AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS, WTC Final: ಭಾರತ-ಆಸ್ಟ್ರೇಲಿಯಾ ಫೈನಲ್ ಪಂದ್ಯದ ದ್ವಿತೀಯ ದಿನದಾಟ ಹೇಗಿತ್ತು?: ಇಲ್ಲಿದೆ ನೋಡಿ ಫೋಟೋ

India vs Australia Final: ಮೊದಲ ದಿನ ಬ್ಯಾಟಿಂಗ್​ನಲ್ಲಿ ಭರ್ಜರಿ ಯಶಸ್ಸು ಸಾಧಿಸಿದ್ದ ಆಸ್ಟ್ರೇಲಿಯಾನ್ನರು ದ್ವಿತೀಯ ದಿನ ಬೌಲಿಂಗ್​ನಲ್ಲಿ ಪಾರುಪತ್ಯ ಮೆರೆದರು. ಮೊದಲ ಇನ್ನಿಂಗ್ಸ್​ನಲ್ಲಿ ಕಾಂಗರೂ ಪಡೆ 469 ರನ್ ಕಲೆಹಾಕಿತು.

Vinay Bhat
|

Updated on: Jun 09, 2023 | 10:14 AM

Share
ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ರೋಚಕತೆ ಸೃಷ್ಟಿಸಿದೆ.

ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ರೋಚಕತೆ ಸೃಷ್ಟಿಸಿದೆ.

1 / 8
ಮೊದಲ ದಿನ ಬ್ಯಾಟಿಂಗ್​ನಲ್ಲಿ ಭರ್ಜರಿ ಯಶಸ್ಸು ಸಾಧಿಸಿದ್ದ ಆಸ್ಟ್ರೇಲಿಯಾನ್ನರು ದ್ವಿತೀಯ ದಿನ ಬೌಲಿಂಗ್​ನಲ್ಲಿ ಪಾರುಪತ್ಯ ಮೆರೆದರು. ಮೊದಲ ಇನ್ನಿಂಗ್ಸ್​ನಲ್ಲಿ ಕಾಂಗರೂ ಪಡೆ 469 ರನ್ ಕಲೆಹಾಕಿತು.

ಮೊದಲ ದಿನ ಬ್ಯಾಟಿಂಗ್​ನಲ್ಲಿ ಭರ್ಜರಿ ಯಶಸ್ಸು ಸಾಧಿಸಿದ್ದ ಆಸ್ಟ್ರೇಲಿಯಾನ್ನರು ದ್ವಿತೀಯ ದಿನ ಬೌಲಿಂಗ್​ನಲ್ಲಿ ಪಾರುಪತ್ಯ ಮೆರೆದರು. ಮೊದಲ ಇನ್ನಿಂಗ್ಸ್​ನಲ್ಲಿ ಕಾಂಗರೂ ಪಡೆ 469 ರನ್ ಕಲೆಹಾಕಿತು.

2 / 8
ಭಾರತ ತನ್ನ ಪ್ರಥಮ ಇನ್ನಿಂಗ್ಸ್​ನಲ್ಲಿ ಕಳಪೆ ಬ್ಯಾಟಿಂಗ್ ಪ್ರದರ್ಶಿಸಿ ದಿನದಾಟದ ಅಂತ್ಯಕ್ಕೆ 5 ವಿಕೆಟ್ ಕಳೆದುಕೊಂಡು 151 ರನ್ ಗಳಿಸಿದೆ. 318 ರನ್​ಗಳ ಹಿನ್ನಡೆಯಲ್ಲಿರುವ ಟೀಮ್ ಇಂಡಿಯಾ ಇನ್ನಿಂಗ್ಸ್ ಹಿನ್ನಡೆಯ ಭೀತಿಯಲ್ಲಿದೆ.

ಭಾರತ ತನ್ನ ಪ್ರಥಮ ಇನ್ನಿಂಗ್ಸ್​ನಲ್ಲಿ ಕಳಪೆ ಬ್ಯಾಟಿಂಗ್ ಪ್ರದರ್ಶಿಸಿ ದಿನದಾಟದ ಅಂತ್ಯಕ್ಕೆ 5 ವಿಕೆಟ್ ಕಳೆದುಕೊಂಡು 151 ರನ್ ಗಳಿಸಿದೆ. 318 ರನ್​ಗಳ ಹಿನ್ನಡೆಯಲ್ಲಿರುವ ಟೀಮ್ ಇಂಡಿಯಾ ಇನ್ನಿಂಗ್ಸ್ ಹಿನ್ನಡೆಯ ಭೀತಿಯಲ್ಲಿದೆ.

3 / 8
ಬೃಹತ್ ಮೊತ್ತ ಗಳಿಸುವ ಗುರಿಯೊಂದಿಗೆ 2ನೇ ದಿನದಾಟ ಆರಂಭಿಸಿದ ಆಸ್ಟ್ರೇಲಿಯ ಮೊದಲ ದಿನದ ಮೊತ್ತಕ್ಕೆ 142 ರನ್ ಸೇರಿಸುವಷ್ಟರಲ್ಲಿ ಉಳಿದ 7 ವಿಕೆಟ್‌ಗಳನ್ನು ಕಳೆದುಕೊಂಡಿತು. 146 ರನ್‌ನಿಂದ ಬ್ಯಾಟಿಂಗ್ ಮುಂದುವರಿಸಿದ ಹೆಡ್ 163 ರನ್ ಗಳಿಸಿ ಸಿರಾಜ್‌ಗೆ ವಿಕೆಟ್ ಒಪ್ಪಿಸಿದರು. ಸ್ಮಿತ್ ಆಟ 121 ರನ್​ಗೆ ಅಂತ್ಯವಾಯಿತು.

ಬೃಹತ್ ಮೊತ್ತ ಗಳಿಸುವ ಗುರಿಯೊಂದಿಗೆ 2ನೇ ದಿನದಾಟ ಆರಂಭಿಸಿದ ಆಸ್ಟ್ರೇಲಿಯ ಮೊದಲ ದಿನದ ಮೊತ್ತಕ್ಕೆ 142 ರನ್ ಸೇರಿಸುವಷ್ಟರಲ್ಲಿ ಉಳಿದ 7 ವಿಕೆಟ್‌ಗಳನ್ನು ಕಳೆದುಕೊಂಡಿತು. 146 ರನ್‌ನಿಂದ ಬ್ಯಾಟಿಂಗ್ ಮುಂದುವರಿಸಿದ ಹೆಡ್ 163 ರನ್ ಗಳಿಸಿ ಸಿರಾಜ್‌ಗೆ ವಿಕೆಟ್ ಒಪ್ಪಿಸಿದರು. ಸ್ಮಿತ್ ಆಟ 121 ರನ್​ಗೆ ಅಂತ್ಯವಾಯಿತು.

4 / 8
ಅಂತಿಮವಾಗಿ ಆಸೀಸ್ ಮೊದಲ ಇನಿಂಗ್ಸ್‌ನಲ್ಲಿ 469 ರನ್ಸ್​ಗೆ ಆಲೌಟ್ ಆಯಿತು. ಭಾರತದ ಪರ ಸಿರಾಜ್ 4 ವಿಕೆಟ್ ಕಿತ್ತರೆ ಶಾರ್ದೂಲ್ ಠಾಕೂರ್ ಹಾಗೂ ಶಮಿ ತಲಾ 2ವಿಕೆಟ್‌ಗಳನ್ನು ಪಡೆದರು.

ಅಂತಿಮವಾಗಿ ಆಸೀಸ್ ಮೊದಲ ಇನಿಂಗ್ಸ್‌ನಲ್ಲಿ 469 ರನ್ಸ್​ಗೆ ಆಲೌಟ್ ಆಯಿತು. ಭಾರತದ ಪರ ಸಿರಾಜ್ 4 ವಿಕೆಟ್ ಕಿತ್ತರೆ ಶಾರ್ದೂಲ್ ಠಾಕೂರ್ ಹಾಗೂ ಶಮಿ ತಲಾ 2ವಿಕೆಟ್‌ಗಳನ್ನು ಪಡೆದರು.

5 / 8
ಭಾರತ ಪರ ನಾಯಕ ರೋಹಿತ್​ ಶರ್ಮಾ ಹಾಗೂ ಶುಭ್​ಮನ್​ ಗಿಲ್​ ಮೊದಲ ಇನ್ನಿಂಗ್ಸ್​ ಆರಂಭಿಸಿದರು. ಆದರೆ, ಇಬ್ಬರೂ ಬ್ಯಾಟರ್​ಗಳು ವೈಫಲ್ಯ ಅನುಭವಿಸಿದರು. ನಾಯಕ ರೋಹಿತ್ ಕೇವಲ 15 ರನ್​ಗಳಿಗೆ ಪ್ಯಾಟ್ ಕಮ್ಮಿನ್ಸ್ ಎಸತೆದಲ್ಲಿ ಎಲ್​ಬಿ ಬಲೆಗೆ ಬಿದ್ದರೆ ಗಿಲ್ ಆಟ 13 ರನ್​ಗಳಿಗೆ ಅಂತ್ಯವಾಯಿತು.

ಭಾರತ ಪರ ನಾಯಕ ರೋಹಿತ್​ ಶರ್ಮಾ ಹಾಗೂ ಶುಭ್​ಮನ್​ ಗಿಲ್​ ಮೊದಲ ಇನ್ನಿಂಗ್ಸ್​ ಆರಂಭಿಸಿದರು. ಆದರೆ, ಇಬ್ಬರೂ ಬ್ಯಾಟರ್​ಗಳು ವೈಫಲ್ಯ ಅನುಭವಿಸಿದರು. ನಾಯಕ ರೋಹಿತ್ ಕೇವಲ 15 ರನ್​ಗಳಿಗೆ ಪ್ಯಾಟ್ ಕಮ್ಮಿನ್ಸ್ ಎಸತೆದಲ್ಲಿ ಎಲ್​ಬಿ ಬಲೆಗೆ ಬಿದ್ದರೆ ಗಿಲ್ ಆಟ 13 ರನ್​ಗಳಿಗೆ ಅಂತ್ಯವಾಯಿತು.

6 / 8
ಬಳಿಕ ಕ್ರೀಸ್​ಗೆ ಬಂದ ಚೇತೇಶ್ವರ ಪೂಜಾರ (14) ಹಾಗೂ ವಿರಾಟ್​ ಕೊಹ್ಲಿ (14) ಕೂಡ ನಿರಾಸೆ ಮೂಡಿಸಿದರು. ಇದರ ನಡುವೆ ಐದನೇ ವಿಕೆಟ್​ಗೆ ಅಜಿಂಕ್ಯ ರಹಾನೆ ಹಾಗೂ ರವೀಂದ್ರ ಜಡೇಜಾ ಉತ್ತಮ ಇನ್ನಿಂಗ್​ ಕಟ್ಟಿ ತಂಡಕ್ಕೆ ನೆರವಾದರು.

ಬಳಿಕ ಕ್ರೀಸ್​ಗೆ ಬಂದ ಚೇತೇಶ್ವರ ಪೂಜಾರ (14) ಹಾಗೂ ವಿರಾಟ್​ ಕೊಹ್ಲಿ (14) ಕೂಡ ನಿರಾಸೆ ಮೂಡಿಸಿದರು. ಇದರ ನಡುವೆ ಐದನೇ ವಿಕೆಟ್​ಗೆ ಅಜಿಂಕ್ಯ ರಹಾನೆ ಹಾಗೂ ರವೀಂದ್ರ ಜಡೇಜಾ ಉತ್ತಮ ಇನ್ನಿಂಗ್​ ಕಟ್ಟಿ ತಂಡಕ್ಕೆ ನೆರವಾದರು.

7 / 8
ಜಡೇಜಾ 51 ಬಾಲ್​ಗಳಲ್ಲಿ 7 ಬೌಂಡರಿ ಮತ್ತು ಸಿಕ್ಸರ್​ ಸಮೇತ 48 ರನ್​ಗೆ ನಿರ್ಗಮಿಸಿದರು. 29 ರನ್​ ಗಳಿಸಿರುವ ರಹಾನೆ ಹಾಗೂ 5 ರನ್​ ಗಳಿಸಿರುವ ಶ್ರೀಕರ್ ಭರತ್ ಇಂದು ಮೂರನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಭಾರತ 5 ವಿಕೆಟ್ ಕಳೆದುಕೊಂಡು 151 ರನ್ ಗಳಿಸಿದ್ದು 318 ರನ್​ಗಳ ಹಿನ್ನಡೆಯಲ್ಲಿದೆ.

ಜಡೇಜಾ 51 ಬಾಲ್​ಗಳಲ್ಲಿ 7 ಬೌಂಡರಿ ಮತ್ತು ಸಿಕ್ಸರ್​ ಸಮೇತ 48 ರನ್​ಗೆ ನಿರ್ಗಮಿಸಿದರು. 29 ರನ್​ ಗಳಿಸಿರುವ ರಹಾನೆ ಹಾಗೂ 5 ರನ್​ ಗಳಿಸಿರುವ ಶ್ರೀಕರ್ ಭರತ್ ಇಂದು ಮೂರನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಭಾರತ 5 ವಿಕೆಟ್ ಕಳೆದುಕೊಂಡು 151 ರನ್ ಗಳಿಸಿದ್ದು 318 ರನ್​ಗಳ ಹಿನ್ನಡೆಯಲ್ಲಿದೆ.

8 / 8
Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
Follow Us
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ