AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೆಲುವಿನ ಹೊರತಾಗಿಯೂ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ 2 ಬದಲಾವಣೆ ಖಚಿತ

India vs England Test: ಭಾರತ ಮತ್ತು ಇಂಗ್ಲೆಂಡ್ ನಡುವಣ ಮೊದಲ ಮ್ಯಾಚ್​ನಲ್ಲಿ ಆಂಗ್ಲ ಪಡೆ ಭರ್ಜರಿ ಜಯ ಸಾಧಿಸಿತ್ತು. ಇದೀಗ ಎರಡನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡಕ್ಕೆ ಸೋಲುಣಿಸಿ ಟೀಮ್ ಇಂಡಿಯಾ ಸರಣಿಯನ್ನು ಸಮಬಲಗೊಳಿಸಿದೆ. ಇನ್ನು ಉಭಯ ತಂಡಗಳ ಮೂರನೇ ಪಂದ್ಯವು ಗುರುವಾರದಿಂದ ಶುರುವಾಗಲಿದೆ.

ಝಾಹಿರ್ ಯೂಸುಫ್
|

Updated on:Jul 07, 2025 | 11:55 AM

Share
ಇಂಗ್ಲೆಂಡ್ ವಿರುದ್ಧದ ಮೊದಲ ಪಂದ್ಯದಲ್ಲಿ ಸೋತಿದ್ದ ಟೀಮ್ ಇಂಡಿಯಾ ದ್ವಿತೀಯ ಟೆಸ್ಟ್ ಪಂದ್ಯದ ಮೂಲಕ ಕಂಬ್ಯಾಕ್ ಮಾಡಿದೆ. ಎಡ್ಜ್​ಬಾಸ್ಟ್ನ್​ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಭಾರತ ತಂಡವು ಬರೋಬ್ಬರಿ 336 ರನ್​ಗಳಿಂದ ಆತಿಥೇಯ ಇಂಗ್ಲೆಂಡ್ ತಂಡವನ್ನು ಬಗ್ಗು ಬಡಿದಿದೆ. ಈ ಮೂಲಕ 5 ಪಂದ್ಯಗಳ ಸರಣಿಯನ್ನು 1-1 ಅಂತರದಿಂದ ಸಮಬಲಗೊಳಿಸಿದೆ.

ಇಂಗ್ಲೆಂಡ್ ವಿರುದ್ಧದ ಮೊದಲ ಪಂದ್ಯದಲ್ಲಿ ಸೋತಿದ್ದ ಟೀಮ್ ಇಂಡಿಯಾ ದ್ವಿತೀಯ ಟೆಸ್ಟ್ ಪಂದ್ಯದ ಮೂಲಕ ಕಂಬ್ಯಾಕ್ ಮಾಡಿದೆ. ಎಡ್ಜ್​ಬಾಸ್ಟ್ನ್​ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಭಾರತ ತಂಡವು ಬರೋಬ್ಬರಿ 336 ರನ್​ಗಳಿಂದ ಆತಿಥೇಯ ಇಂಗ್ಲೆಂಡ್ ತಂಡವನ್ನು ಬಗ್ಗು ಬಡಿದಿದೆ. ಈ ಮೂಲಕ 5 ಪಂದ್ಯಗಳ ಸರಣಿಯನ್ನು 1-1 ಅಂತರದಿಂದ ಸಮಬಲಗೊಳಿಸಿದೆ.

1 / 5
ಇದೀಗ ಸರಣಿಯಲ್ಲಿ ಸಮಬಲ ಸಾಧಿಸಿರುವ ಟೀಮ್ ಇಂಡಿಯಾ ಮೂರನೇ ಪಂದ್ಯಕ್ಕಾಗಿ ಸಜ್ಜಾಗಬೇಕಿದೆ. ಜುಲೈ 10 ರಿಂದ ಲಂಡನ್​ನ ಲಾರ್ಡ್ಸ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಭಾರತ ತಂಡವು ತನ್ನ ಆಡುವ ಬಳಗದಲ್ಲಿ ಬದಲಾವಣೆ ಮಾಡುವುದು ಬಹುತೇಕ ಖಚಿತ. ಅದರಲ್ಲೂ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಎರಡು ಬದಲಾವಣೆ ಕಂಡು ಬರುವ ಸಾಧ್ಯತೆಯಿದೆ.

ಇದೀಗ ಸರಣಿಯಲ್ಲಿ ಸಮಬಲ ಸಾಧಿಸಿರುವ ಟೀಮ್ ಇಂಡಿಯಾ ಮೂರನೇ ಪಂದ್ಯಕ್ಕಾಗಿ ಸಜ್ಜಾಗಬೇಕಿದೆ. ಜುಲೈ 10 ರಿಂದ ಲಂಡನ್​ನ ಲಾರ್ಡ್ಸ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಭಾರತ ತಂಡವು ತನ್ನ ಆಡುವ ಬಳಗದಲ್ಲಿ ಬದಲಾವಣೆ ಮಾಡುವುದು ಬಹುತೇಕ ಖಚಿತ. ಅದರಲ್ಲೂ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಎರಡು ಬದಲಾವಣೆ ಕಂಡು ಬರುವ ಸಾಧ್ಯತೆಯಿದೆ.

2 / 5
ಏಕೆಂದರೆ ಲಾರ್ಡ್ಸ್​ ಟೆಸ್ಟ್​ನಲ್ಲಿ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ ಕಣಕ್ಕಿಳಿಯುವುದು ಖಚಿತವಾಗಿದೆ. ಹೀಗಾಗಿ ಎಡ್ಜ್​ಬಾಸ್ಟನ್​ನಲ್ಲಿ ಕಣಕ್ಕಿಳಿದ ವೇಗಿಯೊಬ್ಬರು ಆಡುವ ಬಳಗದಿಂದ ಹೊರಬೀಳಲಿದ್ದಾರೆ. ಅದರಂತೆ ಕಳೆದ ಎರಡು ಪಂದ್ಯಗಳಲ್ಲಿ ಕಳಪೆ ಪ್ರದರ್ಶನ ನೀಡಿರುವ ಕನ್ನಡಿಗ ಪ್ರಸಿದ್ಧ್ ಕೃಷ್ಣಗೆ ಗೇಟ್ ಪಾಸ್ ಸಿಗುವುದು ಖಚಿತ ಎನ್ನಬಹುದು.

ಏಕೆಂದರೆ ಲಾರ್ಡ್ಸ್​ ಟೆಸ್ಟ್​ನಲ್ಲಿ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ ಕಣಕ್ಕಿಳಿಯುವುದು ಖಚಿತವಾಗಿದೆ. ಹೀಗಾಗಿ ಎಡ್ಜ್​ಬಾಸ್ಟನ್​ನಲ್ಲಿ ಕಣಕ್ಕಿಳಿದ ವೇಗಿಯೊಬ್ಬರು ಆಡುವ ಬಳಗದಿಂದ ಹೊರಬೀಳಲಿದ್ದಾರೆ. ಅದರಂತೆ ಕಳೆದ ಎರಡು ಪಂದ್ಯಗಳಲ್ಲಿ ಕಳಪೆ ಪ್ರದರ್ಶನ ನೀಡಿರುವ ಕನ್ನಡಿಗ ಪ್ರಸಿದ್ಧ್ ಕೃಷ್ಣಗೆ ಗೇಟ್ ಪಾಸ್ ಸಿಗುವುದು ಖಚಿತ ಎನ್ನಬಹುದು.

3 / 5
ಇನ್ನು ಆಲ್​ರೌಂಡರ್ ಬದಲಿಗೆ ಲಾರ್ಡ್ಸ್​ನಲ್ಲಿ ಮತ್ತೋರ್ವ ವೇಗಿಯನ್ನು ಕಣಕ್ಕಿಳಿಸುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಏಕೆಂದರೆ ಈ ಮೈದಾನದಲ್ಲಿ ಇತ್ತೀಚೆಗೆ ನಡೆದ ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಹಾಗೂ ಸೌತ್ ಆಫ್ರಿಕಾ ತಂಡಗಳು ನಾಲ್ವರು ವೇಗಿಗಳೊಂದಿಗೆ ಕಣಕ್ಕಿಳಿದಿದ್ದರು. ಅಲ್ಲದೆ ಈ ಪಿಚ್ ವೇಗದ ಬೌಲಿಂಗ್​​ಗೆ ಸಹಕಾರಿ. ಹೀಗಾಗಿ ಟೀಮ್ ಇಂಡಿಯಾ ಎಡಗೈ ವೇಗಿ ಅರ್ಷದೀಪ್ ಸಿಂಗ್ ಅವರನ್ನು ಸಹ ಕಣಕ್ಕಿಳಿಸುವ ಸಾಧ್ಯತೆಯಿದೆ. ಅದರಂತೆ ಮೂರನೇ ಟೆಸ್ಟ್ ಪಂದ್ಯಕ್ಕೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ 11 ಹೀಗಿರಲಿದೆ…

ಇನ್ನು ಆಲ್​ರೌಂಡರ್ ಬದಲಿಗೆ ಲಾರ್ಡ್ಸ್​ನಲ್ಲಿ ಮತ್ತೋರ್ವ ವೇಗಿಯನ್ನು ಕಣಕ್ಕಿಳಿಸುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಏಕೆಂದರೆ ಈ ಮೈದಾನದಲ್ಲಿ ಇತ್ತೀಚೆಗೆ ನಡೆದ ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಹಾಗೂ ಸೌತ್ ಆಫ್ರಿಕಾ ತಂಡಗಳು ನಾಲ್ವರು ವೇಗಿಗಳೊಂದಿಗೆ ಕಣಕ್ಕಿಳಿದಿದ್ದರು. ಅಲ್ಲದೆ ಈ ಪಿಚ್ ವೇಗದ ಬೌಲಿಂಗ್​​ಗೆ ಸಹಕಾರಿ. ಹೀಗಾಗಿ ಟೀಮ್ ಇಂಡಿಯಾ ಎಡಗೈ ವೇಗಿ ಅರ್ಷದೀಪ್ ಸಿಂಗ್ ಅವರನ್ನು ಸಹ ಕಣಕ್ಕಿಳಿಸುವ ಸಾಧ್ಯತೆಯಿದೆ. ಅದರಂತೆ ಮೂರನೇ ಟೆಸ್ಟ್ ಪಂದ್ಯಕ್ಕೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ 11 ಹೀಗಿರಲಿದೆ…

4 / 5
ಭಾರತ ಸಂಭಾವ್ಯ ಪ್ಲೇಯಿಂಗ್ 11: ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಕರುಣ್ ನಾಯರ್, ಶುಭಮನ್ ಗಿಲ್ (ನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಅರ್ಷ್‌ದೀಪ್ ಸಿಂಗ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಜಸ್​ಪ್ರೀತ್ ಬುಮ್ರಾ.

ಭಾರತ ಸಂಭಾವ್ಯ ಪ್ಲೇಯಿಂಗ್ 11: ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಕರುಣ್ ನಾಯರ್, ಶುಭಮನ್ ಗಿಲ್ (ನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಅರ್ಷ್‌ದೀಪ್ ಸಿಂಗ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಜಸ್​ಪ್ರೀತ್ ಬುಮ್ರಾ.

5 / 5

Published On - 11:55 am, Mon, 7 July 25

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ