AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG 4th Test, Day 4: ಭಾರತದ ಗೆಲುವಿಗೆ ಬೇಕು 152 ರನ್ಸ್: ಆದರೆ ಇದು ಸುಲಭವಲ್ಲ, ಯಾಕೆ ಗೊತ್ತೇ?

India vs England 4th Test, Day 4: ಭಾರತ ಮೂರನೇ ದಿನದಾಟದ ಅಂತ್ಯಕ್ಕೆ ವಿಕೆಟ್ ನಷ್ಟವಿಲ್ಲದೆ 40 ರನ್ ಗಳಿಸಿದೆ. ರೋಹಿತ್ ಶರ್ಮಾ (24) ಹಾಗೂ ಯಶಸ್ವಿ ಜೈಸ್ವಾಲ್ (16) ಕ್ರೀಸ್​ನಲ್ಲಿದ್ದಾರೆ. ಟೀಮ್ ಇಂಡಿಯಾ ಗೆಲುವಿಗೆ 152 ರನ್​ಗಳ ಅವಶ್ಯತೆ ಇದೆ. ಆದರೆ, ಇದು ಸುಲಭವಲ್ಲ. ಯಾಕೆ ಗೊತ್ತೇ?.

Vinay Bhat
|

Updated on: Feb 26, 2024 | 6:59 AM

ರಾಂಚಿಯ ಜೆಎಸ್​ಸಿಎ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಹಾಗೂ ಇಂಗ್ಲೆಂಡ್ ನಡುವಣ ನಾಲ್ಕನೇ ಟೆಸ್ಟ್ ಪಂದ್ಯ ಅಂತಿಮ ಘಟ್ಟಕ್ಕೆ ಬಂದು ನಿಂತಿದೆ. ಮೂರನೇ ದಿನದಾಟದಲ್ಲಿ ಎಲ್ಲವೂ ಬದಲಾಗಿದ್ದು, ಆಂಗ್ಲರು ಕೇವಲ 145 ರನ್​ಗಳಿಗೆ ಆಲೌಟ್ ಆಗುವ ಮೂಲಕ ಟೀಮ್ ಇಂಡಿಯಾಕ್ಕೆ ಗೆಲ್ಲಲು 192 ರನ್​ಗಳ ಟಾರ್ಗೆಟ್ ನೀಡಿತು.

ರಾಂಚಿಯ ಜೆಎಸ್​ಸಿಎ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಹಾಗೂ ಇಂಗ್ಲೆಂಡ್ ನಡುವಣ ನಾಲ್ಕನೇ ಟೆಸ್ಟ್ ಪಂದ್ಯ ಅಂತಿಮ ಘಟ್ಟಕ್ಕೆ ಬಂದು ನಿಂತಿದೆ. ಮೂರನೇ ದಿನದಾಟದಲ್ಲಿ ಎಲ್ಲವೂ ಬದಲಾಗಿದ್ದು, ಆಂಗ್ಲರು ಕೇವಲ 145 ರನ್​ಗಳಿಗೆ ಆಲೌಟ್ ಆಗುವ ಮೂಲಕ ಟೀಮ್ ಇಂಡಿಯಾಕ್ಕೆ ಗೆಲ್ಲಲು 192 ರನ್​ಗಳ ಟಾರ್ಗೆಟ್ ನೀಡಿತು.

1 / 6
ಗುರಿ ಬೆನ್ನಟ್ಟಲು ಶುರುಮಾಡಿದ ಭಾರತ ಮೂರನೇ ದಿನದಾಟದ ಅಂತ್ಯಕ್ಕೆ ವಿಕೆಟ್ ನಷ್ಟವಿಲ್ಲದೆ 40 ರನ್ ಗಳಿಸಿದೆ. ರೋಹಿತ್ ಶರ್ಮಾ (24) ಹಾಗೂ ಯಶಸ್ವಿ ಜೈಸ್ವಾಲ್ (16) ಕ್ರೀಸ್​ನಲ್ಲಿದ್ದಾರೆ. ಟೀಮ್ ಇಂಡಿಯಾ ಗೆಲುವಿಗೆ 152 ರನ್​ಗಳ ಅವಶ್ಯತೆ ಇದೆ. ಆದರೆ, ಇದು ಸುಲಭವಲ್ಲ. ಯಾಕೆಂದರೆ ನಾಲ್ಕನೇ ದಿನ ಪಿಚ್ ಮತ್ತಷ್ಟು ರೋಚಕತೆ ಸೃಷ್ಟಿಸಲಿದ್ದು, ಸ್ಪಿನ್ನರ್​ಗಳಿಗೆ ಹೇಳಿ ಮಾಡಿಸಿದಂತಿರುತ್ತದೆ. ಹೀಗಾಗಿ ಭಾರತ ಎಚ್ಚರಿಕೆಯಿಂದ ಬ್ಯಾಟ್ ಮಾಡಿದರಷ್ಟೆ ಗೆಲುವು ಸಾಧ್ಯ.

ಗುರಿ ಬೆನ್ನಟ್ಟಲು ಶುರುಮಾಡಿದ ಭಾರತ ಮೂರನೇ ದಿನದಾಟದ ಅಂತ್ಯಕ್ಕೆ ವಿಕೆಟ್ ನಷ್ಟವಿಲ್ಲದೆ 40 ರನ್ ಗಳಿಸಿದೆ. ರೋಹಿತ್ ಶರ್ಮಾ (24) ಹಾಗೂ ಯಶಸ್ವಿ ಜೈಸ್ವಾಲ್ (16) ಕ್ರೀಸ್​ನಲ್ಲಿದ್ದಾರೆ. ಟೀಮ್ ಇಂಡಿಯಾ ಗೆಲುವಿಗೆ 152 ರನ್​ಗಳ ಅವಶ್ಯತೆ ಇದೆ. ಆದರೆ, ಇದು ಸುಲಭವಲ್ಲ. ಯಾಕೆಂದರೆ ನಾಲ್ಕನೇ ದಿನ ಪಿಚ್ ಮತ್ತಷ್ಟು ರೋಚಕತೆ ಸೃಷ್ಟಿಸಲಿದ್ದು, ಸ್ಪಿನ್ನರ್​ಗಳಿಗೆ ಹೇಳಿ ಮಾಡಿಸಿದಂತಿರುತ್ತದೆ. ಹೀಗಾಗಿ ಭಾರತ ಎಚ್ಚರಿಕೆಯಿಂದ ಬ್ಯಾಟ್ ಮಾಡಿದರಷ್ಟೆ ಗೆಲುವು ಸಾಧ್ಯ.

2 / 6
ಮೂರನೇ ದಿನ ಭಾರತವನ್ನು 307 ರನ್​ಗೆ ಆಲೌಟ್ ಮಾಡಿ 46 ರನ್​ಗಳ ಮುನ್ನಡೆಯೊಂದಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ ಇಂಗ್ಲೆಂಡ್​ ಮತ್ತೊಮ್ಮೆ ಉತ್ತಮ ಆರಂಭ ಪಡೆಯುವಲ್ಲಿ ವಿಫಲವಾಯಿತು. ಆರಂಭಿಕ ಬೆನ್ ಡಕೆಟ್ ಕೇವಲ 15 ರನ್​ಗಳಿಗೆ ಪೆವಿಲಿಯನ್ ಸೇರಿಕೊಂಡರೆ, ನಂತರ ಬಂದ ಒಲಿ ಪೋಪ್ ಮತ್ತೊಮ್ಮೆ ನಿರಾಸೆ ಮೂಡಿಸಿದರು.

ಮೂರನೇ ದಿನ ಭಾರತವನ್ನು 307 ರನ್​ಗೆ ಆಲೌಟ್ ಮಾಡಿ 46 ರನ್​ಗಳ ಮುನ್ನಡೆಯೊಂದಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ ಇಂಗ್ಲೆಂಡ್​ ಮತ್ತೊಮ್ಮೆ ಉತ್ತಮ ಆರಂಭ ಪಡೆಯುವಲ್ಲಿ ವಿಫಲವಾಯಿತು. ಆರಂಭಿಕ ಬೆನ್ ಡಕೆಟ್ ಕೇವಲ 15 ರನ್​ಗಳಿಗೆ ಪೆವಿಲಿಯನ್ ಸೇರಿಕೊಂಡರೆ, ನಂತರ ಬಂದ ಒಲಿ ಪೋಪ್ ಮತ್ತೊಮ್ಮೆ ನಿರಾಸೆ ಮೂಡಿಸಿದರು.

3 / 6
ಮೊದಲ ಇನ್ನಿಂಗ್ಸ್​ನಲ್ಲಿ ಅಜೇಯ ಶತಕ ಸಿಡಿಸಿದ್ದ ರೂಟ್​ಗೆ ಎರಡನೇ ಇನ್ನಿಂಗ್ಸ್​ನಲ್ಲಿ 11 ರನ್ ದಾಟಿ ಮುಂದೆ ಹೋಗಲು ಸಾಧ್ಯವಾಗಲಿಲ್ಲ. ಬಳಿಕ ಒಂದರ ಹಿಂದೆ ಒಂದರಂತೆ ವಿಕೆಟ್ ಪತನದ ನಡುವೆಯೂ ಸ್ಫೋಟಕ ಬ್ಯಾಟಿಂಗ್ ಮಾಡಿದ ಆರಂಭಿಕ ಝಾಕ್ ಕ್ರೌಲಿ 91 ಎಸೆತಗಳಲ್ಲಿ 60 ರನ್​ಗಳ ಇನ್ನಿಂಗ್ಸ್ ಆಡಿದರು.

ಮೊದಲ ಇನ್ನಿಂಗ್ಸ್​ನಲ್ಲಿ ಅಜೇಯ ಶತಕ ಸಿಡಿಸಿದ್ದ ರೂಟ್​ಗೆ ಎರಡನೇ ಇನ್ನಿಂಗ್ಸ್​ನಲ್ಲಿ 11 ರನ್ ದಾಟಿ ಮುಂದೆ ಹೋಗಲು ಸಾಧ್ಯವಾಗಲಿಲ್ಲ. ಬಳಿಕ ಒಂದರ ಹಿಂದೆ ಒಂದರಂತೆ ವಿಕೆಟ್ ಪತನದ ನಡುವೆಯೂ ಸ್ಫೋಟಕ ಬ್ಯಾಟಿಂಗ್ ಮಾಡಿದ ಆರಂಭಿಕ ಝಾಕ್ ಕ್ರೌಲಿ 91 ಎಸೆತಗಳಲ್ಲಿ 60 ರನ್​ಗಳ ಇನ್ನಿಂಗ್ಸ್ ಆಡಿದರು.

4 / 6
ನಾಯಕ ಬೆನ್ ಸ್ಟೋಕ್ಸ್ ಮತ್ತೊಂದು ಕಳಪೆ ಇನ್ನಿಂಗ್ಸ್ ಆಡುವ ಮೂಲಕ ಸಿಂಗಲ್ ಡಿಜಿಟ್​ಗೆ ವಿಕೆಟ್ ಒಪ್ಪಿಸುವ ತಮ್ಮ ಖಯಾಲಿಯನ್ನು ಮುಂದುವರೆಸಿದರು. ಸ್ಟೋಕ್ಸ್ 4 ರನ್​ಗಳಿಗೆ ಸುಸ್ತಾದರೆ, ಜಾನಿ ಬೈರ್​ಸ್ಟೋವ್ 30 ರನ್​ಗಳ ಕಾಣಿಕೆ ನೀಡಿದರು. ಅಂತಿಮವಾಗಿ ಇಂಗ್ಲೆಂಡ್ ಕೇವಲ 145 ರನ್‌ಗಳಿಗೆ ಸರ್ವಪತನ ಕಂಡಿತು.

ನಾಯಕ ಬೆನ್ ಸ್ಟೋಕ್ಸ್ ಮತ್ತೊಂದು ಕಳಪೆ ಇನ್ನಿಂಗ್ಸ್ ಆಡುವ ಮೂಲಕ ಸಿಂಗಲ್ ಡಿಜಿಟ್​ಗೆ ವಿಕೆಟ್ ಒಪ್ಪಿಸುವ ತಮ್ಮ ಖಯಾಲಿಯನ್ನು ಮುಂದುವರೆಸಿದರು. ಸ್ಟೋಕ್ಸ್ 4 ರನ್​ಗಳಿಗೆ ಸುಸ್ತಾದರೆ, ಜಾನಿ ಬೈರ್​ಸ್ಟೋವ್ 30 ರನ್​ಗಳ ಕಾಣಿಕೆ ನೀಡಿದರು. ಅಂತಿಮವಾಗಿ ಇಂಗ್ಲೆಂಡ್ ಕೇವಲ 145 ರನ್‌ಗಳಿಗೆ ಸರ್ವಪತನ ಕಂಡಿತು.

5 / 6
ಭಾರತದ ಪರ ಮಾರಕ ದಾಳಿ ನಡೆಸಿದ ರವಿಚಂದ್ರನ್ ಅಶ್ವಿನ್ ಮತ್ತೊಮ್ಮೆ 5 ವಿಕೆಟ್​ ಕಿತ್ತ ಸಾಧನೆ ಮಾಡಿದರೆ, ಕುಲ್ದೀಪ್ ಯಾದವ್ 4 ಪ್ರಮುಖ ವಿಕೆಟ್ ಪಡೆದು ಆಂಗ್ಲರ ಪತನಕ್ಕೆ ಕಾರಣರಾದರು. ಉಳಿದೊಂದು ವಿಕೆಟ್ ರವೀಂದ್ರ ಜಡೇಜಾ ಪಾಲಾಯಿತು.

ಭಾರತದ ಪರ ಮಾರಕ ದಾಳಿ ನಡೆಸಿದ ರವಿಚಂದ್ರನ್ ಅಶ್ವಿನ್ ಮತ್ತೊಮ್ಮೆ 5 ವಿಕೆಟ್​ ಕಿತ್ತ ಸಾಧನೆ ಮಾಡಿದರೆ, ಕುಲ್ದೀಪ್ ಯಾದವ್ 4 ಪ್ರಮುಖ ವಿಕೆಟ್ ಪಡೆದು ಆಂಗ್ಲರ ಪತನಕ್ಕೆ ಕಾರಣರಾದರು. ಉಳಿದೊಂದು ವಿಕೆಟ್ ರವೀಂದ್ರ ಜಡೇಜಾ ಪಾಲಾಯಿತು.

6 / 6
Follow us
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ