AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs BAN: ಈ ಇಬ್ಬರಿಗೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನವಿಲ್ಲ ಎಂದ ಗೌತಮ್ ಗಂಭೀರ್

IND vs BAN: ಬಾಂಗ್ಲಾದೇಶ ವಿರುದ್ಧದ ಪಂದ್ಯದ ಆರಂಭಕ್ಕೂ ಮುನ್ನ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಗೌತಮ್ ಗಂಭೀರ್ ತಂಡದ ಆಡುವ ಹನ್ನೊಂದರ ಬಳಗದ ಬಗ್ಗೆ ಸ್ಪಷ್ಟನೆ ನೀಡುವ ಕೆಲಸ ಮಾಡಿದರು. ಈ ವೇಳೆ ಮಾತನಾಡಿದ ಅವರು, ಕೇವಲ 11 ಆಟಗಾರರು ಆಡಲು ಸಾಧ್ಯವಾದ ಕಾರಣ ಯುವ ಆಟಗಾರರಾದ ಸರ್ಫರಾಜ್ ಖಾನ್ ಮತ್ತು ಧ್ರುವ್ ಜುರೆಲ್, ಅವಕಾಶಗಳಿಗಾಗಿ ಕಾಯಬೇಕಾಗಬಹುದು ಎಂದರು.

ಪೃಥ್ವಿಶಂಕರ
|

Updated on: Sep 18, 2024 | 2:47 PM

Share
ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್ ಪಂದ್ಯಕ್ಕೆ ಆತಿಥ್ಯವಹಿಸಲು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂ ಸಜ್ಜಾಗಿದೆ. ಉಭಯ ತಂಡಗಳ ನಡುವಿನ ಮೊದಲ ಪಂದ್ಯ ನಾಳೆಯಿಂದ ಅಂದರೆ ಸೆಪ್ಟೆಂಬರ್ 19 ರಿಂದ ಆರಂಭವಾಗಲಿದೆ. ಈ ಪಂದ್ಯಕ್ಕೆ ಟೀಂ ಇಂಡಿಯಾದ ಆಡುವ ಬಳಗ ಹೇಗಿರಲಿದೆ ಎಂಬುದು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಅದಕ್ಕೆ ಸಂಬಂಧಿಸಿದಂತೆ ಮುಖ್ಯ ಕೋಚ್ ಗೌತಮ್ ಗಂಭೀರ್ ಬಿಗ್ ಅಪ್​ಡೇಟ್ ನೀಡಿದ್ದಾರೆ.

ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್ ಪಂದ್ಯಕ್ಕೆ ಆತಿಥ್ಯವಹಿಸಲು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂ ಸಜ್ಜಾಗಿದೆ. ಉಭಯ ತಂಡಗಳ ನಡುವಿನ ಮೊದಲ ಪಂದ್ಯ ನಾಳೆಯಿಂದ ಅಂದರೆ ಸೆಪ್ಟೆಂಬರ್ 19 ರಿಂದ ಆರಂಭವಾಗಲಿದೆ. ಈ ಪಂದ್ಯಕ್ಕೆ ಟೀಂ ಇಂಡಿಯಾದ ಆಡುವ ಬಳಗ ಹೇಗಿರಲಿದೆ ಎಂಬುದು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಅದಕ್ಕೆ ಸಂಬಂಧಿಸಿದಂತೆ ಮುಖ್ಯ ಕೋಚ್ ಗೌತಮ್ ಗಂಭೀರ್ ಬಿಗ್ ಅಪ್​ಡೇಟ್ ನೀಡಿದ್ದಾರೆ.

1 / 8
ಬಾಂಗ್ಲಾದೇಶ ವಿರುದ್ಧದ ಪಂದ್ಯದ ಆರಂಭಕ್ಕೂ ಮುನ್ನ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಗೌತಮ್ ಗಂಭೀರ್ ತಂಡದ ಆಡುವ ಹನ್ನೊಂದರ ಬಳಗದ ಬಗ್ಗೆ ಸ್ಪಷ್ಟನೆ ನೀಡುವ ಕೆಲಸ ಮಾಡಿದರು. ಈ ವೇಳೆ ಮಾತನಾಡಿದ ಅವರು, ಕೇವಲ 11 ಆಟಗಾರರು ಆಡಲು ಸಾಧ್ಯವಾದ ಕಾರಣ ಯುವ ಆಟಗಾರರಾದ ಸರ್ಫರಾಜ್ ಖಾನ್ ಮತ್ತು ಧ್ರುವ್ ಜುರೆಲ್, ಅವಕಾಶಗಳಿಗಾಗಿ ಕಾಯಬೇಕಾಗಬಹುದು ಎಂದರು.

ಬಾಂಗ್ಲಾದೇಶ ವಿರುದ್ಧದ ಪಂದ್ಯದ ಆರಂಭಕ್ಕೂ ಮುನ್ನ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಗೌತಮ್ ಗಂಭೀರ್ ತಂಡದ ಆಡುವ ಹನ್ನೊಂದರ ಬಳಗದ ಬಗ್ಗೆ ಸ್ಪಷ್ಟನೆ ನೀಡುವ ಕೆಲಸ ಮಾಡಿದರು. ಈ ವೇಳೆ ಮಾತನಾಡಿದ ಅವರು, ಕೇವಲ 11 ಆಟಗಾರರು ಆಡಲು ಸಾಧ್ಯವಾದ ಕಾರಣ ಯುವ ಆಟಗಾರರಾದ ಸರ್ಫರಾಜ್ ಖಾನ್ ಮತ್ತು ಧ್ರುವ್ ಜುರೆಲ್, ಅವಕಾಶಗಳಿಗಾಗಿ ಕಾಯಬೇಕಾಗಬಹುದು ಎಂದರು.

2 / 8
ಇದರರ್ಥ ಕೆಎಲ್ ರಾಹುಲ್ ಮತ್ತು ರಿಷಬ್ ಪಂತ್ ಪ್ಲೇಯಿಂಗ್-11 ರಲ್ಲಿ ಸ್ಥಾನ ಪಡೆಯುವುದು ಖಚಿತವಾಗಿದೆ. ವಾಸ್ತವವಾಗಿ ಭಾರತದ ಕಳೆದ ಟೆಸ್ಟ್ ಸರಣಿಯಲ್ಲಿ ವಿಕೆಟ್ ಕೀಪರ್ ರೂಪದಲ್ಲಿ ಧೃವ್ ಜುರೇಲ್ ಕಾಣಿಸಿಕೊಂಡಿದ್ದರು. ಆದರೆ ಇದೀಗ ರಿಷಬ್ ಪಂತ್ ಟೆಸ್ಟ್ ತಂಡಕ್ಕೆ ಆಯ್ಕೆಯಾಗಿರುವ ಕಾರಣ ಅವರು ಆ ಸ್ಥಾನವನ್ನು ತುಂಬುವುದು ಖಚಿತವಾಗಿದೆ.

ಇದರರ್ಥ ಕೆಎಲ್ ರಾಹುಲ್ ಮತ್ತು ರಿಷಬ್ ಪಂತ್ ಪ್ಲೇಯಿಂಗ್-11 ರಲ್ಲಿ ಸ್ಥಾನ ಪಡೆಯುವುದು ಖಚಿತವಾಗಿದೆ. ವಾಸ್ತವವಾಗಿ ಭಾರತದ ಕಳೆದ ಟೆಸ್ಟ್ ಸರಣಿಯಲ್ಲಿ ವಿಕೆಟ್ ಕೀಪರ್ ರೂಪದಲ್ಲಿ ಧೃವ್ ಜುರೇಲ್ ಕಾಣಿಸಿಕೊಂಡಿದ್ದರು. ಆದರೆ ಇದೀಗ ರಿಷಬ್ ಪಂತ್ ಟೆಸ್ಟ್ ತಂಡಕ್ಕೆ ಆಯ್ಕೆಯಾಗಿರುವ ಕಾರಣ ಅವರು ಆ ಸ್ಥಾನವನ್ನು ತುಂಬುವುದು ಖಚಿತವಾಗಿದೆ.

3 / 8
ಇನ್ನು 6ನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವ ಆಟಗಾರರ ಪೈಕಿ ಸರ್ಫರಾಜ್ ಖಾನ್ ಹಾಗೂ ಕನ್ನಡಿಗ ಕೆಎಲ್ ರಾಹುಲ್ ನಡುವೆ ಫೈಪೋಟಿ ಏರ್ಪಟ್ಟಿತ್ತು. ಕಳೆದ ಟೆಸ್ಟ್ ಸರಣಿಯಲ್ಲಿ ತಂಡದ ಪರ ಆಡಿದ್ದ ಸರ್ಫರಾಜ್ ಅಮೋಘ ಪ್ರದರ್ಶನ ನೀಡಿದ್ದರು. ಆದರೆ ಇಂಜುರಿ ಕಾರಣದಿಂದಾಗಿ ರಾಹುಲ್ ಆಡಿರಲಿಲ್ಲ. ಆದರೆ ಅದಕ್ಕೂ ಮುನ್ನ ಆಡಿದ ಸರಣಿಯಲ್ಲಿ ರಾಹುಲ್ ಬ್ಯಾಟ್ ಉತ್ತಮ ರನ್ ಕಲೆಹಾಕಿತ್ತು. ಹೀಗಾಗಿ ಅನುಭವದ ಆಧಾರದ ಮೇಲೆ ರಾಹುಲ್ ಪರ ಗಂಭೀರ್ ಬ್ಯಾಟ್ ಬೀಸಿದ್ದಾರೆ.

ಇನ್ನು 6ನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವ ಆಟಗಾರರ ಪೈಕಿ ಸರ್ಫರಾಜ್ ಖಾನ್ ಹಾಗೂ ಕನ್ನಡಿಗ ಕೆಎಲ್ ರಾಹುಲ್ ನಡುವೆ ಫೈಪೋಟಿ ಏರ್ಪಟ್ಟಿತ್ತು. ಕಳೆದ ಟೆಸ್ಟ್ ಸರಣಿಯಲ್ಲಿ ತಂಡದ ಪರ ಆಡಿದ್ದ ಸರ್ಫರಾಜ್ ಅಮೋಘ ಪ್ರದರ್ಶನ ನೀಡಿದ್ದರು. ಆದರೆ ಇಂಜುರಿ ಕಾರಣದಿಂದಾಗಿ ರಾಹುಲ್ ಆಡಿರಲಿಲ್ಲ. ಆದರೆ ಅದಕ್ಕೂ ಮುನ್ನ ಆಡಿದ ಸರಣಿಯಲ್ಲಿ ರಾಹುಲ್ ಬ್ಯಾಟ್ ಉತ್ತಮ ರನ್ ಕಲೆಹಾಕಿತ್ತು. ಹೀಗಾಗಿ ಅನುಭವದ ಆಧಾರದ ಮೇಲೆ ರಾಹುಲ್ ಪರ ಗಂಭೀರ್ ಬ್ಯಾಟ್ ಬೀಸಿದ್ದಾರೆ.

4 / 8
ಇದರೊಂದಿಗೆ ಗೌತಮ್ ಗಂಭೀರ್ ಸುದ್ದಿಗೋಷ್ಠಿಯಲ್ಲಿ ಮೊದಲ ಟೆಸ್ಟ್​ಗೆ ತಂಡದ ಆಡುವ -11 ರ ಬಳಗವನ್ನು ಬಹುತೇಕ ಸ್ಪಷ್ಟಪಡಿಸಿದ್ದಾರೆ. ಅದರಂತೆ ಸರ್ಫರಾಜ್ ಮತ್ತು ಜುರೆಲ್ ಆಡಲು ಕಾಯಬೇಕಾಗಿದೆ. ಅಂದರೆ ಪಂತ್ ಮತ್ತು ಕೆಎಲ್ ರಾಹುಲ್ ಮಧ್ಯಮ ಕ್ರಮಾಂಕದಲ್ಲಿ ಆಡಲಿದ್ದಾರೆ.

ಇದರೊಂದಿಗೆ ಗೌತಮ್ ಗಂಭೀರ್ ಸುದ್ದಿಗೋಷ್ಠಿಯಲ್ಲಿ ಮೊದಲ ಟೆಸ್ಟ್​ಗೆ ತಂಡದ ಆಡುವ -11 ರ ಬಳಗವನ್ನು ಬಹುತೇಕ ಸ್ಪಷ್ಟಪಡಿಸಿದ್ದಾರೆ. ಅದರಂತೆ ಸರ್ಫರಾಜ್ ಮತ್ತು ಜುರೆಲ್ ಆಡಲು ಕಾಯಬೇಕಾಗಿದೆ. ಅಂದರೆ ಪಂತ್ ಮತ್ತು ಕೆಎಲ್ ರಾಹುಲ್ ಮಧ್ಯಮ ಕ್ರಮಾಂಕದಲ್ಲಿ ಆಡಲಿದ್ದಾರೆ.

5 / 8
ಇನ್ನು ಟಾಪ್ ಆರ್ಡರ್ ಬ್ಯಾಟಿಂಗ್​ನಲ್ಲಿ ರೋಹಿತ್ ಶರ್ಮಾ ಮತ್ತು ಯಶಸ್ವಿ ಜೈಸ್ವಾಲ್ ಓಪನರ್ ಆಗಲಿದ್ದಾರೆ. ಶುಭ್​ಮನ್ ಗಿಲ್ 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬರಲಿದ್ದು, ವಿರಾಟ್ ಕೊಹ್ಲಿ 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬರಲಿದ್ದಾರೆ. ಇದಲ್ಲದೆ ಮೂವರು ಸ್ಪಿನ್ನರ್‌ಗಳು ಮತ್ತು ಇಬ್ಬರು ವೇಗದ ಬೌಲರ್‌ಗಳೊಂದಿಗೆ ತಂಡ ಕಣಕ್ಕಿಳಿಯುವುದು ಖಚಿತವಾಗಿದೆ.

ಇನ್ನು ಟಾಪ್ ಆರ್ಡರ್ ಬ್ಯಾಟಿಂಗ್​ನಲ್ಲಿ ರೋಹಿತ್ ಶರ್ಮಾ ಮತ್ತು ಯಶಸ್ವಿ ಜೈಸ್ವಾಲ್ ಓಪನರ್ ಆಗಲಿದ್ದಾರೆ. ಶುಭ್​ಮನ್ ಗಿಲ್ 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬರಲಿದ್ದು, ವಿರಾಟ್ ಕೊಹ್ಲಿ 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬರಲಿದ್ದಾರೆ. ಇದಲ್ಲದೆ ಮೂವರು ಸ್ಪಿನ್ನರ್‌ಗಳು ಮತ್ತು ಇಬ್ಬರು ವೇಗದ ಬೌಲರ್‌ಗಳೊಂದಿಗೆ ತಂಡ ಕಣಕ್ಕಿಳಿಯುವುದು ಖಚಿತವಾಗಿದೆ.

6 / 8
ಸ್ಪಿನ್ ವಿಭಾಗದಲ್ಲಿ ಆರ್ ಅಶ್ವಿನ್, ರವೀಂದ್ರ ಜಡೇಜಾ ಮತ್ತು ಕುಲ್ದೀಪ್ ಯಾದವ್ ಕಾಣಿಸಿಕೊಂಡರೆ, ವೇಗದ ಬೌಲರ್‌ಗಳಾಗಿ ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್ ಆಡುವ ಹನ್ನೊಂದರ ಬಳಗದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಸ್ಪಿನ್ ವಿಭಾಗದಲ್ಲಿ ಆರ್ ಅಶ್ವಿನ್, ರವೀಂದ್ರ ಜಡೇಜಾ ಮತ್ತು ಕುಲ್ದೀಪ್ ಯಾದವ್ ಕಾಣಿಸಿಕೊಂಡರೆ, ವೇಗದ ಬೌಲರ್‌ಗಳಾಗಿ ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್ ಆಡುವ ಹನ್ನೊಂದರ ಬಳಗದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

7 / 8
ಮೊದಲ ಟೆಸ್ಟ್​ಗೆ ಭಾರತ ಸಂಭಾವ್ಯ ತಂಡ: ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ರಿಷಬ್ ಪಂತ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ಆರ್.ಅಶ್ವಿನ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ಮೊದಲ ಟೆಸ್ಟ್​ಗೆ ಭಾರತ ಸಂಭಾವ್ಯ ತಂಡ: ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ರಿಷಬ್ ಪಂತ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ಆರ್.ಅಶ್ವಿನ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

8 / 8
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ