IND vs ENG: ಉತ್ತಮ ಆರಂಭ ಸಿಕ್ಕ ಬಳಿಕ ಔಟ್; ಇಂಗ್ಲೆಂಡ್​ನಲ್ಲಿ ಕನ್ನಡಿಗನ ‘ಕರುಣಾಜನಕ’ ಕಥೆ

Updated on: Jul 11, 2025 | 10:13 PM

Karun Nair England Struggle continues: ಭಾರತೀಯ ಕ್ರಿಕೆಟ್ ತಂಡದ ಆಟಗಾರ ಕರುಣ್ ನಾಯರ್ ಅವರು ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ನಿರೀಕ್ಷಿತ ಪ್ರದರ್ಶನ ನೀಡಲು ವಿಫಲರಾಗಿದ್ದಾರೆ. ಉತ್ತಮ ಆರಂಭ ಪಡೆದರೂ, ಅವರು ನಿರಂತರವಾಗಿ ಕಡಿಮೆ ಮೊತ್ತಕ್ಕೆ ವಿಕೆಟ್ ಒಪ್ಪಿಸುತ್ತಿದ್ದಾರೆ. ಹೀಗಾಗಿ ಮೂರು ಪಂದ್ಯಗಳಲ್ಲಿಯೂ ಅವರ ಸ್ಥಿರತೆಯ ಬಗ್ಗೆ ಪ್ರಶ್ನೆಗಳು ಎದ್ದಿವೆ.

1 / 7
ಕನ್ನಡಿಗ ಕರುಣ್ ನಾಯರ್​ಗೆ ಅವರ ಪ್ರೀತಿಯ ಕ್ರಿಕೆಟ್ ಮತ್ತೊಂದು ಅವಕಾಶ ನೀಡಿದರೂ ಅದ್ಯಾಕೋ ಅದೃಷ್ಟ ಮಾತ್ರ ಅವರ ಕೈ ಹಿಡಿಯುತ್ತಿಲ್ಲ. ದೇಶೀ ಕ್ರಿಕೆಟ್​ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಕನ್ನಡಿಗ ಕರುಣ್ ನಾಯರ್​ಗೆ ಬರೋಬ್ಬರಿ 8 ವರ್ಷಗಳ ನಂತರ ಭಾರತ ಟೆಸ್ಟ್ ತಂಡದಲ್ಲಿ ಆಡುವ ಅವಕಾಶ ಸಿಕ್ಕಿತ್ತು. ಅದರಲ್ಲೂ ತಾನು ಪದಾರ್ಪಣೆ ಮಾಡಿದ್ದ ಇಂಗ್ಲೆಂಡ್‌ ತಂಡದ ವಿರುದ್ಧವೇ.

ಕನ್ನಡಿಗ ಕರುಣ್ ನಾಯರ್​ಗೆ ಅವರ ಪ್ರೀತಿಯ ಕ್ರಿಕೆಟ್ ಮತ್ತೊಂದು ಅವಕಾಶ ನೀಡಿದರೂ ಅದ್ಯಾಕೋ ಅದೃಷ್ಟ ಮಾತ್ರ ಅವರ ಕೈ ಹಿಡಿಯುತ್ತಿಲ್ಲ. ದೇಶೀ ಕ್ರಿಕೆಟ್​ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಕನ್ನಡಿಗ ಕರುಣ್ ನಾಯರ್​ಗೆ ಬರೋಬ್ಬರಿ 8 ವರ್ಷಗಳ ನಂತರ ಭಾರತ ಟೆಸ್ಟ್ ತಂಡದಲ್ಲಿ ಆಡುವ ಅವಕಾಶ ಸಿಕ್ಕಿತ್ತು. ಅದರಲ್ಲೂ ತಾನು ಪದಾರ್ಪಣೆ ಮಾಡಿದ್ದ ಇಂಗ್ಲೆಂಡ್‌ ತಂಡದ ವಿರುದ್ಧವೇ.

2 / 7
ಐದು ಪಂದ್ಯಗಳ ಟೆಸ್ಟ್ ಸರಣಿ ಆರಂಭಕ್ಕೂ ಮುನ್ನ ನಡೆದಿದ್ದ ಅಭ್ಯಾಸ ಪಂದ್ಯದಲ್ಲಿ ದ್ವಿಶತಕ ಬಾರಿಸಿದ್ದ ಕರುಣ್ ನಾಯರ್, ಆಂಗ್ಲರ ನೆಲದಲ್ಲಿ ತಮ್ಮ ವೃತ್ತಿಜೀವನಕ್ಕೆ ಮತ್ತೊಂದು ತಿರುವು ನೀಡುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಇದುವರೆಗೂ ಕರುಣ್ ನಾಯರ್ ಅಂದುಕೊಂಡಂತೆ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ.

ಐದು ಪಂದ್ಯಗಳ ಟೆಸ್ಟ್ ಸರಣಿ ಆರಂಭಕ್ಕೂ ಮುನ್ನ ನಡೆದಿದ್ದ ಅಭ್ಯಾಸ ಪಂದ್ಯದಲ್ಲಿ ದ್ವಿಶತಕ ಬಾರಿಸಿದ್ದ ಕರುಣ್ ನಾಯರ್, ಆಂಗ್ಲರ ನೆಲದಲ್ಲಿ ತಮ್ಮ ವೃತ್ತಿಜೀವನಕ್ಕೆ ಮತ್ತೊಂದು ತಿರುವು ನೀಡುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಇದುವರೆಗೂ ಕರುಣ್ ನಾಯರ್ ಅಂದುಕೊಂಡಂತೆ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ.

3 / 7
ದುರಾದೃಷ್ಟವೆಂದಂರೆ ಕರುಣ್ ನಾಯರ್ ಇದುವರೆಗೆ ಇಂಗ್ಲೆಂಡ್‌ ನೆಲದಲ್ಲಿ ಐದು ಬಾರಿ ಬ್ಯಾಟಿಂಗ್‌ ಮಾಡಿದ್ದಾರೆ. ಆದರೆ ಈ ಐದು ಇನ್ನಿಂಗ್ಸ್​ನಲ್ಲೂ ಕರುಣ್ ನಾಯರ್ ಒಂದು ಬಿಗ್ ಇನ್ನಿಂಗ್ಸ್ ಆಡುವಲ್ಲಿ ವಿಫಲವಾಗಿದೆ. ವಿಪರ್ಯಾಸವೆಂದರೆ ಕರುಣ್ ಉತ್ತಮ ಆರಂಭ ಪಡೆದ ಬಳಿಕ ವಿಕೆಟ್ ಒಪ್ಪಿಸುತ್ತಿರುವುದು ಅವರನ್ನು ಯೋಚಿಸುವಂತೆ ಮಾಡಿದೆ.

ದುರಾದೃಷ್ಟವೆಂದಂರೆ ಕರುಣ್ ನಾಯರ್ ಇದುವರೆಗೆ ಇಂಗ್ಲೆಂಡ್‌ ನೆಲದಲ್ಲಿ ಐದು ಬಾರಿ ಬ್ಯಾಟಿಂಗ್‌ ಮಾಡಿದ್ದಾರೆ. ಆದರೆ ಈ ಐದು ಇನ್ನಿಂಗ್ಸ್​ನಲ್ಲೂ ಕರುಣ್ ನಾಯರ್ ಒಂದು ಬಿಗ್ ಇನ್ನಿಂಗ್ಸ್ ಆಡುವಲ್ಲಿ ವಿಫಲವಾಗಿದೆ. ವಿಪರ್ಯಾಸವೆಂದರೆ ಕರುಣ್ ಉತ್ತಮ ಆರಂಭ ಪಡೆದ ಬಳಿಕ ವಿಕೆಟ್ ಒಪ್ಪಿಸುತ್ತಿರುವುದು ಅವರನ್ನು ಯೋಚಿಸುವಂತೆ ಮಾಡಿದೆ.

4 / 7
ವಾಸ್ತವವಾಗಿ ಇಂಗ್ಲೆಂಡ್‌ ವಿರುದ್ಧ ಲೀಡ್ಸ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ 6 ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಇಳಿದಿದ್ದ ಕರುಣ್​ ನಾಯರ್​ಗೆ ತಮ್ಮ ಖಾತೆಯನ್ನು ತೆರೆಯಲು ಸಹ ಸಾಧ್ಯವಾಗಲಿಲ್ಲ. ಆದಾಗ್ಯೂ ಎರಡನೇ ಇನ್ನಿಂಗ್ಸ್​ನಲ್ಲಿ ಅವರ ಮೇಲೆ ಸಾಕಷ್ಟು ನಿರೀಕ್ಷೆಗಳಿದ್ದವು. ಆದರೆ ಎರಡನೇ ಇನ್ನಿಂಗ್ಸ್​ನಲ್ಲೂ ನಿರಾಶೆ ಮೂಡಿಸಿದ ಕರುಣ್ ಕೇವಲ 20 ರನ್​ಗಳಿಗೆ ಸುಸ್ತಾದರು. ದುರಾದೃಷ್ಟವೆಂಬಂತೆ ಮೊದಲ ಪಂದ್ಯದಲ್ಲಿ ಭಾರತ ಸೋಲನುಭವಿಸಬೇಕಾಯಿತು.

ವಾಸ್ತವವಾಗಿ ಇಂಗ್ಲೆಂಡ್‌ ವಿರುದ್ಧ ಲೀಡ್ಸ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ 6 ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಇಳಿದಿದ್ದ ಕರುಣ್​ ನಾಯರ್​ಗೆ ತಮ್ಮ ಖಾತೆಯನ್ನು ತೆರೆಯಲು ಸಹ ಸಾಧ್ಯವಾಗಲಿಲ್ಲ. ಆದಾಗ್ಯೂ ಎರಡನೇ ಇನ್ನಿಂಗ್ಸ್​ನಲ್ಲಿ ಅವರ ಮೇಲೆ ಸಾಕಷ್ಟು ನಿರೀಕ್ಷೆಗಳಿದ್ದವು. ಆದರೆ ಎರಡನೇ ಇನ್ನಿಂಗ್ಸ್​ನಲ್ಲೂ ನಿರಾಶೆ ಮೂಡಿಸಿದ ಕರುಣ್ ಕೇವಲ 20 ರನ್​ಗಳಿಗೆ ಸುಸ್ತಾದರು. ದುರಾದೃಷ್ಟವೆಂಬಂತೆ ಮೊದಲ ಪಂದ್ಯದಲ್ಲಿ ಭಾರತ ಸೋಲನುಭವಿಸಬೇಕಾಯಿತು.

5 / 7
ಹೀಗಾಗಿ ಎರಡನೇ ಟೆಸ್ಟ್​ನಿಂದ ಕರುಣ್​ಗೆ ಗೇಟ್​ಪಾಸ್ ಎಂಬ ಮಾತುಗಳಿದ್ದವು. ಆದಾಗ್ಯೂ ಅವರಿಗೆ ಮತ್ತೊಂದು ಅವಕಾಶ ನೀಡಲಾಗಿತ್ತು. ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ ಮುಂಬಡ್ತಿ ಪಡೆದು ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಬಂದ ಕರುಣ್ ನಾಯರ್ ಉತ್ತಮ ಆರಂಭ ಪಡೆದು 30 ರನ್​ಗಳ ಗಡಿ ದಾಟಿದರು. ಆದರೆ 31 ರನ್​ಗಳಿಗೆ ಕರುಣ್ ತಮ್ಮ ವಿಕೆಟ್ ಕೈಚೆಲ್ಲಿದರು.

ಹೀಗಾಗಿ ಎರಡನೇ ಟೆಸ್ಟ್​ನಿಂದ ಕರುಣ್​ಗೆ ಗೇಟ್​ಪಾಸ್ ಎಂಬ ಮಾತುಗಳಿದ್ದವು. ಆದಾಗ್ಯೂ ಅವರಿಗೆ ಮತ್ತೊಂದು ಅವಕಾಶ ನೀಡಲಾಗಿತ್ತು. ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ ಮುಂಬಡ್ತಿ ಪಡೆದು ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಬಂದ ಕರುಣ್ ನಾಯರ್ ಉತ್ತಮ ಆರಂಭ ಪಡೆದು 30 ರನ್​ಗಳ ಗಡಿ ದಾಟಿದರು. ಆದರೆ 31 ರನ್​ಗಳಿಗೆ ಕರುಣ್ ತಮ್ಮ ವಿಕೆಟ್ ಕೈಚೆಲ್ಲಿದರು.

6 / 7
ಎರಡನೇ ಟೆಸ್ಟ್​ನ ಎರಡನೇ ಇನ್ನಿಂಗ್ಸ್​ನಲ್ಲೂ ಕರುಣ್ ನಾಯರ್​ಗೆ ಬಿಗ್ ಇನ್ನಿಂಗ್ಸ್ ಕಟ್ಟುವ ಅವಕಾಶವಿತ್ತು. ಆದರೆ ಇಲ್ಲೂ ಸಹ ಕರುಣ್​ಗೆ ಅದೃಷ್ಟ ಕೈಕೊಟ್ಟಿತು. ಮೊದಲ ಇನ್ನಿಂಗ್ಸ್​ನಂತೆ ಎರಡನೇ ಇನ್ನಿಂಗ್ಸ್​ನಲ್ಲೂ ಉತ್ತಮ ಆರಂಭ ಪಡೆದಿದ್ದ ಕರುಣ್ 26 ರನ್​ಗಳ ವೈಯಕ್ತಿಕ ಸ್ಕೋರ್​ನಲ್ಲಿ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿಕೊಂಡರು.

ಎರಡನೇ ಟೆಸ್ಟ್​ನ ಎರಡನೇ ಇನ್ನಿಂಗ್ಸ್​ನಲ್ಲೂ ಕರುಣ್ ನಾಯರ್​ಗೆ ಬಿಗ್ ಇನ್ನಿಂಗ್ಸ್ ಕಟ್ಟುವ ಅವಕಾಶವಿತ್ತು. ಆದರೆ ಇಲ್ಲೂ ಸಹ ಕರುಣ್​ಗೆ ಅದೃಷ್ಟ ಕೈಕೊಟ್ಟಿತು. ಮೊದಲ ಇನ್ನಿಂಗ್ಸ್​ನಂತೆ ಎರಡನೇ ಇನ್ನಿಂಗ್ಸ್​ನಲ್ಲೂ ಉತ್ತಮ ಆರಂಭ ಪಡೆದಿದ್ದ ಕರುಣ್ 26 ರನ್​ಗಳ ವೈಯಕ್ತಿಕ ಸ್ಕೋರ್​ನಲ್ಲಿ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿಕೊಂಡರು.

7 / 7
ಮೊದಲೆರಡು ಪಂದ್ಯಗಳಲ್ಲಿ ಫೇಲ್ ಆಗಿದ್ದ ಕರುಣ್​ರನ್ನು ಮೂರನೇ ಪಂದ್ಯದಿಂದ ಕೈಬಿಡಬೇಕು ಎಂಬ ಕೂಗು ಜೋರಾಗಿತ್ತು. ಆದಾಗ್ಯೂ ಲಾರ್ಡ್ಸ್‌ ಟೆಸ್ಟ್​ಗೆ ಕರುಣ್​ ಅವರನ್ನು ಆಯ್ಕೆ ಮಾಡಲಾಗಿದೆ. ಎಂದಿನಂತೆ ಮೊದಲ ಇನ್ನಿಂಗ್ಸ್​ನಲ್ಲಿ ಮೂರನೇ ಕ್ರಮಾಂಕದಲ್ಲಿ ಬಂದ ಕರುಣ್, ರಾಹುಲ್ ಜೊತೆ ಉತ್ತಮ ಜೊತೆಯಾಟ ಕಟ್ಟಿದರಾದರೂ, ಮತ್ತೊಮ್ಮೆ ಸೆಟಲ್ ಆದ ಬಳಿಕ ವಿಕೆಟ್ ಕೈಚೆಲಿದರು. ಈ ಇನ್ನಿಂಗ್ಸ್​ನಲ್ಲಿ 40 ರನ್ ಬಾರಿಸಿ ಅರ್ಧಶತಕದಂಚಿಗೆ ಬಂದಿದ್ದ ಕರುಣ್​ಗೆ ದುರಾದೃಷ್ಟ ಸರಿಯಾಗಿ ಹೆಗಲೆರಿದೆ ಎಂಬುದು ಮತ್ತೊಮ್ಮೆ ಸಾಭೀತಾಗಿದೆ.

ಮೊದಲೆರಡು ಪಂದ್ಯಗಳಲ್ಲಿ ಫೇಲ್ ಆಗಿದ್ದ ಕರುಣ್​ರನ್ನು ಮೂರನೇ ಪಂದ್ಯದಿಂದ ಕೈಬಿಡಬೇಕು ಎಂಬ ಕೂಗು ಜೋರಾಗಿತ್ತು. ಆದಾಗ್ಯೂ ಲಾರ್ಡ್ಸ್‌ ಟೆಸ್ಟ್​ಗೆ ಕರುಣ್​ ಅವರನ್ನು ಆಯ್ಕೆ ಮಾಡಲಾಗಿದೆ. ಎಂದಿನಂತೆ ಮೊದಲ ಇನ್ನಿಂಗ್ಸ್​ನಲ್ಲಿ ಮೂರನೇ ಕ್ರಮಾಂಕದಲ್ಲಿ ಬಂದ ಕರುಣ್, ರಾಹುಲ್ ಜೊತೆ ಉತ್ತಮ ಜೊತೆಯಾಟ ಕಟ್ಟಿದರಾದರೂ, ಮತ್ತೊಮ್ಮೆ ಸೆಟಲ್ ಆದ ಬಳಿಕ ವಿಕೆಟ್ ಕೈಚೆಲಿದರು. ಈ ಇನ್ನಿಂಗ್ಸ್​ನಲ್ಲಿ 40 ರನ್ ಬಾರಿಸಿ ಅರ್ಧಶತಕದಂಚಿಗೆ ಬಂದಿದ್ದ ಕರುಣ್​ಗೆ ದುರಾದೃಷ್ಟ ಸರಿಯಾಗಿ ಹೆಗಲೆರಿದೆ ಎಂಬುದು ಮತ್ತೊಮ್ಮೆ ಸಾಭೀತಾಗಿದೆ.

pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us