AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಅಂತಿಮ ಟೆಸ್ಟ್ ಪಂದ್ಯದಿಂದಲೂ ಹೊರಬಿದ್ದ ಕನ್ನಡಿಗ ಕೆಎಲ್ ರಾಹುಲ್..!

KL Rahul: ಹೈದರಾಬಾದ್​ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ನಂತರ ಇಂಜುರಿಗೆ ತುತ್ತಾಗಿದ್ದ ರಾಹುಲ್​ರನ್ನು ಎರಡನೇ ಟೆಸ್ಟ್​ನಿಂದ ಹೊರಗಿಡಲಾಗಿತ್ತು. ಮೂರನೇ ಟೆಸ್ಟ್​ ವೇಳೆಗೆ ರಾಹುಲ್ ತಂಡ ಸೇರಿಕೊಳ್ಳಲಿದ್ದಾರೆ ಎಂದು ಹೇಳಲಾಗಿತ್ತಾದರೂ ಅದು ಸಾಧ್ಯವಾಗಿರಲಿಲ್ಲ. ಇದೀಗ ರಾಹುಲ್ ಕೊನೆಯ ಟೆಸ್ಟ್​ನಿಂದಲೂ ಹೊರಬಿದ್ದಿದ್ದಾರೆ.

ಪೃಥ್ವಿಶಂಕರ
|

Updated on:Feb 29, 2024 | 3:23 PM

Share
ಮಾರ್ಚ್​ 7 ರಿಂದ 11 ರವರೆಗೆ ಧರ್ಮಶಾಲಾದಲ್ಲಿ ನಡೆಯಲ್ಲಿರುವ ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಐದನೇ ಹಾಗೂ ಅಂತಿಮ ಟೆಸ್ಟ್ ಪಂದ್ಯಕ್ಕೆ ಒಂದು ವಾರಕ್ಕೂ ಅಧಿಕ ಸಮಯ ಉಳಿದಿದೆ. ಅದಾಗ್ಯೂ ಟೀಂ ಇಂಡಿಯಾ ಪಾಳದಿಂದ ಆಘಾತಕ್ಕಾರಿ ಸುದ್ದಿಯೊಂದು ಹೊರಬಿದ್ದಿದೆ.

ಮಾರ್ಚ್​ 7 ರಿಂದ 11 ರವರೆಗೆ ಧರ್ಮಶಾಲಾದಲ್ಲಿ ನಡೆಯಲ್ಲಿರುವ ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಐದನೇ ಹಾಗೂ ಅಂತಿಮ ಟೆಸ್ಟ್ ಪಂದ್ಯಕ್ಕೆ ಒಂದು ವಾರಕ್ಕೂ ಅಧಿಕ ಸಮಯ ಉಳಿದಿದೆ. ಅದಾಗ್ಯೂ ಟೀಂ ಇಂಡಿಯಾ ಪಾಳದಿಂದ ಆಘಾತಕ್ಕಾರಿ ಸುದ್ದಿಯೊಂದು ಹೊರಬಿದ್ದಿದೆ.

1 / 8
ಅದರಂತೆ ಹೈದರಾಬಾದ್​ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ವೇಳೆ ಇಂಜುರಿಗೊಂಡು ಟೀಂ ಇಂಡಿಯಾದಿಂದ ಹೊರಗಿರುವ ಕನ್ನಡಿಗ ಕೆಎಲ್ ರಾಹುಲ್, ಐದನೇ ಟೆಸ್ಟ್ ಪಂದ್ಯದಿಂದಲೂ ಹೊರಬಿದ್ದಿದ್ದಾರೆ ಎಂದು ಬಿಸಿಸಿಐ ಮಾಹಿತಿ ನೀಡಿದೆ.

ಅದರಂತೆ ಹೈದರಾಬಾದ್​ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ವೇಳೆ ಇಂಜುರಿಗೊಂಡು ಟೀಂ ಇಂಡಿಯಾದಿಂದ ಹೊರಗಿರುವ ಕನ್ನಡಿಗ ಕೆಎಲ್ ರಾಹುಲ್, ಐದನೇ ಟೆಸ್ಟ್ ಪಂದ್ಯದಿಂದಲೂ ಹೊರಬಿದ್ದಿದ್ದಾರೆ ಎಂದು ಬಿಸಿಸಿಐ ಮಾಹಿತಿ ನೀಡಿದೆ.

2 / 8
ವಾಸ್ತವವಾಗಿ ಎರಡನೇ ಟೆಸ್ಟ್​ ಪಂದ್ಯದಿಂದ ಹೊರಗುಳಿದಿದ್ದ ರಾಹುಲ್, ಮೂರನೇ ಟೆಸ್ಟ್ ವೇಳೆಗೆ ಚೇತರಿಸಿಕೊಂಡು ತಂಡಕ್ಕೆ ಮರಳುತ್ತಾರೆ ಎಂದು ಹೇಳಲಾಗಿತ್ತು. ಅದರಂತೆ ರಾಹುಲ್ ಅಭ್ಯಾಸ ಕೂಡ ಆರಂಭಿಸಿದ್ದರು. ಆದರೆ ಅವರನ್ನು ಮೂರನೇ ಟೆಸ್ಟ್​ನಿಂದ, ಆ ನಂತರ 4ನೇ ಟೆಸ್ಟ್​ನಿಂದಲೂ ಹೊರಗಿಡಲಾಗಿತ್ತು.

ವಾಸ್ತವವಾಗಿ ಎರಡನೇ ಟೆಸ್ಟ್​ ಪಂದ್ಯದಿಂದ ಹೊರಗುಳಿದಿದ್ದ ರಾಹುಲ್, ಮೂರನೇ ಟೆಸ್ಟ್ ವೇಳೆಗೆ ಚೇತರಿಸಿಕೊಂಡು ತಂಡಕ್ಕೆ ಮರಳುತ್ತಾರೆ ಎಂದು ಹೇಳಲಾಗಿತ್ತು. ಅದರಂತೆ ರಾಹುಲ್ ಅಭ್ಯಾಸ ಕೂಡ ಆರಂಭಿಸಿದ್ದರು. ಆದರೆ ಅವರನ್ನು ಮೂರನೇ ಟೆಸ್ಟ್​ನಿಂದ, ಆ ನಂತರ 4ನೇ ಟೆಸ್ಟ್​ನಿಂದಲೂ ಹೊರಗಿಡಲಾಗಿತ್ತು.

3 / 8
ಪ್ರಸ್ತುತ ಕೆಎಲ್ ರಾಹುಲ್ ಐದನೇ ಟೆಸ್ಟ್‌ನಿಂದಲೂ ಹೊರಗುಳಿದಿದ್ದಾರೆ ಎಂದು ಮಾಹಿತಿ ನೀಡಿರುವ ಬಿಸಿಸಿಐ, ರಾಹುಲ್ ಇನ್ನೂ ಫಿಟ್ ಆಗಿಲ್ಲ. ಸದ್ಯ ಈ ಆಟಗಾರ ಲಂಡನ್​ನಲ್ಲಿದ್ದು, ವೈದ್ಯಕೀಯ ತಂಡ ಅವರ ಫಿಟ್ನೆಸ್ ಮೇಲೆ ಕಣ್ಣಿಟ್ಟಿದೆ ಎಂದು ಬಿಸಿಸಿಐ ಮಾಹಿತಿ ನೀಡಿದೆ.

ಪ್ರಸ್ತುತ ಕೆಎಲ್ ರಾಹುಲ್ ಐದನೇ ಟೆಸ್ಟ್‌ನಿಂದಲೂ ಹೊರಗುಳಿದಿದ್ದಾರೆ ಎಂದು ಮಾಹಿತಿ ನೀಡಿರುವ ಬಿಸಿಸಿಐ, ರಾಹುಲ್ ಇನ್ನೂ ಫಿಟ್ ಆಗಿಲ್ಲ. ಸದ್ಯ ಈ ಆಟಗಾರ ಲಂಡನ್​ನಲ್ಲಿದ್ದು, ವೈದ್ಯಕೀಯ ತಂಡ ಅವರ ಫಿಟ್ನೆಸ್ ಮೇಲೆ ಕಣ್ಣಿಟ್ಟಿದೆ ಎಂದು ಬಿಸಿಸಿಐ ಮಾಹಿತಿ ನೀಡಿದೆ.

4 / 8
ರಾಹುಲ್ ಜೊತೆಗೆ ಯುವ ಆಲ್​ರೌಂಡರ್ ವಾಷಿಂಗ್ಟನ್ ಸುಂದರ್ ಅವರನ್ನು ಸಹ ಅಂತಿಮ ಟೆಸ್ಟ್​ನಿಂದ ಹೊರಗಿಡಲಾಗಿದೆ. ಹಲವು ಆಟಗಾರರ ಇಂಜುರಿಯಿಂದಾಗಿ ಎರಡನೇ ಟೆಸ್ಟ್ ಪಂದ್ಯದ ವೇಳೆ ತಂಡ ಸೇರಿಕೊಂಡಿದ್ದ ಸುಂದರ್​ಗೆ ತಂಡದಲ್ಲಿ ಆಡುವ ಅವಕಾಶ ಸಿಗಲಿಲ್ಲ.

ರಾಹುಲ್ ಜೊತೆಗೆ ಯುವ ಆಲ್​ರೌಂಡರ್ ವಾಷಿಂಗ್ಟನ್ ಸುಂದರ್ ಅವರನ್ನು ಸಹ ಅಂತಿಮ ಟೆಸ್ಟ್​ನಿಂದ ಹೊರಗಿಡಲಾಗಿದೆ. ಹಲವು ಆಟಗಾರರ ಇಂಜುರಿಯಿಂದಾಗಿ ಎರಡನೇ ಟೆಸ್ಟ್ ಪಂದ್ಯದ ವೇಳೆ ತಂಡ ಸೇರಿಕೊಂಡಿದ್ದ ಸುಂದರ್​ಗೆ ತಂಡದಲ್ಲಿ ಆಡುವ ಅವಕಾಶ ಸಿಗಲಿಲ್ಲ.

5 / 8
ಇದೀಗ ಟೀಂ ಇಂಡಿಯಾದಿಂದ ಹೊರಬಿದ್ದಿರುವ ಸುಂದರ್, ರಣಜಿ ಟ್ರೋಫಿಯಲ್ಲಿ ಸೆಮಿಫೈನಲ್ ತಲುಪಿರುವ ತಮಿಳುನಾಡು ತಂಡದ ಪರ ಪಂದ್ಯವನ್ನು ಆಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ತಂಡದಿಂದ ಬಿಡುಗಡೆ ಮಾಡಲಾಗಿದೆ. ಆದಾಗ್ಯೂ, ರಣಜಿಯಲ್ಲಿ ಸೆಮಿಫೈನಲ್ ಪಂದ್ಯದ ನಂತರ ಅವರು ಟೀಂ ಇಂಡಿಯಾದ ತಂಡವನ್ನು ಮತ್ತೆ ಸೇರಿಕೊಳ್ಳುತ್ತಾರೆ ಎಂದು ಬಿಸಿಸಿಐ ತಿಳಿಸಿದೆ.

ಇದೀಗ ಟೀಂ ಇಂಡಿಯಾದಿಂದ ಹೊರಬಿದ್ದಿರುವ ಸುಂದರ್, ರಣಜಿ ಟ್ರೋಫಿಯಲ್ಲಿ ಸೆಮಿಫೈನಲ್ ತಲುಪಿರುವ ತಮಿಳುನಾಡು ತಂಡದ ಪರ ಪಂದ್ಯವನ್ನು ಆಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ತಂಡದಿಂದ ಬಿಡುಗಡೆ ಮಾಡಲಾಗಿದೆ. ಆದಾಗ್ಯೂ, ರಣಜಿಯಲ್ಲಿ ಸೆಮಿಫೈನಲ್ ಪಂದ್ಯದ ನಂತರ ಅವರು ಟೀಂ ಇಂಡಿಯಾದ ತಂಡವನ್ನು ಮತ್ತೆ ಸೇರಿಕೊಳ್ಳುತ್ತಾರೆ ಎಂದು ಬಿಸಿಸಿಐ ತಿಳಿಸಿದೆ.

6 / 8
ಈ ಇಬ್ಬರನ್ನು ಹೊರಗಿಡುವುದರ ಜೊತೆಗೆ ತಂಡಕ್ಕೆ ಸ್ಟಾರ್ ಬೌಲರ್ ಜಸ್ಪ್ರೀತ್ ಬುಮ್ರಾ ಅವರ ಆಗಮನವಾಗಿದೆ. ರಾಂಚಿಯಲ್ಲಿ ನಡೆದ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಬುಮ್ರಾಗೆ ವಿಶ್ರಾಂತಿ ನೀಡಲಾಗಿತ್ತು. ಆದರೆ ಈಗ ಅವರು ಧರ್ಮಶಾಲಾದಲ್ಲಿ ಮತ್ತೊಮ್ಮೆ ತಂಡದಲ್ಲಿ ಕಾಣಿಸಿಕೊಳ್ಳಬಹುದು.

ಈ ಇಬ್ಬರನ್ನು ಹೊರಗಿಡುವುದರ ಜೊತೆಗೆ ತಂಡಕ್ಕೆ ಸ್ಟಾರ್ ಬೌಲರ್ ಜಸ್ಪ್ರೀತ್ ಬುಮ್ರಾ ಅವರ ಆಗಮನವಾಗಿದೆ. ರಾಂಚಿಯಲ್ಲಿ ನಡೆದ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಬುಮ್ರಾಗೆ ವಿಶ್ರಾಂತಿ ನೀಡಲಾಗಿತ್ತು. ಆದರೆ ಈಗ ಅವರು ಧರ್ಮಶಾಲಾದಲ್ಲಿ ಮತ್ತೊಮ್ಮೆ ತಂಡದಲ್ಲಿ ಕಾಣಿಸಿಕೊಳ್ಳಬಹುದು.

7 / 8
ಐದನೇ ಟೆಸ್ಟ್‌ಗೆ ಟೀಂ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ರಜತ್ ಪಾಟಿದಾರ್, ಸರ್ಫರಾಜ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ದೇವದತ್ ಪಡಿಕ್ಕಲ್, ಆರ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್ ಕುಲ್ದೀಪ್ ಯಾದವ್ , ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಆಕಾಶ್ ದೀಪ್.

ಐದನೇ ಟೆಸ್ಟ್‌ಗೆ ಟೀಂ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ರಜತ್ ಪಾಟಿದಾರ್, ಸರ್ಫರಾಜ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ದೇವದತ್ ಪಡಿಕ್ಕಲ್, ಆರ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್ ಕುಲ್ದೀಪ್ ಯಾದವ್ , ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಆಕಾಶ್ ದೀಪ್.

8 / 8

Published On - 3:00 pm, Thu, 29 February 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ