AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಕಿರಿಕ್ ಕೊಹ್ಲಿಗೆ ಬಿಸಿ ಮುಟ್ಟಿಸಲು ಮುಂದಾದ ಐಸಿಸಿ

Australia vs India, 4th Test: ಮೆಲ್ಬೋರ್ನ್​ನಲ್ಲಿ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 4ನೇ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡುತ್ತಿರುವ ಆಸ್ಟ್ರೇಲಿಯಾ ಭರ್ಜರಿ ಪ್ರದರ್ಶನ ನೀಡಿದೆ. ಈ ಪಂದ್ಯದ ಮೊದಲ ದಿನದಾಟದ ಟೀ ಬ್ರೇಕ್​ ವೇಳೆಗೆ ಆಸ್ಟ್ರೇಲಿಯಾ ತಂಡವು 2 ವಿಕೆಟ್ ಕಳೆದುಕೊಂಡು 176 ರನ್ ಕಲೆಹಾಕಿದೆ. ಆಸ್ಟ್ರೇಲಿಯಾ ಪರ ಸ್ಯಾಮ್ ಕೊನ್​ಸ್ಟಾಸ್ (60) ಹಾಗೂ ಉಸ್ಮಾನ್ ಖ್ವಾಜಾ (57) ಅರ್ಧಶತಕ ಬಾರಿಸಿ ಔಟಾಗಿದ್ದಾರೆ.

ಝಾಹಿರ್ ಯೂಸುಫ್
|

Updated on: Dec 26, 2024 | 10:09 AM

Share
ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದ ಮೊದಲ ದಿನದಾಟವೇ ರಣರೋಚಕ ಕಾದಾಟಕ್ಕೆ ಸಾಕ್ಷಿಯಾಗಿದೆ. ಅದರಲ್ಲೂ ಈ ಪಂದ್ಯದ ವೇಳೆ ಕೊಹ್ಲಿ ಆಕ್ರಮಣಕಾರಿ ವರ್ತನೆಯಿಂದ ಗಮನ ಸೆಳೆದಿದ್ದಾರೆ. ಈ ನಡೆಯನ್ನು ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಗಂಭೀರವಾಗಿ ಪರಿಗಣಿಸಲಿದೆ ಎಂದು ವರದಿಯಾಗಿದೆ.

ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದ ಮೊದಲ ದಿನದಾಟವೇ ರಣರೋಚಕ ಕಾದಾಟಕ್ಕೆ ಸಾಕ್ಷಿಯಾಗಿದೆ. ಅದರಲ್ಲೂ ಈ ಪಂದ್ಯದ ವೇಳೆ ಕೊಹ್ಲಿ ಆಕ್ರಮಣಕಾರಿ ವರ್ತನೆಯಿಂದ ಗಮನ ಸೆಳೆದಿದ್ದಾರೆ. ಈ ನಡೆಯನ್ನು ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಗಂಭೀರವಾಗಿ ಪರಿಗಣಿಸಲಿದೆ ಎಂದು ವರದಿಯಾಗಿದೆ.

1 / 5
ಈ ಪಂದ್ಯದ 10ನೇ ಓವರ್​ ಮುಕ್ತಾಯದ ವೇಳೆ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ಬ್ಯಾಟರ್ ಸ್ಯಾಮ್ ಕೊನ್​ಸ್ಟಾಸ್ ಅವರನ್ನು ಭುಜಕ್ಕೆ ಭುಜ ನೀಡಿ ಕೆಣಕಿದ್ದರು. ಮೇಲ್ನೋಟಕ್ಕೆ ಕೊಹ್ಲಿ ಉದ್ದೇಶ ಪೂರ್ವಕವಾಗಿಯೇ ಆಸೀಸ್ ಆಟಗಾರನೊಂದಿಗೆ ಜಗಳಕ್ಕಿಳಿದಿರುವುದು ಸ್ಪಷ್ಟವಾಗಿದೆ.

ಈ ಪಂದ್ಯದ 10ನೇ ಓವರ್​ ಮುಕ್ತಾಯದ ವೇಳೆ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ಬ್ಯಾಟರ್ ಸ್ಯಾಮ್ ಕೊನ್​ಸ್ಟಾಸ್ ಅವರನ್ನು ಭುಜಕ್ಕೆ ಭುಜ ನೀಡಿ ಕೆಣಕಿದ್ದರು. ಮೇಲ್ನೋಟಕ್ಕೆ ಕೊಹ್ಲಿ ಉದ್ದೇಶ ಪೂರ್ವಕವಾಗಿಯೇ ಆಸೀಸ್ ಆಟಗಾರನೊಂದಿಗೆ ಜಗಳಕ್ಕಿಳಿದಿರುವುದು ಸ್ಪಷ್ಟವಾಗಿದೆ.

2 / 5
ಈ ಜಗಳ ತಾರಕ್ಕೇರುತ್ತಿದ್ದಂತೆ ಅಂಪೈರ್ ಮತ್ತು ಸಹ ಆಟಗಾರರು ಮಧ್ಯ ಪ್ರವೇಶಿಸಿದ್ದರು. ಇದೀಗ ಈ ಭುಜಬಲದ ವಿಡಿಯೋ ವೈರಲ್ ಆಗಿದ್ದು, ಇದರ ಬೆನ್ನಲ್ಲೇ ಈ ಘಟನೆಯನ್ನು ಪರಿಶೀಲಿಸಲು ಐಸಿಸಿ ಅಧಿಕಾರಿಗಳು ನಿರ್ಧರಿಸಿದ್ದಾರೆ ಎಂದು ಆಸ್ಟ್ರೇಲಿಯಾ ಮಾಧ್ಯಮಗಳು ವರದಿ ಮಾಡಿದೆ.

ಈ ಜಗಳ ತಾರಕ್ಕೇರುತ್ತಿದ್ದಂತೆ ಅಂಪೈರ್ ಮತ್ತು ಸಹ ಆಟಗಾರರು ಮಧ್ಯ ಪ್ರವೇಶಿಸಿದ್ದರು. ಇದೀಗ ಈ ಭುಜಬಲದ ವಿಡಿಯೋ ವೈರಲ್ ಆಗಿದ್ದು, ಇದರ ಬೆನ್ನಲ್ಲೇ ಈ ಘಟನೆಯನ್ನು ಪರಿಶೀಲಿಸಲು ಐಸಿಸಿ ಅಧಿಕಾರಿಗಳು ನಿರ್ಧರಿಸಿದ್ದಾರೆ ಎಂದು ಆಸ್ಟ್ರೇಲಿಯಾ ಮಾಧ್ಯಮಗಳು ವರದಿ ಮಾಡಿದೆ.

3 / 5
ಹೀಗಾಗಿ ಮೆಲ್ಬೋರ್ನ್ ಟೆಸ್ಟ್ ಪಂದ್ಯದ ಮೊದಲ ದಿನದಾಟದ ಬಳಿಕ ಅಥವಾ ಈ ಪಂದ್ಯದ ಬಳಿಕ ವಿರಾಟ್ ಕೊಹ್ಲಿ ಹಾಗೂ ಸ್ಯಾಮ್ ಕೊನ್​ಸ್ಟಾಸ್ ಅವರನ್ನು ಮ್ಯಾಚ್ ರೆಫರಿ ವಿಚಾರಣೆಗೆ ಕರೆಯುವ ಸಾಧ್ಯತೆಯಿದೆ. ಅಲ್ಲದೆ ಇಲ್ಲಿ ಕೊಹ್ಲಿ ತಪ್ಪು ಮಾಡಿರುವುದು ಸಾಬೀತಾದರೆ ಡಿಮೆರಿಟ್ ಪಾಯಿಂಟ್​ನೊಂದಿಗೆ ದಂಡ ವಿಧಿಸುವ ಸಾಧ್ಯತೆ ಹೆಚ್ಚಿದೆ.

ಹೀಗಾಗಿ ಮೆಲ್ಬೋರ್ನ್ ಟೆಸ್ಟ್ ಪಂದ್ಯದ ಮೊದಲ ದಿನದಾಟದ ಬಳಿಕ ಅಥವಾ ಈ ಪಂದ್ಯದ ಬಳಿಕ ವಿರಾಟ್ ಕೊಹ್ಲಿ ಹಾಗೂ ಸ್ಯಾಮ್ ಕೊನ್​ಸ್ಟಾಸ್ ಅವರನ್ನು ಮ್ಯಾಚ್ ರೆಫರಿ ವಿಚಾರಣೆಗೆ ಕರೆಯುವ ಸಾಧ್ಯತೆಯಿದೆ. ಅಲ್ಲದೆ ಇಲ್ಲಿ ಕೊಹ್ಲಿ ತಪ್ಪು ಮಾಡಿರುವುದು ಸಾಬೀತಾದರೆ ಡಿಮೆರಿಟ್ ಪಾಯಿಂಟ್​ನೊಂದಿಗೆ ದಂಡ ವಿಧಿಸುವ ಸಾಧ್ಯತೆ ಹೆಚ್ಚಿದೆ.

4 / 5
ಏಕೆಂದರೆ ಇದಕ್ಕೂ ಮುನ್ನ ಅಡಿಲೇಡ್ ಟೆಸ್ಟ್​ನಲ್ಲಿ ಟ್ರಾವಿಸ್ ಹೆಡ್ ಜೊತೆ ಕಿರಿಕ್ ಮಾಡಿಕೊಂಡಿದ್ದ ಮೊಹಮ್ಮದ್ ಸಿರಾಜ್​ಗೆ ಐಸಿಸಿ ಡಿಮೆರಿಟ್ ಪಾಯಿಂಟ್ ನೀಡಿ, ಪಂದ್ಯ ಶುಲ್ಕದ ಶೇ.20 ರಷ್ಟು ದಂಡ ವಿಧಿಸಿದ್ದರು. ಇದೀಗ ಮೆಲ್ಬೋರ್ನ್​ನಲ್ಲಿ ವಿರಾಟ್ ಕೊಹ್ಲಿ ಮಾತಿನ ಚಕಮಕಿ ನಡೆಸಿರುವ ಕಾರಣ ಇದೇ ಪ್ರಮಾಣದ ದಂಡ ವಿಧಿಸುವ ಸಾಧ್ಯತೆಯಿದೆ.

ಏಕೆಂದರೆ ಇದಕ್ಕೂ ಮುನ್ನ ಅಡಿಲೇಡ್ ಟೆಸ್ಟ್​ನಲ್ಲಿ ಟ್ರಾವಿಸ್ ಹೆಡ್ ಜೊತೆ ಕಿರಿಕ್ ಮಾಡಿಕೊಂಡಿದ್ದ ಮೊಹಮ್ಮದ್ ಸಿರಾಜ್​ಗೆ ಐಸಿಸಿ ಡಿಮೆರಿಟ್ ಪಾಯಿಂಟ್ ನೀಡಿ, ಪಂದ್ಯ ಶುಲ್ಕದ ಶೇ.20 ರಷ್ಟು ದಂಡ ವಿಧಿಸಿದ್ದರು. ಇದೀಗ ಮೆಲ್ಬೋರ್ನ್​ನಲ್ಲಿ ವಿರಾಟ್ ಕೊಹ್ಲಿ ಮಾತಿನ ಚಕಮಕಿ ನಡೆಸಿರುವ ಕಾರಣ ಇದೇ ಪ್ರಮಾಣದ ದಂಡ ವಿಧಿಸುವ ಸಾಧ್ಯತೆಯಿದೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ