AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

93 ವರ್ಷಗಳಲ್ಲಿ ಟೀಮ್ ಇಂಡಿಯಾ ಇಂತಹದೊಂದು ಗೆಲುವು ದಾಖಲಿಸಿಲ್ಲ..!

India vs England 2nd Test: ಇಂಗ್ಲೆಂಡ್ ವಿರುದ್ಧ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡವು ಪ್ರಥಮ ಇನಿಂಗ್ಸ್​ನಲ್ಲಿ 587 ರನ್​ ಕಲೆಹಾಕಿದರೆ, ಇಂಗ್ಲೆಂಡ್ 407 ರನ್​ಗಳಿಸಿತು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ 427 ರನ್​ಗಳಿಸಿ ಟೀಮ್ ಇಂಡಿಯಾ ಡಿಕ್ಲೇರ್ ಘೋಷಿಸಿದೆ. ಅದರಂತೆ ಅಂತಿಮ ಇನಿಂಗ್ಸ್​ನಲ್ಲಿ 608 ರನ್​ಗಳ ಗುರಿ ಪಡೆದ ಇಂಗ್ಲೆಂಡ್ 271 ರನ್​ಗಳಿಗೆ ಆಲೌಟ್ ಆಗಿದೆ.

ಝಾಹಿರ್ ಯೂಸುಫ್
|

Updated on: Jul 07, 2025 | 10:55 AM

Share
ಭಾರತ ತಂಡ ಟೆಸ್ಟ್ ಕ್ರಿಕೆಟ್ ಆಡಲು ಶುರುವಾಗಿ 93 ವರ್ಷಗಳು ಕಳೆದಿವೆ. ಈ ತೊಂಬತ್ತಮೂರು ವರ್ಷಗಳಲ್ಲಿ ಟೀಮ್ ಇಂಡಿಯಾ 591 ಪಂದ್ಯಗಳನ್ನಾಡಿದೆ. ಇದರಲ್ಲಿ 293 ಪಂದ್ಯಗಳನ್ನು ವಿದೇಶದಲ್ಲಿ ಆಡಿದೆ. ಈ ವೇಳೆ ಭಾರತ ತಂಡ ಗೆದ್ದಿರುವುದು 61 ಮ್ಯಾಚ್​ಗಳಲ್ಲಿ ಮಾತ್ರ. ಅಲ್ಲದೆ 108 ಮ್ಯಾಚ್​ಗಳನ್ನು ಡ್ರಾ ಮಾಡಿಕೊಂಡಿದೆ.

ಭಾರತ ತಂಡ ಟೆಸ್ಟ್ ಕ್ರಿಕೆಟ್ ಆಡಲು ಶುರುವಾಗಿ 93 ವರ್ಷಗಳು ಕಳೆದಿವೆ. ಈ ತೊಂಬತ್ತಮೂರು ವರ್ಷಗಳಲ್ಲಿ ಟೀಮ್ ಇಂಡಿಯಾ 591 ಪಂದ್ಯಗಳನ್ನಾಡಿದೆ. ಇದರಲ್ಲಿ 293 ಪಂದ್ಯಗಳನ್ನು ವಿದೇಶದಲ್ಲಿ ಆಡಿದೆ. ಈ ವೇಳೆ ಭಾರತ ತಂಡ ಗೆದ್ದಿರುವುದು 61 ಮ್ಯಾಚ್​ಗಳಲ್ಲಿ ಮಾತ್ರ. ಅಲ್ಲದೆ 108 ಮ್ಯಾಚ್​ಗಳನ್ನು ಡ್ರಾ ಮಾಡಿಕೊಂಡಿದೆ.

1 / 5
ವಿಶೇಷ ಎಂದರೆ ಟೀಮ್ ಇಂಡಿಯಾ ಗೆದ್ದ 61 ಪಂದ್ಯಗಳಲ್ಲಿ ಅಮೋಘ ಗೆಲುವು ದಾಖಲಿಸಿದ್ದು ಕ್ರಿಕೆಟ್ ಜನಕರಾದ ಇಂಗ್ಲೆಂಡ್ ವಿರುದ್ಧ. ಈ ಐತಿಹಾಸಿಕ ಗೆಲುವು ತಂದುಕೊಟ್ಟಿರುವುದು ಯಂಗ್ ಇಂಡಿಯಾ ಎಂಬುದು ವಿಶೇಷ. ಅಂದರೆ ಇದೇ ಮೊದಲ ಬಾರಿಗೆ ಟೀಮ್ ಇಂಡಿಯಾ 330 ಕ್ಕೂ ಅಧಿಕ ರನ್​ಗಳಿಂದ ವಿದೇಶದಲ್ಲಿ ಟೆಸ್ಟ್ ಪಂದ್ಯವನ್ನು ಗೆದ್ದುಕೊಂಡಿದೆ.

ವಿಶೇಷ ಎಂದರೆ ಟೀಮ್ ಇಂಡಿಯಾ ಗೆದ್ದ 61 ಪಂದ್ಯಗಳಲ್ಲಿ ಅಮೋಘ ಗೆಲುವು ದಾಖಲಿಸಿದ್ದು ಕ್ರಿಕೆಟ್ ಜನಕರಾದ ಇಂಗ್ಲೆಂಡ್ ವಿರುದ್ಧ. ಈ ಐತಿಹಾಸಿಕ ಗೆಲುವು ತಂದುಕೊಟ್ಟಿರುವುದು ಯಂಗ್ ಇಂಡಿಯಾ ಎಂಬುದು ವಿಶೇಷ. ಅಂದರೆ ಇದೇ ಮೊದಲ ಬಾರಿಗೆ ಟೀಮ್ ಇಂಡಿಯಾ 330 ಕ್ಕೂ ಅಧಿಕ ರನ್​ಗಳಿಂದ ವಿದೇಶದಲ್ಲಿ ಟೆಸ್ಟ್ ಪಂದ್ಯವನ್ನು ಗೆದ್ದುಕೊಂಡಿದೆ.

2 / 5
ಈ ಹಿಂದೆ 2019 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 318 ರನ್​ಗಳ ಜಯ ಸಾಧಿಸಿದ್ದು ವಿದೇಶದಲ್ಲಿ ಟೀಮ್ ಇಂಡಿಯಾದ ಶ್ರೇಷ್ಠ ಸಾಧನೆಯಾಗಿತ್ತು. ಆದರೆ ಈ ಬಾರಿ ಟೆಸ್ಟ್ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆಯುವಲ್ಲಿ ಟೀಮ್ ಇಂಡಿಯಾ ಆಟಗಾರರು ಯಶಸ್ವಿಯಾಗಿದ್ದಾರೆ. ಅದು ಕೂಡ 336 ರನ್​ಗಳೊಂದಿಗೆ ಎಂಬುದು ವಿಶೇಷ.

ಈ ಹಿಂದೆ 2019 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 318 ರನ್​ಗಳ ಜಯ ಸಾಧಿಸಿದ್ದು ವಿದೇಶದಲ್ಲಿ ಟೀಮ್ ಇಂಡಿಯಾದ ಶ್ರೇಷ್ಠ ಸಾಧನೆಯಾಗಿತ್ತು. ಆದರೆ ಈ ಬಾರಿ ಟೆಸ್ಟ್ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆಯುವಲ್ಲಿ ಟೀಮ್ ಇಂಡಿಯಾ ಆಟಗಾರರು ಯಶಸ್ವಿಯಾಗಿದ್ದಾರೆ. ಅದು ಕೂಡ 336 ರನ್​ಗಳೊಂದಿಗೆ ಎಂಬುದು ವಿಶೇಷ.

3 / 5
ಎಡ್ಜ್​ಬಾಸ್ಟನ್ ಸ್ಟೇಡಿಯಂನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಸಂಘಟಿತ ಪ್ರದರ್ಶನ ನೀಡಿದ ಭಾರತ ತಂಡವು ಆತಿಥೇಯರನ್ನು ಬರೋಬ್ಬರಿ 336 ರನ್​ಗಳಿಂದ ಮಣಿಸಿದೆ. ಈ ಮೂಲಕ ಟೆಸ್ಟ್ ಇತಿಹಾಸದಲ್ಲೇ ಭಾರತ ತಂಡವು ವಿದೇಶದಲ್ಲಿ ರನ್​ಗಳ ಅಂತರದಲ್ಲಿ ತನ್ನ ಶ್ರೇಷ್ಠ ಗೆಲುವು ದಕ್ಕಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಎಡ್ಜ್​ಬಾಸ್ಟನ್ ಸ್ಟೇಡಿಯಂನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಸಂಘಟಿತ ಪ್ರದರ್ಶನ ನೀಡಿದ ಭಾರತ ತಂಡವು ಆತಿಥೇಯರನ್ನು ಬರೋಬ್ಬರಿ 336 ರನ್​ಗಳಿಂದ ಮಣಿಸಿದೆ. ಈ ಮೂಲಕ ಟೆಸ್ಟ್ ಇತಿಹಾಸದಲ್ಲೇ ಭಾರತ ತಂಡವು ವಿದೇಶದಲ್ಲಿ ರನ್​ಗಳ ಅಂತರದಲ್ಲಿ ತನ್ನ ಶ್ರೇಷ್ಠ ಗೆಲುವು ದಕ್ಕಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

4 / 5
ಅಲ್ಲದೆ ಇಂಗ್ಲೆಂಡ್ ತಂಡವನ್ನು ಅವರದ್ದೇ ಪಿಚ್​ನಲ್ಲಿ ಇದೇ ಮೊದಲ ಬಾರಿಗೆ 300+ ರನ್​ಗಳಿಂದ ಸೋಲಿಸಿ ಐತಿಹಾಸಿಕ ಸಾಧನೆ ಮಾಡಿದೆ. ಇದಕ್ಕೂ ಮುನ್ನ 1986 ರಲ್ಲಿ ಲೀಡ್ಸ್​ನಲ್ಲಿ ನಡೆದ ಆಂಗ್ಲರ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ 279 ರನ್​ಗಳ ಜಯ ಸಾಧಿಸಿತ್ತು. ಇದೀಗ ಈ ದಾಖಲೆಯನ್ನು ಅಳಿಸಿ ಹಾಕಿ ಶುಭ್​ಮನ್ ಗಿಲ್ ನಾಯಕತ್ವದ ಯುವ ಪಡೆ ಹೊಸ ಇತಿಹಾಸ ಬರೆದಿದ್ದಾರೆ.

ಅಲ್ಲದೆ ಇಂಗ್ಲೆಂಡ್ ತಂಡವನ್ನು ಅವರದ್ದೇ ಪಿಚ್​ನಲ್ಲಿ ಇದೇ ಮೊದಲ ಬಾರಿಗೆ 300+ ರನ್​ಗಳಿಂದ ಸೋಲಿಸಿ ಐತಿಹಾಸಿಕ ಸಾಧನೆ ಮಾಡಿದೆ. ಇದಕ್ಕೂ ಮುನ್ನ 1986 ರಲ್ಲಿ ಲೀಡ್ಸ್​ನಲ್ಲಿ ನಡೆದ ಆಂಗ್ಲರ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ 279 ರನ್​ಗಳ ಜಯ ಸಾಧಿಸಿತ್ತು. ಇದೀಗ ಈ ದಾಖಲೆಯನ್ನು ಅಳಿಸಿ ಹಾಕಿ ಶುಭ್​ಮನ್ ಗಿಲ್ ನಾಯಕತ್ವದ ಯುವ ಪಡೆ ಹೊಸ ಇತಿಹಾಸ ಬರೆದಿದ್ದಾರೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!