AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ vs ಇಂಗ್ಲೆಂಡ್ ಪಂದ್ಯದಲ್ಲಿ ಎಲ್ಲರ ಕಣ್ಣು RCB ಆಟಗಾರರ ಮೇಲೆ..!

India vs England: ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ಆಯ್ಕೆ ಮಾಡಲಾದ ಭಾರತ ತಂಡದಲ್ಲಿ ಆರ್​ಸಿಬಿ ಟೀಮ್​ನ ಯಾವುದೇ ಆಟಗಾರ ಸ್ಥಾನ ಪಡೆದಿಲ್ಲ. ಆದರೆ ಅತ್ತ ಇಂಗ್ಲೆಂಡ್ ತಂಡದ ಪ್ಲೇಯಿಂಗ್ ಇಲೆವೆನ್​ನಲ್ಲೇ ಆರ್​ಸಿಬಿ ತಂಡದ ಮೂವರು ಆಟಗಾರರು ಕಾಣಿಸಿಕೊಂಡಿದ್ದಾರೆ. ಹೀಗಾಗಿ ಭಾರತದ ವಿರುದ್ಧ ಈ ಮೂವರ ಪ್ರದರ್ಶನ ಹೇಗಿರಲಿದೆ ಎಂಬುದೇ ಈಗ ಕುತೂಹಲ.

ಝಾಹಿರ್ ಯೂಸುಫ್
|

Updated on: Jan 22, 2025 | 10:54 AM

Share
ಭಾರತ ಮತ್ತು ಇಂಗ್ಲೆಂಡ್ ನಡುವಣ 5 ಪಂದ್ಯಗಳ ಟಿ20 ಸರಣಿಯು ಇಂದಿನಿಂದ (ಜ.22) ಶುರುವಾಗಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಇಂಗ್ಲೆಂಡ್ ಬಲಿಷ್ಠ ಪ್ಲೇಯಿಂಗ್ ಇಲೆವೆನ್​ ಅನ್ನು ಹೆಸರಿಸಿದೆ. ವಿಶೇಷ ಎಂದರೆ ಈ ಪ್ಲೇಯಿಂಗ್ ಇಲೆವೆನ್​ನಲ್ಲಿ ಆರ್​ಸಿಬಿ ತಂಡದ ಮೂವರು ಆಟಗಾರರು ಸ್ಥಾನ ಪಡೆದಿದ್ದಾರೆ. ಅವರೆಂದರೆ....

ಭಾರತ ಮತ್ತು ಇಂಗ್ಲೆಂಡ್ ನಡುವಣ 5 ಪಂದ್ಯಗಳ ಟಿ20 ಸರಣಿಯು ಇಂದಿನಿಂದ (ಜ.22) ಶುರುವಾಗಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಇಂಗ್ಲೆಂಡ್ ಬಲಿಷ್ಠ ಪ್ಲೇಯಿಂಗ್ ಇಲೆವೆನ್​ ಅನ್ನು ಹೆಸರಿಸಿದೆ. ವಿಶೇಷ ಎಂದರೆ ಈ ಪ್ಲೇಯಿಂಗ್ ಇಲೆವೆನ್​ನಲ್ಲಿ ಆರ್​ಸಿಬಿ ತಂಡದ ಮೂವರು ಆಟಗಾರರು ಸ್ಥಾನ ಪಡೆದಿದ್ದಾರೆ. ಅವರೆಂದರೆ....

1 / 5
ಫಿಲ್ ಸಾಲ್ಟ್: ಟೀಮ್ ಇಂಡಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ ಪರ ವಿಕೆಟ್ ಕೀಪರ್ ಬ್ಯಾಟರ್ ಆಗಿ ಫಿಲ್ ಸಾಲ್ಟ್ ಕಣಕ್ಕಿಳಿಯಲಿದ್ದಾರೆ. ಹೊಡಿಬಡಿ ದಾಂಡಿಗ ಸಾಲ್ಟ್ ಅವರನ್ನು ಈ ಬಾರಿ ಆರ್​ಸಿಬಿ ಬರೋಬ್ಬರಿ 11.50 ಕೋಟಿ ರೂ. ನೀಡಿ ಖರೀದಿಸಿದೆ. ಇದೀಗ ಫಿಲ್ ಸಾಲ್ಟ್ ಇಂಗ್ಲೆಂಡ್ ಪರ ಆರಂಭಿಕನಾಗಿ ಹೇಗೆ ಪ್ರದರ್ಶನ ನೀಡಲಿದ್ದಾರೆ ಎಂಬುದೇ ಆರ್​ಸಿಬಿ ಅಭಿಮಾನಿಗಳ ಕುತೂಹಲ.

ಫಿಲ್ ಸಾಲ್ಟ್: ಟೀಮ್ ಇಂಡಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ ಪರ ವಿಕೆಟ್ ಕೀಪರ್ ಬ್ಯಾಟರ್ ಆಗಿ ಫಿಲ್ ಸಾಲ್ಟ್ ಕಣಕ್ಕಿಳಿಯಲಿದ್ದಾರೆ. ಹೊಡಿಬಡಿ ದಾಂಡಿಗ ಸಾಲ್ಟ್ ಅವರನ್ನು ಈ ಬಾರಿ ಆರ್​ಸಿಬಿ ಬರೋಬ್ಬರಿ 11.50 ಕೋಟಿ ರೂ. ನೀಡಿ ಖರೀದಿಸಿದೆ. ಇದೀಗ ಫಿಲ್ ಸಾಲ್ಟ್ ಇಂಗ್ಲೆಂಡ್ ಪರ ಆರಂಭಿಕನಾಗಿ ಹೇಗೆ ಪ್ರದರ್ಶನ ನೀಡಲಿದ್ದಾರೆ ಎಂಬುದೇ ಆರ್​ಸಿಬಿ ಅಭಿಮಾನಿಗಳ ಕುತೂಹಲ.

2 / 5
ಲಿಯಾಮ್ ಲಿವಿಂಗ್​ಸ್ಟೋನ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಇಂಗ್ಲೆಂಡ್ ಆಲ್​ರೌಂಡರ್ ಲಿಯಾಮ್ ಲಿವಿಂಗ್​ಸ್ಟೋನ್ ಅವರನ್ನು ಈ ಬಾರಿ 8.75 ಕೋಟಿ ರೂ. ನೀಡಿ ಖರೀದಿಸಿದೆ. ಬಿರುಸಿನ ಬ್ಯಾಟಿಂಗ್​ಗೆ ಹೆಸರುವಾಸಿಯಾಗಿರುವ ಲಿವಿಂಗ್​ಸ್ಟೋನ್ ಭಾರತದ ವಿರುದ್ಧ ಅಬ್ಬರಿಸಲಿದ್ದಾರಾ ಕಾದು ನೋಡಬೇಕಿದೆ.

ಲಿಯಾಮ್ ಲಿವಿಂಗ್​ಸ್ಟೋನ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಇಂಗ್ಲೆಂಡ್ ಆಲ್​ರೌಂಡರ್ ಲಿಯಾಮ್ ಲಿವಿಂಗ್​ಸ್ಟೋನ್ ಅವರನ್ನು ಈ ಬಾರಿ 8.75 ಕೋಟಿ ರೂ. ನೀಡಿ ಖರೀದಿಸಿದೆ. ಬಿರುಸಿನ ಬ್ಯಾಟಿಂಗ್​ಗೆ ಹೆಸರುವಾಸಿಯಾಗಿರುವ ಲಿವಿಂಗ್​ಸ್ಟೋನ್ ಭಾರತದ ವಿರುದ್ಧ ಅಬ್ಬರಿಸಲಿದ್ದಾರಾ ಕಾದು ನೋಡಬೇಕಿದೆ.

3 / 5
ಜೇಕಬ್ ಬೆಥೆಲ್: ಇಂಗ್ಲೆಂಡ್ ತಂಡದ ಯುವ ಆಲ್​ರೌಂಡರ್ ಜೇಕಬ್ ಬೆಥೆಲ್ ಅವರನ್ನು ಆರ್​ಸಿಬಿ 2.60 ಕೋಟಿ ರೂ.ಗೆ ಖರೀದಿಸಿದೆ. 21 ವರ್ಷದ ಬೆಥೆಲ್ ಕೂಡ ಇಂಗ್ಲೆಂಡ್ ತಂಡದ ಪ್ಲೇಯಿಂಗ್ ಇಲೆವೆನ್​ನ ಭಾಗವಾಗಿದ್ದಾರೆ. ಹೀಗಾಗಿಯೇ ಯುವ ಆಟಗಾರನ ಪ್ರದರ್ಶನ ಹೇಗಿರಲಿದೆ ಎಂಬುದೇ ಆರ್​ಸಿಬಿ ಫ್ಯಾನ್ಸ್​ನ ಕುತೂಹಲ.

ಜೇಕಬ್ ಬೆಥೆಲ್: ಇಂಗ್ಲೆಂಡ್ ತಂಡದ ಯುವ ಆಲ್​ರೌಂಡರ್ ಜೇಕಬ್ ಬೆಥೆಲ್ ಅವರನ್ನು ಆರ್​ಸಿಬಿ 2.60 ಕೋಟಿ ರೂ.ಗೆ ಖರೀದಿಸಿದೆ. 21 ವರ್ಷದ ಬೆಥೆಲ್ ಕೂಡ ಇಂಗ್ಲೆಂಡ್ ತಂಡದ ಪ್ಲೇಯಿಂಗ್ ಇಲೆವೆನ್​ನ ಭಾಗವಾಗಿದ್ದಾರೆ. ಹೀಗಾಗಿಯೇ ಯುವ ಆಟಗಾರನ ಪ್ರದರ್ಶನ ಹೇಗಿರಲಿದೆ ಎಂಬುದೇ ಆರ್​ಸಿಬಿ ಫ್ಯಾನ್ಸ್​ನ ಕುತೂಹಲ.

4 / 5
ಭಾರತದ ವಿರುದ್ಧದ ಮೊದಲ ಟಿ20 ಪಂದ್ಯಕ್ಕೆ ಇಂಗ್ಲೆಂಡ್ ಪ್ಲೇಯಿಂಗ್ ಇಲೆವೆನ್:  ಬೆನ್ ಡಕೆಟ್, ಫಿಲಿಪ್ ಸಾಲ್ಟ್ (ವಿಕೆಟ್ ಕೀಪರ್), ಜೋಸ್ ಬಟ್ಲರ್ (ನಾಯಕ), ಹ್ಯಾರಿ ಬ್ರೂಕ್, ಲಿಯಾಮ್ ಲಿವಿಂಗ್‌ಸ್ಟೋನ್, ಜೇಕಬ್ ಬೆಥೆಲ್, ಜೇಮಿ ಓವರ್‌ಟನ್, ಗಸ್ ಅಟ್ಕಿನ್ಸನ್, ಜೋಫ್ರಾ ಆರ್ಚರ್, ಆದಿಲ್ ರಶೀದ್, ಮಾರ್ಕ್ ವುಡ್.

ಭಾರತದ ವಿರುದ್ಧದ ಮೊದಲ ಟಿ20 ಪಂದ್ಯಕ್ಕೆ ಇಂಗ್ಲೆಂಡ್ ಪ್ಲೇಯಿಂಗ್ ಇಲೆವೆನ್: ಬೆನ್ ಡಕೆಟ್, ಫಿಲಿಪ್ ಸಾಲ್ಟ್ (ವಿಕೆಟ್ ಕೀಪರ್), ಜೋಸ್ ಬಟ್ಲರ್ (ನಾಯಕ), ಹ್ಯಾರಿ ಬ್ರೂಕ್, ಲಿಯಾಮ್ ಲಿವಿಂಗ್‌ಸ್ಟೋನ್, ಜೇಕಬ್ ಬೆಥೆಲ್, ಜೇಮಿ ಓವರ್‌ಟನ್, ಗಸ್ ಅಟ್ಕಿನ್ಸನ್, ಜೋಫ್ರಾ ಆರ್ಚರ್, ಆದಿಲ್ ರಶೀದ್, ಮಾರ್ಕ್ ವುಡ್.

5 / 5
Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ