AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ವಿಶ್ವಕಪ್‌ನಲ್ಲಿ ಇತಿಹಾಸ ನಿರ್ಮಿಸಿದ ಕಿಂಗ್ ಕೊಹ್ಲಿ..!

Virat Kohli: ಬಾಂಗ್ಲಾದೇಶ ವಿರುದ್ಧ ಸಿಡಿಸಿದ 37 ರನ್​ಗಳ ನೆರವಿನಿಂದ ಇದೀಗ ವಿರಾಟ್ ಕೊಹ್ಲಿ ಟಿ20 ಮತ್ತು ಏಕದಿನ ವಿಶ್ವಕಪ್‌ನಲ್ಲಿ 3000 ರನ್‌ಗಳ ಗಡಿ ದಾಟಿದ ವಿಶ್ವದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಐತಿಹಾಸಿಕ ದಾಖಲೆಯನ್ನು ಮುಟ್ಟಲು ಕೊಹ್ಲಿಗೆ 35 ರನ್‌ಗಳ ಅಗತ್ಯವಿತ್ತು. ಇಂದಿನ ಪಂದ್ಯದಲ್ಲಿ 37 ರನ್ ಬಾರಿಸಿದ ತಕ್ಷಣ ಕೊಹ್ಲಿ ಇತಿಹಾಸ ನಿರ್ಮಿಸಿದರು.

ಪೃಥ್ವಿಶಂಕರ
|

Updated on: Jun 22, 2024 | 11:05 PM

Share
ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ತಮ್ಮ ವೃತ್ತಿ ಜೀವನದಲ್ಲಿ ಒಂದರ ಹಿಂದೆ ಒಂದರಂತೆ ಹಲವು ಮೈಲುಗಲ್ಲುಗಳನ್ನು ದಾಟುತ್ತಿದ್ದಾರೆ. ಇದೀಗ ಇಂದು ನಡೆಯುತ್ತಿರುವ ಬಾಂಗ್ಲಾದೇಶ ವಿರುದ್ಧದ ಸೂಪರ್ 8 ಪಂದ್ಯದಲ್ಲೂ ವಿಶೇಷ ಮೈಲಿಗಲ್ಲಿಗೆ ತನ್ನ ಹೆಸರನ್ನು ನಮೂದಿಸಿದ್ದಾರೆ.

ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ತಮ್ಮ ವೃತ್ತಿ ಜೀವನದಲ್ಲಿ ಒಂದರ ಹಿಂದೆ ಒಂದರಂತೆ ಹಲವು ಮೈಲುಗಲ್ಲುಗಳನ್ನು ದಾಟುತ್ತಿದ್ದಾರೆ. ಇದೀಗ ಇಂದು ನಡೆಯುತ್ತಿರುವ ಬಾಂಗ್ಲಾದೇಶ ವಿರುದ್ಧದ ಸೂಪರ್ 8 ಪಂದ್ಯದಲ್ಲೂ ವಿಶೇಷ ಮೈಲಿಗಲ್ಲಿಗೆ ತನ್ನ ಹೆಸರನ್ನು ನಮೂದಿಸಿದ್ದಾರೆ.

1 / 7
ಬಾಂಗ್ಲಾದೇಶ ವಿರುದ್ಧದ ಈ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದಿದ್ದ ವಿರಾಟ್ ಕೊಹ್ಲಿ ತಮ್ಮ ಇನ್ನಿಂಗ್ಸ್​ನಲ್ಲಿ 28 ಎಸೆತಗಳನ್ನು ಎದುರಿಸಿ 1 ಬೌಂಡರಿ ಮತ್ತು 3 ಸಿಕ್ಸರ್‌ಗಳ ನೆರವಿನಿಂದ 37 ರನ್ ಬಾರಿಸಿದರು. ಈ ಇನ್ನಿಂಗ್ಸ್‌ನ ಸಹಾಯದಿಂದ ವಿರಾಟ್ ಕೊಹ್ಲಿ ತಮ್ಮ ಹೆಸರಿನಲ್ಲಿ ದೊಡ್ಡ ದಾಖಲೆಯನ್ನು ಬರೆದರು.

ಬಾಂಗ್ಲಾದೇಶ ವಿರುದ್ಧದ ಈ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದಿದ್ದ ವಿರಾಟ್ ಕೊಹ್ಲಿ ತಮ್ಮ ಇನ್ನಿಂಗ್ಸ್​ನಲ್ಲಿ 28 ಎಸೆತಗಳನ್ನು ಎದುರಿಸಿ 1 ಬೌಂಡರಿ ಮತ್ತು 3 ಸಿಕ್ಸರ್‌ಗಳ ನೆರವಿನಿಂದ 37 ರನ್ ಬಾರಿಸಿದರು. ಈ ಇನ್ನಿಂಗ್ಸ್‌ನ ಸಹಾಯದಿಂದ ವಿರಾಟ್ ಕೊಹ್ಲಿ ತಮ್ಮ ಹೆಸರಿನಲ್ಲಿ ದೊಡ್ಡ ದಾಖಲೆಯನ್ನು ಬರೆದರು.

2 / 7
ಬಾಂಗ್ಲಾದೇಶ ವಿರುದ್ಧ ಸಿಡಿಸಿದ 37 ರನ್​ಗಳ ನೆರವಿನಿಂದ ಇದೀಗ ವಿರಾಟ್ ಕೊಹ್ಲಿ ಟಿ20 ಮತ್ತು ಏಕದಿನ ವಿಶ್ವಕಪ್‌ನಲ್ಲಿ 3000 ರನ್‌ಗಳ ಗಡಿ ದಾಟಿದ ವಿಶ್ವದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಐತಿಹಾಸಿಕ ದಾಖಲೆಯನ್ನು ಮುಟ್ಟಲು ಕೊಹ್ಲಿಗೆ 35 ರನ್‌ಗಳ ಅಗತ್ಯವಿತ್ತು. ಇಂದಿನ ಪಂದ್ಯದಲ್ಲಿ 37 ರನ್ ಬಾರಿಸಿದ ತಕ್ಷಣ ಕೊಹ್ಲಿ ಇತಿಹಾಸ ನಿರ್ಮಿಸಿದರು.

ಬಾಂಗ್ಲಾದೇಶ ವಿರುದ್ಧ ಸಿಡಿಸಿದ 37 ರನ್​ಗಳ ನೆರವಿನಿಂದ ಇದೀಗ ವಿರಾಟ್ ಕೊಹ್ಲಿ ಟಿ20 ಮತ್ತು ಏಕದಿನ ವಿಶ್ವಕಪ್‌ನಲ್ಲಿ 3000 ರನ್‌ಗಳ ಗಡಿ ದಾಟಿದ ವಿಶ್ವದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಐತಿಹಾಸಿಕ ದಾಖಲೆಯನ್ನು ಮುಟ್ಟಲು ಕೊಹ್ಲಿಗೆ 35 ರನ್‌ಗಳ ಅಗತ್ಯವಿತ್ತು. ಇಂದಿನ ಪಂದ್ಯದಲ್ಲಿ 37 ರನ್ ಬಾರಿಸಿದ ತಕ್ಷಣ ಕೊಹ್ಲಿ ಇತಿಹಾಸ ನಿರ್ಮಿಸಿದರು.

3 / 7
ಈ ವಿಷಯದಲ್ಲಿ ಕೊಹ್ಲಿ ನಂತರ ರೋಹಿತ್ ಶರ್ಮಾ ಹೆಸರು ಎರಡನೇ ಸ್ಥಾನದಲ್ಲಿದೆ. ರೋಹಿತ್ ಎರಡು ಮಾದರಿಯ ವಿಶ್ವಕಪ್‌ಗಳಲ್ಲಿ ಇದುವರೆಗೆ 2637 ರನ್ ಬಾರಿಸಿದ್ದಾರೆ.

ಈ ವಿಷಯದಲ್ಲಿ ಕೊಹ್ಲಿ ನಂತರ ರೋಹಿತ್ ಶರ್ಮಾ ಹೆಸರು ಎರಡನೇ ಸ್ಥಾನದಲ್ಲಿದೆ. ರೋಹಿತ್ ಎರಡು ಮಾದರಿಯ ವಿಶ್ವಕಪ್‌ಗಳಲ್ಲಿ ಇದುವರೆಗೆ 2637 ರನ್ ಬಾರಿಸಿದ್ದಾರೆ.

4 / 7
ಮೂರನೇ ಸ್ಥಾನದಲ್ಲಿರುವ ಆಸ್ಟ್ರೇಲಿಯದ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ ಇದುವರೆಗೆ 2502 ರನ್ ಬಾರಿಸಿದ್ದರೆ, ಈ ಪಟ್ಟಿಯಲ್ಲಿ ಶ್ರೇಷ್ಠ ಬ್ಯಾಟ್ಸ್‌ಮನ್ ಸಚಿನ್ ತೆಂಡೂಲ್ಕರ್ ನಾಲ್ಕನೇ ಸ್ಥಾನದಲ್ಲಿದ್ದಾರೆ. ತೆಂಡೂಲ್ಕರ್ 2278 ರನ್ ಬಾರಿಸಿದ್ದು, ಶ್ರೀಲಂಕಾದ ದಿಗ್ಗಜ ಕುಮಾರ ಸಂಗಕ್ಕಾರ 2193 ರನ್ ಬಾರಿಸಿ ಐದನೇ ಸ್ಥಾನದಲ್ಲಿದ್ದಾರೆ.

ಮೂರನೇ ಸ್ಥಾನದಲ್ಲಿರುವ ಆಸ್ಟ್ರೇಲಿಯದ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ ಇದುವರೆಗೆ 2502 ರನ್ ಬಾರಿಸಿದ್ದರೆ, ಈ ಪಟ್ಟಿಯಲ್ಲಿ ಶ್ರೇಷ್ಠ ಬ್ಯಾಟ್ಸ್‌ಮನ್ ಸಚಿನ್ ತೆಂಡೂಲ್ಕರ್ ನಾಲ್ಕನೇ ಸ್ಥಾನದಲ್ಲಿದ್ದಾರೆ. ತೆಂಡೂಲ್ಕರ್ 2278 ರನ್ ಬಾರಿಸಿದ್ದು, ಶ್ರೀಲಂಕಾದ ದಿಗ್ಗಜ ಕುಮಾರ ಸಂಗಕ್ಕಾರ 2193 ರನ್ ಬಾರಿಸಿ ಐದನೇ ಸ್ಥಾನದಲ್ಲಿದ್ದಾರೆ.

5 / 7
ಈ ದಾಖಲೆಯಲ್ಲದೆ ಕೊಹ್ಲಿ, ಟಿ20 ವಿಶ್ವಕಪ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡಿದ್ದಾರೆ. ಇದುವರೆಗೆ ಕೊಹ್ಲಿ ಆಡಿರುವ 32 ಪಂದ್ಯಗಳ 30 ಇನ್ನಿಂಗ್ಸ್‌ಗಳಲ್ಲಿ 1207 ರನ್ ಬಾರಿಸಿದ್ದಾರೆ. ಇದರಲ್ಲಿ 14 ಅರ್ಧಶತಕಗಳು ಸೇರಿವೆ.

ಈ ದಾಖಲೆಯಲ್ಲದೆ ಕೊಹ್ಲಿ, ಟಿ20 ವಿಶ್ವಕಪ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡಿದ್ದಾರೆ. ಇದುವರೆಗೆ ಕೊಹ್ಲಿ ಆಡಿರುವ 32 ಪಂದ್ಯಗಳ 30 ಇನ್ನಿಂಗ್ಸ್‌ಗಳಲ್ಲಿ 1207 ರನ್ ಬಾರಿಸಿದ್ದಾರೆ. ಇದರಲ್ಲಿ 14 ಅರ್ಧಶತಕಗಳು ಸೇರಿವೆ.

6 / 7
ಏಕದಿನ ವಿಶ್ವಕಪ್‌ನಲ್ಲೂ ವಿರಾಟ್ ತಮ್ಮ ಬ್ಯಾಟ್‌ನಿಂದ ಸಾಕಷ್ಟು ರನ್ ಗಳಿಸಿದ್ದಾರೆ. ಕೊಹ್ಲಿ ಆಡಿರುವ 37 ಪಂದ್ಯಗಳಲ್ಲಿ 1795 ರನ್ ಬಾರಿಸಿದ್ದಾರೆ. ಇದರಲ್ಲಿ 5 ಶತಕ ಮತ್ತು 12 ಅರ್ಧ ಶತಕ ಸೇರಿವೆ.

ಏಕದಿನ ವಿಶ್ವಕಪ್‌ನಲ್ಲೂ ವಿರಾಟ್ ತಮ್ಮ ಬ್ಯಾಟ್‌ನಿಂದ ಸಾಕಷ್ಟು ರನ್ ಗಳಿಸಿದ್ದಾರೆ. ಕೊಹ್ಲಿ ಆಡಿರುವ 37 ಪಂದ್ಯಗಳಲ್ಲಿ 1795 ರನ್ ಬಾರಿಸಿದ್ದಾರೆ. ಇದರಲ್ಲಿ 5 ಶತಕ ಮತ್ತು 12 ಅರ್ಧ ಶತಕ ಸೇರಿವೆ.

7 / 7
Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ