AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಛೇ ಇದೆಂತಾ ನೀಚತನ… ವಿರಾಟ್ ಕೊಹ್ಲಿ ತಂದೆ ವಿಷಯದಲ್ಲಿ ಕ್ಷುದ್ರತೆ ಮೆರೆದ ಆಸ್ಟ್ರೇಲಿಯಾ ಪತ್ರಿಕೆ..!

India vs Australia: ಮೆಲ್ಬೋರ್ನ್​ ಟೆಸ್ಟ್ ಪಂದ್ಯದ ಮೊದಲ ದಿನದಾಟದ ವೇಳೆ ವಿರಾಟ್ ಕೊಹ್ಲಿ ಹಾಗೂ ಸ್ಯಾಮ್ ಕೊನ್​ಸ್ಟಾಸ್ ಪರಸ್ಪರ ಕಿತ್ತಾಡಿಕೊಂಡಿದ್ದರು. ಇದಕ್ಕೆ ಮುಖ್ಯ ಕಾರಣ ಕೊಹ್ಲಿ ಆಸ್ಟ್ರೇಲಿಯಾ ಆಟಗಾರನ ಮೇಲೆ ಭುಜಬಲ ಪ್ರಯೋಗಿಸಿರುವುದು. ಈ ಘಟನೆಯ ಬಳಿಕ ಕೊನ್​ಸ್ಟಾಸ್ ಇಂತಹ ಘಟನೆಗಳು ಮೈದಾನದಲ್ಲಿ ಸಹಜ ಎಂದಿದ್ದರು.

ಝಾಹಿರ್ ಯೂಸುಫ್
|

Updated on: Dec 29, 2024 | 10:32 AM

Share
ಮೆಲ್ಬೋರ್ನ್​ ಟೆಸ್ಟ್ ಪಂದ್ಯದ ಮೊದಲ ದಿನ... ಚೊಚ್ಚಲ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಆಸ್ಟ್ರೇಲಿಯಾ ದಾಂಡಿಗ ಸ್ಯಾಮ್ ಕೊನ್​ಸ್ಟಾಸ್ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಬ್ಯಾಟಿಂಗ್​ನೊಂದಿಗೆ ಟೀಮ್ ಇಂಡಿಯಾ ಬೌಲರ್​​ಗಳ ಬೆಂಡೆತ್ತಿದ್ದರು. ಇದರ ನಡುವೆ ವಿರಾಟ್ ಕೊಹ್ಲಿ, ಸ್ಯಾಮ್ ಕೊನ್​ಸ್ಟಾಸ್ ಅವರನ್ನು ಕೆಣಕುವ ಪ್ರಯತ್ನಕ್ಕೆ ಕೈ ಹಾಕಿದರು.

ಮೆಲ್ಬೋರ್ನ್​ ಟೆಸ್ಟ್ ಪಂದ್ಯದ ಮೊದಲ ದಿನ... ಚೊಚ್ಚಲ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಆಸ್ಟ್ರೇಲಿಯಾ ದಾಂಡಿಗ ಸ್ಯಾಮ್ ಕೊನ್​ಸ್ಟಾಸ್ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಬ್ಯಾಟಿಂಗ್​ನೊಂದಿಗೆ ಟೀಮ್ ಇಂಡಿಯಾ ಬೌಲರ್​​ಗಳ ಬೆಂಡೆತ್ತಿದ್ದರು. ಇದರ ನಡುವೆ ವಿರಾಟ್ ಕೊಹ್ಲಿ, ಸ್ಯಾಮ್ ಕೊನ್​ಸ್ಟಾಸ್ ಅವರನ್ನು ಕೆಣಕುವ ಪ್ರಯತ್ನಕ್ಕೆ ಕೈ ಹಾಕಿದರು.

1 / 5
ಆದರೆ ಅದು ತುಸು ಎಲ್ಲೆ ಮೀರಿ ಹೋಯಿತು... ಕೆಣಕುವ ಪ್ರಯತ್ನದಲ್ಲಿ ವಿರಾಟ್ ಕೊಹ್ಲಿ, ಕೊನ್​ಸ್ಟಾಸ್ ಅವರನ್ನು ಭುಜದಿಂದ ಗುದ್ದಿದರು. ಮೊದಲ ದಿನದಾಟದಲ್ಲಿ ಇದುವೇ ದೊಡ್ಡ ಸುದ್ದಿಯಾಯಿತು. ಇದನ್ನು ಗಂಭೀರವಾಗಿ ಪರಿಗಣಿಸಿದ ಐಸಿಸಿ ವಿರಾಟ್ ಕೊಹ್ಲಿಗೆ ಪಂದ್ಯ ಶುಲ್ಕದ ಶೇ.20 ರಷ್ಟು ದಂಡ ವಿಧಿಸಿದರು. ಅಲ್ಲದೆ ಒಂದು ಡಿಮೆರಿಟ್ ಪಾಯಿಂಟ್ ನೀಡಲಾಯಿತು. ಅಲ್ಲಿಗೆ ಇದು ಮುಗಿಯಿತು.

ಆದರೆ ಅದು ತುಸು ಎಲ್ಲೆ ಮೀರಿ ಹೋಯಿತು... ಕೆಣಕುವ ಪ್ರಯತ್ನದಲ್ಲಿ ವಿರಾಟ್ ಕೊಹ್ಲಿ, ಕೊನ್​ಸ್ಟಾಸ್ ಅವರನ್ನು ಭುಜದಿಂದ ಗುದ್ದಿದರು. ಮೊದಲ ದಿನದಾಟದಲ್ಲಿ ಇದುವೇ ದೊಡ್ಡ ಸುದ್ದಿಯಾಯಿತು. ಇದನ್ನು ಗಂಭೀರವಾಗಿ ಪರಿಗಣಿಸಿದ ಐಸಿಸಿ ವಿರಾಟ್ ಕೊಹ್ಲಿಗೆ ಪಂದ್ಯ ಶುಲ್ಕದ ಶೇ.20 ರಷ್ಟು ದಂಡ ವಿಧಿಸಿದರು. ಅಲ್ಲದೆ ಒಂದು ಡಿಮೆರಿಟ್ ಪಾಯಿಂಟ್ ನೀಡಲಾಯಿತು. ಅಲ್ಲಿಗೆ ಇದು ಮುಗಿಯಿತು.

2 / 5
ಆದರೆ ಆಸ್ಟ್ರೇಲಿಯಾ ಮಾಧ್ಯಮಗಳು ಮಾತ್ರ ಇದನ್ನು ಅಲ್ಲಿಗೆ ಮುಗಿಸಿರಲಿಲ್ಲ. 'ದಿ ವೆಸ್ಟ್ ಆಸ್ಟ್ರೇಲಿಯನ್' ಪತ್ರಿಕೆಯು ಕೊಹ್ಲಿಯನ್ನು ಕೋಡಂಗಿ (ಜೋಕರ್) ಎಂಬ ಶೀರ್ಷಿಕೆಯೊಂದಿಗೆ ಟೀಕಿಸಿತು. ಅಲ್ಲದೆ ತನ್ನ ಸ್ಪೋರ್ಟ್ಸ್ ಎಡಿಷನ್​ನಲ್ಲಿ ಕೊಹ್ಲಿಯನ್ನು ಜೋಕರ್ ರೀತಿಯಲ್ಲಿ ಚಿತ್ರಿಸಿದರು.

ಆದರೆ ಆಸ್ಟ್ರೇಲಿಯಾ ಮಾಧ್ಯಮಗಳು ಮಾತ್ರ ಇದನ್ನು ಅಲ್ಲಿಗೆ ಮುಗಿಸಿರಲಿಲ್ಲ. 'ದಿ ವೆಸ್ಟ್ ಆಸ್ಟ್ರೇಲಿಯನ್' ಪತ್ರಿಕೆಯು ಕೊಹ್ಲಿಯನ್ನು ಕೋಡಂಗಿ (ಜೋಕರ್) ಎಂಬ ಶೀರ್ಷಿಕೆಯೊಂದಿಗೆ ಟೀಕಿಸಿತು. ಅಲ್ಲದೆ ತನ್ನ ಸ್ಪೋರ್ಟ್ಸ್ ಎಡಿಷನ್​ನಲ್ಲಿ ಕೊಹ್ಲಿಯನ್ನು ಜೋಕರ್ ರೀತಿಯಲ್ಲಿ ಚಿತ್ರಿಸಿದರು.

3 / 5
ಇಷ್ಟಕ್ಕೆ ನಿಲ್ಲಿಸಲಿಲ್ಲ. ಭಾನುವಾರದ ಎಡಿಷನ್​ಗಾಗಿ ದಿ ವೆಸ್ಟ್ ಆಸ್ಟ್ರೇಲಿಯನ್ ಪತ್ರಿಕೆಯು ನೀಡಿದ ಶೀರ್ಷಿಕೆಯು ಎಲ್ಲಾ ಎಲ್ಲೆಯನ್ನು ಮೀರಿದಂತಿದೆ. ಸ್ಪೋರ್ಟ್ ಮುಖಪುಟದಲ್ಲಿ ಸ್ಯಾಮ್ ಕೊನ್​ಸ್ಟಾಸ್ ಅವರ ಚಿತ್ರ ಹಂಚಿಕೊಂಡಿರುವ ದಿ ವೆಸ್ಟ್ ಆಸ್ಟ್ರೇಲಿಯನ್' ಪತ್ರಿಕೆಯು ಆ ಫೋಟೋಗೆ ವಿರಾಟ್, ನಾನು ನಿಮ್ಮ ತಂದೆ ಎಂಬ ಶೀರ್ಷಿಕೆ ನೀಡಿದೆ.

ಇಷ್ಟಕ್ಕೆ ನಿಲ್ಲಿಸಲಿಲ್ಲ. ಭಾನುವಾರದ ಎಡಿಷನ್​ಗಾಗಿ ದಿ ವೆಸ್ಟ್ ಆಸ್ಟ್ರೇಲಿಯನ್ ಪತ್ರಿಕೆಯು ನೀಡಿದ ಶೀರ್ಷಿಕೆಯು ಎಲ್ಲಾ ಎಲ್ಲೆಯನ್ನು ಮೀರಿದಂತಿದೆ. ಸ್ಪೋರ್ಟ್ ಮುಖಪುಟದಲ್ಲಿ ಸ್ಯಾಮ್ ಕೊನ್​ಸ್ಟಾಸ್ ಅವರ ಚಿತ್ರ ಹಂಚಿಕೊಂಡಿರುವ ದಿ ವೆಸ್ಟ್ ಆಸ್ಟ್ರೇಲಿಯನ್' ಪತ್ರಿಕೆಯು ಆ ಫೋಟೋಗೆ ವಿರಾಟ್, ನಾನು ನಿಮ್ಮ ತಂದೆ ಎಂಬ ಶೀರ್ಷಿಕೆ ನೀಡಿದೆ.

4 / 5
ಇದೀಗ ಆಸ್ಟ್ರೇಲಿಯಾ ಪತ್ರಿಕೆಯ ಈ ಹದ್ದು ಮೀರಿದ ವರ್ತನೆ ಬಗ್ಗೆ ಭಾರೀ ಟೀಕೆಗಳು ವ್ಯಕ್ತವಾಗುತ್ತಿದೆ. ಅದರಲ್ಲೂ ದಿವಂಗತರಾಗಿರುವ ವಿರಾಟ್ ಕೊಹ್ಲಿಯ ತಂದೆಯನ್ನು ಈ ವಿಚಾರದಲ್ಲಿ ಎಳೆದು ತರುವ ಮೂಲಕ ತನ್ನ ನೀಚಬುದ್ದಿಯನ್ನು ತೋರಿಸಿದೆ. ಈ ಬಗ್ಗೆ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಆಕ್ರೋಶಗಳು ವ್ಯಕ್ತವಾಗುತ್ತಿದ್ದು, ಈ ಬಗ್ಗೆ ದಿ ವೆಸ್ಟ್ ಆಸ್ಟ್ರೇಲಿಯನ್ ಏನು ಸ್ಪಷ್ಟನೆ ನೀಡಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಇದೀಗ ಆಸ್ಟ್ರೇಲಿಯಾ ಪತ್ರಿಕೆಯ ಈ ಹದ್ದು ಮೀರಿದ ವರ್ತನೆ ಬಗ್ಗೆ ಭಾರೀ ಟೀಕೆಗಳು ವ್ಯಕ್ತವಾಗುತ್ತಿದೆ. ಅದರಲ್ಲೂ ದಿವಂಗತರಾಗಿರುವ ವಿರಾಟ್ ಕೊಹ್ಲಿಯ ತಂದೆಯನ್ನು ಈ ವಿಚಾರದಲ್ಲಿ ಎಳೆದು ತರುವ ಮೂಲಕ ತನ್ನ ನೀಚಬುದ್ದಿಯನ್ನು ತೋರಿಸಿದೆ. ಈ ಬಗ್ಗೆ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಆಕ್ರೋಶಗಳು ವ್ಯಕ್ತವಾಗುತ್ತಿದ್ದು, ಈ ಬಗ್ಗೆ ದಿ ವೆಸ್ಟ್ ಆಸ್ಟ್ರೇಲಿಯನ್ ಏನು ಸ್ಪಷ್ಟನೆ ನೀಡಲಿದೆ ಎಂಬುದನ್ನು ಕಾದು ನೋಡಬೇಕಿದೆ.

5 / 5
Follow Us
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ