AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

900 vs 265: ಅನುಭವಿಗಳ ಮುಂದೆ ಟೀಮ್ ಇಂಡಿಯಾದ ಅನಾನುಭವಿಗಳು

India vs Australia: ಆಸ್ಟ್ರೇಲಿಯಾದಲ್ಲಿ ಸರಣಿ ಗೆಲ್ಲಬೇಕಿದ್ದರೆ ವೇಗದ ಬೌಲರ್​ಗಳು ಮಿಂಚಲೇಬೇಕು. ಏಕೆಂದರೆ ಕಾಂಗರೂ ನಾಡಿನಲ್ಲಿ ವೇಗಿಗಳಿಗೆ ಸಹಕಾರಿಯಾಗುವಂತಹ ಪಿಚ್​ಗಳನ್ನು ನಿರ್ಮಿಸಲಾಗುತ್ತದೆ. ಆದರೀಗ ಭಾರತ ತಂಡದಲ್ಲಿ ನುರಿತ ವೇಗಿಗಳು ಇಲ್ಲದಿರುವುದು ಹೊಸ ಚಿಂತೆಗೆ ಕಾರಣವಾಗಿದೆ.

ಝಾಹಿರ್ ಯೂಸುಫ್
|

Updated on: Nov 18, 2024 | 10:53 AM

Share
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗೆ ವೇದಿಕೆ ಸಿದ್ಧವಾಗಿದೆ. ನವೆಂಬರ್ 22 ರಿಂದ ಶುರುವಾಗಲಿರುವ ಈ ಸರಣಿಯ ಮೊದಲ ಪಂದ್ಯಕ್ಕೆ ಪರ್ತ್​ನ​ ಒಪ್ಟಸ್ ಸ್ಟೇಡಿಯಂ ಆತಿಥ್ಯವಹಿಸಲಿದೆ. ಈ ಸರಣಿಯನ್ನು ಗೆಲ್ಲಲು ಟೀಮ್ ಇಂಡಿಯಾದ ವೇಗಾಸ್ತ್ರವನ್ನು ಪ್ರಯೋಗಿಸಲೇಬೇಕು. ಆದರೆ ಪ್ರಸ್ತುತ ತಂಡದಲ್ಲಿ ಅನಾನುಭವಿಗಳೇ ತುಂಬಿರುವುದು ಟೀಮ್ ಇಂಡಿಯಾದ ಹೊಸ ಚಿಂತೆಗೆ ಕಾರಣವಾಗಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗೆ ವೇದಿಕೆ ಸಿದ್ಧವಾಗಿದೆ. ನವೆಂಬರ್ 22 ರಿಂದ ಶುರುವಾಗಲಿರುವ ಈ ಸರಣಿಯ ಮೊದಲ ಪಂದ್ಯಕ್ಕೆ ಪರ್ತ್​ನ​ ಒಪ್ಟಸ್ ಸ್ಟೇಡಿಯಂ ಆತಿಥ್ಯವಹಿಸಲಿದೆ. ಈ ಸರಣಿಯನ್ನು ಗೆಲ್ಲಲು ಟೀಮ್ ಇಂಡಿಯಾದ ವೇಗಾಸ್ತ್ರವನ್ನು ಪ್ರಯೋಗಿಸಲೇಬೇಕು. ಆದರೆ ಪ್ರಸ್ತುತ ತಂಡದಲ್ಲಿ ಅನಾನುಭವಿಗಳೇ ತುಂಬಿರುವುದು ಟೀಮ್ ಇಂಡಿಯಾದ ಹೊಸ ಚಿಂತೆಗೆ ಕಾರಣವಾಗಿದೆ.

1 / 5
ಈ ಬಾರಿಯ ಸರಣಿಗೆ ಬಿಸಿಸಿಐ ಆಯ್ಕೆ ಸಮಿತಿ 6 ವೇಗಿಗಳನ್ನು ಆಯ್ಕೆ ಮಾಡಿದೆ. ಈ ವೇಗಿಗಳಲ್ಲಿ ಜಸ್​ಪ್ರೀತ್ ಬುಮ್ರಾ ಅವರನ್ನು ಹೊರತುಪಡಿಸಿ ಯಾವುದೇ ಬೌಲರ್ 100 ವಿಕೆಟ್​ಗಳನ್ನು ಕಬಳಿಸಿಲ್ಲ ಎಂಬುದು ಉಲ್ಲೇಖಾರ್ಹ. ಅದರಲ್ಲೂ ಇಬ್ಬರು ವೇಗಿಗಳಿಗೆ ಇದು ಚೊಚ್ಚಲ ಟೆಸ್ಟ್ ಸರಣಿ.

ಈ ಬಾರಿಯ ಸರಣಿಗೆ ಬಿಸಿಸಿಐ ಆಯ್ಕೆ ಸಮಿತಿ 6 ವೇಗಿಗಳನ್ನು ಆಯ್ಕೆ ಮಾಡಿದೆ. ಈ ವೇಗಿಗಳಲ್ಲಿ ಜಸ್​ಪ್ರೀತ್ ಬುಮ್ರಾ ಅವರನ್ನು ಹೊರತುಪಡಿಸಿ ಯಾವುದೇ ಬೌಲರ್ 100 ವಿಕೆಟ್​ಗಳನ್ನು ಕಬಳಿಸಿಲ್ಲ ಎಂಬುದು ಉಲ್ಲೇಖಾರ್ಹ. ಅದರಲ್ಲೂ ಇಬ್ಬರು ವೇಗಿಗಳಿಗೆ ಇದು ಚೊಚ್ಚಲ ಟೆಸ್ಟ್ ಸರಣಿ.

2 / 5
ಇಲ್ಲಿ ಟೀಮ್ ಇಂಡಿಯಾ ಪರ ಅನುಭವಿ ಬೌಲರ್ ಆಗಿ ಜಸ್​ಪ್ರೀತ್ ಬುಮ್ರಾ ಕಾಣಿಸಿಕೊಂಡಿದ್ದಾರೆ. ಬುಮ್ರಾ 173 ಟೆಸ್ಟ್ ವಿಕೆಟ್ ಹೊಂದಿದ್ದರೆ, ಮೊಹಮ್ಮದ್ ಸಿರಾಜ್ 80 ವಿಕೆಟ್​ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಇನ್ನುಳಿದಂತೆ ಆಕಾಶ್ ದೀಪ್ (10), ಪ್ರಸಿದ್ಧ್ ಕೃಷ್ಣ (2), ಹರ್ಷಿತ್ ರಾಣಾ (0) ಮತ್ತು ನಿತೀಶ್ ಕುಮಾರ್ ರೆಡ್ಡಿ (0) ಇದ್ದಾರೆ. ಅಂದರೆ ಭಾರತೀಯ ವೇಗಿಗಳ ಒಟ್ಟು ವಿಕೆಟ್​ಗಳ ಸಂಖ್ಯೆ 265 ಮಾತ್ರ.

ಇಲ್ಲಿ ಟೀಮ್ ಇಂಡಿಯಾ ಪರ ಅನುಭವಿ ಬೌಲರ್ ಆಗಿ ಜಸ್​ಪ್ರೀತ್ ಬುಮ್ರಾ ಕಾಣಿಸಿಕೊಂಡಿದ್ದಾರೆ. ಬುಮ್ರಾ 173 ಟೆಸ್ಟ್ ವಿಕೆಟ್ ಹೊಂದಿದ್ದರೆ, ಮೊಹಮ್ಮದ್ ಸಿರಾಜ್ 80 ವಿಕೆಟ್​ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಇನ್ನುಳಿದಂತೆ ಆಕಾಶ್ ದೀಪ್ (10), ಪ್ರಸಿದ್ಧ್ ಕೃಷ್ಣ (2), ಹರ್ಷಿತ್ ರಾಣಾ (0) ಮತ್ತು ನಿತೀಶ್ ಕುಮಾರ್ ರೆಡ್ಡಿ (0) ಇದ್ದಾರೆ. ಅಂದರೆ ಭಾರತೀಯ ವೇಗಿಗಳ ಒಟ್ಟು ವಿಕೆಟ್​ಗಳ ಸಂಖ್ಯೆ 265 ಮಾತ್ರ.

3 / 5
ಅದೇ ಆಸ್ಟ್ರೇಲಿಯಾ ತಂಡದಲ್ಲಿರುವ ವೇಗಿಗಳು ಜೊತೆಗೂಡಿ ಈವರೆಗೆ 900 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಇಲ್ಲಿ ಮಿಚೆಲ್ ಸ್ಟಾರ್ಕ್​ 358 ಟೆಸ್ಟ್ ವಿಕೆಟ್​ಗಳನ್ನು ಹೊಂದಿದ್ದು, ಜೋಶ್ ಹ್ಯಾಝಲ್​ವುಡ್ 273 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಹಾಗೆಯೇ ನಾಯಕ ಪ್ಯಾಟ್ ಕಮಿನ್ಸ್ 269 ವಿಕೆಟ್​ಗಳನ್ನು ಹೊಂದಿದ್ದಾರೆ.

ಅದೇ ಆಸ್ಟ್ರೇಲಿಯಾ ತಂಡದಲ್ಲಿರುವ ವೇಗಿಗಳು ಜೊತೆಗೂಡಿ ಈವರೆಗೆ 900 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಇಲ್ಲಿ ಮಿಚೆಲ್ ಸ್ಟಾರ್ಕ್​ 358 ಟೆಸ್ಟ್ ವಿಕೆಟ್​ಗಳನ್ನು ಹೊಂದಿದ್ದು, ಜೋಶ್ ಹ್ಯಾಝಲ್​ವುಡ್ 273 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಹಾಗೆಯೇ ನಾಯಕ ಪ್ಯಾಟ್ ಕಮಿನ್ಸ್ 269 ವಿಕೆಟ್​ಗಳನ್ನು ಹೊಂದಿದ್ದಾರೆ.

4 / 5
ಅಂದರೆ ಇಲ್ಲಿ ವಿಕೆಟ್​ಗಳ ಸಂಖ್ಯೆಯಲ್ಲಿ ಹಾಗೂ ಅನುಭವದಲ್ಲಿ ಆಸ್ಟ್ರೇಲಿಯಾ ವೇಗಿಗಳಿಗೆ ಸರಿಸಾಟಿಯಾಗಿ ಭಾರತದ ಯಾವುದೇ ಬೌಲರ್ ಇಲ್ಲ. ಅಲ್ಲದೆ ಜಸ್​ಪ್ರೀತ್ ಬುಮ್ರಾ ಅವರನ್ನು ಹೊರತುಪಡಿಸಿ ಭಾರತವು ನುರಿತ ಅನುಭವಿ ಬೌಲರ್ ಅನ್ನು ಸಹ ಹೊಂದಿಲ್ಲ. ಹೀಗಾಗಿಯೇ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯನ್ನು ಇದೀಗ ಅನುಭವಿ ವೇಗಿಗಳು vs ಅನಾನುಭವಿ ವೇಗಿಗಳ ನಡುವಣ ಕದನ ಎಂದು ಬಿಂಬಿಸಲಾಗುತ್ತಿದೆ. ಈ ಕದನದಲ್ಲಿ ಗೆಲ್ಲೋರು ಯಾರು ಎಂಬುದೇ ಈಗ ಕುತೂಹಲ.

ಅಂದರೆ ಇಲ್ಲಿ ವಿಕೆಟ್​ಗಳ ಸಂಖ್ಯೆಯಲ್ಲಿ ಹಾಗೂ ಅನುಭವದಲ್ಲಿ ಆಸ್ಟ್ರೇಲಿಯಾ ವೇಗಿಗಳಿಗೆ ಸರಿಸಾಟಿಯಾಗಿ ಭಾರತದ ಯಾವುದೇ ಬೌಲರ್ ಇಲ್ಲ. ಅಲ್ಲದೆ ಜಸ್​ಪ್ರೀತ್ ಬುಮ್ರಾ ಅವರನ್ನು ಹೊರತುಪಡಿಸಿ ಭಾರತವು ನುರಿತ ಅನುಭವಿ ಬೌಲರ್ ಅನ್ನು ಸಹ ಹೊಂದಿಲ್ಲ. ಹೀಗಾಗಿಯೇ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯನ್ನು ಇದೀಗ ಅನುಭವಿ ವೇಗಿಗಳು vs ಅನಾನುಭವಿ ವೇಗಿಗಳ ನಡುವಣ ಕದನ ಎಂದು ಬಿಂಬಿಸಲಾಗುತ್ತಿದೆ. ಈ ಕದನದಲ್ಲಿ ಗೆಲ್ಲೋರು ಯಾರು ಎಂಬುದೇ ಈಗ ಕುತೂಹಲ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
4500 ಕೋಟಿ ರೂ. ವಂಚನೆ ಕೇಸ್: ಶಿವಂ ಅಸೋಸಿಯೇಟ್‌ ಮಾಲೀಕ ಅರೆಸ್ಟ್​​​
4500 ಕೋಟಿ ರೂ. ವಂಚನೆ ಕೇಸ್: ಶಿವಂ ಅಸೋಸಿಯೇಟ್‌ ಮಾಲೀಕ ಅರೆಸ್ಟ್​​​
ಹೈದರಾಬಾದ್-ಜೈಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ದುರಂತ
ಹೈದರಾಬಾದ್-ಜೈಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ದುರಂತ
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ