AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಸೋಲಿನ ಬೆನ್ನಲ್ಲೇ ಟೀಮ್ ಇಂಡಿಯಾದಿಂದ ಯುವ ಆಟಗಾರ ಔಟ್

India vs England Test Series: ಭಾರತ ಮತ್ತು ಇಂಗ್ಲೆಂಡ್ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಮ್ಯಾಚ್​ನಲ್ಲಿ ಟೀಮ್ ಇಂಡಿಯಾ 5 ವಿಕೆಟ್​ಗಳ ಸೋಲನುಭವಿಸಿದೆ. ಇನ್ನು ಉಭಯ ತಂಡಗಳ ನಡುವಣ ಎರಡನೇ ಪಂದ್ಯವು ಜುಲೈ 2 ರಿಂದ ಶುರುವಾಗಲಿದ್ದು, ಈ ಪಂದ್ಯಕ್ಕೆ ಎಡ್ಜ್ ಬಾಸ್ಟನ್‌ ಸ್ಟೇಡಿಯಂ ಆತಿಥ್ಯವಹಿಸಲಿದೆ.

ಝಾಹಿರ್ ಯೂಸುಫ್
|

Updated on: Jun 26, 2025 | 7:24 AM

Share
India vs England Test: ಭಾರತ ಮತ್ತು ಇಂಗ್ಲೆಂಡ್ ನಡುವಣ ಎರಡನೇ ಟೆಸ್ಟ್ ಪಂದ್ಯವು ಜುಲೈ 2 ರಿಂದ ಶುರುವಾಗಲಿದೆ. ಬರ್ಮಿಂಗ್​ಹ್ಯಾಮ್​ನ ಎಡ್ಜ್ ಬಾಸ್ಟನ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾದಿಂದ ಯುವ ವೇಗಿಯನ್ನು ಕೈ ಬಿಡಲಾಗಿದೆ.

India vs England Test: ಭಾರತ ಮತ್ತು ಇಂಗ್ಲೆಂಡ್ ನಡುವಣ ಎರಡನೇ ಟೆಸ್ಟ್ ಪಂದ್ಯವು ಜುಲೈ 2 ರಿಂದ ಶುರುವಾಗಲಿದೆ. ಬರ್ಮಿಂಗ್​ಹ್ಯಾಮ್​ನ ಎಡ್ಜ್ ಬಾಸ್ಟನ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾದಿಂದ ಯುವ ವೇಗಿಯನ್ನು ಕೈ ಬಿಡಲಾಗಿದೆ.

1 / 5
ಲೀಡ್ಸ್​ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯಕ್ಕೂ ಮುನ್ನ ಭಾರತ ತಂಡವನ್ನು ಕೂಡಿಕೊಂಡಿದ್ದ ಯುವ ವೇಗಿ ಹರ್ಷಿತ್ ರಾಣಾ ಅವರನ್ನು ಇದೀಗ ತಂಡದಿಂದ ಕೈ ಬಿಡಲಾಗಿದೆ ಎಂದು ವರದಿಯಾಗಿದೆ. ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಸರಣಿಗೆ ಆಯ್ಕೆ ಮಾಡಲಾದ 18 ಸದಸ್ಯರ ಬಳಗದಲ್ಲಿ ರಾಣಾ ಕಾಣಿಸಿಕೊಂಡಿರಲಿಲ್ಲ.

ಲೀಡ್ಸ್​ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯಕ್ಕೂ ಮುನ್ನ ಭಾರತ ತಂಡವನ್ನು ಕೂಡಿಕೊಂಡಿದ್ದ ಯುವ ವೇಗಿ ಹರ್ಷಿತ್ ರಾಣಾ ಅವರನ್ನು ಇದೀಗ ತಂಡದಿಂದ ಕೈ ಬಿಡಲಾಗಿದೆ ಎಂದು ವರದಿಯಾಗಿದೆ. ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಸರಣಿಗೆ ಆಯ್ಕೆ ಮಾಡಲಾದ 18 ಸದಸ್ಯರ ಬಳಗದಲ್ಲಿ ರಾಣಾ ಕಾಣಿಸಿಕೊಂಡಿರಲಿಲ್ಲ.

2 / 5
ಆದರೆ ಟೀಮ್ ಇಂಡಿಯಾ ವೇಗಿಗಳಲ್ಲಿ ಕೆಲವರು ಕಣಕಾಲು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದ ಕಾರಣ ಭಾರತ ಎ ತಂಡದಲ್ಲಿದ್ದ ಹರ್ಷಿತ್ ರಾಣಾ ಅವರನ್ನು ಮೊದಲ ಟೆಸ್ಟ್ ಪಂದ್ಯಕ್ಕೂ ಮುನ್ನ ತಂಡಕ್ಕೆ ಆಯ್ಕೆ ಮಾಡಲಾಗಿತ್ತು. ಅದರಂತೆ ಅವರು ಹೆಡಿಂಗ್ಲೆಯಲ್ಲಿ ನಡೆದ ಟೆಸ್ಟ್ ಪಂದ್ಯದ ವೇಳೆ ಟೀಮ್ ಇಂಡಿಯಾ ಜೊತೆ ಕಾಣಿಸಿಕೊಂಡಿದ್ದರು.

ಆದರೆ ಟೀಮ್ ಇಂಡಿಯಾ ವೇಗಿಗಳಲ್ಲಿ ಕೆಲವರು ಕಣಕಾಲು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದ ಕಾರಣ ಭಾರತ ಎ ತಂಡದಲ್ಲಿದ್ದ ಹರ್ಷಿತ್ ರಾಣಾ ಅವರನ್ನು ಮೊದಲ ಟೆಸ್ಟ್ ಪಂದ್ಯಕ್ಕೂ ಮುನ್ನ ತಂಡಕ್ಕೆ ಆಯ್ಕೆ ಮಾಡಲಾಗಿತ್ತು. ಅದರಂತೆ ಅವರು ಹೆಡಿಂಗ್ಲೆಯಲ್ಲಿ ನಡೆದ ಟೆಸ್ಟ್ ಪಂದ್ಯದ ವೇಳೆ ಟೀಮ್ ಇಂಡಿಯಾ ಜೊತೆ ಕಾಣಿಸಿಕೊಂಡಿದ್ದರು.

3 / 5
ಇದೀಗ ಟೀಮ್ ಇಂಡಿಯಾದಲ್ಲಿರುವ ಎಲ್ಲಾ ವೇಗಿಗಳು ಫಿಟ್ ನೆಸ್ ಸಾಧಿಸಿದ್ದು, ಹೀಗಾಗಿ ಹರ್ಷಿತ್ ರಾಣಾ ಅವರನ್ನು ತಂಡದಿಂದ ಕೈ ಬಿಡಲಾಗಿದೆ ಎಂದು ತಿಳಿದು ಬಂದಿದೆ. ಅಷ್ಟೇ ಅಲ್ಲದೆ ಎರಡನೇ ಟೆಸ್ಟ್‌ ಗಾಗಿ ಬರ್ಮಿಂಗ್​ಹ್ಯಾಮ್​ಗೆ ತೆರಳಿರುವ ಭಾರತ ತಂಡದ ಜೊತೆ ರಾಣಾ ಕಾಣಿಸಿಕೊಂಡಿಲ್ಲ. ಹೀಗಾಗಿ ಮುಂದಿನ ಟೆಸ್ಟ್ ಪಂದ್ಯಗಳಲ್ಲಿ ಅವರು ಕಣಕ್ಕಿಳಿಯುವುದಿಲ್ಲ ಎಂಬುದು ಖಚಿತವಾಗಿದೆ.

ಇದೀಗ ಟೀಮ್ ಇಂಡಿಯಾದಲ್ಲಿರುವ ಎಲ್ಲಾ ವೇಗಿಗಳು ಫಿಟ್ ನೆಸ್ ಸಾಧಿಸಿದ್ದು, ಹೀಗಾಗಿ ಹರ್ಷಿತ್ ರಾಣಾ ಅವರನ್ನು ತಂಡದಿಂದ ಕೈ ಬಿಡಲಾಗಿದೆ ಎಂದು ತಿಳಿದು ಬಂದಿದೆ. ಅಷ್ಟೇ ಅಲ್ಲದೆ ಎರಡನೇ ಟೆಸ್ಟ್‌ ಗಾಗಿ ಬರ್ಮಿಂಗ್​ಹ್ಯಾಮ್​ಗೆ ತೆರಳಿರುವ ಭಾರತ ತಂಡದ ಜೊತೆ ರಾಣಾ ಕಾಣಿಸಿಕೊಂಡಿಲ್ಲ. ಹೀಗಾಗಿ ಮುಂದಿನ ಟೆಸ್ಟ್ ಪಂದ್ಯಗಳಲ್ಲಿ ಅವರು ಕಣಕ್ಕಿಳಿಯುವುದಿಲ್ಲ ಎಂಬುದು ಖಚಿತವಾಗಿದೆ.

4 / 5
ಭಾರತ ಟೆಸ್ಟ್ ತಂಡ: ಶುಭ್​ಮನ್ ಗಿಲ್ (ನಾಯಕ), ರಿಷಭ್ ಪಂತ್ (ಉಪನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ಅಭಿಮನ್ಯು ಈಶ್ವರನ್, ಕರುಣ್ ನಾಯರ್, ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ಧ್ರುವ್ ಜುರೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಆಕಾಶ್ ದೀಪ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್.

ಭಾರತ ಟೆಸ್ಟ್ ತಂಡ: ಶುಭ್​ಮನ್ ಗಿಲ್ (ನಾಯಕ), ರಿಷಭ್ ಪಂತ್ (ಉಪನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ಅಭಿಮನ್ಯು ಈಶ್ವರನ್, ಕರುಣ್ ನಾಯರ್, ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ಧ್ರುವ್ ಜುರೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಆಕಾಶ್ ದೀಪ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್.

5 / 5
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಠಿ: ಇಲ್ಲಿದೆ ಲೈವ್​
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಠಿ: ಇಲ್ಲಿದೆ ಲೈವ್​
ರೈಲ್ವೆ ಹಳಿ ಪಕ್ಕ ಮರಿಗೆ ಜನ್ಮ ನೀಡಿದ ಆನೆ, ಎರಡು ಗಂಟೆಗಳ ಕಾಲ ನಿಂತ ರೈಲು
ರೈಲ್ವೆ ಹಳಿ ಪಕ್ಕ ಮರಿಗೆ ಜನ್ಮ ನೀಡಿದ ಆನೆ, ಎರಡು ಗಂಟೆಗಳ ಕಾಲ ನಿಂತ ರೈಲು