AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಲಾರ್ಡ್ಸ್​ನಲ್ಲಿ ನಂಬರ್ ಒನ್​ಗಳ ಮುಖಾಮುಖಿ

India vs England 3rd Test: ಭಾರತ ಮತ್ತು ಇಂಗ್ಲೆಂಡ್ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಮ್ಯಾಚ್​ನಲ್ಲಿ ಆತಿಥೇಯರು 5 ವಿಕೆಟ್​ಗಳ ಗೆಲುವು ದಾಖಲಿಸಿತ್ತು. ಇನ್ನು ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ 336 ರನ್​ಗಳ ಗೆಲುವು ದಾಖಲಿಸಿದೆ. ಇದೀಗ ಮೂರನೇ ಟೆಸ್ಟ್ ಪಂದ್ಯಕ್ಕಾಗಿ ಉಭಯ ತಂಡಗಳು ಸಜ್ಜಾಗಿ ನಿಂತಿದೆ.

ಝಾಹಿರ್ ಯೂಸುಫ್
|

Updated on: Jul 10, 2025 | 1:19 PM

Share
ಭಾರತ ಮತ್ತು ಇಂಗ್ಲೆಂಡ್ ನಡುವಣ ಮೂರನೇ ಟೆಸ್ಟ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಲಂಡನ್​ನ ಲಾರ್ಡ್ಸ್​ ಮೈದಾನದಲ್ಲಿ ಜರುಗಲಿರುವ ಈ ಪಂದ್ಯಕ್ಕಾಗಿ ಇಂಗ್ಲೆಂಡ್ ತಂಡ ಈಗಾಗಲೇ ಪ್ಲೇಯಿಂಗ್​ ಇಲೆವೆನ್ ಘೋಷಿಸಿದೆ. ಇತ್ತ ಕಳೆದ ಬಾರಿಯ ಪಂದ್ಯದಿಂದ ಹೊರಗುಳಿದಿದ್ದ ಜಸ್​ಪ್ರೀತ್ ಬುಮ್ರಾ ಲಾರ್ಡ್ಸ್​​ನಲ್ಲಿ ಕಣಕ್ಕಿಳಿಯುವುದನ್ನು ಟೀಮ್ ಇಂಡಿಯಾ ನಾಯಕ ಶುಭ್​ಮನ್ ಗಿಲ್ ಖಚಿತಪಡಿಸಿದ್ದಾರೆ.

ಭಾರತ ಮತ್ತು ಇಂಗ್ಲೆಂಡ್ ನಡುವಣ ಮೂರನೇ ಟೆಸ್ಟ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಲಂಡನ್​ನ ಲಾರ್ಡ್ಸ್​ ಮೈದಾನದಲ್ಲಿ ಜರುಗಲಿರುವ ಈ ಪಂದ್ಯಕ್ಕಾಗಿ ಇಂಗ್ಲೆಂಡ್ ತಂಡ ಈಗಾಗಲೇ ಪ್ಲೇಯಿಂಗ್​ ಇಲೆವೆನ್ ಘೋಷಿಸಿದೆ. ಇತ್ತ ಕಳೆದ ಬಾರಿಯ ಪಂದ್ಯದಿಂದ ಹೊರಗುಳಿದಿದ್ದ ಜಸ್​ಪ್ರೀತ್ ಬುಮ್ರಾ ಲಾರ್ಡ್ಸ್​​ನಲ್ಲಿ ಕಣಕ್ಕಿಳಿಯುವುದನ್ನು ಟೀಮ್ ಇಂಡಿಯಾ ನಾಯಕ ಶುಭ್​ಮನ್ ಗಿಲ್ ಖಚಿತಪಡಿಸಿದ್ದಾರೆ.

1 / 5
ಇದರೊಂದಿಗೆ ಲಾರ್ಡ್ಸ್ ಮೈದಾನದಲ್ಲಿ ನಂಬರ್ ಒನ್​ಗಳ ಮುಖಾಮುಖಿ ಕೂಡ ಕನ್ಫರ್ಮ್ ಆಗಿದೆ. ಅಂದರೆ ಪ್ರಸ್ತುತ ಟೆಸ್ಟ್ ಶ್ರೇಯಾಂಕ ಪಟ್ಟಿಯಲ್ಲಿರುವ ನಂಂಬರ್ 1 ಬ್ಯಾಟರ್ ಹಾಗೂ ನಂಬರ್ 1 ಬೌಲರ್ ಲಾರ್ಡ್ಸ್​ ಮೈದಾನದಲ್ಲಿ ಎದುರು ಬದುರಾಗಲಿದ್ದಾರೆ. ಇಲ್ಲಿ ಬ್ಯಾಟರ್​ಗಳ ಪಟ್ಟಿಯಲ್ಲಿ ಬ್ರೂಕ್ ಅಗ್ರಸ್ಥಾನದಲ್ಲಿದ್ದರೆ, ಬೌಲರ್​ಗಳ ವಿಭಾಗದಲ್ಲಿ ಬುಮ್ರಾ ಮೊದಲ ಸ್ಥಾನದಲ್ಲಿದ್ದಾರೆ.

ಇದರೊಂದಿಗೆ ಲಾರ್ಡ್ಸ್ ಮೈದಾನದಲ್ಲಿ ನಂಬರ್ ಒನ್​ಗಳ ಮುಖಾಮುಖಿ ಕೂಡ ಕನ್ಫರ್ಮ್ ಆಗಿದೆ. ಅಂದರೆ ಪ್ರಸ್ತುತ ಟೆಸ್ಟ್ ಶ್ರೇಯಾಂಕ ಪಟ್ಟಿಯಲ್ಲಿರುವ ನಂಂಬರ್ 1 ಬ್ಯಾಟರ್ ಹಾಗೂ ನಂಬರ್ 1 ಬೌಲರ್ ಲಾರ್ಡ್ಸ್​ ಮೈದಾನದಲ್ಲಿ ಎದುರು ಬದುರಾಗಲಿದ್ದಾರೆ. ಇಲ್ಲಿ ಬ್ಯಾಟರ್​ಗಳ ಪಟ್ಟಿಯಲ್ಲಿ ಬ್ರೂಕ್ ಅಗ್ರಸ್ಥಾನದಲ್ಲಿದ್ದರೆ, ಬೌಲರ್​ಗಳ ವಿಭಾಗದಲ್ಲಿ ಬುಮ್ರಾ ಮೊದಲ ಸ್ಥಾನದಲ್ಲಿದ್ದಾರೆ.

2 / 5
ಐಸಿಸಿ ಪ್ರಕಟಿಸಿರುವ ಟೆಸ್ಟ್​ ಬ್ಯಾಟರ್​ಗಳ ನೂತನ ಶ್ರೇಯಾಂಕ ಪಟ್ಟಿಯಲ್ಲಿ ಹ್ಯಾರಿ ಬ್ರೂಕ್ ಅಗ್ರಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ಎಡ್ಜ್​ಬಾಸ್ಟನ್ ಸ್ಟೇಡಿಯಂನಲ್ಲಿ ನಡೆದ ಭಾರತದ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿದ್ದ ಬ್ರೂಕ್ ಒಟ್ಟು 886 ಅಂಕಗಳನ್ನು ಪಡೆದುಕೊಂಡಿದ್ದಾರೆ.

ಐಸಿಸಿ ಪ್ರಕಟಿಸಿರುವ ಟೆಸ್ಟ್​ ಬ್ಯಾಟರ್​ಗಳ ನೂತನ ಶ್ರೇಯಾಂಕ ಪಟ್ಟಿಯಲ್ಲಿ ಹ್ಯಾರಿ ಬ್ರೂಕ್ ಅಗ್ರಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ಎಡ್ಜ್​ಬಾಸ್ಟನ್ ಸ್ಟೇಡಿಯಂನಲ್ಲಿ ನಡೆದ ಭಾರತದ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿದ್ದ ಬ್ರೂಕ್ ಒಟ್ಟು 886 ಅಂಕಗಳನ್ನು ಪಡೆದುಕೊಂಡಿದ್ದಾರೆ.

3 / 5
ಇನ್ನು ಟೆಸ್ಟ್ ಬೌಲರ್​ಗಳ ಪಟ್ಟಿಯಲ್ಲಿ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ ಅಗ್ರಸ್ಥಾನ ಅಲಂಕರಿಸಿದ್ದಾರೆ. ಹೆಡಿಂಗ್ಲೆ ಟೆಸ್ಟ್ ಪಂದ್ಯದಲ್ಲಿ 5 ವಿಕೆಟ್ ಕಬಳಿಸಿ ಮಿಂಚಿದ್ದ ಬುಮ್ರಾ ಇದೀಗ 898 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದ್ದಾರೆ. ಹೀಗಾಗಿ ಲಾರ್ಡ್ಸ್​ ಮೈದಾನದಲ್ಲಿ ಬುಮ್ರಾ ಹಾಗೂ ಬ್ರೂಕ್ ಕಡೆಯಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.

ಇನ್ನು ಟೆಸ್ಟ್ ಬೌಲರ್​ಗಳ ಪಟ್ಟಿಯಲ್ಲಿ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ ಅಗ್ರಸ್ಥಾನ ಅಲಂಕರಿಸಿದ್ದಾರೆ. ಹೆಡಿಂಗ್ಲೆ ಟೆಸ್ಟ್ ಪಂದ್ಯದಲ್ಲಿ 5 ವಿಕೆಟ್ ಕಬಳಿಸಿ ಮಿಂಚಿದ್ದ ಬುಮ್ರಾ ಇದೀಗ 898 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದ್ದಾರೆ. ಹೀಗಾಗಿ ಲಾರ್ಡ್ಸ್​ ಮೈದಾನದಲ್ಲಿ ಬುಮ್ರಾ ಹಾಗೂ ಬ್ರೂಕ್ ಕಡೆಯಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.

4 / 5
ಅಂದಹಾಗೆ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಲಾರ್ಡ್ಸ್ ಮೈದಾನದಲ್ಲಿ ಈವರೆಗೆ 19 ಟೆಸ್ಟ್ ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಟೀಮ್ ಇಂಡಿಯಾ ಗೆದ್ದಿರುವುದು ಕೇವಲ 3 ಬಾರಿ ಮಾತ್ರ. ಇನ್ನುಳಿದ 12 ಮ್ಯಾಚ್​ಗಳಲ್ಲಿ ಇಂಗ್ಲೆಂಡ್ ತಂಡ ಜಯ ಸಾಧಿಸಿದೆ. ಹಾಗೆಯೇ 4 ಪಂದ್ಯಗಳು ಡ್ರಾನಲ್ಲಿ ಕೊನೆಗೊಂಡಿದೆ. ಇದಾಗ್ಯೂ 2021 ರಲ್ಲಿ ಆಂಗ್ಲರನ್ನು ಲಾರ್ಡ್ಸ್ ಮೈದಾನದಲ್ಲಿ ಬಗ್ಗು ಬಡಿಯುವಲ್ಲಿ ಟೀಮ್ ಇಂಡಿಯಾ ಯಶಸ್ವಿಯಾಗಿತ್ತು. ಹೀಗಾಗಿ ಈ ಬಾರಿ ಕೂಡ ಭಾರತೀಯ ಪಡೆಗಳಿಂದ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.

ಅಂದಹಾಗೆ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಲಾರ್ಡ್ಸ್ ಮೈದಾನದಲ್ಲಿ ಈವರೆಗೆ 19 ಟೆಸ್ಟ್ ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಟೀಮ್ ಇಂಡಿಯಾ ಗೆದ್ದಿರುವುದು ಕೇವಲ 3 ಬಾರಿ ಮಾತ್ರ. ಇನ್ನುಳಿದ 12 ಮ್ಯಾಚ್​ಗಳಲ್ಲಿ ಇಂಗ್ಲೆಂಡ್ ತಂಡ ಜಯ ಸಾಧಿಸಿದೆ. ಹಾಗೆಯೇ 4 ಪಂದ್ಯಗಳು ಡ್ರಾನಲ್ಲಿ ಕೊನೆಗೊಂಡಿದೆ. ಇದಾಗ್ಯೂ 2021 ರಲ್ಲಿ ಆಂಗ್ಲರನ್ನು ಲಾರ್ಡ್ಸ್ ಮೈದಾನದಲ್ಲಿ ಬಗ್ಗು ಬಡಿಯುವಲ್ಲಿ ಟೀಮ್ ಇಂಡಿಯಾ ಯಶಸ್ವಿಯಾಗಿತ್ತು. ಹೀಗಾಗಿ ಈ ಬಾರಿ ಕೂಡ ಭಾರತೀಯ ಪಡೆಗಳಿಂದ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.

5 / 5
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ