AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಕನಿಷ್ಠ 1 ವಿಕೆಟ್; ಅಶ್ವಿನ್ ದಾಖಲೆ ಸರಿಗಟ್ಟಿದ ರವಿ ಬಿಷ್ಣೋಯ್..!

IND vs AUS, Ravi Bishnoi: ಐದು ಪಂದ್ಯಗಳ ಈ ಟಿ20 ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ ಯುವ ಲೆಗ್ ಸ್ಪಿನ್ನರ್, ಆಡಿದ ಐದು ಪಂದ್ಯಗಳಲ್ಲಿ ಬರೋಬ್ಬರಿ 9 ವಿಕೆಟ್ ಉರುಳಿಸಿದರು. ಇದರೊಂದಿಗೆ ಸರಣಿ ಶ್ರೇಷ್ಠ ಪ್ರಶಸ್ತಿಗೂ ಭಾಜನರಾದರು. ಅಲ್ಲದೆ ಈ ಹಿಂದೆ ಯಾವುದೇ ಭಾರತೀಯ ಸ್ಪಿನ್ ಬೌಲರ್ ಮಾಡಲಾಗದ ಸಾಧನೆಯನ್ನು ಮಾಡಿದರು.

ಪೃಥ್ವಿಶಂಕರ
|

Updated on: Dec 04, 2023 | 9:23 AM

Share
ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯನ್ನು ಭಾರತ 4-1 ಅಂತರದಿಂದ ವಶಪಡಿಸಿಕೊಂಡಿದೆ. ಯುವ ಪಡೆಯನ್ನು ಕಟ್ಟಿಕೊಂಡು ಕಾಂಗರೂಗಳ ವಿರುದ್ಧ ಅಖಾಡಕ್ಕಿಳಿದಿದ್ದ ಸೂರ್ಯಕುಮಾರ್ ಯಾದವ್ ಭಾರತಕ್ಕೆ ಟಿ20 ಸರಣಿ ಗೆದ್ದುಕೊಡುವಲ್ಲಿ ಯಶಸ್ವಿಯಾಗಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯನ್ನು ಭಾರತ 4-1 ಅಂತರದಿಂದ ವಶಪಡಿಸಿಕೊಂಡಿದೆ. ಯುವ ಪಡೆಯನ್ನು ಕಟ್ಟಿಕೊಂಡು ಕಾಂಗರೂಗಳ ವಿರುದ್ಧ ಅಖಾಡಕ್ಕಿಳಿದಿದ್ದ ಸೂರ್ಯಕುಮಾರ್ ಯಾದವ್ ಭಾರತಕ್ಕೆ ಟಿ20 ಸರಣಿ ಗೆದ್ದುಕೊಡುವಲ್ಲಿ ಯಶಸ್ವಿಯಾಗಿದ್ದಾರೆ.

1 / 8
ಇನ್ನು ಈ ಸರಣಿಗೆ ಭಾರತ ತಂಡದಲ್ಲಿ ಅವಕಾಶ ಪಡೆದಿದ್ದ ಯುವ ಆಟಗಾರರಲ್ಲಿ ಹಲವು ಆಟಗಾರರು ಆಯ್ಕೆ ಮಂಡಳಿಯ ನಂಬಿಕೆ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾದರು. ಬ್ಯಾಟಿಂಗ್​​ನಲ್ಲಿ ಯಶಸ್ವಿ, ರುತುರಾಜ್ ಹಾಗೂ ರಿಂಕು ಸಿಂಗ್ ಮಿಂಚಿದರೆ, ಬೌಲಿಂಗ್​ನಲ್ಲಿ ರವಿ ರವಿ ಬಿಷ್ಣೋಯ್ ಕಮಾಲ್ ಮಾಡಿದರು.

ಇನ್ನು ಈ ಸರಣಿಗೆ ಭಾರತ ತಂಡದಲ್ಲಿ ಅವಕಾಶ ಪಡೆದಿದ್ದ ಯುವ ಆಟಗಾರರಲ್ಲಿ ಹಲವು ಆಟಗಾರರು ಆಯ್ಕೆ ಮಂಡಳಿಯ ನಂಬಿಕೆ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾದರು. ಬ್ಯಾಟಿಂಗ್​​ನಲ್ಲಿ ಯಶಸ್ವಿ, ರುತುರಾಜ್ ಹಾಗೂ ರಿಂಕು ಸಿಂಗ್ ಮಿಂಚಿದರೆ, ಬೌಲಿಂಗ್​ನಲ್ಲಿ ರವಿ ರವಿ ಬಿಷ್ಣೋಯ್ ಕಮಾಲ್ ಮಾಡಿದರು.

2 / 8
ಐದು ಪಂದ್ಯಗಳ ಈ ಟಿ20 ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ ಯುವ ಲೆಗ್ ಸ್ಪಿನ್ನರ್, ಆಡಿದ ಐದು ಪಂದ್ಯಗಳಲ್ಲಿ ಬರೋಬ್ಬರಿ 9 ವಿಕೆಟ್ ಉರುಳಿಸಿದರು. ಇದರೊಂದಿಗೆ ಸರಣಿ ಶ್ರೇಷ್ಠ ಪ್ರಶಸ್ತಿಗೂ ಭಾಜನರಾದರು. ಅಲ್ಲದೆ ಈ ಹಿಂದೆ ಯಾವುದೇ ಭಾರತೀಯ ಸ್ಪಿನ್ ಬೌಲರ್ ಮಾಡಲಾಗದ ಸಾಧನೆಯನ್ನು ಮಾಡಿದರು.

ಐದು ಪಂದ್ಯಗಳ ಈ ಟಿ20 ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ ಯುವ ಲೆಗ್ ಸ್ಪಿನ್ನರ್, ಆಡಿದ ಐದು ಪಂದ್ಯಗಳಲ್ಲಿ ಬರೋಬ್ಬರಿ 9 ವಿಕೆಟ್ ಉರುಳಿಸಿದರು. ಇದರೊಂದಿಗೆ ಸರಣಿ ಶ್ರೇಷ್ಠ ಪ್ರಶಸ್ತಿಗೂ ಭಾಜನರಾದರು. ಅಲ್ಲದೆ ಈ ಹಿಂದೆ ಯಾವುದೇ ಭಾರತೀಯ ಸ್ಪಿನ್ ಬೌಲರ್ ಮಾಡಲಾಗದ ಸಾಧನೆಯನ್ನು ಮಾಡಿದರು.

3 / 8
ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿ ಸೇರಿದಂತೆ ರವಿ ಬಿಷ್ಣೋಯ್ ಭಾರತದ ಪರ ಇದುವರೆಗೆ 10 ಟಿ20 ಪಂದ್ಯಗಳನ್ನು ಆಡಿದ್ದಾರೆ. ಈ ಹತ್ತೂ ಪಂದ್ಯಗಳಲ್ಲೂ ಭಾರತದ ಪರ ಕನಿಷ್ಠ ಒಂದು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿ ಸೇರಿದಂತೆ ರವಿ ಬಿಷ್ಣೋಯ್ ಭಾರತದ ಪರ ಇದುವರೆಗೆ 10 ಟಿ20 ಪಂದ್ಯಗಳನ್ನು ಆಡಿದ್ದಾರೆ. ಈ ಹತ್ತೂ ಪಂದ್ಯಗಳಲ್ಲೂ ಭಾರತದ ಪರ ಕನಿಷ್ಠ ಒಂದು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

4 / 8
ಇದರೊಂದಿಗೆ ಸತತ 10 ಟಿ20 ಪಂದ್ಯಗಳಲ್ಲಿ ಕನಿಷ್ಠ 1 ವಿಕೆಟ್ ಪಡೆದ ಭಾರತದ ಮೊದಲ ಸ್ಪಿನ್ನರ್ ಎಂಬ ಹೆಗ್ಗಳಿಕೆಗೂ ರವಿ ಬಿಷ್ಣೋಯ್ ಪಾತ್ರರಾಗಿದ್ದಾರೆ.

ಇದರೊಂದಿಗೆ ಸತತ 10 ಟಿ20 ಪಂದ್ಯಗಳಲ್ಲಿ ಕನಿಷ್ಠ 1 ವಿಕೆಟ್ ಪಡೆದ ಭಾರತದ ಮೊದಲ ಸ್ಪಿನ್ನರ್ ಎಂಬ ಹೆಗ್ಗಳಿಕೆಗೂ ರವಿ ಬಿಷ್ಣೋಯ್ ಪಾತ್ರರಾಗಿದ್ದಾರೆ.

5 / 8
ಇನ್ನು ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಭಾರತದ ಮಾಜಿ ವೇಗಿ ಆಶಿಶ್ ನೆಹ್ರಾ, ಸತತ 13 ಟಿ20 ಪಂದ್ಯಗಳಲ್ಲಿ ಕನಿಷ್ಠ 1 ವಿಕೆಟ್ ಪಡೆದ ಸಾಧನೆ ಮಾಡಿದ್ದರು.

ಇನ್ನು ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಭಾರತದ ಮಾಜಿ ವೇಗಿ ಆಶಿಶ್ ನೆಹ್ರಾ, ಸತತ 13 ಟಿ20 ಪಂದ್ಯಗಳಲ್ಲಿ ಕನಿಷ್ಠ 1 ವಿಕೆಟ್ ಪಡೆದ ಸಾಧನೆ ಮಾಡಿದ್ದರು.

6 / 8
ಇದಲ್ಲದೆ ದ್ವಿಪಕ್ಷೀಯ ಟಿ20 ಸರಣಿಯಲ್ಲಿ ಭಾರತ ಪರ ಅತಿ ಹೆಚ್ಚು ವಿಕೆಟ್ ಪಡೆದ ದಾಖಲೆಯನ್ನೂ ರವಿ ಬಿಷ್ಣೋಯ್ ಸರಿಗಟ್ಟಿದ್ದಾರೆ. ಇದಕ್ಕೂ ಮುನ್ನ 2016ರಲ್ಲಿ ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ರವಿಚಂದ್ರನ್ ಅಶ್ವಿನ್ ಒಟ್ಟು 9 ವಿಕೆಟ್ ಪಡೆದಿದ್ದರು.

ಇದಲ್ಲದೆ ದ್ವಿಪಕ್ಷೀಯ ಟಿ20 ಸರಣಿಯಲ್ಲಿ ಭಾರತ ಪರ ಅತಿ ಹೆಚ್ಚು ವಿಕೆಟ್ ಪಡೆದ ದಾಖಲೆಯನ್ನೂ ರವಿ ಬಿಷ್ಣೋಯ್ ಸರಿಗಟ್ಟಿದ್ದಾರೆ. ಇದಕ್ಕೂ ಮುನ್ನ 2016ರಲ್ಲಿ ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ರವಿಚಂದ್ರನ್ ಅಶ್ವಿನ್ ಒಟ್ಟು 9 ವಿಕೆಟ್ ಪಡೆದಿದ್ದರು.

7 / 8
ಇನ್ನು ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಯುಜುವೇಂದ್ರ ಚಹಾಲ್ 2017ರಲ್ಲಿ ಇಂಗ್ಲೆಂಡ್ ಮತ್ತು ಶ್ರೀಲಂಕಾ ವಿರುದ್ಧದ ಟಿ20 ಸರಣಿಯಲ್ಲಿ ತಲಾ 8 ವಿಕೆಟ್ ಪಡೆದಿದ್ದರು.

ಇನ್ನು ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಯುಜುವೇಂದ್ರ ಚಹಾಲ್ 2017ರಲ್ಲಿ ಇಂಗ್ಲೆಂಡ್ ಮತ್ತು ಶ್ರೀಲಂಕಾ ವಿರುದ್ಧದ ಟಿ20 ಸರಣಿಯಲ್ಲಿ ತಲಾ 8 ವಿಕೆಟ್ ಪಡೆದಿದ್ದರು.

8 / 8
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!