AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಜಡೇಜಾ, ಅಶ್ವಿನ್​ಗೆ ನೋ ಚಾನ್ಸ್: ಪಿಂಕ್ ಬಾಲ್​​ ಟೆಸ್ಟ್​ನಲ್ಲಿ ಏಕೈಕ ಸ್ಪಿನ್ನರ್

India vs Australia: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ದ್ವಿತೀಯ ಪಂದ್ಯವು ಶುಕ್ರವಾರದಿಂದ ಶುರುವಾಗಲಿದೆ. ಅಡಿಲೇಡ್​ನಲ್ಲಿ ನಡೆಯಲಿರುವ ಈ ಪಂದ್ಯವು ಹೊನಲು ಬೆಳಕಿನಲ್ಲಿ ಜರುಗಲಿರುವುದು ವಿಶೇಷ. ಹೀಗಾಗಿಯೇ ಈ ಪಂದ್ಯದಲ್ಲಿ ಪಿಂಕ್ ಬಾಲ್ ಅನ್ನು ಬಳಸಲಾಗುತ್ತದೆ.

ಝಾಹಿರ್ ಯೂಸುಫ್
|

Updated on: Dec 04, 2024 | 9:30 AM

Share
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಪಿಂಕ್ ಬಾಲ್ ಟೆಸ್ಟ್ ಪಂದ್ಯವು ಡಿಸೆಂಬರ್ 6 ರಿಂದ ಶುರುವಾಗಲಿದೆ. ಅಡಿಲೇಡ್​ನ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಏಕೈಕ ಸ್ಪಿನ್ನರ್​​ನೊಂದಿಗೆ ಕಣಕ್ಕಿಳಿಯುವ ಸಾಧ್ಯತೆಯಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಪಿಂಕ್ ಬಾಲ್ ಟೆಸ್ಟ್ ಪಂದ್ಯವು ಡಿಸೆಂಬರ್ 6 ರಿಂದ ಶುರುವಾಗಲಿದೆ. ಅಡಿಲೇಡ್​ನ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಏಕೈಕ ಸ್ಪಿನ್ನರ್​​ನೊಂದಿಗೆ ಕಣಕ್ಕಿಳಿಯುವ ಸಾಧ್ಯತೆಯಿದೆ.

1 / 7
ಪರ್ತ್​​ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್​​ನಲ್ಲಿ ರವಿಚಂದ್ರನ್ ಅಶ್ವಿನ್ ಹಾಗೂ ರವೀಂದ್ರ ಜಡೇಜಾಗೆ ಅವಕಾಶ ಸಿಕ್ಕಿರಲಿಲ್ಲ. ಬದಲಾಗಿ ನಿತೀಶ್ ಕುಮಾರ್ ರೆಡ್ಡಿ ಹಾಗೂ ಹರ್ಷಿತ್ ರಾಣಾ ಅವರನ್ನು ಕಣಕ್ಕಿಳಿಸಲಾಗಿತ್ತು.

ಪರ್ತ್​​ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್​​ನಲ್ಲಿ ರವಿಚಂದ್ರನ್ ಅಶ್ವಿನ್ ಹಾಗೂ ರವೀಂದ್ರ ಜಡೇಜಾಗೆ ಅವಕಾಶ ಸಿಕ್ಕಿರಲಿಲ್ಲ. ಬದಲಾಗಿ ನಿತೀಶ್ ಕುಮಾರ್ ರೆಡ್ಡಿ ಹಾಗೂ ಹರ್ಷಿತ್ ರಾಣಾ ಅವರನ್ನು ಕಣಕ್ಕಿಳಿಸಲಾಗಿತ್ತು.

2 / 7
ಇದೀಗ ಇದೇ ಜೋಡಿಯನ್ನು ಮುಂದುವರೆಸಲು ಟೀಮ್ ಇಂಡಿಯಾ ಪ್ಲ್ಯಾನ್ ರೂಪಿಸಿದೆ ಎಂದು ತಿಳಿದು ಬಂದಿದೆ. ಅಲ್ಲದೆ ತಂಡದಲ್ಲಿ ಏಕೈಕ ಸ್ಪಿನ್ನರ್ ಆಗಿ ವಾಷಿಂಗ್ಟನ್ ಸುಂದರ್ ಅವರಿಗೆ ಚಾನ್ಸ್ ನೀಡಲು ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ಬಯಸಿದ್ದಾರೆ.

ಇದೀಗ ಇದೇ ಜೋಡಿಯನ್ನು ಮುಂದುವರೆಸಲು ಟೀಮ್ ಇಂಡಿಯಾ ಪ್ಲ್ಯಾನ್ ರೂಪಿಸಿದೆ ಎಂದು ತಿಳಿದು ಬಂದಿದೆ. ಅಲ್ಲದೆ ತಂಡದಲ್ಲಿ ಏಕೈಕ ಸ್ಪಿನ್ನರ್ ಆಗಿ ವಾಷಿಂಗ್ಟನ್ ಸುಂದರ್ ಅವರಿಗೆ ಚಾನ್ಸ್ ನೀಡಲು ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ಬಯಸಿದ್ದಾರೆ.

3 / 7
ಇದಕ್ಕೂ ಮುನ್ನ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲೂ ಭಾರತ ಪರ ಏಕೈಕ ಸ್ಪಿನ್ನರ್ ಆಗಿ ವಾಷಿಂಗ್ಟನ್ ಸುಂದರ್ ಕಾಣಿಸಿಕೊಂಡಿದ್ದರು. ಈ ಪಂದ್ಯದಲ್ಲಿ 2 ವಿಕೆಟ್ ಕಬಳಿಸಿದ್ದ ಸುಂದರ್ ಬ್ಯಾಟ್ ಮೂಲಕ 33 ರನ್​​ಗಳ ಕೊಡುಗೆ ನೀಡಿದ್ದರು. ಅಲ್ಲದೆ ಪ್ರೈಮ್ ಮಿನಿಸ್ಟರ್ಸ್​ ವಿರುದ್ಧದ ಪಿಂಕ್ ಬಾಲ್ ಅಭ್ಯಾಸ ಪಂದ್ಯದಲ್ಲೂ ಸುಂದರ್ 42 ರನ್​​ಗಳನ್ನು ಬಾರಿಸಿದ್ದಾರೆ.

ಇದಕ್ಕೂ ಮುನ್ನ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲೂ ಭಾರತ ಪರ ಏಕೈಕ ಸ್ಪಿನ್ನರ್ ಆಗಿ ವಾಷಿಂಗ್ಟನ್ ಸುಂದರ್ ಕಾಣಿಸಿಕೊಂಡಿದ್ದರು. ಈ ಪಂದ್ಯದಲ್ಲಿ 2 ವಿಕೆಟ್ ಕಬಳಿಸಿದ್ದ ಸುಂದರ್ ಬ್ಯಾಟ್ ಮೂಲಕ 33 ರನ್​​ಗಳ ಕೊಡುಗೆ ನೀಡಿದ್ದರು. ಅಲ್ಲದೆ ಪ್ರೈಮ್ ಮಿನಿಸ್ಟರ್ಸ್​ ವಿರುದ್ಧದ ಪಿಂಕ್ ಬಾಲ್ ಅಭ್ಯಾಸ ಪಂದ್ಯದಲ್ಲೂ ಸುಂದರ್ 42 ರನ್​​ಗಳನ್ನು ಬಾರಿಸಿದ್ದಾರೆ.

4 / 7
ಹೀಗಾಗಿಯೇ ಪ್ಲೇಯಿಂಗ್ ಇಲೆವೆನ್​​ನಲ್ಲಿ ವಾಷಿಂಗ್ಟನ್ ಸುಂದರ್ ಅವರನ್ನು ಮುಂದುವರೆಸಲು ಭಾರತ ತಂಡದ ಕೋಚ್ ಗೌತಮ್ ಗಂಭೀರ್ ಇಚ್ಛಿಸಿದ್ದಾರೆ ಎಂದು ವರದಿಯಾಗಿದೆ. ಇದಾಗ್ಯೂ ಪಿಂಕ್ ಬಾಲ್ ಟೆಸ್ಟ್​ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಎರಡು ಬದಲಾವಣೆ ಕಂಡು ಬರುವುದು ಖಚಿತ.

ಹೀಗಾಗಿಯೇ ಪ್ಲೇಯಿಂಗ್ ಇಲೆವೆನ್​​ನಲ್ಲಿ ವಾಷಿಂಗ್ಟನ್ ಸುಂದರ್ ಅವರನ್ನು ಮುಂದುವರೆಸಲು ಭಾರತ ತಂಡದ ಕೋಚ್ ಗೌತಮ್ ಗಂಭೀರ್ ಇಚ್ಛಿಸಿದ್ದಾರೆ ಎಂದು ವರದಿಯಾಗಿದೆ. ಇದಾಗ್ಯೂ ಪಿಂಕ್ ಬಾಲ್ ಟೆಸ್ಟ್​ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಎರಡು ಬದಲಾವಣೆ ಕಂಡು ಬರುವುದು ಖಚಿತ.

5 / 7
ಏಕೆಂದರೆ ಮೊದಲ ಪಂದ್ಯದಿಂದ ಹೊರಗುಳಿದಿದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ಶುಭ್​​ಮನ್ ಗಿಲ್ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ. ಇದರಿಂದ ಪರ್ತ್​ ಟೆಸ್ಟ್ ಪಂದ್ಯವಾಡಿದ್ದ ದೇವದತ್ ಪಡಿಕ್ಕಲ್ ಹಾಗೂ ಧ್ರುವ್ ಜುರೇಲ್ ಆಡುವ ಬಳಗದಿಂದ ಹೊರಬೀಳುವುದು ಖಚಿತ.  ಅದರಂತೆ ಟೀಮ್ ಇಂಡಿಯಾ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ...

ಏಕೆಂದರೆ ಮೊದಲ ಪಂದ್ಯದಿಂದ ಹೊರಗುಳಿದಿದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ಶುಭ್​​ಮನ್ ಗಿಲ್ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ. ಇದರಿಂದ ಪರ್ತ್​ ಟೆಸ್ಟ್ ಪಂದ್ಯವಾಡಿದ್ದ ದೇವದತ್ ಪಡಿಕ್ಕಲ್ ಹಾಗೂ ಧ್ರುವ್ ಜುರೇಲ್ ಆಡುವ ಬಳಗದಿಂದ ಹೊರಬೀಳುವುದು ಖಚಿತ. ಅದರಂತೆ ಟೀಮ್ ಇಂಡಿಯಾ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ...

6 / 7
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ , ಯಶಸ್ವಿ ಜೈಸ್ವಾಲ್ , ಶುಭ್​​ಮನ್ ಗಿಲ್, ವಿರಾಟ್ ಕೊಹ್ಲಿ , ರಿಷಭ್ ಪಂತ್ (ವಿಕೆಟ್ ಕೀಪರ್) , ಧ್ರುವ ಜುರೆಲ್ , ನಿತೀಶ್ ರೆಡ್ಡಿ , ವಾಷಿಂಗ್ಟನ್ ಸುಂದರ್ , ಹರ್ಷಿತ್ ರಾಣಾ , ಜಸ್​​ಪ್ರೀತ್  ಬುಮ್ರಾ , ಮೊಹಮ್ಮದ್ ಸಿರಾಜ್.

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ , ಯಶಸ್ವಿ ಜೈಸ್ವಾಲ್ , ಶುಭ್​​ಮನ್ ಗಿಲ್, ವಿರಾಟ್ ಕೊಹ್ಲಿ , ರಿಷಭ್ ಪಂತ್ (ವಿಕೆಟ್ ಕೀಪರ್) , ಧ್ರುವ ಜುರೆಲ್ , ನಿತೀಶ್ ರೆಡ್ಡಿ , ವಾಷಿಂಗ್ಟನ್ ಸುಂದರ್ , ಹರ್ಷಿತ್ ರಾಣಾ , ಜಸ್​​ಪ್ರೀತ್ ಬುಮ್ರಾ , ಮೊಹಮ್ಮದ್ ಸಿರಾಜ್.

7 / 7
Follow Us
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ