ಗೆಲುವಿನ ಬೆನ್ನಲ್ಲೇ ಟೀಮ್ ಇಂಡಿಯಾಗೆ ಬಿಗ್ ಶಾಕ್: ಪ್ರಮುಖ ಆಟಗಾರ ಔಟ್

Updated on: Oct 26, 2025 | 8:31 AM

India vs Australia: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಮೂರು ಪಂದ್ಯಗಳ ಏಕದಿನ ಸರಣಿ ಮುಗಿದಿದೆ. ಈ ಸರಣಿಯನ್ನು ಆಸ್ಟ್ರೇಲಿಯಾ ತಂಡ 2-1 ಅಂತರದಿಂದ ಗೆದ್ದುಕೊಂಡಿದೆ. ಇನ್ನು ಉಭಯ ತಂಡಗಳು ಟಿ20 ಸರಣಿಯಲ್ಲಿ ಮುಖಾಮುಖಿಯಾಗಲಿದೆ. ಈ ಸರಣಿಯು ಅಕ್ಟೋಬರ್ 29 ರಿಂದ ಶುರುವಾಗಲಿದೆ.

1 / 5
ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) ಭರ್ಜರಿ ಗೆಲುವು ದಾಖಲಿಸಿತ್ತು. ಈ  ಗೆಲುವಿನ ಬೆನ್ನಲ್ಲೇ  ಪ್ರಮುಖ ಆಟಗಾರ ಶ್ರೇಯಸ್ ಅಯ್ಯರ್ ಭಾರತ ತಂಡದಿಂದ ಹೊರಬಿದ್ದಿದ್ದಾರೆ. ಅದು ಸಹ ಮೂರು ವಾರಗಳ ಕಾಲ.

ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) ಭರ್ಜರಿ ಗೆಲುವು ದಾಖಲಿಸಿತ್ತು. ಈ  ಗೆಲುವಿನ ಬೆನ್ನಲ್ಲೇ  ಪ್ರಮುಖ ಆಟಗಾರ ಶ್ರೇಯಸ್ ಅಯ್ಯರ್ ಭಾರತ ತಂಡದಿಂದ ಹೊರಬಿದ್ದಿದ್ದಾರೆ. ಅದು ಸಹ ಮೂರು ವಾರಗಳ ಕಾಲ.

2 / 5

ಸಿಡ್ನಿಯಲ್ಲಿ ನಡೆದ ಮೂರನೇ ಏಕದಿನ ಪಂದ್ಯದ ವೇಳೆ ಕ್ಯಾಚ್ ಹಿಡಿಯುವಾಗ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಅಲ್ಲದೆ ಅರ್ಧದಲ್ಲೇ ಮೈದಾನ ತೊರೆದಿದ್ದರು. ಇದೀಗ ಶ್ರೇಯಸ್ ಅಯ್ಯರ್ ಅವರ ವೈದ್ಯಕೀಯ ವರದಿಗಳು ಬಂದಿದ್ದು, ಈ ವರದಿಯಲ್ಲಿ ಹೆಚ್ಚಿನ ಚಿಕಿತ್ಸೆಯ ಅಗತ್ಯತೆಯನ್ನು ಸೂಚಿಸಲಾಗಿದೆ.

3 / 5

ಪ್ರಸ್ತುತ ಮಾಹಿತಿ ಪ್ರಕಾರ, ಶ್ರೇಯಸ್ ಅಯ್ಯರ್ ಅವರ ಎಡ ಪಕ್ಕೆಲುಬಿಗೆ ಗಂಭೀರ ಗಾಯವಾಗಿದೆ. ಹೀಗಾಗಿ ಮೂರು ವಾರಗಳ ಕಾಲ ಮೈದಾನದಿಂದ ಹೊರಗುಳಿಯುವಂತೆ ವೈದ್ಯರು ಸೂಚಿಸಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ಶ್ರೇಯಸ್ ಅಯ್ಯರ್ ಶೀಘ್ರದಲ್ಲೇ ಚಿಕಿತ್ಸೆಗೆ ಒಳಗಾಗಲಿದ್ದಾರೆ.

4 / 5

ಅತ್ತ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗೆ ಶ್ರೇಯಸ್ ಅಯ್ಯರ್ ಆಯ್ಕೆಯಾಗಿಲ್ಲ. ಇದಾಗ್ಯೂ ಈ ಸರಣಿಯ ಬಳಿಕ ಟೀಮ್ ಇಂಡಿಯಾ ಸೌತ್ ಆಫ್ರಿಕಾ ವಿರುದ್ಧ ಟೆಸ್ಟ್ ಹಾಗೂ ಏಕದಿನ ಸರಣಿ ಆಡಬೇಕಿದೆ. ಅದಕ್ಕೂ ಮುನ್ನ ಸಂಪೂರ್ಣ ಫಿಟ್​ನೆಸ್​ನೊಂದಿಗೆ ಶ್ರೇಯಸ್ ಅಯ್ಯರ್ ತಂಡಕ್ಕೆ ಮರಳುವುದನ್ನು ಎದುರು ನೋಡಬಹುದು.

5 / 5

ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಶುಭಮನ್ ಗಿಲ್ (ಉಪನಾಯಕ), ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವರುಣ್ ಚಕ್ರವರ್ತಿ, ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹರ್ಷಿತ್ ರಾಣಾ.

Loading...
Unable to load recommendations.
Follow Us