AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG 4th Test, Day 4: ಭಾರತದ ಗೆಲುವಿಗೆ ಬೇಕು 152 ರನ್ಸ್: ಆದರೆ ಇದು ಸುಲಭವಲ್ಲ, ಯಾಕೆ ಗೊತ್ತೇ?

India vs England 4th Test, Day 4: ಭಾರತ ಮೂರನೇ ದಿನದಾಟದ ಅಂತ್ಯಕ್ಕೆ ವಿಕೆಟ್ ನಷ್ಟವಿಲ್ಲದೆ 40 ರನ್ ಗಳಿಸಿದೆ. ರೋಹಿತ್ ಶರ್ಮಾ (24) ಹಾಗೂ ಯಶಸ್ವಿ ಜೈಸ್ವಾಲ್ (16) ಕ್ರೀಸ್​ನಲ್ಲಿದ್ದಾರೆ. ಟೀಮ್ ಇಂಡಿಯಾ ಗೆಲುವಿಗೆ 152 ರನ್​ಗಳ ಅವಶ್ಯತೆ ಇದೆ. ಆದರೆ, ಇದು ಸುಲಭವಲ್ಲ. ಯಾಕೆ ಗೊತ್ತೇ?.

Vinay Bhat
|

Updated on: Feb 26, 2024 | 6:59 AM

ರಾಂಚಿಯ ಜೆಎಸ್​ಸಿಎ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಹಾಗೂ ಇಂಗ್ಲೆಂಡ್ ನಡುವಣ ನಾಲ್ಕನೇ ಟೆಸ್ಟ್ ಪಂದ್ಯ ಅಂತಿಮ ಘಟ್ಟಕ್ಕೆ ಬಂದು ನಿಂತಿದೆ. ಮೂರನೇ ದಿನದಾಟದಲ್ಲಿ ಎಲ್ಲವೂ ಬದಲಾಗಿದ್ದು, ಆಂಗ್ಲರು ಕೇವಲ 145 ರನ್​ಗಳಿಗೆ ಆಲೌಟ್ ಆಗುವ ಮೂಲಕ ಟೀಮ್ ಇಂಡಿಯಾಕ್ಕೆ ಗೆಲ್ಲಲು 192 ರನ್​ಗಳ ಟಾರ್ಗೆಟ್ ನೀಡಿತು.

ರಾಂಚಿಯ ಜೆಎಸ್​ಸಿಎ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಹಾಗೂ ಇಂಗ್ಲೆಂಡ್ ನಡುವಣ ನಾಲ್ಕನೇ ಟೆಸ್ಟ್ ಪಂದ್ಯ ಅಂತಿಮ ಘಟ್ಟಕ್ಕೆ ಬಂದು ನಿಂತಿದೆ. ಮೂರನೇ ದಿನದಾಟದಲ್ಲಿ ಎಲ್ಲವೂ ಬದಲಾಗಿದ್ದು, ಆಂಗ್ಲರು ಕೇವಲ 145 ರನ್​ಗಳಿಗೆ ಆಲೌಟ್ ಆಗುವ ಮೂಲಕ ಟೀಮ್ ಇಂಡಿಯಾಕ್ಕೆ ಗೆಲ್ಲಲು 192 ರನ್​ಗಳ ಟಾರ್ಗೆಟ್ ನೀಡಿತು.

1 / 6
ಗುರಿ ಬೆನ್ನಟ್ಟಲು ಶುರುಮಾಡಿದ ಭಾರತ ಮೂರನೇ ದಿನದಾಟದ ಅಂತ್ಯಕ್ಕೆ ವಿಕೆಟ್ ನಷ್ಟವಿಲ್ಲದೆ 40 ರನ್ ಗಳಿಸಿದೆ. ರೋಹಿತ್ ಶರ್ಮಾ (24) ಹಾಗೂ ಯಶಸ್ವಿ ಜೈಸ್ವಾಲ್ (16) ಕ್ರೀಸ್​ನಲ್ಲಿದ್ದಾರೆ. ಟೀಮ್ ಇಂಡಿಯಾ ಗೆಲುವಿಗೆ 152 ರನ್​ಗಳ ಅವಶ್ಯತೆ ಇದೆ. ಆದರೆ, ಇದು ಸುಲಭವಲ್ಲ. ಯಾಕೆಂದರೆ ನಾಲ್ಕನೇ ದಿನ ಪಿಚ್ ಮತ್ತಷ್ಟು ರೋಚಕತೆ ಸೃಷ್ಟಿಸಲಿದ್ದು, ಸ್ಪಿನ್ನರ್​ಗಳಿಗೆ ಹೇಳಿ ಮಾಡಿಸಿದಂತಿರುತ್ತದೆ. ಹೀಗಾಗಿ ಭಾರತ ಎಚ್ಚರಿಕೆಯಿಂದ ಬ್ಯಾಟ್ ಮಾಡಿದರಷ್ಟೆ ಗೆಲುವು ಸಾಧ್ಯ.

ಗುರಿ ಬೆನ್ನಟ್ಟಲು ಶುರುಮಾಡಿದ ಭಾರತ ಮೂರನೇ ದಿನದಾಟದ ಅಂತ್ಯಕ್ಕೆ ವಿಕೆಟ್ ನಷ್ಟವಿಲ್ಲದೆ 40 ರನ್ ಗಳಿಸಿದೆ. ರೋಹಿತ್ ಶರ್ಮಾ (24) ಹಾಗೂ ಯಶಸ್ವಿ ಜೈಸ್ವಾಲ್ (16) ಕ್ರೀಸ್​ನಲ್ಲಿದ್ದಾರೆ. ಟೀಮ್ ಇಂಡಿಯಾ ಗೆಲುವಿಗೆ 152 ರನ್​ಗಳ ಅವಶ್ಯತೆ ಇದೆ. ಆದರೆ, ಇದು ಸುಲಭವಲ್ಲ. ಯಾಕೆಂದರೆ ನಾಲ್ಕನೇ ದಿನ ಪಿಚ್ ಮತ್ತಷ್ಟು ರೋಚಕತೆ ಸೃಷ್ಟಿಸಲಿದ್ದು, ಸ್ಪಿನ್ನರ್​ಗಳಿಗೆ ಹೇಳಿ ಮಾಡಿಸಿದಂತಿರುತ್ತದೆ. ಹೀಗಾಗಿ ಭಾರತ ಎಚ್ಚರಿಕೆಯಿಂದ ಬ್ಯಾಟ್ ಮಾಡಿದರಷ್ಟೆ ಗೆಲುವು ಸಾಧ್ಯ.

2 / 6
ಮೂರನೇ ದಿನ ಭಾರತವನ್ನು 307 ರನ್​ಗೆ ಆಲೌಟ್ ಮಾಡಿ 46 ರನ್​ಗಳ ಮುನ್ನಡೆಯೊಂದಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ ಇಂಗ್ಲೆಂಡ್​ ಮತ್ತೊಮ್ಮೆ ಉತ್ತಮ ಆರಂಭ ಪಡೆಯುವಲ್ಲಿ ವಿಫಲವಾಯಿತು. ಆರಂಭಿಕ ಬೆನ್ ಡಕೆಟ್ ಕೇವಲ 15 ರನ್​ಗಳಿಗೆ ಪೆವಿಲಿಯನ್ ಸೇರಿಕೊಂಡರೆ, ನಂತರ ಬಂದ ಒಲಿ ಪೋಪ್ ಮತ್ತೊಮ್ಮೆ ನಿರಾಸೆ ಮೂಡಿಸಿದರು.

ಮೂರನೇ ದಿನ ಭಾರತವನ್ನು 307 ರನ್​ಗೆ ಆಲೌಟ್ ಮಾಡಿ 46 ರನ್​ಗಳ ಮುನ್ನಡೆಯೊಂದಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ ಇಂಗ್ಲೆಂಡ್​ ಮತ್ತೊಮ್ಮೆ ಉತ್ತಮ ಆರಂಭ ಪಡೆಯುವಲ್ಲಿ ವಿಫಲವಾಯಿತು. ಆರಂಭಿಕ ಬೆನ್ ಡಕೆಟ್ ಕೇವಲ 15 ರನ್​ಗಳಿಗೆ ಪೆವಿಲಿಯನ್ ಸೇರಿಕೊಂಡರೆ, ನಂತರ ಬಂದ ಒಲಿ ಪೋಪ್ ಮತ್ತೊಮ್ಮೆ ನಿರಾಸೆ ಮೂಡಿಸಿದರು.

3 / 6
ಮೊದಲ ಇನ್ನಿಂಗ್ಸ್​ನಲ್ಲಿ ಅಜೇಯ ಶತಕ ಸಿಡಿಸಿದ್ದ ರೂಟ್​ಗೆ ಎರಡನೇ ಇನ್ನಿಂಗ್ಸ್​ನಲ್ಲಿ 11 ರನ್ ದಾಟಿ ಮುಂದೆ ಹೋಗಲು ಸಾಧ್ಯವಾಗಲಿಲ್ಲ. ಬಳಿಕ ಒಂದರ ಹಿಂದೆ ಒಂದರಂತೆ ವಿಕೆಟ್ ಪತನದ ನಡುವೆಯೂ ಸ್ಫೋಟಕ ಬ್ಯಾಟಿಂಗ್ ಮಾಡಿದ ಆರಂಭಿಕ ಝಾಕ್ ಕ್ರೌಲಿ 91 ಎಸೆತಗಳಲ್ಲಿ 60 ರನ್​ಗಳ ಇನ್ನಿಂಗ್ಸ್ ಆಡಿದರು.

ಮೊದಲ ಇನ್ನಿಂಗ್ಸ್​ನಲ್ಲಿ ಅಜೇಯ ಶತಕ ಸಿಡಿಸಿದ್ದ ರೂಟ್​ಗೆ ಎರಡನೇ ಇನ್ನಿಂಗ್ಸ್​ನಲ್ಲಿ 11 ರನ್ ದಾಟಿ ಮುಂದೆ ಹೋಗಲು ಸಾಧ್ಯವಾಗಲಿಲ್ಲ. ಬಳಿಕ ಒಂದರ ಹಿಂದೆ ಒಂದರಂತೆ ವಿಕೆಟ್ ಪತನದ ನಡುವೆಯೂ ಸ್ಫೋಟಕ ಬ್ಯಾಟಿಂಗ್ ಮಾಡಿದ ಆರಂಭಿಕ ಝಾಕ್ ಕ್ರೌಲಿ 91 ಎಸೆತಗಳಲ್ಲಿ 60 ರನ್​ಗಳ ಇನ್ನಿಂಗ್ಸ್ ಆಡಿದರು.

4 / 6
ನಾಯಕ ಬೆನ್ ಸ್ಟೋಕ್ಸ್ ಮತ್ತೊಂದು ಕಳಪೆ ಇನ್ನಿಂಗ್ಸ್ ಆಡುವ ಮೂಲಕ ಸಿಂಗಲ್ ಡಿಜಿಟ್​ಗೆ ವಿಕೆಟ್ ಒಪ್ಪಿಸುವ ತಮ್ಮ ಖಯಾಲಿಯನ್ನು ಮುಂದುವರೆಸಿದರು. ಸ್ಟೋಕ್ಸ್ 4 ರನ್​ಗಳಿಗೆ ಸುಸ್ತಾದರೆ, ಜಾನಿ ಬೈರ್​ಸ್ಟೋವ್ 30 ರನ್​ಗಳ ಕಾಣಿಕೆ ನೀಡಿದರು. ಅಂತಿಮವಾಗಿ ಇಂಗ್ಲೆಂಡ್ ಕೇವಲ 145 ರನ್‌ಗಳಿಗೆ ಸರ್ವಪತನ ಕಂಡಿತು.

ನಾಯಕ ಬೆನ್ ಸ್ಟೋಕ್ಸ್ ಮತ್ತೊಂದು ಕಳಪೆ ಇನ್ನಿಂಗ್ಸ್ ಆಡುವ ಮೂಲಕ ಸಿಂಗಲ್ ಡಿಜಿಟ್​ಗೆ ವಿಕೆಟ್ ಒಪ್ಪಿಸುವ ತಮ್ಮ ಖಯಾಲಿಯನ್ನು ಮುಂದುವರೆಸಿದರು. ಸ್ಟೋಕ್ಸ್ 4 ರನ್​ಗಳಿಗೆ ಸುಸ್ತಾದರೆ, ಜಾನಿ ಬೈರ್​ಸ್ಟೋವ್ 30 ರನ್​ಗಳ ಕಾಣಿಕೆ ನೀಡಿದರು. ಅಂತಿಮವಾಗಿ ಇಂಗ್ಲೆಂಡ್ ಕೇವಲ 145 ರನ್‌ಗಳಿಗೆ ಸರ್ವಪತನ ಕಂಡಿತು.

5 / 6
ಭಾರತದ ಪರ ಮಾರಕ ದಾಳಿ ನಡೆಸಿದ ರವಿಚಂದ್ರನ್ ಅಶ್ವಿನ್ ಮತ್ತೊಮ್ಮೆ 5 ವಿಕೆಟ್​ ಕಿತ್ತ ಸಾಧನೆ ಮಾಡಿದರೆ, ಕುಲ್ದೀಪ್ ಯಾದವ್ 4 ಪ್ರಮುಖ ವಿಕೆಟ್ ಪಡೆದು ಆಂಗ್ಲರ ಪತನಕ್ಕೆ ಕಾರಣರಾದರು. ಉಳಿದೊಂದು ವಿಕೆಟ್ ರವೀಂದ್ರ ಜಡೇಜಾ ಪಾಲಾಯಿತು.

ಭಾರತದ ಪರ ಮಾರಕ ದಾಳಿ ನಡೆಸಿದ ರವಿಚಂದ್ರನ್ ಅಶ್ವಿನ್ ಮತ್ತೊಮ್ಮೆ 5 ವಿಕೆಟ್​ ಕಿತ್ತ ಸಾಧನೆ ಮಾಡಿದರೆ, ಕುಲ್ದೀಪ್ ಯಾದವ್ 4 ಪ್ರಮುಖ ವಿಕೆಟ್ ಪಡೆದು ಆಂಗ್ಲರ ಪತನಕ್ಕೆ ಕಾರಣರಾದರು. ಉಳಿದೊಂದು ವಿಕೆಟ್ ರವೀಂದ್ರ ಜಡೇಜಾ ಪಾಲಾಯಿತು.

6 / 6
Follow us
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ
ಬಿಜೆಪಿ ಪ್ರಚಾರಕ್ಕಾಗಿ ಎಮರ್ಜೆನ್ಸಿ ವಿಚಾರ ಬಳಸಿಕೊಳ್ಳುತ್ತಿದೆ: ಶಿವಕುಮಾರ್
ಬಿಜೆಪಿ ಪ್ರಚಾರಕ್ಕಾಗಿ ಎಮರ್ಜೆನ್ಸಿ ವಿಚಾರ ಬಳಸಿಕೊಳ್ಳುತ್ತಿದೆ: ಶಿವಕುಮಾರ್
ಕೇವಲ ಬೆಳಗಾವಿ ಮತ್ತು ಖಾನಾಪುರ ತಾಲೂಕುಗಳಲ್ಲಿ ಮಳೆಯಾಗುತ್ತಿದೆ: ಜಾರಕಿಹೊಳಿ
ಕೇವಲ ಬೆಳಗಾವಿ ಮತ್ತು ಖಾನಾಪುರ ತಾಲೂಕುಗಳಲ್ಲಿ ಮಳೆಯಾಗುತ್ತಿದೆ: ಜಾರಕಿಹೊಳಿ
ದೈವ ನುಡಿದಂತೆ ಮನೆಗೆ ಬಂದ ಅಣ್ಣ: ತಮ್ಮ ಹೇಳಿದ್ದಿಷ್ಟು
ದೈವ ನುಡಿದಂತೆ ಮನೆಗೆ ಬಂದ ಅಣ್ಣ: ತಮ್ಮ ಹೇಳಿದ್ದಿಷ್ಟು
ಚಿಕ್ಕಮಗಳೂರು: ಹಾಲಿನ ಟ್ಯಾಂಕರ್ ಪಲ್ಟಿ, ಹರಿಯಿತು ಹಾಲಿನ ಹೊಳೆ
ಚಿಕ್ಕಮಗಳೂರು: ಹಾಲಿನ ಟ್ಯಾಂಕರ್ ಪಲ್ಟಿ, ಹರಿಯಿತು ಹಾಲಿನ ಹೊಳೆ
ಕಬಿನಿ ಜಲಾಶಯಕ್ಕೆ ಶಿವಣ್ಣ-ಗೀತಕ್ಕ ಭೇಟಿ, ಮಕ್ಕಳೊಂದಿಗೆ ಬೆರೆತ ದಂಪತಿ
ಕಬಿನಿ ಜಲಾಶಯಕ್ಕೆ ಶಿವಣ್ಣ-ಗೀತಕ್ಕ ಭೇಟಿ, ಮಕ್ಕಳೊಂದಿಗೆ ಬೆರೆತ ದಂಪತಿ
ಮಗನಿಗಾಗಿ ಶಬರಿಯಂತೆ ಕಾಯ್ದ ತಾಯಿ, ದೈವದ ಮೊರೆ ಹೊಕ್ಕಿದ್ದ ಕುಟುಂಬ
ಮಗನಿಗಾಗಿ ಶಬರಿಯಂತೆ ಕಾಯ್ದ ತಾಯಿ, ದೈವದ ಮೊರೆ ಹೊಕ್ಕಿದ್ದ ಕುಟುಂಬ
ರಮೋಲಾಗೆ ಆಗಸದಲ್ಲಿ ಪ್ರಪೋಸ್ ಮಾಡಿ ಹಣೆಗೆ ಮುತ್ತಿಟ್ಟ ರಕ್ಷಕ್ ಬುಲೆಟ್
ರಮೋಲಾಗೆ ಆಗಸದಲ್ಲಿ ಪ್ರಪೋಸ್ ಮಾಡಿ ಹಣೆಗೆ ಮುತ್ತಿಟ್ಟ ರಕ್ಷಕ್ ಬುಲೆಟ್
ಸೇತುವೆಗಳ ಎತ್ತರ ಹೆಚ್ಚಿಸಿ ಮರುನಿರ್ಮಾಣ ಮಾಡುವ ಅವಶ್ಯಕತೆ ಇದೆ
ಸೇತುವೆಗಳ ಎತ್ತರ ಹೆಚ್ಚಿಸಿ ಮರುನಿರ್ಮಾಣ ಮಾಡುವ ಅವಶ್ಯಕತೆ ಇದೆ