AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಟೀಮ್ ಇಂಡಿಯಾಗೆ ಮತ್ತೆ ‘ಹೆಡ್’ಏಕ್

India vs Australia: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ನಾಲ್ಕನೇ ಟೆಸ್ಟ್ ಪಂದ್ಯವು ಡಿಸೆಂಬರ್ 26 ರಿಂದ ಶುರುವಾಗಲಿದೆ. ಮೆಲ್ಬೋರ್ನ್​​ನ ಎಂಸಿಜಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಉಭಯ ತಂಡಗಳ ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಪಂದ್ಯದಲ್ಲಿ ಗೆಲ್ಲುವ ತಂಡ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಹಾದಿಯನ್ನು ಸುಗಮಗೊಳಿಸಲಿದೆ.

ಝಾಹಿರ್ ಯೂಸುಫ್
|

Updated on:Dec 19, 2024 | 11:55 AM

Share
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 4ನೇ ಪಂದ್ಯವು ಡಿಸೆಂಬರ್ 26 ರಿಂದ ಶುರುವಾಗಲಿದೆ. ಮೆಲ್ಬೋರ್ನ್​​ನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಟ್ರಾವಿಸ್ ಹೆಡ್ ಅಲಭ್ಯರಾಗಲಿದ್ದಾರೆ ಎಂದು ಸುದ್ದಿಯಾಗಿತ್ತು. ಬ್ರಿಸ್ಬೇನ್​ನಲ್ಲಿ ನಡೆದ 3ನೇ ಟೆಸ್ಟ್ ಪಂದ್ಯದ ವೇಳೆ ಹೆಡ್ ಗಾಯಗೊಂಡಿದ್ದು, ಹೀಗಾಗಿ 4ನೇ ಪಂದ್ಯಕ್ಕೆ ಅನುಮಾನ ಎನ್ನಲಾಗಿತ್ತು.

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 4ನೇ ಪಂದ್ಯವು ಡಿಸೆಂಬರ್ 26 ರಿಂದ ಶುರುವಾಗಲಿದೆ. ಮೆಲ್ಬೋರ್ನ್​​ನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಟ್ರಾವಿಸ್ ಹೆಡ್ ಅಲಭ್ಯರಾಗಲಿದ್ದಾರೆ ಎಂದು ಸುದ್ದಿಯಾಗಿತ್ತು. ಬ್ರಿಸ್ಬೇನ್​ನಲ್ಲಿ ನಡೆದ 3ನೇ ಟೆಸ್ಟ್ ಪಂದ್ಯದ ವೇಳೆ ಹೆಡ್ ಗಾಯಗೊಂಡಿದ್ದು, ಹೀಗಾಗಿ 4ನೇ ಪಂದ್ಯಕ್ಕೆ ಅನುಮಾನ ಎನ್ನಲಾಗಿತ್ತು.

1 / 6
ಆದರೀಗ ಟ್ರಾವಿಸ್ ಹೆಡ್ ಮೆಲ್ಬೋರ್ನ್ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ನನ್ನ ಗಾಯವು ಗಂಭೀರವಲ್ಲ. ಕಾಲಿನಲ್ಲಿ ಸ್ವಲ್ಪ ನೋವು ಕಾಣಿಸಿಕೊಂಡಿದೆ ಅಷ್ಟೇ. ಅದು ಮುಂಬರುವ ಟೆಸ್ಟ್ ಪಂದ್ಯದ ವೇಳೆಗೆ ಸಂಪೂರ್ಣ ಗುಣವಾಗಲಿದೆ ಎಂದು ಹೆಡ್ ತಿಳಿಸಿದ್ದಾರೆ.

ಆದರೀಗ ಟ್ರಾವಿಸ್ ಹೆಡ್ ಮೆಲ್ಬೋರ್ನ್ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ನನ್ನ ಗಾಯವು ಗಂಭೀರವಲ್ಲ. ಕಾಲಿನಲ್ಲಿ ಸ್ವಲ್ಪ ನೋವು ಕಾಣಿಸಿಕೊಂಡಿದೆ ಅಷ್ಟೇ. ಅದು ಮುಂಬರುವ ಟೆಸ್ಟ್ ಪಂದ್ಯದ ವೇಳೆಗೆ ಸಂಪೂರ್ಣ ಗುಣವಾಗಲಿದೆ ಎಂದು ಹೆಡ್ ತಿಳಿಸಿದ್ದಾರೆ.

2 / 6
ಅತ್ತ ಆಸ್ಟ್ರೇಲಿಯಾ ನಾಯಕ ಪ್ಯಾಟ್ ಕಮಿನ್ಸ್ ಕೂಡ ಟ್ರಾವಿಸ್ ಹೆಡ್ ಅವರ ಗಾಯವು ಗಂಭೀರವಲ್ಲ ಎಂದು ಖಚಿತಪಡಿಸಿದ್ದಾರೆ. ಮೂರನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಹೆಚ್ಚು ಹೊತ್ತು ಕ್ರೀಸ್​ನಲ್ಲಿದ್ದ ಕಾರಣ ಅವರ ಕಾಲಿನಲ್ಲಿ ನೋವು ಕಾಣಿಸಿಕೊಂಡಿದೆ. ಇದಾಗ್ಯೂ ಅವರು ಬಾಕ್ಸಿಂಗ್ ಡೇ ಟೆಸ್ಟ್​ಗೆ ಲಭ್ಯರಿರಲಿದ್ದಾರೆ ಎಂದು ತಿಳಿಸಿದ್ದಾರೆ.

ಅತ್ತ ಆಸ್ಟ್ರೇಲಿಯಾ ನಾಯಕ ಪ್ಯಾಟ್ ಕಮಿನ್ಸ್ ಕೂಡ ಟ್ರಾವಿಸ್ ಹೆಡ್ ಅವರ ಗಾಯವು ಗಂಭೀರವಲ್ಲ ಎಂದು ಖಚಿತಪಡಿಸಿದ್ದಾರೆ. ಮೂರನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಹೆಚ್ಚು ಹೊತ್ತು ಕ್ರೀಸ್​ನಲ್ಲಿದ್ದ ಕಾರಣ ಅವರ ಕಾಲಿನಲ್ಲಿ ನೋವು ಕಾಣಿಸಿಕೊಂಡಿದೆ. ಇದಾಗ್ಯೂ ಅವರು ಬಾಕ್ಸಿಂಗ್ ಡೇ ಟೆಸ್ಟ್​ಗೆ ಲಭ್ಯರಿರಲಿದ್ದಾರೆ ಎಂದು ತಿಳಿಸಿದ್ದಾರೆ.

3 / 6
ಮೆಲ್ಬೋರ್ನ್ ಟೆಸ್ಟ್ ಪಂದ್ಯದ ವೇಳೆಗೆ ನಾನು ಸಂಪೂರ್ಣ ಫಿಟ್ ಆಗಲಿದ್ದೇನೆ. ಅದರಂತೆ ಡಿಸೆಂಬರ್ 26 ರಿಂದ ಆರಂಭವಾಗಲಿರುವ ಭಾರತದ ವಿರುದ್ಧ ಪಂದ್ಯದಲ್ಲಿ ಕಣಕ್ಕಿಳಿಯುವ ವಿಶ್ವಾಸವಿದೆ ಎಂದು ಟ್ರಾವಿಸ್ ಹೆಡ್ ಹೇಳಿದ್ದಾರೆ. ಹೀಗಾಗಿ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 4ನೇ ಪಂದ್ಯದಲ್ಲೂ ಹೆಡ್ ಕಾಣಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಬಹುದು.

ಮೆಲ್ಬೋರ್ನ್ ಟೆಸ್ಟ್ ಪಂದ್ಯದ ವೇಳೆಗೆ ನಾನು ಸಂಪೂರ್ಣ ಫಿಟ್ ಆಗಲಿದ್ದೇನೆ. ಅದರಂತೆ ಡಿಸೆಂಬರ್ 26 ರಿಂದ ಆರಂಭವಾಗಲಿರುವ ಭಾರತದ ವಿರುದ್ಧ ಪಂದ್ಯದಲ್ಲಿ ಕಣಕ್ಕಿಳಿಯುವ ವಿಶ್ವಾಸವಿದೆ ಎಂದು ಟ್ರಾವಿಸ್ ಹೆಡ್ ಹೇಳಿದ್ದಾರೆ. ಹೀಗಾಗಿ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 4ನೇ ಪಂದ್ಯದಲ್ಲೂ ಹೆಡ್ ಕಾಣಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಬಹುದು.

4 / 6
ಇತ್ತ ನಾಲ್ಕನೇ ಪಂದ್ಯಕ್ಕೆ ಹೆಡ್ ಅಲಭ್ಯರಾಗಲಿದ್ದಾರೆ ಎಂಬ ಸುದ್ದಿಯೊಂದಿಗೆ ತುಸು ನಿಟ್ಟುಸಿರು ಬಿಟ್ಟಿದ್ದ ಟೀಮ್ ಇಂಡಿಯಾಗೆ, ಮತ್ತೆ ಹೆಡ್​ಗಾಗಿ ರಣತಂತ್ರ ರೂಪಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಏಕೆಂದರೆ ಟ್ರಾವಿಸ್ ಹೆಡ್ ಟೀಮ್ ಇಂಡಿಯಾ ವಿರುದ್ಧ ಆಡಿದ ಪ್ರಮುಖ ಪಂದ್ಯಗಳಲ್ಲಿ ಶತಕಗಳ ಮೇಲೆ ಶತಕ ಸಿಡಿಸಿ ಅಬ್ಬರಿಸಿದ್ದಾರೆ.

ಇತ್ತ ನಾಲ್ಕನೇ ಪಂದ್ಯಕ್ಕೆ ಹೆಡ್ ಅಲಭ್ಯರಾಗಲಿದ್ದಾರೆ ಎಂಬ ಸುದ್ದಿಯೊಂದಿಗೆ ತುಸು ನಿಟ್ಟುಸಿರು ಬಿಟ್ಟಿದ್ದ ಟೀಮ್ ಇಂಡಿಯಾಗೆ, ಮತ್ತೆ ಹೆಡ್​ಗಾಗಿ ರಣತಂತ್ರ ರೂಪಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಏಕೆಂದರೆ ಟ್ರಾವಿಸ್ ಹೆಡ್ ಟೀಮ್ ಇಂಡಿಯಾ ವಿರುದ್ಧ ಆಡಿದ ಪ್ರಮುಖ ಪಂದ್ಯಗಳಲ್ಲಿ ಶತಕಗಳ ಮೇಲೆ ಶತಕ ಸಿಡಿಸಿ ಅಬ್ಬರಿಸಿದ್ದಾರೆ.

5 / 6
2023ರ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ 137 ರನ್ ಬಾರಿಸಿ ಶುರು ಮಾಡಿದ ಸಿಡಿಲಬ್ಬರ,​ 2023ರ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ (163 ರನ್) ಪಂದ್ಯದಲ್ಲೂ ಮುಂದುವರೆದಿತ್ತು. ಇದೀಗ ಬಾರ್ಡರ್-ಗವಾಸ್ಕರ್ ಸರಣಿಯ 2ನೇ ಮತ್ತು 3ನೇ ಟೆಸ್ಟ್​ನಲ್ಲಿ ಕ್ರಮವಾಗಿ 140 ಹಾಗೂ 152 ರನ್​​ಗಳನ್ನು ಬಾರಿಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪಾಲಿಗೆ ಹೆಡ್ ನಿಜವಾದ ತಲೆನೋವಾಗಿ ಪರಿಣಮಿಸಿದ್ದಾರೆ.

2023ರ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ 137 ರನ್ ಬಾರಿಸಿ ಶುರು ಮಾಡಿದ ಸಿಡಿಲಬ್ಬರ,​ 2023ರ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ (163 ರನ್) ಪಂದ್ಯದಲ್ಲೂ ಮುಂದುವರೆದಿತ್ತು. ಇದೀಗ ಬಾರ್ಡರ್-ಗವಾಸ್ಕರ್ ಸರಣಿಯ 2ನೇ ಮತ್ತು 3ನೇ ಟೆಸ್ಟ್​ನಲ್ಲಿ ಕ್ರಮವಾಗಿ 140 ಹಾಗೂ 152 ರನ್​​ಗಳನ್ನು ಬಾರಿಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪಾಲಿಗೆ ಹೆಡ್ ನಿಜವಾದ ತಲೆನೋವಾಗಿ ಪರಿಣಮಿಸಿದ್ದಾರೆ.

6 / 6

Published On - 11:54 am, Thu, 19 December 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ