AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ಯಾರಾಗ್ತಾರೆ ಟೀಮ್ ಇಂಡಿಯಾದ ಉಪನಾಯಕ: ರೋಹಿತ್ ಶರ್ಮಾ ಮುಂದಿದೆ 3 ಆಯ್ಕೆ..!

India Test Squad: ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ರವೀಂದ್ರ ಜಡೇಜಾ.

ಝಾಹಿರ್ ಯೂಸುಫ್
|

Updated on: Feb 21, 2023 | 3:59 PM

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಅಂತಿಮ ಎರಡು ಪಂದ್ಯಗಳಿಗೆ ಭಾರತ ತಂಡವನ್ನು ಆಯ್ಕೆ ಮಾಡಲಾಗಿದೆ. ವಿಶೇಷ ಎಂದರೆ 17 ಸದಸ್ಯರ ಈ ತಂಡದ ಉಪನಾಯಕನನ್ನು ಹೆಸರಿಸಲಾಗಿಲ್ಲ. ಅಂದರೆ ಈ ಹಿಂದೆ ಉಪನಾಯಕರಾಗಿದ್ದ ಕೆಎಲ್ ರಾಹುಲ್ ಅವರನ್ನು ವೈಸ್ ಕ್ಯಾಪ್ಟನ್ ಸ್ಥಾನದಿಂದ ಕೆಳಗಿಳಿಸಲಾಗಿದೆ.

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಅಂತಿಮ ಎರಡು ಪಂದ್ಯಗಳಿಗೆ ಭಾರತ ತಂಡವನ್ನು ಆಯ್ಕೆ ಮಾಡಲಾಗಿದೆ. ವಿಶೇಷ ಎಂದರೆ 17 ಸದಸ್ಯರ ಈ ತಂಡದ ಉಪನಾಯಕನನ್ನು ಹೆಸರಿಸಲಾಗಿಲ್ಲ. ಅಂದರೆ ಈ ಹಿಂದೆ ಉಪನಾಯಕರಾಗಿದ್ದ ಕೆಎಲ್ ರಾಹುಲ್ ಅವರನ್ನು ವೈಸ್ ಕ್ಯಾಪ್ಟನ್ ಸ್ಥಾನದಿಂದ ಕೆಳಗಿಳಿಸಲಾಗಿದೆ.

1 / 8
ಇದಾಗ್ಯೂ ಆಯ್ಕೆ ಸಮಿತಿಯು ಹೊಸ ಉಪನಾಯಕ ಯಾರು ಎಂಬುದನ್ನು ಸ್ಪಷ್ಟಪಡಿಸಿಲ್ಲ. ಆದರೆ ಈ ಆಯ್ಕೆಯನ್ನು ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರಿಗೆ ಬಿಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಇದಾಗ್ಯೂ ಆಯ್ಕೆ ಸಮಿತಿಯು ಹೊಸ ಉಪನಾಯಕ ಯಾರು ಎಂಬುದನ್ನು ಸ್ಪಷ್ಟಪಡಿಸಿಲ್ಲ. ಆದರೆ ಈ ಆಯ್ಕೆಯನ್ನು ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರಿಗೆ ಬಿಟ್ಟಿದ್ದಾರೆ ಎಂದು ತಿಳಿದು ಬಂದಿದೆ.

2 / 8
ಅಂದರೆ ಭಾರತ ತಂಡದ ಉಪನಾಯಕನನ್ನು ಆರಿಸುವ ಅವಕಾಶವನ್ನು ರೋಹಿತ್ ಶರ್ಮಾ ಅವರಿಗೆ ನೀಡಲಾಗಿದೆ. ಹೀಗಾಗಿಯೇ ಯಾರು ಹೊಸ ವೈಸ್ ಕ್ಯಾಪ್ಟನ್ ಆಗಲಿದ್ದಾರೆ ಎಂಬ ಕುತೂಹಲ ಶುರುವಾಗಿದೆ. ಇತ್ತ ಹಿಟ್​​ಮ್ಯಾನ್ ಮುಂದೆ 3 ಆಯ್ಕೆಗಳಿವೆ. ಇವರಲ್ಲಿ ಒಬ್ಬರನ್ನು ಆಯ್ಕೆ ಮಾಡುವುದು ಖಚಿತ ಎನ್ನಲಾಗುತ್ತಿದೆ. ಅವರೆಂದರೆ...

ಅಂದರೆ ಭಾರತ ತಂಡದ ಉಪನಾಯಕನನ್ನು ಆರಿಸುವ ಅವಕಾಶವನ್ನು ರೋಹಿತ್ ಶರ್ಮಾ ಅವರಿಗೆ ನೀಡಲಾಗಿದೆ. ಹೀಗಾಗಿಯೇ ಯಾರು ಹೊಸ ವೈಸ್ ಕ್ಯಾಪ್ಟನ್ ಆಗಲಿದ್ದಾರೆ ಎಂಬ ಕುತೂಹಲ ಶುರುವಾಗಿದೆ. ಇತ್ತ ಹಿಟ್​​ಮ್ಯಾನ್ ಮುಂದೆ 3 ಆಯ್ಕೆಗಳಿವೆ. ಇವರಲ್ಲಿ ಒಬ್ಬರನ್ನು ಆಯ್ಕೆ ಮಾಡುವುದು ಖಚಿತ ಎನ್ನಲಾಗುತ್ತಿದೆ. ಅವರೆಂದರೆ...

3 / 8
ರವಿಚಂದ್ರನ್ ಅಶ್ವಿನ್: ಟೀಮ್ ಇಂಡಿಯಾದ ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಸ್ಥಿರ ಪ್ರದರ್ಶನ ನೀಡುವ ಆಟಗಾರ. ಅದು ಬೌಲಿಂಗ್​ನಲ್ಲಿ ಆಗಿರಲಿ, ಅಥವಾ ಬ್ಯಾಟಿಂಗ್​ನಲ್ಲಿರಲಿ ಅಶ್ವಿನ್​ ಕಡೆಯಿಂದ ತಂಡಕ್ಕೆ ಅತ್ಯಮೂಲ್ಯ ಕಾಣಿಕೆ ಇದ್ದೇ ಇರುತ್ತದೆ. ಇತ್ತ ಸ್ಥಿರ ಪ್ರದರ್ಶನ ನೀಡುವ ಆಟಗಾರರಿಗೆ ಉಪನಾಯಕನ ಸ್ಥಾನ ನೀಡಬೇಕಾಗುತ್ತದೆ. ಏಕೆಂದರೆ ಅವರು ಪ್ಲೇಯಿಂಗ್ ಇಲೆವೆನ್​ನ ಭಾಗವೇ ಆಗಿರಲಿದ್ದಾರೆ. ಹೀಗಾಗಿ 36 ವರ್ಷದ ಅಶ್ವಿನ್ ಹೆಸರು ಈ ಪಟ್ಟಿಯಲ್ಲಿ ಮುಂಚೂಣಿಯಲ್ಲಿದೆ.

ರವಿಚಂದ್ರನ್ ಅಶ್ವಿನ್: ಟೀಮ್ ಇಂಡಿಯಾದ ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಸ್ಥಿರ ಪ್ರದರ್ಶನ ನೀಡುವ ಆಟಗಾರ. ಅದು ಬೌಲಿಂಗ್​ನಲ್ಲಿ ಆಗಿರಲಿ, ಅಥವಾ ಬ್ಯಾಟಿಂಗ್​ನಲ್ಲಿರಲಿ ಅಶ್ವಿನ್​ ಕಡೆಯಿಂದ ತಂಡಕ್ಕೆ ಅತ್ಯಮೂಲ್ಯ ಕಾಣಿಕೆ ಇದ್ದೇ ಇರುತ್ತದೆ. ಇತ್ತ ಸ್ಥಿರ ಪ್ರದರ್ಶನ ನೀಡುವ ಆಟಗಾರರಿಗೆ ಉಪನಾಯಕನ ಸ್ಥಾನ ನೀಡಬೇಕಾಗುತ್ತದೆ. ಏಕೆಂದರೆ ಅವರು ಪ್ಲೇಯಿಂಗ್ ಇಲೆವೆನ್​ನ ಭಾಗವೇ ಆಗಿರಲಿದ್ದಾರೆ. ಹೀಗಾಗಿ 36 ವರ್ಷದ ಅಶ್ವಿನ್ ಹೆಸರು ಈ ಪಟ್ಟಿಯಲ್ಲಿ ಮುಂಚೂಣಿಯಲ್ಲಿದೆ.

4 / 8
ರವೀಂದ್ರ ಜಡೇಜಾ: ನಾಯಕ ರೋಹಿತ್ ಶರ್ಮಾ ಮುಂದಿರುವ 2ನೇ ಆಯ್ಕೆ ಎಂದರೆ ರವೀಂದ್ರ ಜಡೇಜಾ. ಗಾಯದಿಂದ ಚೇತರಿಸಿಕೊಂಡು ಕಂಬ್ಯಾಕ್ ಮಾಡಿರುವ ಜಡ್ಡು ಕೂಡ ಟೆಸ್ಟ್ ಕ್ರಿಕೆಟ್​ನಲ್ಲಿ ಸ್ಥಿರ ಪ್ರದರ್ಶನ ನೀಡುತ್ತಾ ಬಂದಿದ್ದಾರೆ. ಭವಿಷ್ಯ ದೃಷ್ಟಿಯಲ್ಲಿ ಉಪನಾಯಕನನ್ನು ಆಯ್ಕೆ ಮಾಡುವುದಾದರೆ ಆ ಸ್ಥಾನ ರವೀಂದ್ರ ಜಡೇಜಾ ಪಾಲಾಗುವುದರಲ್ಲಿ ಅನುಮಾನವೇ ಇಲ್ಲ.

ರವೀಂದ್ರ ಜಡೇಜಾ: ನಾಯಕ ರೋಹಿತ್ ಶರ್ಮಾ ಮುಂದಿರುವ 2ನೇ ಆಯ್ಕೆ ಎಂದರೆ ರವೀಂದ್ರ ಜಡೇಜಾ. ಗಾಯದಿಂದ ಚೇತರಿಸಿಕೊಂಡು ಕಂಬ್ಯಾಕ್ ಮಾಡಿರುವ ಜಡ್ಡು ಕೂಡ ಟೆಸ್ಟ್ ಕ್ರಿಕೆಟ್​ನಲ್ಲಿ ಸ್ಥಿರ ಪ್ರದರ್ಶನ ನೀಡುತ್ತಾ ಬಂದಿದ್ದಾರೆ. ಭವಿಷ್ಯ ದೃಷ್ಟಿಯಲ್ಲಿ ಉಪನಾಯಕನನ್ನು ಆಯ್ಕೆ ಮಾಡುವುದಾದರೆ ಆ ಸ್ಥಾನ ರವೀಂದ್ರ ಜಡೇಜಾ ಪಾಲಾಗುವುದರಲ್ಲಿ ಅನುಮಾನವೇ ಇಲ್ಲ.

5 / 8
ಚೇತೇಶ್ವರ ಪೂಜಾರ: ಟೀಮ್ ಇಂಡಿಯಾದ ಟೆಸ್ಟ್ ಸ್ಪೆಷಲಿಸ್ಟ್ ಬ್ಯಾಟ್ಸ್​ಮನ್ ಚೇತೇಶ್ವರ ಪೂಜಾರ ಅವರ ಹೆಸರು ಕೂಡ ಈ ಪಟ್ಟಿಯಲ್ಲಿದೆ. ಏಕೆಂದರೆ ಭಾರತ ತಂಡದ ಪರ 100 ಟೆಸ್ಟ್ ಪಂದ್ಯಗಳನ್ನಾಡಿರುವ ಅನುಭವವನ್ನು ಪೂಜಾರ ಹೊಂದಿದ್ದಾರೆ. ಹೀಗಾಗಿ ಅನುಭವಿ ಆಟಗಾರನಿಗೆ ಉಪನಾಯಕ ಸ್ಥಾನ ನೀಡುವುದಾದರೆ ಚೇತೇಶ್ವರ ಪೂಜಾರ ಟೆಸ್ಟ್ ತಂಡದ ವೈಸ್ ಕ್ಯಾಪ್ಟನ್​ ಆಗಿ ಕಾಣಿಸಿಕೊಳ್ಳಲಿದ್ದಾರೆ.

ಚೇತೇಶ್ವರ ಪೂಜಾರ: ಟೀಮ್ ಇಂಡಿಯಾದ ಟೆಸ್ಟ್ ಸ್ಪೆಷಲಿಸ್ಟ್ ಬ್ಯಾಟ್ಸ್​ಮನ್ ಚೇತೇಶ್ವರ ಪೂಜಾರ ಅವರ ಹೆಸರು ಕೂಡ ಈ ಪಟ್ಟಿಯಲ್ಲಿದೆ. ಏಕೆಂದರೆ ಭಾರತ ತಂಡದ ಪರ 100 ಟೆಸ್ಟ್ ಪಂದ್ಯಗಳನ್ನಾಡಿರುವ ಅನುಭವವನ್ನು ಪೂಜಾರ ಹೊಂದಿದ್ದಾರೆ. ಹೀಗಾಗಿ ಅನುಭವಿ ಆಟಗಾರನಿಗೆ ಉಪನಾಯಕ ಸ್ಥಾನ ನೀಡುವುದಾದರೆ ಚೇತೇಶ್ವರ ಪೂಜಾರ ಟೆಸ್ಟ್ ತಂಡದ ವೈಸ್ ಕ್ಯಾಪ್ಟನ್​ ಆಗಿ ಕಾಣಿಸಿಕೊಳ್ಳಲಿದ್ದಾರೆ.

6 / 8
ಈ ಮೂವರು ಆಟಗಾರರು ಟೆಸ್ಟ್ ಕ್ರಿಕೆಟ್​ನಲ್ಲಿ ಸ್ಥಿರ ಪ್ರದರ್ಶನ ನೀಡುತ್ತಾ ಬಂದಿರುವ ಕಾರಣ ಇವರಲ್ಲಿ ಯಾರನ್ನು ರೋಹಿತ್ ಶರ್ಮಾ  ಆಯ್ಕೆ ಮಾಡಲಿದ್ದಾರೆ ಎಂಬುದೇ ಕುತೂಹಲ.

ಈ ಮೂವರು ಆಟಗಾರರು ಟೆಸ್ಟ್ ಕ್ರಿಕೆಟ್​ನಲ್ಲಿ ಸ್ಥಿರ ಪ್ರದರ್ಶನ ನೀಡುತ್ತಾ ಬಂದಿರುವ ಕಾರಣ ಇವರಲ್ಲಿ ಯಾರನ್ನು ರೋಹಿತ್ ಶರ್ಮಾ ಆಯ್ಕೆ ಮಾಡಲಿದ್ದಾರೆ ಎಂಬುದೇ ಕುತೂಹಲ.

7 / 8
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಉಮೇಶ್ ಯಾದವ್, ಜಯದೇವ್ ಉನಾದ್ಕಟ್.

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಉಮೇಶ್ ಯಾದವ್, ಜಯದೇವ್ ಉನಾದ್ಕಟ್.

8 / 8
Follow us
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷ ಅನ್ನೋದೇ ಇಲ್ಲ: ಮುಸ್ಲಿಂ ಯುವಕ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷ ಅನ್ನೋದೇ ಇಲ್ಲ: ಮುಸ್ಲಿಂ ಯುವಕ
ಆಪರೇಷನ್ ಸಿಂಧೂರ್ ಇನ್ನೂ ಮುಗಿದಿಲ್ಲ; ಪಾಕಿಸ್ತಾನಕ್ಕೆ ಮೋದಿ ಎಚ್ಚರಿಕೆ
ಆಪರೇಷನ್ ಸಿಂಧೂರ್ ಇನ್ನೂ ಮುಗಿದಿಲ್ಲ; ಪಾಕಿಸ್ತಾನಕ್ಕೆ ಮೋದಿ ಎಚ್ಚರಿಕೆ