AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಶತಕದ ಸಮೀಪದಲ್ಲಿ ರನೌಟ್​ಗೆ ಬಲಿಯಾಗಿ ಬೇಡದ ದಾಖಲೆ ಬರೆದ ಗಿಲ್..!

Shubman Gill: ಕೇವಲ 9 ರನ್​ಗಳಿಂದ ಶತಕ ವಂಚಿತರಾದ ಗಿಲ್, ಬೇಡದ ದಾಖಲೆಯೊಂದನ್ನು ತಮ್ಮ ಖಾತೆಗೆ ಹಾಕಿಕೊಂಡಿದ್ದಾರೆ. ಈ ಮೂಲಕ ಶತಕದ ಸಮೀಪದಲ್ಲಿ ರನೌಟ್​ಗೆ ಬಲಿಯಾದ ಭಾರತದ 6ನೇ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.

ಪೃಥ್ವಿಶಂಕರ
|

Updated on: Feb 18, 2024 | 4:08 PM

Share
ರಾಜ್‌ಕೋಟ್ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ ಸೊನ್ನೆ ಸುತ್ತಿ ಟೀಕಾಕಾರರ ಬಾಯಿಗೆ ಮತ್ತೊಮ್ಮೆ ಆಹಾರವಾಗಿದ್ದ ಶುಭ್​ಮನ್ ಗಿಲ್, ಎರಡನೇ ಇನ್ನಿಂಗ್ಸ್​ನಲ್ಲಿ 91 ರನ್​ಗಳ ಅಮೋಘ ಇನ್ನಿಂಗ್ಸ್ ಆಡುವ ಮೂಲಕ ಎಲ್ಲರ ಪ್ರಶ್ನೆಗೂ ಉತ್ತರ ನೀಡಿದರು.

ರಾಜ್‌ಕೋಟ್ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ ಸೊನ್ನೆ ಸುತ್ತಿ ಟೀಕಾಕಾರರ ಬಾಯಿಗೆ ಮತ್ತೊಮ್ಮೆ ಆಹಾರವಾಗಿದ್ದ ಶುಭ್​ಮನ್ ಗಿಲ್, ಎರಡನೇ ಇನ್ನಿಂಗ್ಸ್​ನಲ್ಲಿ 91 ರನ್​ಗಳ ಅಮೋಘ ಇನ್ನಿಂಗ್ಸ್ ಆಡುವ ಮೂಲಕ ಎಲ್ಲರ ಪ್ರಶ್ನೆಗೂ ಉತ್ತರ ನೀಡಿದರು.

1 / 6
ಆದರೆ ಕೇವಲ 9 ರನ್​ಗಳಿಂದ ಶತಕ ವಂಚಿತರಾದ ಗಿಲ್, ಬೇಡದ ದಾಖಲೆಯೊಂದನ್ನು ತಮ್ಮ ಖಾತೆಗೆ ಹಾಕಿಕೊಂಡಿದ್ದಾರೆ. ಈ ಮೂಲಕ ಶತಕದ ಸಮೀಪದಲ್ಲಿ ರನೌಟ್​ಗೆ ಬಲಿಯಾದ ಭಾರತದ 6ನೇ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.

ಆದರೆ ಕೇವಲ 9 ರನ್​ಗಳಿಂದ ಶತಕ ವಂಚಿತರಾದ ಗಿಲ್, ಬೇಡದ ದಾಖಲೆಯೊಂದನ್ನು ತಮ್ಮ ಖಾತೆಗೆ ಹಾಕಿಕೊಂಡಿದ್ದಾರೆ. ಈ ಮೂಲಕ ಶತಕದ ಸಮೀಪದಲ್ಲಿ ರನೌಟ್​ಗೆ ಬಲಿಯಾದ ಭಾರತದ 6ನೇ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.

2 / 6
ವಾಸ್ತವವಾಗಿ ಇಂಗ್ಲೆಂಡ್‌ ವಿರುದ್ಧ ಎರಡನೇ ಇನ್ನಿಂಗ್ಸ್​ನಲ್ಲಿ ದಿಟ್ಟ ಪ್ರದರ್ಶನ ನೀಡಿದ ಗಿಲ್ 151 ಎಸೆತಗಳನ್ನು ಎದುರಿಸಿ 9 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 91 ರನ್ ಕಲೆಹಾಕಿದರು. ಆದರೆ ಈ ವೇಳೆ ಕುಲ್ದೀಪ್ ಯಾದವ್ ಜೊತೆಗಿನ ಸಮನ್ವಯದ ಕೊರತೆಯಿಂದಾಗಿ ರನೌಟ್​ಗೆ ಬಲಿಯಾಗಬೇಕಾಯಿತು.

ವಾಸ್ತವವಾಗಿ ಇಂಗ್ಲೆಂಡ್‌ ವಿರುದ್ಧ ಎರಡನೇ ಇನ್ನಿಂಗ್ಸ್​ನಲ್ಲಿ ದಿಟ್ಟ ಪ್ರದರ್ಶನ ನೀಡಿದ ಗಿಲ್ 151 ಎಸೆತಗಳನ್ನು ಎದುರಿಸಿ 9 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 91 ರನ್ ಕಲೆಹಾಕಿದರು. ಆದರೆ ಈ ವೇಳೆ ಕುಲ್ದೀಪ್ ಯಾದವ್ ಜೊತೆಗಿನ ಸಮನ್ವಯದ ಕೊರತೆಯಿಂದಾಗಿ ರನೌಟ್​ಗೆ ಬಲಿಯಾಗಬೇಕಾಯಿತು.

3 / 6
ಶತಕದಂಚಿನಲ್ಲಿ ಎಡವಿದಕ್ಕೆ ಸ್ವತಂ ಶುಭಮಾನ್ ಗಿಲ್ ಕೂಡ ಕೋಪಗೊಂಡಿದ್ದರು. ವಾಸ್ತವವಾಗಿ ಗಿಲ್ ನರ್ವಸ್ ನೈಂಟಿಗೆ ಬಲಿಯಾಗುತ್ತಿರುವುದು ಇದೇ ಮೊದಲಲ್ಲ. ಇದಕ್ಕೂ ಮುನ್ನ ಅವರು 2021ರಲ್ಲಿ ಆಸ್ಟ್ರೇಲಿಯಾ ವಿರುದ್ಧದ ಗಬ್ಬಾ ಟೆಸ್ಟ್‌ನಲ್ಲಿ 91 ರನ್‌ಗಳಿಗೆ ಔಟಾಗಿದ್ದರು.

ಶತಕದಂಚಿನಲ್ಲಿ ಎಡವಿದಕ್ಕೆ ಸ್ವತಂ ಶುಭಮಾನ್ ಗಿಲ್ ಕೂಡ ಕೋಪಗೊಂಡಿದ್ದರು. ವಾಸ್ತವವಾಗಿ ಗಿಲ್ ನರ್ವಸ್ ನೈಂಟಿಗೆ ಬಲಿಯಾಗುತ್ತಿರುವುದು ಇದೇ ಮೊದಲಲ್ಲ. ಇದಕ್ಕೂ ಮುನ್ನ ಅವರು 2021ರಲ್ಲಿ ಆಸ್ಟ್ರೇಲಿಯಾ ವಿರುದ್ಧದ ಗಬ್ಬಾ ಟೆಸ್ಟ್‌ನಲ್ಲಿ 91 ರನ್‌ಗಳಿಗೆ ಔಟಾಗಿದ್ದರು.

4 / 6
ಇದೀಗ ಮತ್ತೊಮ್ಮೆ ಶತಕ ವಂಚಿತರಾದ ಗಿಲ್, ಟೆಸ್ಟ್‌ನಲ್ಲಿ ನರ್ವಸ್ ನೈಂಟಿಯಲ್ಲಿ ರನ್ ಔಟ್ ಆದ ಆರನೇ ಭಾರತೀಯ ಎನಿಸಿಕೊಂಡಿದ್ದಾರೆ. ಹಾಗೆಯೇ 2012 ರ ನಂತರ ಭಾರತೀಯ ಬ್ಯಾಟ್ಸ್‌ಮನ್ ನರ್ವಸ್ ನೈಂಟಿಯಲ್ಲಿ ರನೌಟ್ ಆಗಿದ್ದು ಇದೇ ಮೊದಲು. ಇದಕ್ಕೂ ಮೊದಲು 2012ರಲ್ಲಿ ಎಂಎಸ್ ಧೋನಿ ನರ್ವಸ್ ನೈಂಟಿಯಲ್ಲಿ ರನ್ ಔಟ್ ಆಗಿದ್ದರು.

ಇದೀಗ ಮತ್ತೊಮ್ಮೆ ಶತಕ ವಂಚಿತರಾದ ಗಿಲ್, ಟೆಸ್ಟ್‌ನಲ್ಲಿ ನರ್ವಸ್ ನೈಂಟಿಯಲ್ಲಿ ರನ್ ಔಟ್ ಆದ ಆರನೇ ಭಾರತೀಯ ಎನಿಸಿಕೊಂಡಿದ್ದಾರೆ. ಹಾಗೆಯೇ 2012 ರ ನಂತರ ಭಾರತೀಯ ಬ್ಯಾಟ್ಸ್‌ಮನ್ ನರ್ವಸ್ ನೈಂಟಿಯಲ್ಲಿ ರನೌಟ್ ಆಗಿದ್ದು ಇದೇ ಮೊದಲು. ಇದಕ್ಕೂ ಮೊದಲು 2012ರಲ್ಲಿ ಎಂಎಸ್ ಧೋನಿ ನರ್ವಸ್ ನೈಂಟಿಯಲ್ಲಿ ರನ್ ಔಟ್ ಆಗಿದ್ದರು.

5 / 6
ಇಂಗ್ಲೆಂಡ್ ವಿರುದ್ಧ ನಡೆದ ಆ ಪಂದ್ಯದಲ್ಲಿ ಎಂಎಸ್ ಧೋನಿ 99 ರನ್ ಕಲೆಹಾಕಿದ್ದಾಗ ರನೌಟ್​ಗೆ ಬಲಿಯಾಗಿ ಕೇವಲ 1 ರನ್​ಗಳಿಂದ ಶತಕ ವಂಚಿತರಾಗಿದ್ದರು. ಗಿಲ್ ಮತ್ತು ಧೋನಿ ಹೊರತಾಗಿ ಮೋಟಗನಹಳ್ಳಿ ಜಯಸಿಂಹ, ವಿನೂ ಮಂಕಡ್, ಅಜಯ್ ಜಡೇಜಾ ಮತ್ತು ದಿಲೀಪ್ ವೆಂಗ್‌ಸರ್ಕರ್ ಕೂಡ ನರ್ವಸ್ ನೈಂಟಿಯಲ್ಲಿ ರನೌಟ್ ಆಗಿದ್ದಾರೆ.

ಇಂಗ್ಲೆಂಡ್ ವಿರುದ್ಧ ನಡೆದ ಆ ಪಂದ್ಯದಲ್ಲಿ ಎಂಎಸ್ ಧೋನಿ 99 ರನ್ ಕಲೆಹಾಕಿದ್ದಾಗ ರನೌಟ್​ಗೆ ಬಲಿಯಾಗಿ ಕೇವಲ 1 ರನ್​ಗಳಿಂದ ಶತಕ ವಂಚಿತರಾಗಿದ್ದರು. ಗಿಲ್ ಮತ್ತು ಧೋನಿ ಹೊರತಾಗಿ ಮೋಟಗನಹಳ್ಳಿ ಜಯಸಿಂಹ, ವಿನೂ ಮಂಕಡ್, ಅಜಯ್ ಜಡೇಜಾ ಮತ್ತು ದಿಲೀಪ್ ವೆಂಗ್‌ಸರ್ಕರ್ ಕೂಡ ನರ್ವಸ್ ನೈಂಟಿಯಲ್ಲಿ ರನೌಟ್ ಆಗಿದ್ದಾರೆ.

6 / 6
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!