AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಕಿಂಗ್ ಕೊಹ್ಲಿಯನ್ನು ಹಿಂದಿಕ್ಕಿ ಕುಂಬ್ಳೆ ದಾಖಲೆಯನ್ನು ಸರಿಗಟ್ಟಿದ ಜಡೇಜಾ..!

Ravindra Jadeja: ರಾಜ್‌ಕೋಟ್‌ನಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ ಶತಕ ಹಾಗೂ ಎರಡನೇ ಇನ್ನಿಂಗ್ಸ್​ನಲ್ಲಿ ಐದು ವಿಕೆಟ್, ಒಟ್ಟಾರೆ ಪಂದ್ಯದಲ್ಲಿ 7 ವಿಕೆಟ್ ಪಡೆದ ರವೀಂದ್ರ ಜಡೇಜಾ, ತಮ್ಮ ಆಲ್​ ರೌಂಡ್ ಪ್ರದರ್ಶನಕ್ಕೆ ಪಂದ್ಯ ಶ್ರೇಷ್ಠ ಪ್ರಶಸ್ತಿಗೂ ಭಾಜನರಾದರು. ಇದರೊಂದಿಗೆ ಕೊಹ್ಲಿ ದಾಖಲೆಯನ್ನು ಮುರಿದರು.

ಪೃಥ್ವಿಶಂಕರ
|

Updated on:Feb 19, 2024 | 3:05 PM

Share
ರಾಜ್‌ಕೋಟ್‌ನಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ 434 ರನ್‌ಗಳ ಐತಿಹಾಸಿಕ ಗೆಲುವು ಸಾಧಿಸಿದ ಭಾರತ ಸರಣಿಯಲ್ಲಿ ಮೇಲುಗೈ ಸಾಧಿಸಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾ ಪರ ಆಲ್‌ರೌಂಡ್ ಪ್ರದರ್ಶನ ನೀಡಿದ ರವೀಂದ್ರ ಜಡೇಜಾ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ರಾಜ್‌ಕೋಟ್‌ನಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ 434 ರನ್‌ಗಳ ಐತಿಹಾಸಿಕ ಗೆಲುವು ಸಾಧಿಸಿದ ಭಾರತ ಸರಣಿಯಲ್ಲಿ ಮೇಲುಗೈ ಸಾಧಿಸಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾ ಪರ ಆಲ್‌ರೌಂಡ್ ಪ್ರದರ್ಶನ ನೀಡಿದ ರವೀಂದ್ರ ಜಡೇಜಾ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ.

1 / 6
ಈ ಪಂದ್ಯದಲ್ಲಿ ಒಟ್ಟು ಏಳು ವಿಕೆಟ್ ಪಡೆದ ಜಡೇಜಾ, ಮೊದಲ ಇನ್ನಿಂಗ್ಸ್​ನಲ್ಲಿ ಶತಕ ಕೂಡ ಸಿಡಿಸಿದ್ದರು. ಅಲ್ಲದೆ ಇದೇ ಮೈದಾನದಲ್ಲಿ ಜಡೇಜಾ 200 ಟೆಸ್ಟ್ ವಿಕೆಟ್ ಪೂರೈಸಿದ ಸಾಧನೆ ಕೂಡ ಮಾಡಿದ್ದರು. ಹೀಗಾಗಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದ ಜಡೇಜಾ, ಭಾರತದಲ್ಲಿ ಅತಿ ಹೆಚ್ಚು ಪಂದ್ಯ ಶ್ರೇಷ್ಠ ಪ್ರಶಸ್ತಿಗಳನ್ನು ಗೆದ್ದ ಆಟಗಾರರ ಪಟ್ಟಿಯಲ್ಲಿ ಅನಿಲ್ ಕುಂಬ್ಳೆ ಅವರನ್ನು ಸರಿಗಟ್ಟಿದ್ದಾರೆ.

ಈ ಪಂದ್ಯದಲ್ಲಿ ಒಟ್ಟು ಏಳು ವಿಕೆಟ್ ಪಡೆದ ಜಡೇಜಾ, ಮೊದಲ ಇನ್ನಿಂಗ್ಸ್​ನಲ್ಲಿ ಶತಕ ಕೂಡ ಸಿಡಿಸಿದ್ದರು. ಅಲ್ಲದೆ ಇದೇ ಮೈದಾನದಲ್ಲಿ ಜಡೇಜಾ 200 ಟೆಸ್ಟ್ ವಿಕೆಟ್ ಪೂರೈಸಿದ ಸಾಧನೆ ಕೂಡ ಮಾಡಿದ್ದರು. ಹೀಗಾಗಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದ ಜಡೇಜಾ, ಭಾರತದಲ್ಲಿ ಅತಿ ಹೆಚ್ಚು ಪಂದ್ಯ ಶ್ರೇಷ್ಠ ಪ್ರಶಸ್ತಿಗಳನ್ನು ಗೆದ್ದ ಆಟಗಾರರ ಪಟ್ಟಿಯಲ್ಲಿ ಅನಿಲ್ ಕುಂಬ್ಳೆ ಅವರನ್ನು ಸರಿಗಟ್ಟಿದ್ದಾರೆ.

2 / 6
ರವೀಂದ್ರ ಜಡೇಜಾ ತಮ್ಮ ಟೆಸ್ಟ್ ವೃತ್ತಿಜೀವನದಲ್ಲಿ 10 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಇದರಲ್ಲಿ 9 ಬಾರಿ ಭಾರತದ ನೆಲದಲ್ಲೇ ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇಲ್ಲಿಯವರೆಗೆ, ಜಡೇಜಾ ಭಾರತದಲ್ಲಿ ಆಡಿರುವ 42 ಟೆಸ್ಟ್ ಪಂದ್ಯಗಳಲ್ಲಿ 206 ವಿಕೆಟ್‌ಗಳನ್ನು ಕಬಳಿಸಿದ್ದು, 9 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಗೆದ್ದಿದ್ದಾರೆ.

ರವೀಂದ್ರ ಜಡೇಜಾ ತಮ್ಮ ಟೆಸ್ಟ್ ವೃತ್ತಿಜೀವನದಲ್ಲಿ 10 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಇದರಲ್ಲಿ 9 ಬಾರಿ ಭಾರತದ ನೆಲದಲ್ಲೇ ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇಲ್ಲಿಯವರೆಗೆ, ಜಡೇಜಾ ಭಾರತದಲ್ಲಿ ಆಡಿರುವ 42 ಟೆಸ್ಟ್ ಪಂದ್ಯಗಳಲ್ಲಿ 206 ವಿಕೆಟ್‌ಗಳನ್ನು ಕಬಳಿಸಿದ್ದು, 9 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಗೆದ್ದಿದ್ದಾರೆ.

3 / 6
ಇನ್ನು ಭಾರತದಲ್ಲಿ ನಡೆದ ಟೆಸ್ಟ್ ಪಂದ್ಯಗಳಲ್ಲಿ ಅತಿ ಹೆಚ್ಚು ಪಂದ್ಯ ಶ್ರೇಷ್ಠ ಪ್ರಶಸ್ತಿ ಗೆದ್ದ ಆಟಗಾರರ ಪಟ್ಟಿಯಲ್ಲಿ ಪ್ರಸ್ತುತ ರವೀಂದ್ರ ಜಡೇಜಾ, ಅನಿಲ್ ಕುಂಬ್ಳೆ ಅವರೊಂದಿಗೆ ಜಂಟಿ ಮೊದಲ ಸ್ಥಾನದಲ್ಲಿದ್ದಾರೆ. ಕನ್ನಡಿಗ ಕುಂಬ್ಳೆ ಭಾರತದಲ್ಲಿ ಆಡಿರುವ 63 ಟೆಸ್ಟ್‌ಗಳಲ್ಲಿ 9 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಇನ್ನು ಭಾರತದಲ್ಲಿ ನಡೆದ ಟೆಸ್ಟ್ ಪಂದ್ಯಗಳಲ್ಲಿ ಅತಿ ಹೆಚ್ಚು ಪಂದ್ಯ ಶ್ರೇಷ್ಠ ಪ್ರಶಸ್ತಿ ಗೆದ್ದ ಆಟಗಾರರ ಪಟ್ಟಿಯಲ್ಲಿ ಪ್ರಸ್ತುತ ರವೀಂದ್ರ ಜಡೇಜಾ, ಅನಿಲ್ ಕುಂಬ್ಳೆ ಅವರೊಂದಿಗೆ ಜಂಟಿ ಮೊದಲ ಸ್ಥಾನದಲ್ಲಿದ್ದಾರೆ. ಕನ್ನಡಿಗ ಕುಂಬ್ಳೆ ಭಾರತದಲ್ಲಿ ಆಡಿರುವ 63 ಟೆಸ್ಟ್‌ಗಳಲ್ಲಿ 9 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ.

4 / 6
ಈ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಮತ್ತು ಸಚಿನ್ ತೆಂಡೂಲ್ಕರ್ ಹೆಸರು ಕೂಡ ಸೇರಿದೆ. ಇಬ್ಬರೂ ಶ್ರೇಷ್ಠ ಆಟಗಾರರು ಭಾರತದಲ್ಲಿ ಟೆಸ್ಟ್‌ಗಳಲ್ಲಿ ಎಂಟು ಪಂದ್ಯ ಶ್ರೇಷ್ಠ ಪ್ರಶಸ್ತಿಗಳನ್ನು ಗೆದ್ದಿದ್ದಾರೆ.

ಈ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಮತ್ತು ಸಚಿನ್ ತೆಂಡೂಲ್ಕರ್ ಹೆಸರು ಕೂಡ ಸೇರಿದೆ. ಇಬ್ಬರೂ ಶ್ರೇಷ್ಠ ಆಟಗಾರರು ಭಾರತದಲ್ಲಿ ಟೆಸ್ಟ್‌ಗಳಲ್ಲಿ ಎಂಟು ಪಂದ್ಯ ಶ್ರೇಷ್ಠ ಪ್ರಶಸ್ತಿಗಳನ್ನು ಗೆದ್ದಿದ್ದಾರೆ.

5 / 6
ನಂತರದ ಸ್ಥಾನದಲ್ಲಿರುವ ಜಾವಗಲ್ ಶ್ರೀನಾಥ್ (32 ಟೆಸ್ಟ್), ರವಿಚಂದ್ರನ್ ಅಶ್ವಿನ್ (58 ಟೆಸ್ಟ್‌), ಹರ್ಭಜನ್ ಸಿಂಗ್ (55 ಟೆಸ್ಟ್‌) ತಲಾ 6 ಬಾರಿ ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ನಂತರದ ಸ್ಥಾನದಲ್ಲಿರುವ ಜಾವಗಲ್ ಶ್ರೀನಾಥ್ (32 ಟೆಸ್ಟ್), ರವಿಚಂದ್ರನ್ ಅಶ್ವಿನ್ (58 ಟೆಸ್ಟ್‌), ಹರ್ಭಜನ್ ಸಿಂಗ್ (55 ಟೆಸ್ಟ್‌) ತಲಾ 6 ಬಾರಿ ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ.

6 / 6

Published On - 3:02 pm, Mon, 19 February 24

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು