AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

900 vs 265: ಅನುಭವಿಗಳ ಮುಂದೆ ಟೀಮ್ ಇಂಡಿಯಾದ ಅನಾನುಭವಿಗಳು

India vs Australia: ಆಸ್ಟ್ರೇಲಿಯಾದಲ್ಲಿ ಸರಣಿ ಗೆಲ್ಲಬೇಕಿದ್ದರೆ ವೇಗದ ಬೌಲರ್​ಗಳು ಮಿಂಚಲೇಬೇಕು. ಏಕೆಂದರೆ ಕಾಂಗರೂ ನಾಡಿನಲ್ಲಿ ವೇಗಿಗಳಿಗೆ ಸಹಕಾರಿಯಾಗುವಂತಹ ಪಿಚ್​ಗಳನ್ನು ನಿರ್ಮಿಸಲಾಗುತ್ತದೆ. ಆದರೀಗ ಭಾರತ ತಂಡದಲ್ಲಿ ನುರಿತ ವೇಗಿಗಳು ಇಲ್ಲದಿರುವುದು ಹೊಸ ಚಿಂತೆಗೆ ಕಾರಣವಾಗಿದೆ.

ಝಾಹಿರ್ ಯೂಸುಫ್
|

Updated on: Nov 18, 2024 | 10:53 AM

Share
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗೆ ವೇದಿಕೆ ಸಿದ್ಧವಾಗಿದೆ. ನವೆಂಬರ್ 22 ರಿಂದ ಶುರುವಾಗಲಿರುವ ಈ ಸರಣಿಯ ಮೊದಲ ಪಂದ್ಯಕ್ಕೆ ಪರ್ತ್​ನ​ ಒಪ್ಟಸ್ ಸ್ಟೇಡಿಯಂ ಆತಿಥ್ಯವಹಿಸಲಿದೆ. ಈ ಸರಣಿಯನ್ನು ಗೆಲ್ಲಲು ಟೀಮ್ ಇಂಡಿಯಾದ ವೇಗಾಸ್ತ್ರವನ್ನು ಪ್ರಯೋಗಿಸಲೇಬೇಕು. ಆದರೆ ಪ್ರಸ್ತುತ ತಂಡದಲ್ಲಿ ಅನಾನುಭವಿಗಳೇ ತುಂಬಿರುವುದು ಟೀಮ್ ಇಂಡಿಯಾದ ಹೊಸ ಚಿಂತೆಗೆ ಕಾರಣವಾಗಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗೆ ವೇದಿಕೆ ಸಿದ್ಧವಾಗಿದೆ. ನವೆಂಬರ್ 22 ರಿಂದ ಶುರುವಾಗಲಿರುವ ಈ ಸರಣಿಯ ಮೊದಲ ಪಂದ್ಯಕ್ಕೆ ಪರ್ತ್​ನ​ ಒಪ್ಟಸ್ ಸ್ಟೇಡಿಯಂ ಆತಿಥ್ಯವಹಿಸಲಿದೆ. ಈ ಸರಣಿಯನ್ನು ಗೆಲ್ಲಲು ಟೀಮ್ ಇಂಡಿಯಾದ ವೇಗಾಸ್ತ್ರವನ್ನು ಪ್ರಯೋಗಿಸಲೇಬೇಕು. ಆದರೆ ಪ್ರಸ್ತುತ ತಂಡದಲ್ಲಿ ಅನಾನುಭವಿಗಳೇ ತುಂಬಿರುವುದು ಟೀಮ್ ಇಂಡಿಯಾದ ಹೊಸ ಚಿಂತೆಗೆ ಕಾರಣವಾಗಿದೆ.

1 / 5
ಈ ಬಾರಿಯ ಸರಣಿಗೆ ಬಿಸಿಸಿಐ ಆಯ್ಕೆ ಸಮಿತಿ 6 ವೇಗಿಗಳನ್ನು ಆಯ್ಕೆ ಮಾಡಿದೆ. ಈ ವೇಗಿಗಳಲ್ಲಿ ಜಸ್​ಪ್ರೀತ್ ಬುಮ್ರಾ ಅವರನ್ನು ಹೊರತುಪಡಿಸಿ ಯಾವುದೇ ಬೌಲರ್ 100 ವಿಕೆಟ್​ಗಳನ್ನು ಕಬಳಿಸಿಲ್ಲ ಎಂಬುದು ಉಲ್ಲೇಖಾರ್ಹ. ಅದರಲ್ಲೂ ಇಬ್ಬರು ವೇಗಿಗಳಿಗೆ ಇದು ಚೊಚ್ಚಲ ಟೆಸ್ಟ್ ಸರಣಿ.

ಈ ಬಾರಿಯ ಸರಣಿಗೆ ಬಿಸಿಸಿಐ ಆಯ್ಕೆ ಸಮಿತಿ 6 ವೇಗಿಗಳನ್ನು ಆಯ್ಕೆ ಮಾಡಿದೆ. ಈ ವೇಗಿಗಳಲ್ಲಿ ಜಸ್​ಪ್ರೀತ್ ಬುಮ್ರಾ ಅವರನ್ನು ಹೊರತುಪಡಿಸಿ ಯಾವುದೇ ಬೌಲರ್ 100 ವಿಕೆಟ್​ಗಳನ್ನು ಕಬಳಿಸಿಲ್ಲ ಎಂಬುದು ಉಲ್ಲೇಖಾರ್ಹ. ಅದರಲ್ಲೂ ಇಬ್ಬರು ವೇಗಿಗಳಿಗೆ ಇದು ಚೊಚ್ಚಲ ಟೆಸ್ಟ್ ಸರಣಿ.

2 / 5
ಇಲ್ಲಿ ಟೀಮ್ ಇಂಡಿಯಾ ಪರ ಅನುಭವಿ ಬೌಲರ್ ಆಗಿ ಜಸ್​ಪ್ರೀತ್ ಬುಮ್ರಾ ಕಾಣಿಸಿಕೊಂಡಿದ್ದಾರೆ. ಬುಮ್ರಾ 173 ಟೆಸ್ಟ್ ವಿಕೆಟ್ ಹೊಂದಿದ್ದರೆ, ಮೊಹಮ್ಮದ್ ಸಿರಾಜ್ 80 ವಿಕೆಟ್​ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಇನ್ನುಳಿದಂತೆ ಆಕಾಶ್ ದೀಪ್ (10), ಪ್ರಸಿದ್ಧ್ ಕೃಷ್ಣ (2), ಹರ್ಷಿತ್ ರಾಣಾ (0) ಮತ್ತು ನಿತೀಶ್ ಕುಮಾರ್ ರೆಡ್ಡಿ (0) ಇದ್ದಾರೆ. ಅಂದರೆ ಭಾರತೀಯ ವೇಗಿಗಳ ಒಟ್ಟು ವಿಕೆಟ್​ಗಳ ಸಂಖ್ಯೆ 265 ಮಾತ್ರ.

ಇಲ್ಲಿ ಟೀಮ್ ಇಂಡಿಯಾ ಪರ ಅನುಭವಿ ಬೌಲರ್ ಆಗಿ ಜಸ್​ಪ್ರೀತ್ ಬುಮ್ರಾ ಕಾಣಿಸಿಕೊಂಡಿದ್ದಾರೆ. ಬುಮ್ರಾ 173 ಟೆಸ್ಟ್ ವಿಕೆಟ್ ಹೊಂದಿದ್ದರೆ, ಮೊಹಮ್ಮದ್ ಸಿರಾಜ್ 80 ವಿಕೆಟ್​ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಇನ್ನುಳಿದಂತೆ ಆಕಾಶ್ ದೀಪ್ (10), ಪ್ರಸಿದ್ಧ್ ಕೃಷ್ಣ (2), ಹರ್ಷಿತ್ ರಾಣಾ (0) ಮತ್ತು ನಿತೀಶ್ ಕುಮಾರ್ ರೆಡ್ಡಿ (0) ಇದ್ದಾರೆ. ಅಂದರೆ ಭಾರತೀಯ ವೇಗಿಗಳ ಒಟ್ಟು ವಿಕೆಟ್​ಗಳ ಸಂಖ್ಯೆ 265 ಮಾತ್ರ.

3 / 5
ಅದೇ ಆಸ್ಟ್ರೇಲಿಯಾ ತಂಡದಲ್ಲಿರುವ ವೇಗಿಗಳು ಜೊತೆಗೂಡಿ ಈವರೆಗೆ 900 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಇಲ್ಲಿ ಮಿಚೆಲ್ ಸ್ಟಾರ್ಕ್​ 358 ಟೆಸ್ಟ್ ವಿಕೆಟ್​ಗಳನ್ನು ಹೊಂದಿದ್ದು, ಜೋಶ್ ಹ್ಯಾಝಲ್​ವುಡ್ 273 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಹಾಗೆಯೇ ನಾಯಕ ಪ್ಯಾಟ್ ಕಮಿನ್ಸ್ 269 ವಿಕೆಟ್​ಗಳನ್ನು ಹೊಂದಿದ್ದಾರೆ.

ಅದೇ ಆಸ್ಟ್ರೇಲಿಯಾ ತಂಡದಲ್ಲಿರುವ ವೇಗಿಗಳು ಜೊತೆಗೂಡಿ ಈವರೆಗೆ 900 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಇಲ್ಲಿ ಮಿಚೆಲ್ ಸ್ಟಾರ್ಕ್​ 358 ಟೆಸ್ಟ್ ವಿಕೆಟ್​ಗಳನ್ನು ಹೊಂದಿದ್ದು, ಜೋಶ್ ಹ್ಯಾಝಲ್​ವುಡ್ 273 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಹಾಗೆಯೇ ನಾಯಕ ಪ್ಯಾಟ್ ಕಮಿನ್ಸ್ 269 ವಿಕೆಟ್​ಗಳನ್ನು ಹೊಂದಿದ್ದಾರೆ.

4 / 5
ಅಂದರೆ ಇಲ್ಲಿ ವಿಕೆಟ್​ಗಳ ಸಂಖ್ಯೆಯಲ್ಲಿ ಹಾಗೂ ಅನುಭವದಲ್ಲಿ ಆಸ್ಟ್ರೇಲಿಯಾ ವೇಗಿಗಳಿಗೆ ಸರಿಸಾಟಿಯಾಗಿ ಭಾರತದ ಯಾವುದೇ ಬೌಲರ್ ಇಲ್ಲ. ಅಲ್ಲದೆ ಜಸ್​ಪ್ರೀತ್ ಬುಮ್ರಾ ಅವರನ್ನು ಹೊರತುಪಡಿಸಿ ಭಾರತವು ನುರಿತ ಅನುಭವಿ ಬೌಲರ್ ಅನ್ನು ಸಹ ಹೊಂದಿಲ್ಲ. ಹೀಗಾಗಿಯೇ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯನ್ನು ಇದೀಗ ಅನುಭವಿ ವೇಗಿಗಳು vs ಅನಾನುಭವಿ ವೇಗಿಗಳ ನಡುವಣ ಕದನ ಎಂದು ಬಿಂಬಿಸಲಾಗುತ್ತಿದೆ. ಈ ಕದನದಲ್ಲಿ ಗೆಲ್ಲೋರು ಯಾರು ಎಂಬುದೇ ಈಗ ಕುತೂಹಲ.

ಅಂದರೆ ಇಲ್ಲಿ ವಿಕೆಟ್​ಗಳ ಸಂಖ್ಯೆಯಲ್ಲಿ ಹಾಗೂ ಅನುಭವದಲ್ಲಿ ಆಸ್ಟ್ರೇಲಿಯಾ ವೇಗಿಗಳಿಗೆ ಸರಿಸಾಟಿಯಾಗಿ ಭಾರತದ ಯಾವುದೇ ಬೌಲರ್ ಇಲ್ಲ. ಅಲ್ಲದೆ ಜಸ್​ಪ್ರೀತ್ ಬುಮ್ರಾ ಅವರನ್ನು ಹೊರತುಪಡಿಸಿ ಭಾರತವು ನುರಿತ ಅನುಭವಿ ಬೌಲರ್ ಅನ್ನು ಸಹ ಹೊಂದಿಲ್ಲ. ಹೀಗಾಗಿಯೇ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯನ್ನು ಇದೀಗ ಅನುಭವಿ ವೇಗಿಗಳು vs ಅನಾನುಭವಿ ವೇಗಿಗಳ ನಡುವಣ ಕದನ ಎಂದು ಬಿಂಬಿಸಲಾಗುತ್ತಿದೆ. ಈ ಕದನದಲ್ಲಿ ಗೆಲ್ಲೋರು ಯಾರು ಎಂಬುದೇ ಈಗ ಕುತೂಹಲ.

5 / 5
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?