Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG 2nd Test: ಇಂಗ್ಲೆಂಡ್ ಗೆಲುವಿಗೆ ಬೇಕು 332 ರನ್ಸ್: ರೋಚಕತೆ ಸೃಷ್ಟಿಸಿದ ಇಂದಿನ ನಾಲ್ಕನೇ ದಿನದಾಟ

India vs England Second Test: ಗೆಲುವಿಗೆ 399 ರನ್​ಗಳ ಬೃಹತ್ ಟಾರ್ಗೆಟ್ ಬೆನ್ನಟ್ಟಿರುವ ಇಂಗ್ಲೆಂಡ್ ಪರ ಜ್ಯಾಖ್ ಕ್ರಾವ್ಲೆ 29 ಹಾಗೂ ರೆಹಾನ್ ಅಹ್ಮದ್ 9 ರನ್ ಗಳಿಸಿ ನಾಲ್ಕನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಇಂಗ್ಲೆಂಡ್ ಗೆಲುವಿಗೆ 332 ರನ್ಸ್ ಬೇಕಾಗಿದೆ. ಹೀಗಾಗಿ ಇಂದಿನ ನಾಲ್ಕನೇ ದಿನದಾಟ ಕುತೂಹಲ ಕೆರಳಿಸಿದೆ.

Vinay Bhat
|

Updated on: Feb 05, 2024 | 7:04 AM

ವಿಶಾಖಪಟ್ಟಣಂನ ಡಾ. ವೈಎಸ್ ರಾಜಶೇಖರ ರೆಡ್ಡಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಣ ದ್ವಿತೀಯ ಟೆಸ್ಟ್ ಪಂದ್ಯ ರೋಚಕ ಘಟ್ಟಕ್ಕೆ ಬಂದು ನಿಂತಿದೆ. ಮೂರನೇ ದಿನದಾಟದ ಅಂತ್ಯಕ್ಕೆ ಇಂಗ್ಲೆಂಡ್ 67 ರನ್​ಗೆ 1 ವಿಕೆಟ್ ಕಳೆದುಕೊಂಡಿದ್ದು, ಗೆಲುವಿಗೆ 332 ರನ್ಸ್ ಬೇಕಾಗಿದೆ. ಹೀಗಾಗಿ ಇಂದಿನ ನಾಲ್ಕನೇ ದಿನದಾಟ ಕುತೂಹಲ ಕೆರಳಿಸಿದೆ.

ವಿಶಾಖಪಟ್ಟಣಂನ ಡಾ. ವೈಎಸ್ ರಾಜಶೇಖರ ರೆಡ್ಡಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಣ ದ್ವಿತೀಯ ಟೆಸ್ಟ್ ಪಂದ್ಯ ರೋಚಕ ಘಟ್ಟಕ್ಕೆ ಬಂದು ನಿಂತಿದೆ. ಮೂರನೇ ದಿನದಾಟದ ಅಂತ್ಯಕ್ಕೆ ಇಂಗ್ಲೆಂಡ್ 67 ರನ್​ಗೆ 1 ವಿಕೆಟ್ ಕಳೆದುಕೊಂಡಿದ್ದು, ಗೆಲುವಿಗೆ 332 ರನ್ಸ್ ಬೇಕಾಗಿದೆ. ಹೀಗಾಗಿ ಇಂದಿನ ನಾಲ್ಕನೇ ದಿನದಾಟ ಕುತೂಹಲ ಕೆರಳಿಸಿದೆ.

1 / 6
ಮೊದಲ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ ತಂಡವನ್ನು 253 ರನ್‌ಗಳಿಗೆ ಆಲೌಟ್ ಮಾಡಿದ ಟೀಮ್ ಇಂಡಿಯಾ ಆ ಬಳಿಕ ಎರಡನೇ ದಿನದಾಟದಂತ್ಯಕ್ಕೆ ಎರಡನೇ ಇನ್ನಿಂಗ್ಸ್​ನಲ್ಲಿ ವಿಕೆಟ್ ನಷ್ಟವಿಲ್ಲದೆ 28 ರನ್ ಗಳಿಸಿತ್ತು. ಆದರೆ ಮೂರನೇ ದಿನ ಭಾರತ ತನ್ನೇಲ್ಲ ವಿಕೆಟ್ ಕಳೆದುಕೊಂಡು 227 ರನ್ ಗಳಿಸಲಷ್ಟೇ ಶಕ್ತವಾಯಿತು.

ಮೊದಲ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ ತಂಡವನ್ನು 253 ರನ್‌ಗಳಿಗೆ ಆಲೌಟ್ ಮಾಡಿದ ಟೀಮ್ ಇಂಡಿಯಾ ಆ ಬಳಿಕ ಎರಡನೇ ದಿನದಾಟದಂತ್ಯಕ್ಕೆ ಎರಡನೇ ಇನ್ನಿಂಗ್ಸ್​ನಲ್ಲಿ ವಿಕೆಟ್ ನಷ್ಟವಿಲ್ಲದೆ 28 ರನ್ ಗಳಿಸಿತ್ತು. ಆದರೆ ಮೂರನೇ ದಿನ ಭಾರತ ತನ್ನೇಲ್ಲ ವಿಕೆಟ್ ಕಳೆದುಕೊಂಡು 227 ರನ್ ಗಳಿಸಲಷ್ಟೇ ಶಕ್ತವಾಯಿತು.

2 / 6
ಈ 227 ರನ್‌ಗಳ ಪೈಕಿ ಶುಭ್​ಮನ್ ಗಿಲ್ ಒಬ್ಬರೆ 104 ರನ್‌ಗಳ ಕೊಡುಗೆ ನೀಡಿದರು. ಶುಭ್‌ಮನ್ ಬಿಟ್ಟರೆ ಭಾರತದ ಯಾವ ಬ್ಯಾಟರ್​ನಿಂದ ಕೂಡ ದೊಡ್ಡ ಇನ್ನಿಂಗ್ಸ್ ಕಟ್ಟಲು ಸಾಧ್ಯವಾಗಲಿಲ್ಲ. ಗಿಲ್ ಒತ್ತಡದ ನಡುವೆ ಗಿಲ್ 147 ಎಸೆತಗಳಲ್ಲಿ 11 ಫೋರ್, 2 ಸಿಕ್ಸರ್​ನೊಂದಿಗೆ 104 ರನ್ ಗಳಿಸಿದರು.

ಈ 227 ರನ್‌ಗಳ ಪೈಕಿ ಶುಭ್​ಮನ್ ಗಿಲ್ ಒಬ್ಬರೆ 104 ರನ್‌ಗಳ ಕೊಡುಗೆ ನೀಡಿದರು. ಶುಭ್‌ಮನ್ ಬಿಟ್ಟರೆ ಭಾರತದ ಯಾವ ಬ್ಯಾಟರ್​ನಿಂದ ಕೂಡ ದೊಡ್ಡ ಇನ್ನಿಂಗ್ಸ್ ಕಟ್ಟಲು ಸಾಧ್ಯವಾಗಲಿಲ್ಲ. ಗಿಲ್ ಒತ್ತಡದ ನಡುವೆ ಗಿಲ್ 147 ಎಸೆತಗಳಲ್ಲಿ 11 ಫೋರ್, 2 ಸಿಕ್ಸರ್​ನೊಂದಿಗೆ 104 ರನ್ ಗಳಿಸಿದರು.

3 / 6
ಶುಭ್‌ಮನ್ ಹೊರತುಪಡಿಸಿ ಅಕ್ಷರ್ ಪಟೇಲ್ 45 ರನ್​ಗಳ ಇನ್ನಿಂಗ್ಸ್ ಆಡಿದರೆ, ಶ್ರೇಯಸ್ ಅಯ್ಯರ್ ಮತ್ತು ಆರ್ ಅಶ್ವಿನ್ ತಲಾ 29 ರನ್​ಗಳ ಕಾಣಿಕೆ ನೀಡಿದರು. ಮೊದಲ ಇನ್ನಿಂಗ್ಸ್‌ನಲ್ಲಿ ದ್ವಿಶತಕ ಸಿಡಿಸಿದ್ದ ಯಶಸ್ವಿ ಜೈಸ್ವಾಲ್ 17 ರನ್​ಗಳಿಗೆ ಸುಸ್ತಾದರೆ. ಇಡೀ ಸರಣಿಯಲ್ಲಿ ರನ್ ಬರ ಎದುರಿಸುತ್ತಿರುವ ನಾಯಕ ರೋಹಿತ್ ಶರ್ಮಾ ಕೂಡ 13 ರನ್​ಗಳಿಗೆ ಪೆವಿಲಿಯನ್ ಸೇರಿಕೊಂಡರು.

ಶುಭ್‌ಮನ್ ಹೊರತುಪಡಿಸಿ ಅಕ್ಷರ್ ಪಟೇಲ್ 45 ರನ್​ಗಳ ಇನ್ನಿಂಗ್ಸ್ ಆಡಿದರೆ, ಶ್ರೇಯಸ್ ಅಯ್ಯರ್ ಮತ್ತು ಆರ್ ಅಶ್ವಿನ್ ತಲಾ 29 ರನ್​ಗಳ ಕಾಣಿಕೆ ನೀಡಿದರು. ಮೊದಲ ಇನ್ನಿಂಗ್ಸ್‌ನಲ್ಲಿ ದ್ವಿಶತಕ ಸಿಡಿಸಿದ್ದ ಯಶಸ್ವಿ ಜೈಸ್ವಾಲ್ 17 ರನ್​ಗಳಿಗೆ ಸುಸ್ತಾದರೆ. ಇಡೀ ಸರಣಿಯಲ್ಲಿ ರನ್ ಬರ ಎದುರಿಸುತ್ತಿರುವ ನಾಯಕ ರೋಹಿತ್ ಶರ್ಮಾ ಕೂಡ 13 ರನ್​ಗಳಿಗೆ ಪೆವಿಲಿಯನ್ ಸೇರಿಕೊಂಡರು.

4 / 6
ಉಳಿದಂತೆ ಕುಲ್ದೀಪ್ ಯಾದವ್ ಮತ್ತು ಜಸ್ಪ್ರೀತ್ ಬುಮ್ರಾ ಶೂನ್ಯಕ್ಕೆ ಔಟಾದರೆ, ಉಳಿದ ಮೂವರಿಗೆ ಎರಡಂಕಿಯನ್ನೂ ತಲುಪಲು ಸಾಧ್ಯವಾಗಲಿಲ್ಲ. ಎರಡನೇ ಇನ್ನಿಂಗ್ಸ್​ನಲ್ಲಿ ಇಂಗ್ಲೆಂಡ್ ಪರ ಟಾಮ್ ಹಾರ್ಟ್ಲಿ 4 ವಿಕೆಟ್ ಪಡೆದು ಮಿಂಚಿದರೆ, ರೆಹಾನ್ ಅಹ್ಮದ್ 3 ಹಾಗೂ ಜೇಮ್ಸ್ ಅಂಡರ್ಸನ್ 2 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.

ಉಳಿದಂತೆ ಕುಲ್ದೀಪ್ ಯಾದವ್ ಮತ್ತು ಜಸ್ಪ್ರೀತ್ ಬುಮ್ರಾ ಶೂನ್ಯಕ್ಕೆ ಔಟಾದರೆ, ಉಳಿದ ಮೂವರಿಗೆ ಎರಡಂಕಿಯನ್ನೂ ತಲುಪಲು ಸಾಧ್ಯವಾಗಲಿಲ್ಲ. ಎರಡನೇ ಇನ್ನಿಂಗ್ಸ್​ನಲ್ಲಿ ಇಂಗ್ಲೆಂಡ್ ಪರ ಟಾಮ್ ಹಾರ್ಟ್ಲಿ 4 ವಿಕೆಟ್ ಪಡೆದು ಮಿಂಚಿದರೆ, ರೆಹಾನ್ ಅಹ್ಮದ್ 3 ಹಾಗೂ ಜೇಮ್ಸ್ ಅಂಡರ್ಸನ್ 2 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.

5 / 6
ಗೆಲುವಿಗೆ 399 ರನ್​ಗಳ ಬೃಹತ್ ಟಾರ್ಗೆಟ್ ಬೆನ್ನಟ್ಟಿರುವ ಇಂಗ್ಲೆಂಡ್ ಪರ ಬೆನ್ ಡಕ್ಲೆಟ್ 27 ಎಸೆತಗಳಲ್ಲಿ 28 ರನ್ ಗಳಿಸಿ ಔಟಾದರು. ಆದರೆ, ಜ್ಯಾಖ್ ಕ್ರಾವ್ಲೆ 29 ಹಾಗೂ ರೆಹಾನ್ ಅಹ್ಮದ್ 9 ರನ್ ಗಳಿಸಿ ನಾಲ್ಕನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಭಾರತ ಪರ ಎರಡನೇ ಇನ್ನಿಂಗ್ಸ್​ನಲ್ಲಿ ಆರ್. ಅಶ್ವಿನ್ 1 ವಿಕೆಟ್ ಪಡೆದಿದ್ದಾರೆ.

ಗೆಲುವಿಗೆ 399 ರನ್​ಗಳ ಬೃಹತ್ ಟಾರ್ಗೆಟ್ ಬೆನ್ನಟ್ಟಿರುವ ಇಂಗ್ಲೆಂಡ್ ಪರ ಬೆನ್ ಡಕ್ಲೆಟ್ 27 ಎಸೆತಗಳಲ್ಲಿ 28 ರನ್ ಗಳಿಸಿ ಔಟಾದರು. ಆದರೆ, ಜ್ಯಾಖ್ ಕ್ರಾವ್ಲೆ 29 ಹಾಗೂ ರೆಹಾನ್ ಅಹ್ಮದ್ 9 ರನ್ ಗಳಿಸಿ ನಾಲ್ಕನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಭಾರತ ಪರ ಎರಡನೇ ಇನ್ನಿಂಗ್ಸ್​ನಲ್ಲಿ ಆರ್. ಅಶ್ವಿನ್ 1 ವಿಕೆಟ್ ಪಡೆದಿದ್ದಾರೆ.

6 / 6
Follow us
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ