AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೆಲುವಿನ ಹೊರತಾಗಿಯೂ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ 2 ಬದಲಾವಣೆ ಖಚಿತ

India vs England Test: ಭಾರತ ಮತ್ತು ಇಂಗ್ಲೆಂಡ್ ನಡುವಣ ಮೊದಲ ಮ್ಯಾಚ್​ನಲ್ಲಿ ಆಂಗ್ಲ ಪಡೆ ಭರ್ಜರಿ ಜಯ ಸಾಧಿಸಿತ್ತು. ಇದೀಗ ಎರಡನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡಕ್ಕೆ ಸೋಲುಣಿಸಿ ಟೀಮ್ ಇಂಡಿಯಾ ಸರಣಿಯನ್ನು ಸಮಬಲಗೊಳಿಸಿದೆ. ಇನ್ನು ಉಭಯ ತಂಡಗಳ ಮೂರನೇ ಪಂದ್ಯವು ಗುರುವಾರದಿಂದ ಶುರುವಾಗಲಿದೆ.

ಝಾಹಿರ್ ಯೂಸುಫ್
|

Updated on:Jul 07, 2025 | 11:55 AM

Share
ಇಂಗ್ಲೆಂಡ್ ವಿರುದ್ಧದ ಮೊದಲ ಪಂದ್ಯದಲ್ಲಿ ಸೋತಿದ್ದ ಟೀಮ್ ಇಂಡಿಯಾ ದ್ವಿತೀಯ ಟೆಸ್ಟ್ ಪಂದ್ಯದ ಮೂಲಕ ಕಂಬ್ಯಾಕ್ ಮಾಡಿದೆ. ಎಡ್ಜ್​ಬಾಸ್ಟ್ನ್​ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಭಾರತ ತಂಡವು ಬರೋಬ್ಬರಿ 336 ರನ್​ಗಳಿಂದ ಆತಿಥೇಯ ಇಂಗ್ಲೆಂಡ್ ತಂಡವನ್ನು ಬಗ್ಗು ಬಡಿದಿದೆ. ಈ ಮೂಲಕ 5 ಪಂದ್ಯಗಳ ಸರಣಿಯನ್ನು 1-1 ಅಂತರದಿಂದ ಸಮಬಲಗೊಳಿಸಿದೆ.

ಇಂಗ್ಲೆಂಡ್ ವಿರುದ್ಧದ ಮೊದಲ ಪಂದ್ಯದಲ್ಲಿ ಸೋತಿದ್ದ ಟೀಮ್ ಇಂಡಿಯಾ ದ್ವಿತೀಯ ಟೆಸ್ಟ್ ಪಂದ್ಯದ ಮೂಲಕ ಕಂಬ್ಯಾಕ್ ಮಾಡಿದೆ. ಎಡ್ಜ್​ಬಾಸ್ಟ್ನ್​ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಭಾರತ ತಂಡವು ಬರೋಬ್ಬರಿ 336 ರನ್​ಗಳಿಂದ ಆತಿಥೇಯ ಇಂಗ್ಲೆಂಡ್ ತಂಡವನ್ನು ಬಗ್ಗು ಬಡಿದಿದೆ. ಈ ಮೂಲಕ 5 ಪಂದ್ಯಗಳ ಸರಣಿಯನ್ನು 1-1 ಅಂತರದಿಂದ ಸಮಬಲಗೊಳಿಸಿದೆ.

1 / 5
ಇದೀಗ ಸರಣಿಯಲ್ಲಿ ಸಮಬಲ ಸಾಧಿಸಿರುವ ಟೀಮ್ ಇಂಡಿಯಾ ಮೂರನೇ ಪಂದ್ಯಕ್ಕಾಗಿ ಸಜ್ಜಾಗಬೇಕಿದೆ. ಜುಲೈ 10 ರಿಂದ ಲಂಡನ್​ನ ಲಾರ್ಡ್ಸ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಭಾರತ ತಂಡವು ತನ್ನ ಆಡುವ ಬಳಗದಲ್ಲಿ ಬದಲಾವಣೆ ಮಾಡುವುದು ಬಹುತೇಕ ಖಚಿತ. ಅದರಲ್ಲೂ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಎರಡು ಬದಲಾವಣೆ ಕಂಡು ಬರುವ ಸಾಧ್ಯತೆಯಿದೆ.

ಇದೀಗ ಸರಣಿಯಲ್ಲಿ ಸಮಬಲ ಸಾಧಿಸಿರುವ ಟೀಮ್ ಇಂಡಿಯಾ ಮೂರನೇ ಪಂದ್ಯಕ್ಕಾಗಿ ಸಜ್ಜಾಗಬೇಕಿದೆ. ಜುಲೈ 10 ರಿಂದ ಲಂಡನ್​ನ ಲಾರ್ಡ್ಸ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಭಾರತ ತಂಡವು ತನ್ನ ಆಡುವ ಬಳಗದಲ್ಲಿ ಬದಲಾವಣೆ ಮಾಡುವುದು ಬಹುತೇಕ ಖಚಿತ. ಅದರಲ್ಲೂ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಎರಡು ಬದಲಾವಣೆ ಕಂಡು ಬರುವ ಸಾಧ್ಯತೆಯಿದೆ.

2 / 5
ಏಕೆಂದರೆ ಲಾರ್ಡ್ಸ್​ ಟೆಸ್ಟ್​ನಲ್ಲಿ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ ಕಣಕ್ಕಿಳಿಯುವುದು ಖಚಿತವಾಗಿದೆ. ಹೀಗಾಗಿ ಎಡ್ಜ್​ಬಾಸ್ಟನ್​ನಲ್ಲಿ ಕಣಕ್ಕಿಳಿದ ವೇಗಿಯೊಬ್ಬರು ಆಡುವ ಬಳಗದಿಂದ ಹೊರಬೀಳಲಿದ್ದಾರೆ. ಅದರಂತೆ ಕಳೆದ ಎರಡು ಪಂದ್ಯಗಳಲ್ಲಿ ಕಳಪೆ ಪ್ರದರ್ಶನ ನೀಡಿರುವ ಕನ್ನಡಿಗ ಪ್ರಸಿದ್ಧ್ ಕೃಷ್ಣಗೆ ಗೇಟ್ ಪಾಸ್ ಸಿಗುವುದು ಖಚಿತ ಎನ್ನಬಹುದು.

ಏಕೆಂದರೆ ಲಾರ್ಡ್ಸ್​ ಟೆಸ್ಟ್​ನಲ್ಲಿ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ ಕಣಕ್ಕಿಳಿಯುವುದು ಖಚಿತವಾಗಿದೆ. ಹೀಗಾಗಿ ಎಡ್ಜ್​ಬಾಸ್ಟನ್​ನಲ್ಲಿ ಕಣಕ್ಕಿಳಿದ ವೇಗಿಯೊಬ್ಬರು ಆಡುವ ಬಳಗದಿಂದ ಹೊರಬೀಳಲಿದ್ದಾರೆ. ಅದರಂತೆ ಕಳೆದ ಎರಡು ಪಂದ್ಯಗಳಲ್ಲಿ ಕಳಪೆ ಪ್ರದರ್ಶನ ನೀಡಿರುವ ಕನ್ನಡಿಗ ಪ್ರಸಿದ್ಧ್ ಕೃಷ್ಣಗೆ ಗೇಟ್ ಪಾಸ್ ಸಿಗುವುದು ಖಚಿತ ಎನ್ನಬಹುದು.

3 / 5
ಇನ್ನು ಆಲ್​ರೌಂಡರ್ ಬದಲಿಗೆ ಲಾರ್ಡ್ಸ್​ನಲ್ಲಿ ಮತ್ತೋರ್ವ ವೇಗಿಯನ್ನು ಕಣಕ್ಕಿಳಿಸುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಏಕೆಂದರೆ ಈ ಮೈದಾನದಲ್ಲಿ ಇತ್ತೀಚೆಗೆ ನಡೆದ ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಹಾಗೂ ಸೌತ್ ಆಫ್ರಿಕಾ ತಂಡಗಳು ನಾಲ್ವರು ವೇಗಿಗಳೊಂದಿಗೆ ಕಣಕ್ಕಿಳಿದಿದ್ದರು. ಅಲ್ಲದೆ ಈ ಪಿಚ್ ವೇಗದ ಬೌಲಿಂಗ್​​ಗೆ ಸಹಕಾರಿ. ಹೀಗಾಗಿ ಟೀಮ್ ಇಂಡಿಯಾ ಎಡಗೈ ವೇಗಿ ಅರ್ಷದೀಪ್ ಸಿಂಗ್ ಅವರನ್ನು ಸಹ ಕಣಕ್ಕಿಳಿಸುವ ಸಾಧ್ಯತೆಯಿದೆ. ಅದರಂತೆ ಮೂರನೇ ಟೆಸ್ಟ್ ಪಂದ್ಯಕ್ಕೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ 11 ಹೀಗಿರಲಿದೆ…

ಇನ್ನು ಆಲ್​ರೌಂಡರ್ ಬದಲಿಗೆ ಲಾರ್ಡ್ಸ್​ನಲ್ಲಿ ಮತ್ತೋರ್ವ ವೇಗಿಯನ್ನು ಕಣಕ್ಕಿಳಿಸುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಏಕೆಂದರೆ ಈ ಮೈದಾನದಲ್ಲಿ ಇತ್ತೀಚೆಗೆ ನಡೆದ ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಹಾಗೂ ಸೌತ್ ಆಫ್ರಿಕಾ ತಂಡಗಳು ನಾಲ್ವರು ವೇಗಿಗಳೊಂದಿಗೆ ಕಣಕ್ಕಿಳಿದಿದ್ದರು. ಅಲ್ಲದೆ ಈ ಪಿಚ್ ವೇಗದ ಬೌಲಿಂಗ್​​ಗೆ ಸಹಕಾರಿ. ಹೀಗಾಗಿ ಟೀಮ್ ಇಂಡಿಯಾ ಎಡಗೈ ವೇಗಿ ಅರ್ಷದೀಪ್ ಸಿಂಗ್ ಅವರನ್ನು ಸಹ ಕಣಕ್ಕಿಳಿಸುವ ಸಾಧ್ಯತೆಯಿದೆ. ಅದರಂತೆ ಮೂರನೇ ಟೆಸ್ಟ್ ಪಂದ್ಯಕ್ಕೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ 11 ಹೀಗಿರಲಿದೆ…

4 / 5
ಭಾರತ ಸಂಭಾವ್ಯ ಪ್ಲೇಯಿಂಗ್ 11: ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಕರುಣ್ ನಾಯರ್, ಶುಭಮನ್ ಗಿಲ್ (ನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಅರ್ಷ್‌ದೀಪ್ ಸಿಂಗ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಜಸ್​ಪ್ರೀತ್ ಬುಮ್ರಾ.

ಭಾರತ ಸಂಭಾವ್ಯ ಪ್ಲೇಯಿಂಗ್ 11: ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಕರುಣ್ ನಾಯರ್, ಶುಭಮನ್ ಗಿಲ್ (ನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಅರ್ಷ್‌ದೀಪ್ ಸಿಂಗ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಜಸ್​ಪ್ರೀತ್ ಬುಮ್ರಾ.

5 / 5

Published On - 11:55 am, Mon, 7 July 25

ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ