AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ ರೋಹಿತ್ ಶರ್ಮಾ

India vs Australia: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯ ಮೂರು ಮ್ಯಾಚ್​ಗಳು ಮುಗಿದಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ 295 ರನ್​​ಗಳ ಭರ್ಜರಿ ಜಯ ಸಾಧಿಸಿದರೆ, ದ್ವಿತೀಯ ಟೆಸ್ಟ್​ನಲ್ಲಿ ಆಸ್ಟ್ರೇಲಿಯಾ ತಂಡವು 10 ವಿಕೆಟ್​ಗಳ ಗೆಲುವು ದಾಖಲಿಸಿತ್ತು. ಇನ್ನು ಮೂರನೇ ಪಂದ್ಯವು ಡ್ರಾನಲ್ಲಿ ಅಂತ್ಯ ಕಂಡಿದೆ. ಇದೀಗ ಉಭಯ ತಂಡಗಳು ನಾಲ್ಕನೇ ಪಂದ್ಯಕ್ಕಾಗಿ ಸಜ್ಜಾಗುತ್ತಿದೆ.

ಝಾಹಿರ್ ಯೂಸುಫ್
|

Updated on: Dec 24, 2024 | 8:53 AM

Share
ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಭರ್ಜರಿ ಅಭ್ಯಾಸದಲ್ಲಿ ತೊಡಗಿಸಿಕೊಂಡಿದೆ. ಈ ಅಭ್ಯಾಸ ನಡುವೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಗಾಯಗೊಂಡಿದ್ದರು. ಭಾನುವಾರ ಮೆಲ್ಬೋರ್ನ್​ ಮೈದಾನದಲ್ಲಿ ನಡೆದ ಅಭ್ಯಾಸದ ವೇಳೆ ಗಾಯಗೊಂಡಿದ್ದ ಹಿಟ್​​ಮ್ಯಾನ್ ಅರ್ಧದಲ್ಲೇ ಪ್ರಾಕ್ಟೀಸ್ ನಿಲ್ಲಿಸಿದ್ದರು.

ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಭರ್ಜರಿ ಅಭ್ಯಾಸದಲ್ಲಿ ತೊಡಗಿಸಿಕೊಂಡಿದೆ. ಈ ಅಭ್ಯಾಸ ನಡುವೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಗಾಯಗೊಂಡಿದ್ದರು. ಭಾನುವಾರ ಮೆಲ್ಬೋರ್ನ್​ ಮೈದಾನದಲ್ಲಿ ನಡೆದ ಅಭ್ಯಾಸದ ವೇಳೆ ಗಾಯಗೊಂಡಿದ್ದ ಹಿಟ್​​ಮ್ಯಾನ್ ಅರ್ಧದಲ್ಲೇ ಪ್ರಾಕ್ಟೀಸ್ ನಿಲ್ಲಿಸಿದ್ದರು.

1 / 6
ನೆಟ್ಸ್​ನಲ್ಲಿ ಬ್ಯಾಟಿಂಗ್ ಅಭ್ಯಾಸ ನಡೆಸುತ್ತಿದ್ದಾಗ ಥ್ರೋಡೌನ್ ಸ್ಪೆಷಲಿಸ್ಟ್ ದಯಾನಂದ ಎಸೆದ ಚೆಂಡು ರೋಹಿತ್ ಶರ್ಮಾ ಅವರ ಎಡ ಮೊಣಕಾಲಿಗೆ ಬಡಿದಿತ್ತು. ಇದರಿಂದ ನೋವಿಗೆ ಒಳಗಾದ ರೋಹಿತ್ ಶರ್ಮಾ ತಕ್ಷಣವೇ ಅಭ್ಯಾಸವನ್ನು ನಿಲ್ಲಿಸಿದ್ದರು. ಅಲ್ಲದೆ ಆ ಬಳಿಕ ಅವರು ಬ್ಯಾಟಿಂಗ್ ಪ್ರಾಕ್ಟೀಸ್ ನಡೆಸಿರಲಿಲ್ಲ.

ನೆಟ್ಸ್​ನಲ್ಲಿ ಬ್ಯಾಟಿಂಗ್ ಅಭ್ಯಾಸ ನಡೆಸುತ್ತಿದ್ದಾಗ ಥ್ರೋಡೌನ್ ಸ್ಪೆಷಲಿಸ್ಟ್ ದಯಾನಂದ ಎಸೆದ ಚೆಂಡು ರೋಹಿತ್ ಶರ್ಮಾ ಅವರ ಎಡ ಮೊಣಕಾಲಿಗೆ ಬಡಿದಿತ್ತು. ಇದರಿಂದ ನೋವಿಗೆ ಒಳಗಾದ ರೋಹಿತ್ ಶರ್ಮಾ ತಕ್ಷಣವೇ ಅಭ್ಯಾಸವನ್ನು ನಿಲ್ಲಿಸಿದ್ದರು. ಅಲ್ಲದೆ ಆ ಬಳಿಕ ಅವರು ಬ್ಯಾಟಿಂಗ್ ಪ್ರಾಕ್ಟೀಸ್ ನಡೆಸಿರಲಿಲ್ಲ.

2 / 6
ಇದಾದ ಬಳಿಕ ಅಭ್ಯಾಸದ ವೇಳೆ ಕಾಣಿಸಿಕೊಳ್ಳದ ಕಾರಣ ರೋಹಿತ್ ಶರ್ಮಾ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗುವ ಸಾಧ್ಯತೆಯಿದೆ ಎಂದು ವರದಿಯಾಗಿತ್ತು. ಇದೀಗ ಟೀಮ್ ಇಂಡಿಯಾ ನಾಯಕನ ಗಾಯದ ಕುರಿತಾದ ಬಿಗ್ ಅಪ್​ಡೇಟ್​ವೊಂದು ಹೊರಬಿದ್ದಿದೆ.

ಇದಾದ ಬಳಿಕ ಅಭ್ಯಾಸದ ವೇಳೆ ಕಾಣಿಸಿಕೊಳ್ಳದ ಕಾರಣ ರೋಹಿತ್ ಶರ್ಮಾ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗುವ ಸಾಧ್ಯತೆಯಿದೆ ಎಂದು ವರದಿಯಾಗಿತ್ತು. ಇದೀಗ ಟೀಮ್ ಇಂಡಿಯಾ ನಾಯಕನ ಗಾಯದ ಕುರಿತಾದ ಬಿಗ್ ಅಪ್​ಡೇಟ್​ವೊಂದು ಹೊರಬಿದ್ದಿದೆ.

3 / 6
ತಮ್ಮ ಗಾಯದ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿರುವ ರೋಹಿತ್ ಶರ್ಮಾ, ಅಭ್ಯಾಸದ ವೇಳೆ ಮೊಣಕಾಲಿಗೆ ಗಾಯವಾಗಿತ್ತು. ಇದೀಗ ನೋವು ಸಂಪೂರ್ಣ ಮಾಯವಾಗಿದೆ. ಹೀಗಾಗಿ ನಾಲ್ಕನೇ ಟೆಸ್ಟ್ ಪಂದ್ಯವಾಡಲು ನಾನು ಫಿಟ್ ಆಗಿದ್ದೇನೆ ಎಂದು ತಿಳಿಸಿದ್ದಾರೆ. ಈ ಮೂಲಕ ಮೆಲ್ಬೋರ್ನ್​ ಟೆಸ್ಟ್​ನಲ್ಲಿ ಕಣಕ್ಕಿಳಿಯುವುದನ್ನು ಖುದ್ದು ರೋಹಿತ್ ಶರ್ಮಾ ಖಚಿತಪಡಿಸಿದ್ದಾರೆ.

ತಮ್ಮ ಗಾಯದ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿರುವ ರೋಹಿತ್ ಶರ್ಮಾ, ಅಭ್ಯಾಸದ ವೇಳೆ ಮೊಣಕಾಲಿಗೆ ಗಾಯವಾಗಿತ್ತು. ಇದೀಗ ನೋವು ಸಂಪೂರ್ಣ ಮಾಯವಾಗಿದೆ. ಹೀಗಾಗಿ ನಾಲ್ಕನೇ ಟೆಸ್ಟ್ ಪಂದ್ಯವಾಡಲು ನಾನು ಫಿಟ್ ಆಗಿದ್ದೇನೆ ಎಂದು ತಿಳಿಸಿದ್ದಾರೆ. ಈ ಮೂಲಕ ಮೆಲ್ಬೋರ್ನ್​ ಟೆಸ್ಟ್​ನಲ್ಲಿ ಕಣಕ್ಕಿಳಿಯುವುದನ್ನು ಖುದ್ದು ರೋಹಿತ್ ಶರ್ಮಾ ಖಚಿತಪಡಿಸಿದ್ದಾರೆ.

4 / 6
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯವು ಡಿಸೆಂಬರ್ 26 ರಿಂದ ಶುರುವಾಗಲಿದೆ. ಮೆಲ್ಬೋರ್ನ್​ನ ಎಂಸಿಜಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಉಭಯ ತಂಡಗಳ ಪಾಲಿಗೆ ತುಂಬಾ ನಿರ್ಣಾಯಕ. ಏಕೆಂದರೆ ಈ ಮ್ಯಾಚ್​ನಲ್ಲಿ ಗೆಲ್ಲುವ ತಂಡ ಸರಣಿಯಲ್ಲಿ ಮುನ್ನಡೆ ಸಾಧಿಸುವುದಲ್ಲದೆ, ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್ ಹಾದಿಯನ್ನು ಸುಗಮಗೊಳಿಸಲಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯವು ಡಿಸೆಂಬರ್ 26 ರಿಂದ ಶುರುವಾಗಲಿದೆ. ಮೆಲ್ಬೋರ್ನ್​ನ ಎಂಸಿಜಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಉಭಯ ತಂಡಗಳ ಪಾಲಿಗೆ ತುಂಬಾ ನಿರ್ಣಾಯಕ. ಏಕೆಂದರೆ ಈ ಮ್ಯಾಚ್​ನಲ್ಲಿ ಗೆಲ್ಲುವ ತಂಡ ಸರಣಿಯಲ್ಲಿ ಮುನ್ನಡೆ ಸಾಧಿಸುವುದಲ್ಲದೆ, ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್ ಹಾದಿಯನ್ನು ಸುಗಮಗೊಳಿಸಲಿದೆ.

5 / 6
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಜಸ್​ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್, ಶುಭ್​ಮನ್ ಗಿಲ್ , ವಿರಾಟ್ ಕೊಹ್ಲಿ , ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ , ಮೊಹಮ್ಮದ್ ಸಿರಾಜ್ , ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ದೇವದತ್ ಪಡಿಕ್ಕಲ್, ತನುಷ್ ಕೋಟ್ಯಾನ್.

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಜಸ್​ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್, ಶುಭ್​ಮನ್ ಗಿಲ್ , ವಿರಾಟ್ ಕೊಹ್ಲಿ , ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ , ಮೊಹಮ್ಮದ್ ಸಿರಾಜ್ , ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ದೇವದತ್ ಪಡಿಕ್ಕಲ್, ತನುಷ್ ಕೋಟ್ಯಾನ್.

6 / 6
Follow Us
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?