಂಡದ ಗೆಲುವಿಗೆ ಸಾಕಾಗಲಿಲ್ಲ.

7 / 8
ಟೀಮ್ ಇಂಡಿಯಾ 49.1 ಓವರ್​​ಗಳಲ್ಲಿ 248 ರನ್​ಗಳಿಗೆ ಆಲೌಟ್ ಆಗಿ ಸೋಲುಂಡಿತು. ಆಸ್ಟ್ರೇಲಿಯಾ ಪರ ಆ್ಯಡಂ ಝಂಪಾ 4 ವಿಕೆಟ್ ಪಡೆದರು. 21 ರನ್​ಗಳ ಗೆಲುವಿನೊಂದಿಗೆ ಕಾಂಗರೂ ಪಡೆ ಸರಣಿ ವಶಪಡಿಸಿಕೊಂಡಿತು.

ಟೀಮ್ ಇಂಡಿಯಾ 49.1 ಓವರ್​​ಗಳಲ್ಲಿ 248 ರನ್​ಗಳಿಗೆ ಆಲೌಟ್ ಆಗಿ ಸೋಲುಂಡಿತು. ಆಸ್ಟ್ರೇಲಿಯಾ ಪರ ಆ್ಯಡಂ ಝಂಪಾ 4 ವಿಕೆಟ್ ಪಡೆದರು. 21 ರನ್​ಗಳ ಗೆಲುವಿನೊಂದಿಗೆ ಕಾಂಗರೂ ಪಡೆ ಸರಣಿ ವಶಪಡಿಸಿಕೊಂಡಿತು.

8 / 8
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ