AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs BAN: ಟೀಮ್ ಇಂಡಿಯಾಗೆ ಹೊಸ ಆರಂಭಿಕರು

IND vs BAN: ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಮ್ಯಾಚ್ ಅಕ್ಟೋಬರ್ 6 ರಂದು ಗ್ವಾಲಿಯರ್​ನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಹೊಸ ಆರಂಭಿಕರು ಕಣಕ್ಕಿಳಿಯಲಿದ್ದಾರೆ. ಏಕೆಂದರೆ ಟೆಸ್ಟ್ ತಂಡದಲ್ಲಿರುವ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದ್ದು, ಹೀಗಾಗಿ ಈ ಸರಣಿಗೆ ಪ್ರಮುಖ ಆಟಗಾರರು ಅಲಭ್ಯರಾಗಿದ್ದಾರೆ.

TV9 Web
| Edited By: |

Updated on: Oct 06, 2024 | 8:10 AM

Share
ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಮ್ಯಾಚ್ ಇಂದು (ಅ.6) ನಡೆಯಲಿದೆ. ಗ್ವಾಲಿಯರ್​ನ ಮಾಧವರಾವ್ ಸಿಂಧಿಯಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಹೊಸ ಆರಂಭಿಕರು ಕಣಕ್ಕಿಳಿಯಲಿದ್ದಾರೆ.

ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಮ್ಯಾಚ್ ಇಂದು (ಅ.6) ನಡೆಯಲಿದೆ. ಗ್ವಾಲಿಯರ್​ನ ಮಾಧವರಾವ್ ಸಿಂಧಿಯಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಹೊಸ ಆರಂಭಿಕರು ಕಣಕ್ಕಿಳಿಯಲಿದ್ದಾರೆ.

1 / 6
ಟೀಮ್ ಇಂಡಿಯಾದ ಖಾಯಂ ಆರಂಭಿಕರಾದ ಯಶಸ್ವಿ ಜೈಸ್ವಾಲ್ ಹಾಗೂ ಶುಭ್​​ಮನ್ ಗಿಲ್ ಈ ಸರಣಿಯಿಂದ ಹೊರಗುಳಿದಿದ್ದಾರೆ. ಹೀಗಾಗಿ ಬಾಂಗ್ಲಾದೇಶ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತದ ಪರ ಹೊಸ ಆರಂಭಿಕರು ಇನಿಂಗ್ಸ್ ಆರಂಭಿಸಲಿದ್ದಾರೆ.

ಟೀಮ್ ಇಂಡಿಯಾದ ಖಾಯಂ ಆರಂಭಿಕರಾದ ಯಶಸ್ವಿ ಜೈಸ್ವಾಲ್ ಹಾಗೂ ಶುಭ್​​ಮನ್ ಗಿಲ್ ಈ ಸರಣಿಯಿಂದ ಹೊರಗುಳಿದಿದ್ದಾರೆ. ಹೀಗಾಗಿ ಬಾಂಗ್ಲಾದೇಶ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತದ ಪರ ಹೊಸ ಆರಂಭಿಕರು ಇನಿಂಗ್ಸ್ ಆರಂಭಿಸಲಿದ್ದಾರೆ.

2 / 6
ಅದರಂತೆ ಟೀಮ್ ಇಂಡಿಯಾ ಪರ ಆರಂಭಿಕರಾಗಿ ಅಭಿಷೇಕ್ ಶರ್ಮಾ ಹಾಗೂ ಸಂಜು ಸ್ಯಾಮ್ಸನ್ ಕಣಕ್ಕಿಳಿಯಲಿದ್ದಾರೆ. ಪ್ಲೇಯಿಂಗ್ ಇಲೆವೆನ್​ನಲ್ಲಿ ಸ್ಯಾಮ್ಸನ್ ಹಾಗೂ ಅಭಿಷೇಕ್ ಇರಲಿರುವುದನ್ನು ಖಚಿತಪಡಿಸಿರುವ ನಾಯಕ ಸೂರ್ಯಕುಮಾರ್ ಯಾದವ್, ಮೊದಲ ಪಂದ್ಯದಲ್ಲಿ ಇವರಿಬ್ಬರೇ ಇನಿಂಗ್ಸ್ ಆರಂಭಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಅದರಂತೆ ಟೀಮ್ ಇಂಡಿಯಾ ಪರ ಆರಂಭಿಕರಾಗಿ ಅಭಿಷೇಕ್ ಶರ್ಮಾ ಹಾಗೂ ಸಂಜು ಸ್ಯಾಮ್ಸನ್ ಕಣಕ್ಕಿಳಿಯಲಿದ್ದಾರೆ. ಪ್ಲೇಯಿಂಗ್ ಇಲೆವೆನ್​ನಲ್ಲಿ ಸ್ಯಾಮ್ಸನ್ ಹಾಗೂ ಅಭಿಷೇಕ್ ಇರಲಿರುವುದನ್ನು ಖಚಿತಪಡಿಸಿರುವ ನಾಯಕ ಸೂರ್ಯಕುಮಾರ್ ಯಾದವ್, ಮೊದಲ ಪಂದ್ಯದಲ್ಲಿ ಇವರಿಬ್ಬರೇ ಇನಿಂಗ್ಸ್ ಆರಂಭಿಸಲಿದ್ದಾರೆ ಎಂದು ತಿಳಿಸಿದ್ದಾರೆ.

3 / 6
ಅಭಿಷೇಕ್ ಶರ್ಮಾ ಹಾಗೂ ಸಂಜು ಸ್ಯಾಮ್ಸನ್ ಈ ಹಿಂದೆ ಕೂಡ ಟೀಮ್ ಇಂಡಿಯಾ ಪರ ಓಪನರ್​ಗಳಾಗಿ ಕಾಣಿಸಿಕೊಂಡಿದ್ದರು. ಝಿಂಬಾಬ್ವೆ ವಿರುದ್ಧದ ಸರಣಿಯಲ್ಲಿ ಯುವ ಎಡಗೈ ದಾಂಡಿಗ ಅಭಿಷೇಕ್ 2 ಮ್ಯಾಚ್​ಗಳಲ್ಲಿ ಆರಂಭಿಕನಾಗಿ ಬ್ಯಾಟ್ ಬೀಸಿದ್ದರು. ಈ  ವೇಳೆ ಒಂದು ಭರ್ಜರಿ ಶತಕವನ್ನು ಸಹ ಸಿಡಿಸಿದ್ದಾರೆ. ಹಾಗೆಯೇ ಸ್ಯಾಮ್ಸನ್ 5 ಪಂದ್ಯಗಳಲ್ಲಿ ಇನಿಂಗ್ಸ್ ಆರಂಭಿಸಿದ್ದು, ಒಂದು ಅರ್ಧಶತಕದೊಂದಿಗೆ ಒಟ್ಟು 105 ರನ್ ಕಲೆಹಾಕಿದ್ದಾರೆ.

ಅಭಿಷೇಕ್ ಶರ್ಮಾ ಹಾಗೂ ಸಂಜು ಸ್ಯಾಮ್ಸನ್ ಈ ಹಿಂದೆ ಕೂಡ ಟೀಮ್ ಇಂಡಿಯಾ ಪರ ಓಪನರ್​ಗಳಾಗಿ ಕಾಣಿಸಿಕೊಂಡಿದ್ದರು. ಝಿಂಬಾಬ್ವೆ ವಿರುದ್ಧದ ಸರಣಿಯಲ್ಲಿ ಯುವ ಎಡಗೈ ದಾಂಡಿಗ ಅಭಿಷೇಕ್ 2 ಮ್ಯಾಚ್​ಗಳಲ್ಲಿ ಆರಂಭಿಕನಾಗಿ ಬ್ಯಾಟ್ ಬೀಸಿದ್ದರು. ಈ ವೇಳೆ ಒಂದು ಭರ್ಜರಿ ಶತಕವನ್ನು ಸಹ ಸಿಡಿಸಿದ್ದಾರೆ. ಹಾಗೆಯೇ ಸ್ಯಾಮ್ಸನ್ 5 ಪಂದ್ಯಗಳಲ್ಲಿ ಇನಿಂಗ್ಸ್ ಆರಂಭಿಸಿದ್ದು, ಒಂದು ಅರ್ಧಶತಕದೊಂದಿಗೆ ಒಟ್ಟು 105 ರನ್ ಕಲೆಹಾಕಿದ್ದಾರೆ.

4 / 6
ಇದೀಗ ಪ್ರಮುಖ ಆಟಗಾರರ ಅನುಪಸ್ಥಿತಿಯೊಂದಿಗೆ ಟೀಮ್ ಇಂಡಿಯಾ ಪರ ಮತ್ತೆ ಆರಂಭಿಕನಾಗಿ ಕಣಕ್ಕಿಳಿಯಲು ಸಂಜು ಸ್ಯಾಮ್ಸನ್ ಸಜ್ಜಾಗಿದ್ದಾರೆ. ಅವರೊಂದಿಗೆ ಸನ್​ರೈಸರ್ಸ್​ ಹೈದರಾಬಾದ್ ತಂಡದ ಆರಂಭಿಕ ದಾಂಡಿಗ ಅಭಿಷೇಕ್ ಶರ್ಮಾ ಕೂಡ ಬ್ಯಾಟ್ ಬೀಸಲು ರೆಡಿಯಾಗಿ ನಿಂತಿದ್ದಾರೆ. ಹೀಗಾಗಿ ಬಾಂಗ್ಲಾದೇಶ್ ವಿರುದ್ಧದ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಕಡೆಯಿಂದ ಸ್ಪೋಟಕ ಆರಂಭವನ್ನು ನಿರೀಕ್ಷಿಸಬಹುದು.

ಇದೀಗ ಪ್ರಮುಖ ಆಟಗಾರರ ಅನುಪಸ್ಥಿತಿಯೊಂದಿಗೆ ಟೀಮ್ ಇಂಡಿಯಾ ಪರ ಮತ್ತೆ ಆರಂಭಿಕನಾಗಿ ಕಣಕ್ಕಿಳಿಯಲು ಸಂಜು ಸ್ಯಾಮ್ಸನ್ ಸಜ್ಜಾಗಿದ್ದಾರೆ. ಅವರೊಂದಿಗೆ ಸನ್​ರೈಸರ್ಸ್​ ಹೈದರಾಬಾದ್ ತಂಡದ ಆರಂಭಿಕ ದಾಂಡಿಗ ಅಭಿಷೇಕ್ ಶರ್ಮಾ ಕೂಡ ಬ್ಯಾಟ್ ಬೀಸಲು ರೆಡಿಯಾಗಿ ನಿಂತಿದ್ದಾರೆ. ಹೀಗಾಗಿ ಬಾಂಗ್ಲಾದೇಶ್ ವಿರುದ್ಧದ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಕಡೆಯಿಂದ ಸ್ಪೋಟಕ ಆರಂಭವನ್ನು ನಿರೀಕ್ಷಿಸಬಹುದು.

5 / 6
ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್(ನಾಯಕ) ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ತಿಲಕ್ ವರ್ಮಾ, ರಿಂಕು ಸಿಂಗ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಹಾರ್ದಿಕ್ ಪಾಂಡ್ಯ, ರಿಯಾನ್ ಪರಾಗ್, ನಿತೀಶ್ ಕುಮಾರ್ ರೆಡ್ಡಿ, ವರುಣ್ ಚಕ್ರವರ್ತಿ, ಜಿತೇಶ್ ಶರ್ಮಾ, ಅರ್ಷದೀಪ್ ಸಿಂಗ್, ಹರ್ಷಿತ್ ರಾಣಾ, ಮಯಾಂಕ್ ಯಾದವ್.

ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್(ನಾಯಕ) ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ತಿಲಕ್ ವರ್ಮಾ, ರಿಂಕು ಸಿಂಗ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಹಾರ್ದಿಕ್ ಪಾಂಡ್ಯ, ರಿಯಾನ್ ಪರಾಗ್, ನಿತೀಶ್ ಕುಮಾರ್ ರೆಡ್ಡಿ, ವರುಣ್ ಚಕ್ರವರ್ತಿ, ಜಿತೇಶ್ ಶರ್ಮಾ, ಅರ್ಷದೀಪ್ ಸಿಂಗ್, ಹರ್ಷಿತ್ ರಾಣಾ, ಮಯಾಂಕ್ ಯಾದವ್.

6 / 6
Follow Us
ಬೀಳುವ ಸ್ಥಿತಿಯಲ್ಲಿ 141 ವರ್ಷಗಳ ಇತಿಹಾಸವಿರುವ ಹಾರವಾಡ ಸರ್ಕಾರಿ ಶಾಲೆ
ಬೀಳುವ ಸ್ಥಿತಿಯಲ್ಲಿ 141 ವರ್ಷಗಳ ಇತಿಹಾಸವಿರುವ ಹಾರವಾಡ ಸರ್ಕಾರಿ ಶಾಲೆ
ಆಷಾಢ ಮಾಸದ ಮೊದಲ ಶುಕ್ರವಾರ ಶ್ರೀ ಚಾಮುಂಡೇಶ್ವರಿ ಅಲಂಕಾರ ಹೇಗಿದೆ ನೋಡಿ
ಆಷಾಢ ಮಾಸದ ಮೊದಲ ಶುಕ್ರವಾರ ಶ್ರೀ ಚಾಮುಂಡೇಶ್ವರಿ ಅಲಂಕಾರ ಹೇಗಿದೆ ನೋಡಿ
ಮೊದಲ ಆಷಾಢ ಶುಕ್ರವಾರ ಹಿನ್ನೆಲೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ
ಮೊದಲ ಆಷಾಢ ಶುಕ್ರವಾರ ಹಿನ್ನೆಲೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ
ಉದ್ಘಾಟನೆಗೂ ಮುನ್ನವೇ ಸೋರುತ್ತಿದೆ ಕೊಪ್ಪಳ ರೈಲು ನಿಲ್ದಾಣ!
ಉದ್ಘಾಟನೆಗೂ ಮುನ್ನವೇ ಸೋರುತ್ತಿದೆ ಕೊಪ್ಪಳ ರೈಲು ನಿಲ್ದಾಣ!
ಆಷಾಢ ಶುಕ್ರವಾರ, ದಕ್ಷಿಣಾಯನವೂ ಶುರು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಆಷಾಢ ಶುಕ್ರವಾರ, ದಕ್ಷಿಣಾಯನವೂ ಶುರು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಜೆಸಿಬಿ ಜೊತೆ ಆನೆಯ ಕಾಳಗ; ಇದು ನನ್ನ ಕಾಡು ಎಂದ ಗಜರಾಜ
ಜೆಸಿಬಿ ಜೊತೆ ಆನೆಯ ಕಾಳಗ; ಇದು ನನ್ನ ಕಾಡು ಎಂದ ಗಜರಾಜ
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?